Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 15:18 - ಪರಿಶುದ್ದ ಬೈಬಲ್‌

18 “ನಿಮ್ಮ ಗುಲಾಮರನ್ನು ಸ್ವತಂತ್ರರಾಗಿ ಬಿಡಬೇಕಲ್ಲಾ ಎಂದು ಬೇಸರಪಡಬೇಡಿ. ಅವರು ಅರ್ಧಕೂಲಿ ತೆಗೆದುಕೊಂಡು ಆರು ವರ್ಷ ನಿಮ್ಮ ಸೇವೆ ಮಾಡಿದ್ದಾರಲ್ಲಾ? ನಿಮ್ಮ ಕಾರ್ಯಗಳನ್ನೆಲ್ಲಾ ನಿಮ್ಮ ದೇವರಾದ ಯೆಹೋವನು ಸಫಲಪಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ದಾಸನನ್ನು ಬಿಡುಗಡೆಮಾಡುವುದು ಕಷ್ಟವೆಂದು ಹೇಳಿಕೊಳ್ಳಬಾರದು. ಅವನು ಆರು ವರ್ಷಗಳು ನಿಮ್ಮ ದಾಸನಾಗಿದ್ದು ಕೂಲಿಯಾಳಿಗಿಂತ ಎರಡರಷ್ಟು ಪ್ರಯೋಜನವನ್ನು ಉಂಟುಮಾಡಿದನಲ್ಲಾ. ನೀವು ಹೀಗೆ ನಡೆದುಕೊಂಡರೆ ನಿಮ್ಮ ದೇವರಾದ ಯೆಹೋವನು ನಿಮ್ಮ ಎಲ್ಲಾ ಪ್ರಯತ್ನಗಳನ್ನು ಸಫಲಗೊಳಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 “ಗುಲಾಮನನ್ನು ಬಿಡುಗಡೆ ಮಾಡುವುದು ಕಷ್ಟವೆಂದು ಹೇಳಿಕೊಳ್ಳಬಾರದು. ಅವನು ಆರು ವರ್ಷಗಳು ನಿಮ್ಮ ಗುಲಾಮನಾಗಿದ್ದು ಕೂಲಿಯಾಳಿಗಿಂತ ಎರಡರಷ್ಟು ಪ್ರಯೋಜನವನ್ನು ಉಂಟುಮಾಡಿದನಲ್ಲವೆ? ನೀವು ಹೀಗೆ ನಡೆದುಕೊಂಡರೆ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಎಲ್ಲ ಪ್ರಯತ್ನಗಳನ್ನು ಸಫಲಗೊಳಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ದಾಸನನ್ನು ಬಿಡುಗಡೆಮಾಡುವದು ಕಷ್ಟವೆಂದು ಹೇಳಿಕೊಳ್ಳಬಾರದು. ಅವನು ಆರು ವರುಷಗಳು ನಿಮ್ಮ ದಾಸನಾಗಿದ್ದು ಕೂಲಿಯಾಳಿಗಿಂತ ಎರಡರಷ್ಟು ಪ್ರಯೋಜನವನ್ನುಂಟುಮಾಡಿದನಲ್ಲಾ. ನೀವು ಹೀಗೆ ನಡೆದುಕೊಂಡರೆ ನಿಮ್ಮ ದೇವರಾದ ಯೆಹೋವನು ನಿಮ್ಮ ಎಲ್ಲಾ ಪ್ರಯತ್ನಗಳನ್ನು ಸಫಲಗೊಳಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಒಬ್ಬ ಗುಲಾಮನನ್ನು ನಿಮ್ಮಿಂದ ಬಿಡುಗಡೆಯಾಗಿ ಕಳುಹಿಸುವುದು ನಿಮಗೆ ಕಷ್ಟವೆಂದು ಹೇಳಿಕೊಳ್ಳಬಾರದು. ಏಕೆಂದರೆ ಅವನು ಆರು ವರ್ಷ ನಿಮ್ಮ ದಾಸನಾಗಿದ್ದದರಿಂದ ಸಂಬಳದ ಸೇವಕನಿಗಿಂತ ಎರಡಷ್ಟಾಗಿದ್ದನು. ಹೀಗೆ ನಿಮ್ಮ ದೇವರಾದ ಯೆಹೋವ ದೇವರು ನೀವು ಮಾಡುವುದೆಲ್ಲದರಲ್ಲಿಯೂ ನಿಮ್ಮನ್ನು ಆಶೀರ್ವದಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 15:18
6 ತಿಳಿವುಗಳ ಹೋಲಿಕೆ  

ನನ್ನ ಒಡೆಯನಾದ ಯೆಹೋವನು ಈ ವಿಷಯಗಳು ಸಂಭವಿಸುವವೆಂದು ಹೇಳಿದನು. ಆತನು ಹೇಳಿದ್ದೇನೆಂದರೆ: “ಇನ್ನೊಂದು ವರ್ಷದಲ್ಲಿ ಕೂಲಿಗಾರನು ತನ್ನ ಸಮಯವನ್ನು ಲೆಕ್ಕಿಸುವಂತೆ ಕೇದಾರಿನ ಘನತೆಯೆಲ್ಲವೂ ಹೋಗಿ ಬಿಡುವದು.


ಈಗ ಯೆಹೋವನು ಹೇಳುವುದೇನೆಂದರೆ: “ಇನ್ನು ಮೂರು ವರ್ಷದೊಳಗೆ ಕೂಲಿಗಾರನು ತನ್ನ ಸಮಯವನ್ನು ಲೆಕ್ಕಿಸುವಂತೆ ಎಲ್ಲಾ ಜನರು ಮತ್ತು ಅವರು ಹೆಮ್ಮೆಪಡುವ ವಸ್ತುಗಳು ಹೋಗಿಬಿಡುತ್ತವೆ. ಕೇವಲ ಸ್ವಲ್ಪ ಮಂದಿ ಮಾತ್ರ ಉಳಿಯುವರು. ದೇಶದಲ್ಲಿ ಹೆಚ್ಚುಮಂದಿ ಉಳಿಯರು.”


ಅವನನ್ನು ನಿಮ್ಮ ಬಾಗಿಲಿನ ನಿಲುವು ಕಂಬದ ಬಳಿಯಲ್ಲಿ ನಿಲ್ಲಿಸಿ ಅವನ ಕಿವಿಯನ್ನು ಒಂದು ಹರಿತವಾದ ಸಾಧನದಿಂದ ರಂಧ್ರ ಮಾಡಬೇಕು. ಇದು, ಅವನು ನಿಮ್ಮ ಶಾಶ್ವತ ಗುಲಾಮನು ಎಂದು ತೋರಿಸುವುದು. ಗುಲಾಮಳಿಗೂ ಇದು ಅನ್ವಯಿಸುತ್ತದೆ.


“ನಿಮ್ಮ ಹಿಂಡಿನಲ್ಲಾಗಲಿ ಹಟ್ಟಿಯಲ್ಲಾಗಲಿ ಚೊಚ್ಚಲ ಮರಿಗಳು ನನಗೆ ವಿಶೇಷವಾದವುಗಳು. ನೀವು ಅವುಗಳನ್ನು ಯೆಹೋವನಿಗೆ ಸಮರ್ಪಿಸಬೇಕು. ಅಂಥಾ ಪ್ರಾಣಿಗಳನ್ನು ನಿಮ್ಮ ಕೆಲಸಕಾರ್ಯಗಳಿಗಾಗಿ ಉಪಯೋಗಿಸಕೂಡದು. ಮತ್ತು ಅಂಥಾ ಕುರಿಮರಿಗಳ ಉಣ್ಣೆಯನ್ನು ಕತ್ತರಿಸಬಾರದು.


“ಆ ಬಡ ಮನುಷ್ಯನಿಗೆ ನಿಮ್ಮಿಂದ ಎಷ್ಟು ಸಹಾಯ ಮಾಡಲು ಸಾಧ್ಯವಿದೆಯೋ ಅಷ್ಟು ಸಹಾಯಮಾಡಿ; ಕೊಡುವುದಕ್ಕೆ ಬೇಸರಪಡಬೇಡಿ. ಯಾಕೆಂದರೆ ನಿಮ್ಮ ದೇವರಾದ ಯೆಹೋವನು ನಿಮ್ಮ ಒಳ್ಳೆಯ ಕಾರ್ಯಗಳಿಗಾಗಿ ನಿಮ್ಮನ್ನು ಆಶೀರ್ವದಿಸುವನು; ನಿಮ್ಮ ಕೆಲಸವನ್ನೆಲ್ಲಾ ಸಫಲಪಡಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು