ಧರ್ಮೋಪದೇಶಕಾಂಡ 16:21 - ಪರಿಶುದ್ದ ಬೈಬಲ್21 “ನೀವು ನಿಮ್ಮ ದೇವರಾದ ಯೆಹೋವನಿಗಾಗಿ ಯಜ್ಞವೇದಿಕೆಯನ್ನು ಕಟ್ಟುವಾಗ ಅದರ ಪಕ್ಕದಲ್ಲಿ ಅಶೇರ್ ದೇವತೆಗೆ ಗೌರವವನ್ನು ತರುವಂಥ ಯಾವ ಮರದ ಕಂಬಗಳನ್ನು ನೆಡಬಾರದು; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ನಿಮ್ಮ ದೇವರಾದ ಯೆಹೋವನಿಗೋಸ್ಕರ ನೀವು ಕಟ್ಟಿಸಿಕೊಳ್ಳುವ ಯಜ್ಞವೇದಿಯ ಬಳಿಯಲ್ಲಿ, ಅಶೇರ ವಿಗ್ರಹಕ್ಕೆ ಸಂಬಂಧಪಟ್ಟ ಯಾವ ಮರದ ಸ್ತಂಭವನ್ನೂ ನೆಡಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 “ನಿಮ್ಮ ದೇವರಾದ ಸರ್ವೇಶ್ವರನಿಗಾಗಿ ನೀವು ಕಟ್ಟಿಸಿಕೊಳ್ಳುವ ಬಲಿಪೀಠದ ಬಳಿ ಅಶೇರವೆಂಬ ವಿಗ್ರಹಸ್ತಂಭವನ್ನು, ಅದು ಯಾವ ವಿಧವಾದ ಮರದಿಂದ ಮಾಡಿರಲಿ, ಅದನ್ನು ನೆಡಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ನಿಮ್ಮ ದೇವರಾದ ಯೆಹೋವನಿಗೋಸ್ಕರ ನೀವು ಕಟ್ಟಿಸಿಕೊಳ್ಳುವ ಯಜ್ಞವೇದಿಯ ಬಳಿಯಲ್ಲಿ ಯಾವ ವಿಧವಾದ ಮರದ ಅಶೇರವೆಂಬ ವಿಗ್ರಹ ಸ್ತಂಭವನ್ನೂ ನೆಡಬಾರದು; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ನಿಮ್ಮ ಯೆಹೋವ ದೇವರಿಗಾಗಿ ಕಟ್ಟುವ ಬಲಿಪೀಠದ ಸಮೀಪದಲ್ಲಿ ಮರದಿಂದ ಮಾಡಿದ ಯಾವುದೇ ಅಶೇರ ಸ್ತಂಭವನ್ನು ನಿಲ್ಲಿಸಬಾರದು. ಅಧ್ಯಾಯವನ್ನು ನೋಡಿ |
ನಂತರ ಯೆಹೋವನು ಇಸ್ರೇಲರನ್ನು ಹೊಡೆಯುತ್ತಾನೆ. ಇಸ್ರೇಲಿನ ಜನರು ಬಹಳ ಭಯಗೊಳ್ಳುವರು. ಅವರು ನೀರಿನಲ್ಲಿ ಎತ್ತರವಾಗಿ ಬೆಳೆದಿರುವ ಹುಲ್ಲಿನಂತೆ ನಡುಗುವರು. ಯೆಹೋವನು ಇಸ್ರೇಲರನ್ನು ಈ ಶ್ರೇಷ್ಠವಾದ ದೇಶದಿಂದ ಚದರಿಸಿಬಿಡುವನು; ಆತನು ಈ ದೇಶವನ್ನು ಅವರ ಪೂರ್ವಿಕರಿಗೆ ಕೊಟ್ಟಿದ್ದನು. ಆತನು ಇಸ್ರೇಲರನ್ನು ಯೂಫ್ರೇಟೀಸ್ ನದಿಯ ಮತ್ತೊಂದು ಕಡೆಗೆ ಚದರಿಸಿಬಿಡುತ್ತಾನೆ. ಯೆಹೋವನು ಅವರ ಮೇಲೆ ಕೋಪಗೊಂಡಿರುವುದೇ ಅದಕ್ಕೆ ಕಾರಣ. ಅವರು ಅಶೇರ್ ವಿಗ್ರಹವನ್ನು ಆರಾಧಿಸಲು ವಿಶೇಷ ಸ್ತಂಭಗಳನ್ನು ಮಾಡಿಕೊಂಡಿದ್ದರಿಂದ ಆತನು ಅವರ ಮೇಲೆ ಕೋಪಗೊಂಡನು.