Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 19:5 - ಪರಿಶುದ್ದ ಬೈಬಲ್‌

5 ಇದೊಂದು ಉದಾಹರಣೆ: ಒಬ್ಬನು ಇನ್ನೊಬ್ಬ ವ್ಯಕ್ತಿಯೊಂದಿಗೆ ಅಡವಿಗೆ ಕಟ್ಟಿಗೆ ಕಡಿಯಲು ಹೋಗುತ್ತಾನೆ. ಒಂದು ಮರವನ್ನು ಕಡಿಯಲು ತನ್ನ ಕೊಡಲಿಯನ್ನು ಬೀಸುವಾಗ ಅವನ ಕೊಡಲಿಯು ಕಾವಿನಿಂದ ಕಳಚಿಕೊಂಡು ಪಕ್ಕದಲ್ಲಿ ನಿಂತಿದ್ದವನಿಗೆ ಬಡಿದು ಅವನ ಸಾವಿಗೆ ಕಾರಣವಾದರೆ, ಕೊಡಲಿಯನ್ನು ಬೀಸಿದವನು ಆ ಮೂರು ನಗರಗಳಲ್ಲಿ ಒಂದರಲ್ಲಿ ಆಶ್ರಯವನ್ನು ಪಡೆದುಕೊಂಡು ಸುರಕ್ಷಿತವಾಗಿರಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಉದಾಹರಣೆ, ಒಬ್ಬ ಮನುಷ್ಯನು ಕಟ್ಟಿಗೆಯನ್ನು ಕಡಿಯಬೇಕೆಂದು ಮತ್ತೊಬ್ಬನ ಜೊತೆಯಲ್ಲಿ ಅಡವಿಗೆ ಹೋಗಿ, ಅಲ್ಲಿ ಒಂದು ಮರವನ್ನು ಕಡಿಯಬೇಕೆಂದು ಕೊಡಲಿಯಿಂದ ಹೊಡೆಯುತ್ತಿರುವಾಗ, ಕೊಡಲಿಯು ಕಾವಿನಿಂದ ಜಾರಿ ಆ ಮತ್ತೊಬ್ಬನಿಗೆ ತಗಲಿದ್ದರಿಂದ ಅವನು ಸತ್ತರೆ, ಹೊಡೆದವನು ಆ ಪಟ್ಟಣಗಳಲ್ಲಿ ಒಂದಕ್ಕೆ ಓಡಿಹೋಗಿ ಬದುಕಿಕೊಳ್ಳಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಉದಾಹರಣೆಗೆ, ಒಬ್ಬ ವ್ಯಕ್ತಿ ಕಟ್ಟಿಗೆಯನ್ನು ಕಡಿಯಲು ಮತ್ತೊಬ್ಬನ ಜೊತೆಯಲ್ಲಿ ಅಡವಿಗೆ ಹೋದನೆಂದು ಇಟ್ಟುಕೊಳ್ಳೋಣ. ಅಲ್ಲಿ ಒಂದು ಮರವನ್ನು ಕೊಡಲಿಯಿಂದ ಹೊಡೆಯುತ್ತಿರುವಾಗ ಕೊಡಲಿ ಕಾವಿನಿಂದ ಜಾರಿ ಆ ಮತ್ತೊಬ್ಬನಿಗೆ ತಗಲಿ ಅವನು ಸತ್ತರೆ, ಹೊಡೆದವನು ಆ ನಗರಗಳಲ್ಲಿ ಒಂದಕ್ಕೆ ಓಡಿಹೋಗಿ ಬದುಕಿಕೊಳ್ಳಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ದೃಷ್ಟಾಂತ - ಒಬ್ಬ ಮನುಷ್ಯನು ಕಟ್ಟಿಗೆಯನ್ನು ಕಡಿಯಬೇಕೆಂದು ಮತ್ತೊಬ್ಬನ ಜೊತೆಯಲ್ಲಿ ಅಡವಿಗೆ ಹೋಗಿ ಅಲ್ಲಿ ಒಂದು ಮರವನ್ನು ಕಡಿಯಬೇಕೆಂದು ಕೊಡಲಿಯಿಂದ ಹೊಡೆಯುತ್ತಿರುವಾಗ ಕೊಡಲಿಯು ಕಾವಿನಿಂದ ಜಾರಿ ಆ ಮತ್ತೊಬ್ಬನಿಗೆ ತಗಲಿದ್ದರಿಂದ ಅವನು ಸತ್ತರೆ ಹೊಡೆದವನು ಆ ಪಟ್ಟಣಗಳಲ್ಲಿ ಒಂದಕ್ಕೆ ಓಡಿಹೋಗಿ ಬದುಕಿಕೊಳ್ಳಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಉದಾಹರಣೆಗೆ: ಒಬ್ಬ ವ್ಯಕ್ತಿ ಕಟ್ಟಿಗೆಯನ್ನು ಕಡಿಯಲು ಮತ್ತೊಬ್ಬನ ಜೊತೆಯಲ್ಲಿ ಅಡವಿಗೆ ಹೋದನೆಂದು ಇಟ್ಟುಕೊಳ್ಳೋಣ. ಅಲ್ಲಿ ಒಂದು ಮರವನ್ನು ಕೊಡಲಿಯಿಂದ ಹೊಡೆಯುತ್ತಿರುವಾಗ, ಕೊಡಲಿ ಕಾವಿನಿಂದ ಜಾರಿ, ಆ ಮತ್ತೊಬ್ಬನಿಗೆ ತಗಲಿ ಅವನು ಸತ್ತರೆ, ಹೊಡೆದವನು ಆ ನಗರಗಳಲ್ಲಿ ಒಂದಕ್ಕೆ ಓಡಿಹೋಗಿ ಬದುಕಿಕೊಳ್ಳಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 19:5
7 ತಿಳಿವುಗಳ ಹೋಲಿಕೆ  

ಹೀಗಿದ್ದಲ್ಲಿ ರಾಜನು ಮಳೆಯಲ್ಲಿ ಆಶ್ರಯ ಸ್ಥಳವಾಗಿಯೂ ಗಾಳಿಯಲ್ಲಿ ಮರೆಯಂತೆಯೂ ಮರುಭೂಮಿಯಲ್ಲಿ ಒರತೆಯಂತೆಯೂ ಬೆಂಗಾಡಿನಲ್ಲಿ ಬಂಡೆಯ ನೆರಳಿನಂತೆಯೂ ಇರುವನು.


ಜ್ಞಾನಿಯು ಕೇಡನ್ನು ಕಂಡು ಆ ದಾರಿಯನ್ನೇ ಬಿಟ್ಟುಹೋಗುವನು. ಮೂಢನಾದರೋ ಕೇಡಿಗೆ ನೇರವಾಗಿ ನಡೆದು ಕಷ್ಟಕ್ಕೆ ಗುರಿಯಾಗುವನು.


ಕೊಂದವನು ಓಡಿಹೋಗಿದ್ದ ಆಶ್ರಯ ನಗರಕ್ಕೆ ಸಭೆಯವರು ಅವನನ್ನು ಮತ್ತೆ ಕರೆದುಕೊಂಡು ಹೋಗಿ ಕೊಲ್ಲಲ್ಪಟ್ಟವನ ಸಮೀಪಬಂಧುವಿನಿಂದ ರಕ್ಷಿಸಬೇಕು. ಅಭಿಷೇಕ ಹೊಂದಿದ ಮಹಾಯಾಜಕನು ಜೀವದಿಂದಿರುವ ತನಕ ಅವನು ಆ ಪಟ್ಟಣದಲ್ಲೇ ವಾಸಿಸಬೇಕು.


“ಅಂಥಾ ಮನುಷ್ಯನಿಗೆ ಅನ್ವಯಿಸುವ ನಿಯಮಗಳು ಯಾವುವೆಂದರೆ: ಆ ಮನುಷ್ಯನು ಇನ್ನೊಬ್ಬನನ್ನು ಕೊಂದದ್ದು ಆಕಸ್ಮಿಕವಾಗಿರಬೇಕು; ಕೊಲ್ಲಲ್ಪಟ್ಟವನ ಮೇಲೆ ಅವನಿಗೆ ದ್ವೇಷವಿರಬಾರದು.


ಆದರೆ ಆ ನಗರವು ತುಂಬಾ ದೂರವಿದ್ದಲ್ಲಿ ಅವನು ಅಲ್ಲಿಗೆ ಸೇರುವ ಮೊದಲೇ ಸತ್ತವನ ಹತ್ತಿರದ ಸಂಬಂಧಿ ಅವನನ್ನು ಹಿಂಬಾಲಿಸಿ ಅವನ ಮೇಲೆ ಮುಯ್ಯಿತೀರಿಸಿಕೊಳ್ಳುವನು. ಅವನ ಮೇಲೆ ಕೋಪಗೊಂಡು ಅವನನ್ನು ಕೊಂದರೆ ನಿಷ್ಕಾರಣವಾಗಿ ಅವನು ಕೊಲ್ಲಲ್ಪಟ್ಟಂತಾಯಿತು. ಯಾಕೆಂದರೆ ಸತ್ತವನನ್ನು ಅವನು ದ್ವೇಷಿಸುತ್ತಿರಲಿಲ್ಲ.


ಎಲೀಷನು ಪ್ರವಾದಿಗಳ ಗುಂಪಿನೊಂದಿಗೆ ಹೋದನು. ಅವರು ಜೋರ್ಡನ್ ನದಿಯ ಬಳಿಗೆ ಬಂದು ಕೆಲವು ಮರಗಳನ್ನು ಕಡಿಯಲಾರಂಭಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು