ಧರ್ಮೋಪದೇಶಕಾಂಡ 17:8 - ಪರಿಶುದ್ದ ಬೈಬಲ್8 “ನಿಮ್ಮ ನ್ಯಾಯಸ್ಥಾನದಲ್ಲಿ ನ್ಯಾಯತೀರಿಸಲಾಗದ ಕಷ್ಟದ ಸಮಸ್ಯೆಗಳು ಬರುವವು. ಅವು ಕೊಲೆ ಅಥವಾ ಇಬ್ಬರ ಮಧ್ಯೆ ವಿವಾದವಿರಬಹುದು; ಅಥವಾ ಜಗಳಮಾಡಿ ಗಾಯಗೊಂಡಿರುವ ಪ್ರಕರಣವಾಗಿರಬಹುದು. ನಿಮ್ಮ ಪಟ್ಟಣಗಳ ನ್ಯಾಯಸ್ಥಾನದಲ್ಲಿ ಈ ಪ್ರಕರಣಗಳ ವಿಚಾರಣೆ ನಡಿಸುವಾಗ ಸರಿಯಾದ ಇತ್ಯರ್ಥಮಾಡಿ ತೀರ್ಪುಮಾಡಲು ಕಷ್ಟವಾದಲ್ಲಿ ನೀವು ದೇವರು ಆರಿಸುವ ಸ್ಥಳಕ್ಕೆ ಹೋಗಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ವಿಧವಿಧವಾದ ಕೊಲೆ, ನ್ಯಾಯ, ಹೊಡೆದಾಟ ಇವುಗಳ ವಿಷಯದಲ್ಲಿ ಅನುಮಾನ ಅಥವಾ ಚರ್ಚೆಗಳು ನಿಮ್ಮ ಊರಿನಲ್ಲಿ ಉಂಟಾದಾಗ, ನ್ಯಾಯ ತೀರಿಸುವುದು ಕಷ್ಟವಾದರೆ, ನೀವು ಊರಿನಿಂದ ಹೊರಟು ನಿಮ್ಮ ದೇವರಾದ ಯೆಹೋವನು ಆರಿಸಿಕೊಳ್ಳುವ ಸ್ಥಳಕ್ಕೆ ಹೋಗಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 “ವಿಧವಿಧವಾದ ಜೀವಹತ್ಯ, ಹಕ್ಕುಬಾಧ್ಯತೆ, ಹೊಡೆದಾಟ ಇವುಗಳ ವಿಷಯದಲ್ಲಿ ಅನುಮಾನ, ಚರ್ಚೆಗಳು ನಿಮ್ಮ ಊರಲ್ಲಿ ಉಂಟಾಗಬಹುದು. ಆಗ ಸರಿಯಾಗಿ ವಿವೇಚಿಸುವುದು ನಿಮ್ಮ ಶಕ್ತಿಗೆ ಮೀರಿದ ಪಕ್ಷಕ್ಕೆ ನೀವು ಊರಿನಿಂದ ಹೊರಟು ನಿಮ್ಮ ದೇವರಾದ ಸರ್ವೇಶ್ವರ ಆರಿಸಿಕೊಳ್ಳುವ ಸ್ಥಳದಲ್ಲಿ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ವಿಧವಿಧವಾದ ಜೀವಹತ್ಯ, ನ್ಯಾಯ, ಹೊಡೆದಾಟ ಇವುಗಳ ವಿಷಯದಲ್ಲಿ ಅನುಮಾನ ಚರ್ಚೆಗಳು ನಿಮ್ಮ ಊರಲ್ಲಿ ಉಂಟಾದಾಗ, ಸರಿಯಾಗಿ ವಿವೇಚಿಸುವದು ನಿಮ್ಮ ಶಕ್ತಿಗೆ ಮೀರಿದ ಪಕ್ಷಕ್ಕೆ ನೀವು ಊರಿನಿಂದ ಹೊರಟು ನಿಮ್ಮ ದೇವರಾದ ಯೆಹೋವನು ಆದುಕೊಳ್ಳುವ ಸ್ಥಳಕ್ಕೆ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ನಿಮ್ಮ ಊರುಗಳಲ್ಲಿ ಉಂಟಾದ ವಿವಾದಗಳ ವಿಷಯವಾಗಿ ಅಂದರೆ, ಕೊಲೆಯ ವ್ಯಾಜ್ಯವಾಗಲಿ, ವಾದಿ ಪ್ರತಿವಾದ ವ್ಯಾಜ್ಯವಾಗಲಿ, ಹೊಡೆದಾಟದ ವ್ಯಾಜ್ಯವಾಗಲಿ, ನಿಮಗೆ ನ್ಯಾಯತೀರಿಸುವುದು ಕಷ್ಟವಾದರೆ, ನಿಮ್ಮ ದೇವರಾದ ಯೆಹೋವ ದೇವರು ಆಯ್ದುಕೊಳ್ಳುವ ಸ್ಥಳಕ್ಕೆ ಹೋಗಿರಿ. ಅಧ್ಯಾಯವನ್ನು ನೋಡಿ |
ನ್ಯಾಯತೀರಿಸುವಾಗ ಒಬ್ಬನು ಇನ್ನೊಬ್ಬನಿಗಿಂತ ವಿಶೇಷ ವ್ಯಕ್ತಿಯಾಗಿದ್ದಾನೆ ಎಂಬುದನ್ನು ಲೆಕ್ಕಿಸದೆ ಇಬ್ಬರೂ ಸಮಾನರೆಂದು ಪರಿಗಣಿಸಿ ಸರಿಯಾದ ತೀರ್ಪು ಕೊಡಬೇಕು. ನೀವು ಯಾರಿಗೂ ಭಯಪಡಬೇಡಿರಿ. ಯಾಕೆಂದರೆ ನಿಮ್ಮ ತೀರ್ಪು ದೇವರಿಂದ ಬಂದ ತೀರ್ಪಾಗಿರುತ್ತದೆ. ನಿಮಗೆ ಬಗೆಹರಿಸಲು ಕಷ್ಟವಾಗುವ ದೂರುಗಳಿದ್ದಲ್ಲಿ ಅವುಗಳನ್ನು ನನ್ನ ಬಳಿಗೆ ತನ್ನಿರಿ. ಅವುಗಳಿಗೆ ನಾನು ನ್ಯಾಯತೀರ್ಪು ನೀಡುವೆನು.’
ಅವನಲ್ಲಿ ಏನೂ ಇಲ್ಲದ ಪಕ್ಷಕ್ಕೆ, ಅವನು ಗುಲಾಮನಾಗುವನು. ಆದರೆ ಆ ಕಳ್ಳನು ಪಶುವನ್ನು ಇನ್ನೂ ಇಟ್ಟುಕೊಂಡಿರುವುದು ನಿಮಗೆ ಗೊತ್ತಾದರೆ, ಅವನು ಕದ್ದ ಪಶುವಿಗೆ ಪ್ರತಿಯಾಗಿ ಎರಡು ಪಶುಗಳನ್ನು ಮಾಲೀಕನಿಗೆ ಕೊಡಿಸಬೇಕು. ಕದ್ದದ್ದು ಎತ್ತಾಗಿರಬಹುದು, ಕತ್ತೆಯಾಗಿರಬಹುದು ಅಥವಾ ಕುರಿಯಾಗಿರಬಹುದು. “ಕಳ್ಳನು ರಾತ್ರಿಯಲ್ಲಿ ಮನೆಗೆ ಕನ್ನ ಹಾಕಲು ಪ್ರಯತ್ನಿಸುತ್ತಿರುವಾಗ ಕೊಲ್ಲಲ್ಪಟ್ಟರೆ, ಅವನನ್ನು ಕೊಂದದ್ದಕ್ಕೆ ಯಾರೂ ತಪ್ಪಿತಸ್ಧರಾಗುವುದಿಲ್ಲ. ಆದರೆ ಇದು ಹಗಲಿನಲ್ಲಿ ನಡೆದರೆ ಕೊಂದವನು ಕೊಲೆಗಾರನಾಗುವನು.
ಅಬ್ಷಾಲೋಮನು ಹೊತ್ತಾರೆಯಲ್ಲಿಯೇ ಎದ್ದು ದ್ವಾರದ ಹತ್ತಿರದಲ್ಲಿ ನಿಂತುಕೊಳ್ಳುತ್ತಿದ್ದನು. ತೊಂದರೆಯಲ್ಲಿ ಸಿಕ್ಕಿಕೊಂಡಿರುವ ಯಾವನಾದರೂ ತೀರ್ಪಿಗಾಗಿ ರಾಜನಾದ ದಾವೀದನ ಬಳಿಗೆ ಹೋಗುತ್ತಿರುವುದನ್ನು ಅಬ್ಷಾಲೋಮನು ಕಂಡರೆ ಅವನನ್ನು ತನ್ನ ಬಳಿಗೆ ಕರೆಯುತ್ತಿದ್ದನು. ಅಬ್ಷಾಲೋಮನು, “ನೀನು ಯಾವ ನಗರದಿಂದ ಬಂದೆ?” ಎಂದು ಕೇಳುತ್ತಿದ್ದನು. ಆ ಮನುಷ್ಯನು, “ನಾನು ಇಸ್ರೇಲಿನ ಇಂಥ ಕುಲಕ್ಕೆ ಸೇರಿದವನು” ಎಂದು ಉತ್ತರಿಸುತ್ತಿದ್ದನು.