ಧರ್ಮೋಪದೇಶಕಾಂಡ 16:19 - ಪರಿಶುದ್ದ ಬೈಬಲ್19 ನೀವು ಯಾವಾಗಲೂ ಪಕ್ಷಪಾತವಿಲ್ಲದವರಾಗಿರಬೇಕು. ಜನರಿಂದ ಲಂಚ ತೆಗೆದುಕೊಂಡು ಅನ್ಯಾಯವಾದ ತೀರ್ಮಾನ ಕೊಡಬಾರದು. ಹಣವು ಜ್ಞಾನಿಗಳನ್ನು ಕುರುಡುಮಾಡಿ ಅವರ ಬುದ್ಧಿಯನ್ನು ಮಂದ ಮಾಡುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ನೀವು ನ್ಯಾಯವನ್ನು ಬಿಟ್ಟು ತೀರ್ಮಾನ ಮಾಡಬಾರದು, ಪಕ್ಷಪಾತಮಾಡಬಾರದು, ಲಂಚತೆಗೆದುಕೊಳ್ಳಬಾರದು. ಲಂಚವು ಬುದ್ಧಿವಂತರನ್ನೂ ಕುರುಡರಂತೆ ಮಾಡುತ್ತದೆ; ನಿರಪರಾಧಿಗಳ ನ್ಯಾಯವನ್ನು ಕೆಡಿಸುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 “ನೀವು ನ್ಯಾಯವನ್ನು ಬಿಟ್ಟು ತೀರ್ಮಾನ ಮಾಡಬಾರದು; ಪಕ್ಷಪಾತ ಕೂಡದು; ಲಂಚ ತೆಗೆದುಕೊಳ್ಳಬಾರದು. ಲಂಚವು ಬುದ್ಧಿವಂತರನ್ನೂ ಕುರುಡರನ್ನಾಗಿಸುತ್ತದೆ; ನಿರಪರಾಧಿಗಳ ನ್ಯಾಯವನ್ನು ಕೆಡಿಸುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ನೀವು ನ್ಯಾಯವನ್ನು ಬಿಟ್ಟು ತೀರ್ಮಾನಮಾಡಬಾರದು; ಪಕ್ಷಪಾತಮಾಡಬಾರದು; ಲಂಚತೆಗೆದುಕೊಳ್ಳಬಾರದು. ಲಂಚವು ಬುದ್ಧಿವಂತರನ್ನೂ ಕುರುಡರಂತೆ ಮಾಡುತ್ತದೆ; ನಿರಪರಾಧಿಗಳ ನ್ಯಾಯವನ್ನು ಕೆಡಿಸುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ನೀವು ನ್ಯಾಯವನ್ನು ಕೆಡಿಸಬಾರದು. ನೀವು ಮುಖದಾಕ್ಷಿಣ್ಯ ನೋಡಬಾರದು, ಇಲ್ಲವೆ ಲಂಚವನ್ನು ತೆಗೆದುಕೊಳ್ಳಬಾರದು, ಲಂಚವು ಜ್ಞಾನಿಗಳ ಕಣ್ಣುಗಳನ್ನು ಕುರುಡುಮಾಡಿ, ನಿರಪರಾಧಿಗೆ ದೊರಕಬೇಕಾದ ನ್ಯಾಯವನ್ನು ತಪ್ಪಿಸುತ್ತದೆ. ಅಧ್ಯಾಯವನ್ನು ನೋಡಿ |
ನಾನು ಇಲ್ಲಿದ್ದೇನೆ. ನಾನು ಯಾವ ತಪ್ಪುಗಳನ್ನಾದರೂ ಮಾಡಿದ್ದರೆ, ನೀವು ಯೆಹೋವನಿಗೆ ಮತ್ತು ಆತನು ಆರಿಸಿರುವ ರಾಜನಿಗೆ ಅವುಗಳನ್ನು ಹೇಳಲೇಬೇಕು. ನಾನು ಬೇರೊಬ್ಬರ ಹಸುವನ್ನಾಗಲಿ ಕತ್ತೆಯನ್ನಾಗಲಿ ಕದ್ದಿರುವೆನೇ? ನಾನು ಯಾರನ್ನಾದರೂ ನೋಯಿಸಿರುವೆನೇ? ವಂಚಿಸಿರುವೆನೇ? ನಾನು ತಪ್ಪುಮಾಡಲು ಯಾರಿಂದಲಾದರೂ ಹಣವನ್ನಾಗಲೀ ಪಾದರಕ್ಷೆಗಳನ್ನಾಗಲೀ ತೆಗೆದುಕೊಂಡಿರುವೆನೇ? ನಾನು ಈ ಕಾರ್ಯಗಳನ್ನು ಮಾಡಿರುವುದಾದರೆ ತಿಳಿಸಿ, ಅವುಗಳನ್ನು ಸರಿಪಡಿಸುತ್ತೇನೆ” ಎಂದು ಹೇಳಿದನು.