Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 16:16 - ಪರಿಶುದ್ದ ಬೈಬಲ್‌

16 “ನಿಮ್ಮ ದೇವರಾದ ಯೆಹೋವನು ತನ್ನ ಆಲಯಕ್ಕಾಗಿ ಆರಿಸಿಕೊಳ್ಳುವ ಆ ವಿಶೇಷ ಸ್ಥಳಕ್ಕೆ ನೀವೆಲ್ಲಾ ವರ್ಷದಲ್ಲಿ ಮೂರು ಬಾರಿ ಅಂದರೆ ಹುಳಿಯಿಲ್ಲದ ರೊಟ್ಟಿಯ ಹಬ್ಬ, ಪಂಚಾಶತ್ತಮ ಹಬ್ಬ ಮತ್ತು ಪರ್ಣಶಾಲೆಗಳ ಹಬ್ಬದಲ್ಲಿ ಸೇರಿಬರಬೇಕು. ಯೆಹೋವನ ಬಳಿಗೆ ಬರುವ ಪ್ರತಿಯೊಬ್ಬನು ಕಾಣಿಕೆಯೊಂದಿಗೆ ಬರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಹುಳಿಯಿಲ್ಲದ ರೊಟ್ಟಿಗಳ ಹಬ್ಬದಲ್ಲಿಯೂ, ಪಂಚಾಶತ್ತಮ ದಿನದ ಹಬ್ಬದಲ್ಲಿಯೂ ಮತ್ತು ಪರ್ಣಶಾಲೆಗಳ ಹಬ್ಬದಲ್ಲಿಯೂ ಅಂತು ವರ್ಷಕ್ಕೆ ಮೂರಾವರ್ತಿ ನಿಮ್ಮಲ್ಲಿರುವ ಗಂಡಸರೆಲ್ಲರೂ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಆತನು ಆರಿಸಿಕೊಳ್ಳುವ ಸ್ಥಳದಲ್ಲಿ ಕಾಣಿಸಿಕೊಳ್ಳಬೇಕು. ಒಬ್ಬರೂ ಕೈಯಲ್ಲಿ ಕಾಣಿಕೆಯಿಲ್ಲದೆ ಆತನ ಸನ್ನಿಧಿಗೆ ಬರಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 “ಹುಳಿಯಿಲ್ಲದ ರೊಟ್ಟಿಗಳ ಜಾತ್ರೆಯಲ್ಲಿ, ಪಂಚಾಶತ್ತಮ ದಿನದ ಜಾತ್ರೆಯಲ್ಲಿ, ಕುಟೀರಗಳ ಜಾತ್ರೆಯಲ್ಲಿ, ಹೀಗೆ ವರ್ಷಕ್ಕೆ ಮೂರಾವರ್ತಿ ನಿಮ್ಮಲ್ಲಿರುವ ಗಂಡಸರೆಲ್ಲರೂ ನಿಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ, ಅವರು ಆರಿಸಿಕೊಳ್ಳುವ ಸ್ಥಳದಲ್ಲಿ ಕಾಣಿಸಿಕೊಳ್ಳಬೇಕು. ಕೈಯಲ್ಲಿ ಕಾಣಿಕೆಯಿಲ್ಲದೆ ಒಬ್ಬರೂ ಅವರ ಸನ್ನಿಧಿಗೆ ಬರಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಹುಳಿಯಿಲ್ಲದ ರೊಟ್ಟಿಗಳ ಜಾತ್ರೆಯಲ್ಲಿಯೂ ಪಂಚಾಶತ್ತಮದಿನದ ಜಾತ್ರೆಯಲ್ಲಿಯೂ ಪರ್ಣಶಾಲೆಗಳ ಜಾತ್ರೆಯಲ್ಲಿಯೂ ಅಂತು ವರುಷಕ್ಕೆ ಮೂರಾವರ್ತಿ ನಿಮ್ಮಲ್ಲಿರುವ ಗಂಡಸರೆಲ್ಲರೂ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಆತನು ಆದುಕೊಳ್ಳುವ ಸ್ಥಳದಲ್ಲಿ ಕಾಣಿಸಿಕೊಳ್ಳಬೇಕು. ಒಬ್ಬರೂ ಕೈಯಲ್ಲಿ ಕಾಣಿಕೆಯಿಲ್ಲದೆ ಆತನ ಸನ್ನಿಧಿಗೆ ಬರಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಹುಳಿಯಿಲ್ಲದ ರೊಟ್ಟಿಗಳ ಹಬ್ಬದಲ್ಲಿಯೂ ವಾರಗಳ ಹಬ್ಬದಲ್ಲಿಯೂ ಮತ್ತು ಗುಡಾರಗಳ ಹಬ್ಬದಲ್ಲಿಯೂ ವರ್ಷಕ್ಕೆ ಮೂರು ಸಾರಿ ನಿಮ್ಮ ಎಲ್ಲಾ ಪುರುಷರು, ನಿಮ್ಮ ಯೆಹೋವ ದೇವರ ಮುಂದೆ ಅವರು ಆಯ್ದುಕೊಳ್ಳುವ ಸ್ಥಳದಲ್ಲಿ ಕಾಣಿಸಿಕೊಳ್ಳಬೇಕು. ಒಬ್ಬರೂ ಯೆಹೋವ ದೇವರ ಸಮ್ಮುಖಕ್ಕೆ ಬರೀ ಕೈಯಿಂದ ಬರಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 16:16
29 ತಿಳಿವುಗಳ ಹೋಲಿಕೆ  

ಯೆಹೋವನ ಹೆಸರನ್ನು ಸ್ತುತಿಸಿರಿ. ನಿಮ್ಮ ಕಾಣಿಕೆಗಳನ್ನು ತೆಗೆದುಕೊಂಡು ದೇವಾಲಯಕ್ಕೆ ಹೋಗಿರಿ.


ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, “ನೀವು ದೊಡ್ಡ ಸುಗ್ಗಿಯನ್ನು ಎದುರು ನೋಡುತ್ತಿದ್ದೀರಿ. ಆದರೆ ನೀವು ಪೈರು ಕೊಯ್ಯಲು ಹೋಗುವಾಗ ಸ್ಪಲ್ಪವೇ ಕಾಳು ಇರುವುದು. ಅದನ್ನು ನೀವು ಮನೆಗೆ ತಂದಾಗ ನಾನು ಗಾಳಿಯನ್ನು ಕಳುಹಿಸಿ ಅವುಗಳನ್ನು ಹಾರಿಸಿಬಿಡುವೆನು. ಹೀಗೆಲ್ಲಾ ಯಾಕೆ ಆಗುತ್ತಿದೆ? ಯಾಕೆಂದರೆ, ನನ್ನ ಆಲಯವು ಇನ್ನೂ ಹಾಳುಬಿದ್ದಿದ್ದರೂ ನೀವೆಲ್ಲರೂ ನಿಮ್ಮ ನಿಮ್ಮ ಮನೆಗಳನ್ನು ನೋಡಿಕೊಳ್ಳುವುದಕ್ಕಾಗಿ ಓಡಿಹೋಗುತ್ತೀರಿ.


ಅವರು ಆ ಮನೆಗೆ ಬಂದಾಗ, ಮಗುವನ್ನು ತಾಯಿ ಮರಿಯಳ ಬಳಿ ಕಂಡು, ಅದಕ್ಕೆ ಸಾಷ್ಟಾಂಗವೆರಗಿ ಆರಾಧಿಸಿದರು. ಅಲ್ಲದೆ ತಾವು ಮಗುವಿಗಾಗಿ ತಂದಿದ್ದ ಕಾಣಿಕೆಗಳನ್ನು ತೆರೆದು ಚಿನ್ನ, ಧೂಪ ಮತ್ತು ಸುಗಂಧ ದ್ರವ್ಯಗಳನ್ನು ನೀಡಿದರು.


ಚೊಚ್ಚಲಾಗಿ ಹುಟ್ಟಿದ ಕತ್ತೆಯನ್ನು ನೀವು ಇಟ್ಟುಕೊಳ್ಳಲು ಬಯಸಿದರೆ, ಆಗ ನೀವು ಕುರಿಮರಿಯನ್ನು ಕೊಟ್ಟು ಅದನ್ನು ಬಿಡಿಸಿಕೊಳ್ಳಬಹುದು. ಆದರೆ ನೀವು ಅದನ್ನು ಕೊಂಡುಕೊಳ್ಳದಿದ್ದರೆ, ಅದರ ಕುತ್ತಿಗೆಯನ್ನು ಮುರಿದು ಕೊಂದುಬಿಡಬೇಕು. ನೀವು ನಿಮ್ಮ ಎಲ್ಲಾ ಚೊಚ್ಚಲು ಗಂಡುಮಕ್ಕಳನ್ನು ನನ್ನಿಂದ ಕೊಂಡುಕೊಳ್ಳಬೇಕು. ಯಾವ ವ್ಯಕ್ತಿಯೂ ಕಾಣಿಕೆಯಿಲ್ಲದೆ, ನನ್ನ ಸನ್ನಿಧಿಗೆ ಬರಕೂಡದು.


ಸೊಲೊಮೋನನು ಪ್ರತಿವರ್ಷದಲ್ಲೂ ಮೂರು ಸಲ ಸರ್ವಾಂಗಹೋಮಗಳನ್ನು, ಸಮಾಧಾನಯಜ್ಞಗಳನ್ನು ಯಜ್ಞವೇದಿಕೆಯ ಮೇಲೆ ಅರ್ಪಿಸುತ್ತಿದ್ದನು. ಈ ಯಜ್ಞವೇದಿಕೆಯನ್ನು ಸೊಲೊಮೋನನು ಯೆಹೋವನಿಗಾಗಿ ನಿರ್ಮಿಸಿದನು. ರಾಜನಾದ ಸೊಲೊಮೋನನು ಯೆಹೋವನ ಮುಂದೆ ಸುಗಂಧ ಧೂಪವನ್ನು ಸುಡುತ್ತಿದ್ದನು. ಅವನು ಆಲಯಕ್ಕೆ ಬೇಕಾದ ವಸ್ತುಗಳನ್ನು ಕೊಡುತ್ತಿದ್ದನು.


ಆದರೆ ಆಕೆ ತಾನು ಗಳಿಸಿದ ಹಣವನ್ನು ತನ್ನಲ್ಲಿ ಇಟ್ಟುಕೊಳ್ಳುವದಿಲ್ಲ. ತೂರ್ ತನ್ನ ವ್ಯಾಪಾರದಲ್ಲಿ ಗಳಿಸಿದ ಲಾಭವನ್ನು ಯೆಹೋವನಿಗಾಗಿ ಶೇಖರಿಸಿಟ್ಟಿದ್ದಾಳೆ. ಯೆಹೋವನನ್ನು ಸೇವಿಸುವವರಿಗೆ ಆ ಲಾಭವನ್ನು ಮೀಸಲಾಗಿಟ್ಟಿದ್ದಾಳೆ. ಹೀಗೆ ಯೆಹೋವನ ಸೇವಕರು ಹೊಟ್ಟೆತುಂಬ ಊಟಮಾಡುವರು, ಒಳ್ಳೆಯ ಬಟ್ಟೆ ಧರಿಸಿಕೊಳ್ಳುವರು.


ಆದರೆ ರೈತರು ಆ ಸೇವಕನನ್ನು ಹಿಡಿದುಕೊಂಡು ಹೊಡೆದು ಏನನ್ನೂ ಕೊಡದೆ ಅವನನ್ನು ಕಳುಹಿಸಿಬಿಟ್ಟರು.


ಆಗ ಯೆಹೂದ್ಯರ ಪರ್ಣಕುಟೀರಗಳ ಹಬ್ಬದ ಸಮಯವಾಗಿತ್ತು.


“ನೀವು ದೇಶದೊಳಕ್ಕೆ ಹೋದಾಗ, ನಾನು ನಿಮ್ಮ ವೈರಿಗಳನ್ನು ಆ ದೇಶದಿಂದ ಹೊರಗಟ್ಟುವೆನು. ನಾನು ನಿಮ್ಮ ಮೇರೆಗಳನ್ನು ವಿಸ್ತರಿಸುವೆನು. ನಿಮಗೆ ಹೆಚ್ಚೆಚ್ಚಾಗಿ ಭೂಮಿ ದೊರೆಯುವುದು. ಪ್ರತಿ ವರ್ಷ ಮೂರುಸಲ ನೀವು ನಿಮ್ಮ ದೇವರಾದ ಯೆಹೋವನ ಸನ್ನಿಧಿಗೆ ಹೋಗುವಿರಿ. ಆ ಸಮಯದಲ್ಲಿ ಯಾರೂ ನಿಮ್ಮಿಂದ ಭೂಮಿಯನ್ನು ಅಪಹರಿಸಲು ಪ್ರಯತ್ನಿಸುವುದಿಲ್ಲ.


“ಇಸ್ರೇಲರಿಗೆ ಹೀಗೆ ಹೇಳು: ಏಳನೆಯ ತಿಂಗಳಿನ ಹದಿನೈದನೆಯ ದಿನವು ಪರ್ಣಶಾಲೆಗಳ ಹಬ್ಬವಾಗಿರುತ್ತದೆ. ಯೆಹೋವನ ಈ ಹಬ್ಬದ ಕಾಲವು ಏಳು ದಿನಗಳವರೆಗೆ ಮುಂದುವರಿಯುವುದು.


ನಿಮ್ಮ ಯೆಹೋವನು ಆರಿಸಿಕೊಂಡಿರುವ ವಿಶೇಷ ಸ್ಥಳದಲ್ಲಿ ಈ ಹಬ್ಬವನ್ನು ಏಳು ದಿನ ಆಚರಿಸಿರಿ. ನಿಮ್ಮ ದೇವರಾದ ಯೆಹೋವನನ್ನು ಘನಪಡಿಸುವುದಕ್ಕಾಗಿ ಸಂತೋಷದಿಂದ ಹಬ್ಬವನ್ನು ಆಚರಿಸಿರಿ. ನಿಮ್ಮ ದೇವರಾದ ಯೆಹೋವನು ನಿಮ್ಮ ಸುಗ್ಗಿಯನ್ನು ಮತ್ತು ನಿಮ್ಮ ಎಲ್ಲಾ ಕೆಲಸಕಾರ್ಯಗಳನ್ನು ಆಶೀರ್ವದಿಸಿದನು. ಆದ್ದರಿಂದ ಸಂತೋಷಪಡಿರಿ!


ಪ್ರತಿಯೊಬ್ಬನೂ ಯೆಹೋವನು ತನ್ನನ್ನು ಆಶೀರ್ವದಿಸಿದ ಮೇರೆಗೆ ಆತನಿಗೆ ಕಾಣಿಕೆಯನ್ನರ್ಪಿಸಬೇಕು.


ಆ ಹಬ್ಬದ ಸಮಯದಲ್ಲಿ ಇಸ್ರೇಲರೆಲ್ಲರು ತಮ್ಮ ದೇವರಾದ ಯೆಹೋವನು ಆರಿಸುವ ವಿಶೇಷ ಸ್ಥಳದಲ್ಲಿ ಕೂಡಿಬರುವಾಗ ಈ ಬೋಧನೆಯ ಪುಸ್ತಕವನ್ನು ಎಲ್ಲರಿಗೂ ಕೇಳಿಸುವಂತೆ ಓದಬೇಕು.


ಎಲ್ಕಾನನು ಪ್ರತಿ ವರ್ಷವೂ ತನ್ನ ಪಟ್ಟಣವಾದ ರಾಮಾತಯಿಮ್ ಬಿಟ್ಟು ಶೀಲೋವಿಗೆ ಹೋಗುತ್ತಿದ್ದನು. ಅವನು ಶೀಲೋವಿನಲ್ಲಿ ಸರ್ವಶಕ್ತನಾದ ಯೆಹೋವನನ್ನು ಆರಾಧಿಸಿ ಆತನಿಗೆ ಯಜ್ಞವನ್ನು ಅರ್ಪಿಸುತ್ತಿದ್ದನು. ಹೊಫ್ನಿ ಮತ್ತು ಫೀನೆಹಾಸರೆಂಬ ಯಾಜಕರು ಯೆಹೋವನ ಸೇವೆಮಾಡುವ ಸ್ಥಳವೇ ಶೀಲೋವ. ಹೊಫ್ನಿ ಮತ್ತು ಫೀನೆಹಾಸರು ಏಲಿಯನ ಮಕ್ಕಳು.


ಅರ್ಚಕರು ಮತ್ತು ಮಾಂತ್ರಿಕರು, “ಇಸ್ರೇಲರ ಪವಿತ್ರ ಪೆಟ್ಟಿಗೆಯನ್ನು ಹಿಂದಕ್ಕೆ ಕಳುಹಿಸುವುದಾದರೆ, ಬರಿದಾಗಿ ಕಳುಹಿಸಬೇಡಿ. ನೀವು ಕಾಣಿಕೆಗಳನ್ನು ಕಳುಹಿಸಲೇಬೇಕು. ಆಗ ಇಸ್ರೇಲರ ದೇವರು ನಿಮ್ಮ ಪಾಪಗಳನ್ನು ಪರಿಹರಿಸುತ್ತಾನೆ. ಆಗ ನೀವೆಲ್ಲಾ ಗುಣಹೊಂದುವಿರಿ; ಶುದ್ಧರಾಗುವಿರಿ. ದೇವರು ನಿಮ್ಮನ್ನು ದಂಡಿಸುವುದನ್ನು ನಿಲ್ಲಿಸಬೇಕಾದರೆ ನೀವು ಈ ಕಾರ್ಯಗಳನ್ನು ಮಾಡಬೇಕು. ಆಗ ದೇವರು ನಿಮ್ಮನ್ನು ಬಾಧಿಸುವುದಿಲ್ಲ” ಎಂದು ಉತ್ತರಿಸಿದರು.


ಮೋಶೆಯ ಅಪ್ಪಣೆಯ ಪ್ರಕಾರ ಪ್ರತಿನಿತ್ಯವೂ ಸಬ್ಬತ್‌ದಿನಗಳಲ್ಲಿಯೂ ಅಮಾವಾಸ್ಯೆಯ ದಿನಗಳಲ್ಲಿಯೂ ವರ್ಷದ ಮೂರು ಹಬ್ಬದ ದಿನಗಳಲ್ಲಿಯೂ (ಹುಳಿಯಿಲ್ಲದ ರೊಟ್ಟಿಯ ಹಬ್ಬ, ವಾರಗಳ ಹಬ್ಬ ಮತ್ತು ಪರ್ಣಶಾಲೆಗಳ ಹಬ್ಬ) ಆಯಾ ದಿನಗಳಲ್ಲಿ ಯಜ್ಞಗಳನ್ನು ಸಮರ್ಪಿಸುತ್ತಿದ್ದನು.


ಜನರು ದೇವರನ್ನು ಸಂದರ್ಶಿಸಲು ಊರಿಂದ ಊರಿಗೆ ಪ್ರಯಾಣ ಮಾಡುತ್ತಾ ಚೀಯೋನಿಗೆ ಬರುವರು.


ಇಸ್ರೇಲಿನ ಕುಲಗಳವರು ಅಂದರೆ ಯೆಹೋವನ ಕುಲಗಳವರು ಯೆಹೋವನ ಹೆಸರನ್ನು ಕೊಂಡಾಡಲು ಅಲ್ಲಿಗೆ ಹೋಗುವರು.


ತಮ್ಮತಮ್ಮ ಸ್ವಂತ ಊರುಗಳಲ್ಲಿ ಹೋಗಿ ನೆಲೆಸಿದ್ದ ಇಸ್ರೇಲರು ಏಳನೆಯ ತಿಂಗಳಲ್ಲಿ ಜೆರುಸಲೇಮಿನಲ್ಲಿ ಒಂದೇ ಮನಸ್ಸಿನಿಂದ ಬಂದು ಸೇರಿದರು.


ಸೇನಾಧೀಶ್ವರ ಯೆಹೋವ ದೇವರೇ, ನನ್ನ ಪ್ರಾರ್ಥನೆಗೆ ಕಿವಿಗೊಡು. ಯಾಕೋಬನ ದೇವರೇ, ನನ್ನ ಮೊರೆಯನ್ನು ಕೇಳು.


ನಮ್ಮ ಹಬ್ಬಗಳನ್ನು ಆಚರಿಸುವ ನಗರವಾದ ಚೀಯೋನನ್ನು ನೋಡಿರಿ. ಮನೋಹರವಾದ ವಿಶ್ರಾಂತಿ ಸ್ಥಳವಾದ ಜೆರುಸಲೇಮನ್ನು ನೋಡಿರಿ. ಜೆರುಸಲೇಮು ಎಂದಿಗೂ ಕದಲದ ಗುಡಾರವಾಗಿದೆ. ಆಕೆಯನ್ನು ಭದ್ರವಾಗಿ ಹಿಡಿದುಕೊಂಡಿರುವ ಗೂಟಗಳು ಎಂದಿಗೂ ಕೀಳಲ್ಪಡುವದಿಲ್ಲ. ಆಕೆಯ ಹಗ್ಗಗಳು ಎಂದಿಗೂ ತುಂಡಾಗುವದಿಲ್ಲ.


ಹಬ್ಬದ ದಿವಸಗಳಲ್ಲಿ ಜೆರುಸಲೇಮ್ ಪರಿಶುದ್ಧಮಾಡಲ್ಪಟ್ಟ ಮಂದೆಗಳಿಂದ ತುಂಬಿಹೋಗುವಂತೆ ಜನರು ಹಾಳುಬಿದ್ದಿದ್ದ ನಗರ ಪಟ್ಟಣಗಳಲ್ಲಿ ತುಂಬಿಕೊಳ್ಳುವರು. ಆಗ ನಾನೇ ದೇವರಾದ ಯೆಹೋವನು ಎಂದು ಅವರು ತಿಳಿದುಕೊಳ್ಳುವರು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು