Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 15:7 - ಪರಿಶುದ್ದ ಬೈಬಲ್‌

7 “ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದಲ್ಲಿ ನೀವು ವಾಸಿಸುವಾಗ ಒಂದುವೇಳೆ ನಿಮ್ಮ ಮಧ್ಯದಲ್ಲಿ ಒಬ್ಬ ಬಡವನಿರಬಹುದು. ನೀವು ಸ್ವಾರ್ಥರಾಗಿ, ಅವನಿಗೆ ಸಹಾಯಮಾಡಲು ನಿರಾಕರಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದ ಯಾವ ಊರಿನಲ್ಲಾದರೂ ಸ್ವದೇಶದವನಾದ ಬಡವನು ಇದ್ದರೆ, ನೀವು ಆ ಬಡ ಸಹೋದರನಿಗೆ ಮನಸ್ಸನ್ನು ಕಠಿಣಮಾಡಿಕೊಂಡು ಅವನಿಗೆ ಸಹಾಯಮಾಡದೆ ಇರಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 “ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಕೊಡುವ ನಾಡಿನ ಯಾವ ಊರಲ್ಲಿಯಾದರೂ ಸ್ವದೇಶದವನಾದ ಬಡವನು ಇದ್ದರೆ, ನೀವು ಆ ಬಡ ಸಹೋದರನ ಬಗ್ಗೆ ಮನಸ್ಸನ್ನು ಕಠಿಣಮಾಡಿಕೊಳ್ಳಬೇಡಿ. ಅವನಿಗೆ ಸಹಾಯಮಾಡದೆ ಇರಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದ ಯಾವ ಊರಲ್ಲಿಯಾದರೂ ಸ್ವದೇಶದವನಾದ ಬಡವನು ಇದ್ದರೆ ನೀವು ಆ ಬಡ ಸಹೋದರನಿಗೆ ಮನಸ್ಸನ್ನು ಕಠಿಣಮಾಡಿಕೊಂಡು ಅವನಿಗೆ ಸಹಾಯಮಾಡದೆ ಇರಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಡುವ ನಿಮ್ಮ ದೇಶದಲ್ಲಿ, ನಿಮ್ಮ ಸಹೋದರರಲ್ಲಿ ಬಡವರು ಇದ್ದರೆ, ನಿಮ್ಮ ಹೃದಯವನ್ನು ಕಠಿಣ ಮಾಡಿಕೊಳ್ಳಬೇಡಿರಿ. ನಿಮ್ಮ ಕೈಯನ್ನು ನಿಮ್ಮ ಬಡ ಸಹೋದರರಿಗೆ ಮುಚ್ಚಿಕೊಳ್ಳಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 15:7
15 ತಿಳಿವುಗಳ ಹೋಲಿಕೆ  

“ಸಾಲ ವಜಾಮಾಡುವ ಏಳನೆಯ ವರ್ಷ ಸಮೀಪವಾಯಿತೆಂದು ನೀವು ಯಾರಿಗೂ ಸಾಲ ಕೊಡದೇ ಸಹಾಯ ಮಾಡದೇ ಇರಬಾರದು. ಅಂಥಾ ದುಷ್ಟ ಆಲೋಚನೆ ನಿಮ್ಮ ಮನಸ್ಸಿನೊಳಗೆ ಹುಟ್ಟದಿರಲಿ. ಸಹಾಯದ ಅಗತ್ಯವಿರುವ ವ್ಯಕ್ತಿಯ ಬಗ್ಗೆ ನಿಮ್ಮಲ್ಲಿ ಯಾವ ಕೆಟ್ಟ ಆಲೋಚನೆಯೂ ಇರಬಾರದು. ನೀವು ಆ ಬಡ ವ್ಯಕ್ತಿಗೆ ಸಹಾಯ ಮಾಡದಿದ್ದರೆ ನಿಮ್ಮ ವಿರುದ್ಧವಾಗಿ ಅವನು ಯೆಹೋವನಿಗೆ ದೂರು ಹೇಳುವನು. ಆಗ ನೀವು ಯೆಹೋವನ ಮುಂದೆ ದೋಷಿಗಳಾಗಿ ಕಂಡುಬರುವಿರಿ.


ಬಡವರಿಗೆ ಸಹಾಯಮಾಡದವನು ತಾನೇ ಕೊರತೆಯಲ್ಲಿರುವಾಗ ಯಾರೂ ಅವನಿಗೆ ಸಹಾಯ ಮಾಡುವುದಿಲ್ಲ.


“ಆದರೆ ಮೊದಲನೇ ಸೇವಕನು ತಾಳಿಕೊಳ್ಳಲಿಲ್ಲ. ತನಗೆ ಸಾಲ ಕೊಡಬೇಕಾಗಿದ್ದ ಸೇವಕನ ವಿಷಯದಲ್ಲಿ ನ್ಯಾಯಾಧಿಪತಿಗೆ ದೂರುಕೊಟ್ಟು ಅವನನ್ನು ಸೆರೆಮನೆಗೆ ಹಾಕಿಸಿದನು. ಆ ಸೇವಕನು ಸಾಲ ತೀರಿಸುವವರೆಗೂ ಸೆರೆಮನೆಯಲ್ಲಿ ಇರಬೇಕಾಯಿತು.


ಯಾವನಾದರೂ ನಿಮ್ಮಲ್ಲಿರುವ ಯಾವುದನ್ನಾದರೂ ಕೇಳಿದರೆ, ಅವನಿಗೆ ಕೊಡಿ. ನಿಮ್ಮಿಂದ ಸಾಲ ತೆಗೆದುಕೊಳ್ಳಬೇಕೆಂದು ಬಂದವನಿಗೆ ಕೊಡದಿರಬೇಡಿ.


“ನನ್ನ ಜನರಲ್ಲಿ ಬಡವನಾಗಿರುವವನಿಗೆ ನೀವು ಹಣವನ್ನು ಸಾಲಕೊಟ್ಟರೆ, ನೀವು ಆ ಹಣಕ್ಕೆ ಬಡ್ಡಿ ಕೇಳಬಾರದು. ಬೇಗನೆ ಮರುಪಾವತಿ ಮಾಡುವಂತೆ ಅವನನ್ನು ಬಲವಂತಪಡಿಸಬಾರದು.


“ಒಂದುವೇಳೆ ನಿಮ್ಮ ಸ್ವದೇಶದ ವ್ಯಕ್ತಿಯೊಬ್ಬನು ಬಹಳ ಬಡವನಾಗಿ ಗತಿಹೀನನಾಗಬಹುದು. ಅವನು ನಿಮ್ಮ ಮಧ್ಯದಲ್ಲಿ ಪ್ರವಾಸಿಯಂತೆ ವಾಸಿಸಲು ನೀವು ಅವಕಾಶ ಕೊಡಬೇಕು.


ನಿಮ್ಮ ದೇಶದಲ್ಲಿ ಯಾವಾಗಲೂ ಬಡಜನರು ಇರುತ್ತಾರೆ. ಅದಕ್ಕಾಗಿಯೇ ನಿಮ್ಮ ಸಹೋದರರಿಗೆ ಸಹಾಯ ಮಾಡಬೇಕೆಂದು ನಿಮಗೆ ಆಜ್ಞಾಪಿಸುತ್ತೇನೆ.


“ಬಡವನಾಗಿರುವ ದಿನಕೂಲಿಯವನಿಗೆ ಮೋಸ ಮಾಡಬಾರದು. ಅವನು ಇಸ್ರೇಲನಾಗಿರಬಹುದು ಅಥವಾ ಪರದೇಶಸ್ಥನಾಗಿರಬಹುದು.


ಯೆಹೂದ್ಯರಲ್ಲಿ ಎಷ್ಟೋ ಬಡಜನರು ತಮ್ಮ ಬಂಧುಗಳ ವಿಷಯದಲ್ಲಿ ದೂರು ಹೇಳಲಾರಂಭಿಸಿದರು.


ಬಡಜನರಿಗೆ ಉದಾರವಾಗಿ ಕೊಡುವವನು ಯೆಹೋವನಿಗೆ ಸಾಲಕೊಡುತ್ತಾನೆ; ಅವನ ಕರುಣೆಯ ಕಾರ್ಯಕ್ಕೆ ಯೆಹೋವನು ಅವನ ಗೆ ಮರುಪಾವತಿ ಮಾಡುವನು.


ಹಸಿದ ಜನರಿಗಾಗಿ ವ್ಯಸನಪಟ್ಟು ಅವರಿಗೆ ಆಹಾರವನ್ನು ಕೊಡಬೇಕು. ಸಂಕಷ್ಟ ಅನುಭವಿಸುವ ಜನರಿಗೆ ಸಹಾಯಮಾಡಿ ಅವರ ಕೊರತೆಗಳನ್ನು ನೀಗಿಸಬೇಕು. ಆಗ ನಿಮ್ಮ ಬೆಳಕು ಕತ್ತಲಲ್ಲಿ ಪ್ರಕಾಶಿಸುವದು. ನಿಮಗೆ ಆಗ ದುಃಖವಿರದು. ಮಧಾಹ್ನದ ಸೂರ್ಯನಂತೆ ನೀವು ಹೊಳೆಯುವಿರಿ.


ದೇಶದ ಎಲ್ಲಾ ಹಳ್ಳಿಗಳಲ್ಲಿದ್ದ ಯೆಹೂದ್ಯರು ಅದಾರ್ ತಿಂಗಳಿನ ಹದಿನಾಲ್ಕನೆಯ ದಿವಸವನ್ನು ಪೂರಿಮ್ ದಿವಸವನ್ನಾಗಿ ಆಚರಿಸಿದರು. ಹದಿನಾಲ್ಕನೆಯ ದಿವಸವು ಅವರಿಗೆ ಸಂತಸದ ಹಬ್ಬ. ಆ ದಿವಸ ಅವರು ಔತಣಮಾಡಿ ಒಬ್ಬರಿಗೊಬ್ಬರು ಉಡುಗೊರೆಗಳನ್ನು ಕೊಟ್ಟು ಕಳುಹಿಸಿದರು.


ಯಾಕೆಂದರೆ ಆ ದಿವಸದಲ್ಲಿ ಯೆಹೂದ್ಯರು ತಮ್ಮ ಶತ್ರುಗಳನ್ನು ಸದೆಬಡಿದರು. ಆ ದಿವಸದಲ್ಲಿ ಅವರಿಗೆ ಶೋಕದ ಬದಲಾಗಿ ಸಂತಸವು ಒದಗಿಬಂತು. ಆ ದಿವಸದಲ್ಲಿ ಅವರ ರೋಧನವು ಹರ್ಷಧ್ವನಿಯಾಗಿ ಮಾರ್ಪಟ್ಟಿತು. ಮೊರ್ದೆಕೈಯು ಎಲ್ಲಾ ಯೆಹೂದ್ಯರಿಗೆ ಪತ್ರ ಬರೆಯಿಸಿದನು. ಆ ದಿವಸದಲ್ಲಿ ಹಬ್ಬವನ್ನು ಆಚರಿಸಿ ಒಬ್ಬರಿಗೊಬ್ಬರು ಉಡುಗೊರೆಗಳನ್ನು ಕೊಡಬೇಕು ಎಂಬುದಾಗಿ ಬರೆಯಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು