Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 18:12 - ಪರಿಶುದ್ದ ಬೈಬಲ್‌

12 ಇಂಥ ಕಾರ್ಯಗಳನ್ನು ಮಾಡುವ ಜನರನ್ನು ದೇವರು ದ್ವೇಷಿಸುತ್ತಾನೆ. ಆದ್ದರಿಂದಲೇ ಆ ಜನಾಂಗಗಳವರನ್ನು ನಿಮಗೋಸ್ಕರವಾಗಿ ಈ ದೇಶದಿಂದ ಹೊರಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಇಂಥ ಕೆಲಸಗಳನ್ನು ನಡಿಸುವವರನ್ನು ಯೆಹೋವನು ಸಹಿಸುವುದಿಲ್ಲ; ನಿಮ್ಮ ದೇವರಾದ ಯೆಹೋವನು ಇಂಥ ಹೇಯಕೃತ್ಯಗಳನ್ನು ಮಾಡುವ ಆ ಜನಾಂಗಗಳನ್ನು ನಿಮ್ಮಿಂದ ಹೊರ ಹೋಗುವಂತೆ ಮಾಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಇಂಥ ಕೆಲಸಗಳನ್ನು ನಡೆಸುವವರು ಸರ್ವೇಶ್ವರನಿಗೆ ಅಸಹ್ಯರಾಗಿದ್ದಾರೆ. ನಿಮ್ಮ ದೇವರಾದ ಸರ್ವೇಶ್ವರ ಇಂಥ ಹೇಯಕೃತ್ಯಗಳನ್ನು ಮಾಡುವ ಆ ಜನಾಂಗಗಳನ್ನು ನಿಮ್ಮಿಂದ ದೂರ ಹೊರದೂಡಿಸಿಬಿಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಇಂಥ ಕೆಲಸಗಳನ್ನು ನಡಿಸುವವರು ಯೆಹೋವನಿಗೆ ಅಸಹ್ಯರಾಗಿದ್ದಾರೆ; ನಿಮ್ಮ ದೇವರಾದ ಯೆಹೋವನು ಇಂಥ ಹೇಯಕೃತ್ಯಗಳನ್ನು ಮಾಡುವ ಆ ಜನಾಂಗಗಳನ್ನು ನಿಮ್ಮೆದುರಿನಿಂದ ಹೊರಡಿಸಿಬಿಡುತ್ತಾನಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಏಕೆಂದರೆ ಇಂಥವುಗಳನ್ನು ಮಾಡುವವರೆಲ್ಲಾ ಯೆಹೋವ ದೇವರಿಗೆ ಅಸಹ್ಯರಾಗಿದ್ದಾರೆ. ಈ ಅಸಹ್ಯಗಳ ನಿಮಿತ್ತವೇ ನಿಮ್ಮ ದೇವರಾದ ಯೆಹೋವ ದೇವರು ಅವರನ್ನು ನಿಮ್ಮ ಮುಂದೆ ಹೊರದೂಡಿಸಿಬಿಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 18:12
9 ತಿಳಿವುಗಳ ಹೋಲಿಕೆ  

“ಆ ದುರಾಚಾರಗಳಲ್ಲಿ ಯಾವುದರಿಂದಲೂ ನಿಮ್ಮನ್ನು ಅಶುದ್ಧರನ್ನಾಗಿ ಮಾಡಿಕೊಳ್ಳಬೇಡಿರಿ. ನಾನು ಜನಾಂಗಗಳನ್ನು ಅವರ ದೇಶಗಳಿಂದ ಹೊರಡಿಸಿ ಅವರ ದೇಶವನ್ನು ನಿಮಗೆ ಕೊಡುತ್ತಿದ್ದೇನೆ. ಯಾಕೆಂದರೆ ಅವರು ಅಂಥ ಭಯಂಕರ ಪಾಪಗಳನ್ನು ಮಾಡಿದರು.


“ಅಲ್ಲಿಯ ಜನರನ್ನು ದೇವರಾದ ಯೆಹೋವನು ಹೊಡೆದೋಡಿಸುವನು. ಆದರೆ ನೀವು ನಿಮ್ಮ ಮನಸ್ಸಿನಲ್ಲಿ, ‘ನಾವು ನೀತಿವಂತರಾಗಿದುದ್ದರಿಂದ ಮತ್ತು ಒಳ್ಳೆಯವರಾಗಿದ್ದುದರಿಂದ ಆತನು ನಮ್ಮನ್ನು ಈ ಒಳ್ಳೆಯ ದೇಶಕ್ಕೆ ತಂದನು’ ಎಂದು ನೆನಸಿಕೊಳ್ಳಬೇಡಿ. ಅದು ಕಾರಣವಲ್ಲ. ಅಲ್ಲಿಯ ಜನರು ಬಹು ಕೆಟ್ಟವರಾಗಿದ್ದ ಕಾರಣ ಯೆಹೋವನು ಅವರನ್ನು ಹೊರಡಿಸಿದನು.


ನಿಮಗಿಂತ ಮುಂಚೆ ಈ ದೇಶದಲ್ಲಿ ವಾಸಿಸಿದ ಜನರು ಆ ಭಯಂಕರ ಕೃತ್ಯಗಳನ್ನು ಮಾಡಿದರು. ಆದ್ದರಿಂದ ದೇಶವು ಹೊಲೆಯಾಯಿತು.


ಆದ್ದರಿಂದ ದೇಶವು ಸಹ ಅಶುದ್ಧವಾಯಿತು. ಆದ್ದರಿಂದ ನಾನು ಅದನ್ನು ಅದರ ಪಾಪಗಳಿಗಾಗಿ ದಂಡಿಸಿದೆನು. ಆ ದೇಶವು ತನ್ನಲ್ಲಿ ವಾಸಿಸಿದ ಜನರನ್ನು ಕಾರಿಬಿಟ್ಟಿತು.


ನಿಮ್ಮ ಊರಲ್ಲಿ ನೆಲೆಸಿರುವ ಲೇವಿಯರನ್ನು ಮರೆಯಬೇಡಿರಿ. ನಿಮ್ಮ ಆಹಾರದಲ್ಲಿ ಅವರಿಗೂ ಪಾಲುಕೊಡಿರಿ. ಯಾಕೆಂದರೆ ಅವರಿಗೆ ದೇಶದಲ್ಲಿ ನಿಮ್ಮ ಹಾಗೆ ಸ್ವಾಸ್ತ್ಯ ದೊರಕುವುದಿಲ್ಲ.


ಆಗ ನಾನು ಒಬ್ಬ ಬಲಾಢ್ಯನಾದ ರಾಜನು ಬಂದು ಆ ಮರವನ್ನು ತೆಗೆದುಕೊಳ್ಳುವಂತೆ ಮಾಡಿದೆನು. ಆ ರಾಜನು ಮರವು ಮಾಡಿದ ದುಷ್ಕೃತ್ಯಗಳಿಗಾಗಿ ಅದನ್ನು ಶಿಕ್ಷಿಸಿದನು. ಆ ಮರವನ್ನು ನಾನು ನನ್ನ ತೋಟದಿಂದ ತೆಗೆದು ಹಾಕಿದೆನು.


ನೀವು ಉತ್ತಮ ರೀತಿಯಲ್ಲಿ ಜೀವಿಸುವಿರಿ ಎಂದು ದೇವರು ನಿಮಗೆ ಆ ದೇಶವನ್ನು ಕೊಡುವುದಿಲ್ಲ. ಅವರು ಕೆಟ್ಟದ್ದಾಗಿ ಜೀವಿಸುತ್ತಿರುವುದರಿಂದ ದೇವರು ಅವರನ್ನು ಹೊರಡಿಸಿ ನೀವು ಆ ದೇಶವನ್ನು ಅನುಭವಿಸುವಂತೆ ಮಾಡಿದನು; ಆತನು ನಿಮ್ಮ ಪೂರ್ವಿಕರಾದ ಅಬ್ರಹಾಮನಿಗೆ, ಇಸಾಕನಿಗೆ, ಯಾಕೋಬನಿಗೆ ಕೊಟ್ಟಿರುವ ವಾಗ್ದಾನಗಳನ್ನು ನೆರವೇರಿಸುವುದಕ್ಕಾಗಿ ನಿಮಗೆ ಆ ದೇಶವನ್ನು ಕೊಡುವನು.


“ಹೆಂಗಸು ಗಂಡಸರ ಬಟ್ಟೆ ಧರಿಸಿಕೊಳ್ಳಬಾರದು, ಗಂಡಸು ಹೆಂಗಸರ ಬಟ್ಟೆ ಧರಿಸಬಾರದು. ಇದು ಯೆಹೋವನ ದೃಷ್ಟಿಯಲ್ಲಿ ಅಸಹ್ಯ.


ಯೋಷೀಯನು ಮಾಂತ್ರಿಕರನ್ನು, ತಾಂತ್ರಿಕರನ್ನು, ಮನೆಯ ದೇವರುಗಳನ್ನು, ವಿಗ್ರಹಗಳನ್ನು, ಯೆಹೂದದಲ್ಲಿ ಮತ್ತು ಜೆರುಸಲೇಮಿನಲ್ಲಿ ಜನರು ಪೂಜಿಸುತ್ತಿದ್ದ ತೆರಾಫೀಮ್ ಎಂಬ ಗೊಂಬೆಗಳನ್ನು ನಾಶಪಡಿಸಿದನು. ಯಾಜಕನಾದ ಹಿಲ್ಕೀಯನಿಗೆ ದೇವಾಲಯದಲ್ಲಿ ಸಿಕ್ಕಿದ ಧರ್ಮಶಾಸ್ತ್ರದಲ್ಲಿ ಬರೆದಿರುವ ನಿಯಮಗಳಿಗೆ ವಿಧೇಯನಾಗಿರಲು ಯೋಷೀಯನು ಹೀಗೆ ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು