Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 19:6 - ಪರಿಶುದ್ದ ಬೈಬಲ್‌

6 ಆದರೆ ಆ ನಗರವು ತುಂಬಾ ದೂರವಿದ್ದಲ್ಲಿ ಅವನು ಅಲ್ಲಿಗೆ ಸೇರುವ ಮೊದಲೇ ಸತ್ತವನ ಹತ್ತಿರದ ಸಂಬಂಧಿ ಅವನನ್ನು ಹಿಂಬಾಲಿಸಿ ಅವನ ಮೇಲೆ ಮುಯ್ಯಿತೀರಿಸಿಕೊಳ್ಳುವನು. ಅವನ ಮೇಲೆ ಕೋಪಗೊಂಡು ಅವನನ್ನು ಕೊಂದರೆ ನಿಷ್ಕಾರಣವಾಗಿ ಅವನು ಕೊಲ್ಲಲ್ಪಟ್ಟಂತಾಯಿತು. ಯಾಕೆಂದರೆ ಸತ್ತವನನ್ನು ಅವನು ದ್ವೇಷಿಸುತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಸತ್ತವನ ಮೇಲೆ ಅವನಿಗೆ ಮೊದಲು ದ್ವೇಷವಿಲ್ಲದ್ದರಿಂದ ಮತ್ತು ಅವನನ್ನು ಸಾಯಿಸುವ ಉದ್ದೇಶವಿಲ್ಲದ ಕಾರಣ ಮರಣಶಿಕ್ಷೆಗೆ ಪಾತ್ರನಲ್ಲ. ಆದರೂ ಹತ್ಯಮಾಡಿದವನಿಗೆ ಮುಯ್ಯಿತೀರಿಸುವ ಹಂಗುಳ್ಳ ಸಮೀಪ ಬಂಧುವು ಇನ್ನು ಕೋಪದಿಂದ ಉರಿಯುತ್ತಿರುವಾಗಲೇ ಅವನನ್ನು ಹಿಂದಟ್ಟಿ ಹೋಗಬಹುದು ಮತ್ತು ಮಾರ್ಗ ದೂರವಾಗಿರುವ ಪಕ್ಷಕ್ಕೆ ಅವನನ್ನು ಹಿಡಿದು ಕೊಂದು ಹಾಕಿಬಿಡಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಸತ್ತವನಲ್ಲಿ ಅವನಿಗೆ ಮೊದಲಿನಿಂದಲೂ ದ್ವೇಷವಿರಲಿಲ್ಲ; ಆದುದರಿಂದ ಅವನು ಮರಣಶಿಕ್ಷೆಗೆ ಪಾತ್ರನಲ್ಲ; ಆದರೂ ಹತ್ಯ ಮಾಡಿದವನಿಗೆ ಮುಯ್ಯಿ ತೀರಿಸುವ ಹಂಗುಳ್ಳ ಸಮೀಪಬಂಧು ಕೋಪದಿಂದ ಕೆಂಡ ಕಾರುತ್ತಾ ಅವನನ್ನು ಹಿಂದಟ್ಟಬಹುದು. ಮಾರ್ಗ ಮಧ್ಯದಲ್ಲೇ ಅವನನ್ನು ಹಿಡಿದು ಕೊಂದುಹಾಕಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಸತ್ತವನಲ್ಲಿ ಅವನಿಗೆ ಮೊದಲು ದ್ವೇಷವಿಲ್ಲದ್ದರಿಂದ ಅವನು ಮರಣಶಿಕ್ಷೆಗೆ ಪಾತ್ರನಲ್ಲವಲ್ಲಾ. ಆದರೂ ಹತ್ಯಮಾಡಿದವನಿಗೆ ಮುಯ್ಯಿತೀರಿಸುವ ಹಂಗುಳ್ಳ ಸಮೀಪಬಂಧುವು ಇನ್ನು ಕೋಪದಿಂದ ಉರಿಯುತ್ತಿರುವಾಗಲೇ ಅವನನ್ನು ಹಿಂದಟ್ಟಾನು; ಮತ್ತು ಮಾರ್ಗ ದೂರವಾಗಿರುವ ಪಕ್ಷಕ್ಕೆ ಅವನನ್ನು ಹಿಡಿದು ಕೊಂದುಹಾಕಿಬಿಟ್ಟಾನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಸತ್ತವನಲ್ಲಿ ಅವನಿಗೆ ಮೊದಲಿನಿಂದಲೂ ದ್ವೇಷವಿರಲಿಲ್ಲ. ಆದ್ದರಿಂದ ಅವನು ಮರಣಶಿಕ್ಷೆಗೆ ಪಾತ್ರನಲ್ಲ. ಆದರೂ ಹತ್ಯೆ ಮಾಡಿದವನಿಗೆ ಮುಯ್ಯಿ ತೀರಿಸುವ ಹಂಗುಳ್ಳ ಸಮೀಪ ಬಂಧು ಕೋಪದಿಂದ ಉರಿಯುತ್ತಾ, ಅವನನ್ನು ಹಿಂದಟ್ಟಬಹುದು. ಮಾರ್ಗದ ಮಧ್ಯದಲ್ಲೇ ಅವನನ್ನು ಹಿಡಿದು ಕೊಂದು ಹಾಕಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 19:6
7 ತಿಳಿವುಗಳ ಹೋಲಿಕೆ  

ಕೊಂದವನು ನ್ಯಾಯ ವಿಚಾರಣಾಸಭೆಯ ಮುಂದೆ ನಿಂತುಕೊಳ್ಳುವುದಕ್ಕಿಂತ ಮೊದಲೇ ಕೊಲ್ಲಲ್ಪಟ್ಟವನ ಸಂಬಂಧಿಕನಿಂದ ಕೊಲ್ಲಲ್ಪಡದೆ ಸುರಕ್ಷಿತನಾಗಿರಲು ಆ ಆಶ್ರಯ ಸ್ಥಳಗಳು ನಿಮ್ಮ ಮಧ್ಯದಲ್ಲಿ ಇರಲೇಬೇಕು.


ಈಗ ನಮ್ಮ ಕುಟುಂಬದವರೆಲ್ಲಾ ನನಗೆ ವಿರುದ್ಧವಾಗಿದ್ದಾರೆ. ಅವರು ನನಗೆ, ‘ತನ್ನ ಸೋದರನನ್ನೇ ಕೊಂದ ಮಗನನ್ನು ಕರೆದುಕೊಂಡು ಬಾ. ಅವನು ತನ್ನ ಸೋದರನನ್ನೇ ಕೊಂದುಹಾಕಿದ್ದರಿಂದ ಅವನನ್ನು ನಾವು ಕೊಂದುಹಾಕುತ್ತೇವೆ’ ಎಂದು ಹೇಳಿದರು. ನನ್ನ ಮಗನನ್ನು ಕೊಲ್ಲಲು ನಾನು ಅವರಿಗೆ ಬಿಟ್ಟುಕೊಟ್ಟರೆ, ತನ್ನ ತಂದೆಯ ಆಸ್ತಿಗೆ ವಾರಸುದಾರನಾದ ಮಗನನ್ನೇ ಕೊಂದುಹಾಕಿದಂತಾಗುತ್ತದೆ. ನನ್ನ ಮಗ ನನ್ನ ಬದುಕಿನ ಕೊನೆಯ ಆಶಾಕಿರಣ. ಆ ಕೊನೆಯ ಆಶಾಕಿರಣವು ಸುಟ್ಟು ನಾಶವಾಗಿಬಿಡುತ್ತದೆ. ನಂತರ ನನ್ನ ಸತ್ತ ಗಂಡನ ಆಸ್ತಿ ಬೇರೊಬ್ಬನಿಗೆ ಹೋಗುತ್ತದೆ ಮತ್ತು ಅವನ ಹೆಸರು ದೇಶದೊಳಗಿಂದ ತೆಗೆದುಹಾಕಲ್ಪಡುತ್ತದೆ” ಎಂದು ಹೇಳಿದಳು.


ಆದರೆ ಅವನನ್ನು ಬೆನ್ನಟ್ಟಿಕೊಂಡು ಬಂದವನು ಆಶ್ರಯನಗರಕ್ಕೆ ಬಂದರೆ, ಆ ನಗರದ ನಾಯಕರು ಕೊಂದವನನ್ನು ಬೆನ್ನಟ್ಟಿ ಬಂದವನ ಕೈಗೆ ಒಪ್ಪಿಸಬಾರದು. ಆಶ್ರಯಕೋರಿ ಅವರಲ್ಲಿಗೆ ಬಂದ ವ್ಯಕ್ತಿಯನ್ನು ಅವರು ರಕ್ಷಿಸಬೇಕು. ಯಾಕೆಂದರೆ ಆ ನರಹತ್ಯವು ಆಕಸ್ಮಿಕವಾದದ್ದೇ ಹೊರತು ದ್ವೇಷದಿಂದ ಮಾಡಿದ್ದಲ್ಲ.


“ಒಬ್ಬ ಮನುಷ್ಯನು ಮರಣಶಿಕ್ಷೆಗೆ ಯೋಗ್ಯವಾದ ಅಪರಾಧವನ್ನು ಮಾಡಿದ್ದಿರಬಹುದು. ಅವನಿಗೆ ಮರಣಶಿಕ್ಷೆ ಕೊಟ್ಟ ನಂತರ ಅವನ ದೇಹವನ್ನು ಒಂದು ಮರಕ್ಕೆ ತೂಗುಹಾಕಿದರೆ


ಇದೊಂದು ಉದಾಹರಣೆ: ಒಬ್ಬನು ಇನ್ನೊಬ್ಬ ವ್ಯಕ್ತಿಯೊಂದಿಗೆ ಅಡವಿಗೆ ಕಟ್ಟಿಗೆ ಕಡಿಯಲು ಹೋಗುತ್ತಾನೆ. ಒಂದು ಮರವನ್ನು ಕಡಿಯಲು ತನ್ನ ಕೊಡಲಿಯನ್ನು ಬೀಸುವಾಗ ಅವನ ಕೊಡಲಿಯು ಕಾವಿನಿಂದ ಕಳಚಿಕೊಂಡು ಪಕ್ಕದಲ್ಲಿ ನಿಂತಿದ್ದವನಿಗೆ ಬಡಿದು ಅವನ ಸಾವಿಗೆ ಕಾರಣವಾದರೆ, ಕೊಡಲಿಯನ್ನು ಬೀಸಿದವನು ಆ ಮೂರು ನಗರಗಳಲ್ಲಿ ಒಂದರಲ್ಲಿ ಆಶ್ರಯವನ್ನು ಪಡೆದುಕೊಂಡು ಸುರಕ್ಷಿತವಾಗಿರಬಹುದು.


ಆದ್ದರಿಂದ ಆ ನಗರಗಳು ಎಲ್ಲರಿಗೂ ಸುಲಭವಾಗಿ ಸೇರುವಂಥವುಗಳಾಗಿರಬೇಕು; ಅಂಥವುಗಳನ್ನು ನೀವು ಆರಿಸಿಕೊಳ್ಳಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು