Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 17:15 - ಪರಿಶುದ್ದ ಬೈಬಲ್‌

15 ಅಂಥ ಸಮಯದಲ್ಲಿ ಯೆಹೋವನು ಆರಿಸಿಕೊಂಡವನನ್ನೇ ನೀವು ರಾಜನನ್ನಾಗಿ ಆರಿಸಿಕೊಳ್ಳಬೇಕು; ಅವನು ನಿಮ್ಮ ಸ್ವಂತ ಜನರಲ್ಲಿ ಒಬ್ಬನಾಗಿರಬೇಕು; ಪರದೇಶಸ್ಥನನ್ನು ನೀವು ನಿಮ್ಮ ರಾಜನನ್ನಾಗಿ ಆರಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನೀವು ಅಗತ್ಯವಾಗಿ ನಿಮ್ಮ ದೇವರಾದ ಯೆಹೋವನು ಆರಿಸಿಕೊಂಡ ವ್ಯಕ್ತಿಯನ್ನೇ ನೇಮಿಸಿಕೊಳ್ಳಬೇಕು. ನಿಮ್ಮ ಬಂಧುಗಳಾದ ಸ್ವಜನರಲ್ಲೇ ಒಬ್ಬನನ್ನು ಅರಸನನ್ನಾಗಿ ನೇಮಿಸಿಕೊಳ್ಳಬೇಕೇ ಹೊರತು ಅನ್ಯದೇಶದವನನ್ನು ನೇಮಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಆಗ ನೀವು ಅಗತ್ಯವಾಗಿ ನಿಮ್ಮ ದೇವರಾದ ಸರ್ವೇಶ್ವರ ಆರಿಸಿಕೊಂಡವನನ್ನೇ ನೇಮಿಸಿಕೊಳ್ಳಬೇಕು. ನಿಮ್ಮ ಬಂಧುಗಳಾದ ಸ್ವಜನರಲ್ಲೇ ಒಬ್ಬನನ್ನು ಅರಸನನ್ನಾಗಿ ನೇಮಿಸಿಕೊಳ್ಳಬೇಕೆ ಹೊರತು ಅನ್ಯದೇಶದವನನ್ನು ನೇಮಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ನೀವು ಅಗತ್ಯವಾಗಿ ನಿಮ್ಮ ದೇವರಾದ ಯೆಹೋವನು ಆದುಕೊಂಡವನನ್ನೇ ನೇವಿುಸಿಕೊಳ್ಳಬೇಕು. ನಿಮ್ಮ ಬಂಧುಗಳಾದ ಸ್ವಜನರಲ್ಲೇ ಒಬ್ಬನನ್ನು ಅರಸನನ್ನಾಗಿ ನೇವಿುಸಿಕೊಳ್ಳಬೇಕೇ ಹೊರತು ಅನ್ಯದೇಶದವನನ್ನು ನೇವಿುಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ನಿಮ್ಮ ದೇವರಾದ ಯೆಹೋವ ದೇವರು ಆಯ್ದುಕೊಳ್ಳುವವನನ್ನು ನಿಮಗೆ ಅರಸನನ್ನಾಗಿ ನೇಮಿಸಿಕೊಳ್ಳಬೇಕು. ನಿಮ್ಮ ಇಸ್ರಾಯೇಲ್ ಸಹೋದರರಲ್ಲಿಂದ ಒಬ್ಬನನ್ನು ನಿಮ್ಮ ಅರಸನನ್ನಾಗಿ ನೇಮಿಸಿಕೊಳ್ಳಬೇಕು. ನಿಮ್ಮ ಸಹೋದರನಲ್ಲದ ಅನ್ಯದೇಶದವನನ್ನು ನಿಮ್ಮ ಮೇಲೆ ನೇಮಿಸಿಕೊಳ್ಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 17:15
16 ತಿಳಿವುಗಳ ಹೋಲಿಕೆ  

ಅವರಲ್ಲೇ ಒಬ್ಬನು ಅವರಿಗೆ ನಾಯಕನಾಗಿರುವನು. ಆ ನಾಯಕನು ನನ್ನ ಜನರಿಂದಲೇ ಬರುವನು. ನಾನು ಹೇಳಿದರೆ ಮಾತ್ರ ಜನರು ನನ್ನ ಹತ್ತಿರಕ್ಕೆ ಬರಲು ಸಾಧ್ಯ. ಆದ್ದರಿಂದ ನಾನು ಆ ನಾಯಕನನ್ನು ನನ್ನ ಹತ್ತಿರ ಬರಲು ಹೇಳುವೆನು. ಅವನು ನನಗೆ ತುಂಬಾ ಹತ್ತಿರದವನಾಗುವನು.


ಅವನು ನನ್ನ ಹೆಸರಿಗಾಗಿ ಆಲಯವನ್ನು ಕಟ್ಟುವನು. ಅವನು ನನ್ನ ಮಗನಾಗಿರುವನು; ನಾನು ಅವನಿಗೆ ತಂದೆಯಾಗಿರುವೆನು. ನಾನು ಅವನ ರಾಜ್ಯವನ್ನು ಬಲಗೊಳಿಸುವೆನು; ಅವನ ಸಂತಾನದವರು ಇಸ್ರೇಲ್ ರಾಜ್ಯವನ್ನು ನಿರಂತರಕ್ಕೂ ಆಳುವರು’” ಎಂದು ಹೇಳಿದನು.


ದಾವೀದನು ಹೆಬ್ರೋನಿನಲ್ಲಿದ್ದಾಗ ಯುದ್ಧಸನ್ನದ್ಧರಾಗಿದ್ದವರು ದಾವೀದನಿಗೆ ಸೌಲನ ರಾಜ್ಯವನ್ನು ಕೊಡಲು ಬಂದರು. ಇದು ಯೆಹೋವನು ಮುಂತಿಳಿಸಿದಂತೆ ಆಯಿತು. ಅವರ ಸಂಖ್ಯೆಯು ಹೀಗಿದೆ:


ಸಮುವೇಲನು ಜನರೆಲ್ಲರಿಗೆ, “ಯೆಹೋವನು ಆರಿಸಿಕೊಂಡಿರುವ ಮನುಷ್ಯನನ್ನು ನೋಡಿದಿರಾ! ಸರ್ವಜನರಲ್ಲಿಯೂ ಸೌಲನಂತಹ ಮನುಷ್ಯನು ಇನ್ನೊಬ್ಬನಿಲ್ಲ!” ಎಂದು ಹೇಳಿದನು. ಆಗ ಜನರೆಲ್ಲ, “ರಾಜನು ಚಿರಂಜೀವಿಯಾಗಿರಲಿ” ಎಂದು ಆರ್ಭಟಿಸಿದರು.


ಯೆಹೂದವೇ, ವಿಗ್ರಹಗಳ ಬೆನ್ನುಹತ್ತಿ ಹೋಗುವದನ್ನು ನಿಲ್ಲಿಸು! ಆ ಅನ್ಯದೇವರುಗಳ ಬಗ್ಗೆ ನಿನ್ನಲ್ಲಿರುವ ಬಯಕೆಯನ್ನು ತೊರೆದುಬಿಡು. ಆದರೆ ನೀನು ‘ಹಾಗೆ ಮಾಡಿದರೆ ಪ್ರಯೋಜನವೇನು? ನಾನು ಅವುಗಳನ್ನು ಬಿಡಲಾರೆ. ನಾನು ಆ ಅನ್ಯದೇವರುಗಳನ್ನು ಪ್ರೀತಿಸುತ್ತೇನೆ. ನಾನು ಅವುಗಳನ್ನು ಪೂಜಿಸಬಯಸುತ್ತೇನೆ’ ಎಂದು ಹೇಳುವೆ.


ಅವುಗಳ ರಾಜರುಗಳೂ ನಾಯಕರುಗಳೂ ಯೆಹೋವನಿಗೂ ಆತನಿಂದ ಅಭಿಷೇಕಿಸಲ್ಪಟ್ಟವನಿಗೂ ವಿರೋಧವಾಗಿ ಕೂಡಿಬಂದಿದ್ದಾರೆ.


ಹಿಂದಿನ ದಿನಗಳಲ್ಲಿ, ಸೌಲನು ರಾಜನಾಗಿದ್ದಾಗಲೂ ನಮ್ಮನ್ನು ಯುದ್ಧದಲ್ಲಿ ಮುನ್ನಡೆಸಿದವನು ನೀನೇ. ಯೆಹೋವನು ನಿನ್ನನ್ನು ಕುರಿತು, ‘ನೀನು ನನ್ನ ಜನರಾದ ಇಸ್ರೇಲರ ನಾಯಕನೂ ಪಾಲಕನೂ ಆಗಿರುವೆ’ ಎಂದು ಹೇಳಿದ್ದಾನೆ” ಎಂದರು.


ಆದ್ದರಿಂದ ನಿನ್ನ ಅಭಿಪ್ರಾಯವನ್ನು ತಿಳಿಸು. ಸೀಸರನಿಗೆ ತೆರಿಗೆ ಕೊಡುವುದು ಸರಿಯೋ ಅಥವಾ ತಪ್ಪೋ?” ಎಂದು ಕೇಳಿದರು.


ಯೆಹೋವನು ನನಗೆ ಅನೇಕ ಮಕ್ಕಳನ್ನು ಕೊಟ್ಟನು. ಆ ಮಕ್ಕಳಲ್ಲಿ ಯೆಹೋವನು ಸೊಲೊಮೋನನನ್ನು ನನ್ನ ನಂತರ ಇಸ್ರೇಲರ ಅರಸನನ್ನಾಗಿ ಆರಿಸಿಕೊಂಡಿದ್ದಾನೆ. ಆದರೆ ನಿಜವಾಗಿಯೂ, ಇಸ್ರೇಲ್, ದೇವರಾದ ಯೆಹೋವನ ರಾಜ್ಯವಾಗಿದೆ.


ಹಿರಿಯರು ಸಮುವೇಲನಿಗೆ, “ನೀನು ಮುದುಕನಾಗಿರುವೆ ಮತ್ತು ನಿನ್ನ ಮಕ್ಕಳು ಒಳ್ಳೆಯ ಮಾರ್ಗದಲ್ಲಿ ನಡೆಯುತ್ತಿಲ್ಲ, ಅವರು ನಿನ್ನಂತಲ್ಲ. ಈಗ, ಬೇರೆ ದೇಶಗಳಂತೆ ಒಬ್ಬ ರಾಜನನ್ನು ನಮ್ಮನ್ನಾಳಲು ನೇಮಿಸು” ಎಂದು ಹೇಳಿದರು.


ಯಜ್ಞಕಾರ್ಯಕ್ಕೆ ಇಷಯನನ್ನು ಆಹ್ವಾನಿಸು. ಆ ಮೇಲೆ ನೀನು ಮಾಡಬೇಕಾದದ್ದನ್ನು ನಾನು ತೋರಿಸುತ್ತೇನೆ. ನಾನು ತೋರಿಸಿದ ಮನುಷ್ಯನಿಗೆ ನೀನು ಅಭಿಷೇಕವನ್ನು ಮಾಡಬೇಕು” ಎಂದು ಹೇಳಿದನು.


ಆಗ ಇಸ್ರೇಲಿನ ಕುಲಗಳವರೆಲ್ಲಾ ಹೆಬ್ರೋನಿನಲ್ಲಿದ್ದ ದಾವೀದನ ಬಳಿಗೆ ಬಂದು, “ನಾವೆಲ್ಲಾ ಒಂದೇ ಕುಲದವರಾಗಿದ್ದೇವೆ.


ನನ್ನ ಸೇವಕನಾದ ದಾವೀದನನ್ನು ಕಂಡುಕೊಂಡೆ. ನನ್ನ ವಿಶೇಷವಾದ ಎಣ್ಣೆಯಿಂದ ಅವನನ್ನು ಅಭಿಷೇಕಿಸಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು