ಧರ್ಮೋಪದೇಶಕಾಂಡ 19:6 - ಪರಿಶುದ್ದ ಬೈಬಲ್6 ಆದರೆ ಆ ನಗರವು ತುಂಬಾ ದೂರವಿದ್ದಲ್ಲಿ ಅವನು ಅಲ್ಲಿಗೆ ಸೇರುವ ಮೊದಲೇ ಸತ್ತವನ ಹತ್ತಿರದ ಸಂಬಂಧಿ ಅವನನ್ನು ಹಿಂಬಾಲಿಸಿ ಅವನ ಮೇಲೆ ಮುಯ್ಯಿತೀರಿಸಿಕೊಳ್ಳುವನು. ಅವನ ಮೇಲೆ ಕೋಪಗೊಂಡು ಅವನನ್ನು ಕೊಂದರೆ ನಿಷ್ಕಾರಣವಾಗಿ ಅವನು ಕೊಲ್ಲಲ್ಪಟ್ಟಂತಾಯಿತು. ಯಾಕೆಂದರೆ ಸತ್ತವನನ್ನು ಅವನು ದ್ವೇಷಿಸುತ್ತಿರಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಸತ್ತವನ ಮೇಲೆ ಅವನಿಗೆ ಮೊದಲು ದ್ವೇಷವಿಲ್ಲದ್ದರಿಂದ ಮತ್ತು ಅವನನ್ನು ಸಾಯಿಸುವ ಉದ್ದೇಶವಿಲ್ಲದ ಕಾರಣ ಮರಣಶಿಕ್ಷೆಗೆ ಪಾತ್ರನಲ್ಲ. ಆದರೂ ಹತ್ಯಮಾಡಿದವನಿಗೆ ಮುಯ್ಯಿತೀರಿಸುವ ಹಂಗುಳ್ಳ ಸಮೀಪ ಬಂಧುವು ಇನ್ನು ಕೋಪದಿಂದ ಉರಿಯುತ್ತಿರುವಾಗಲೇ ಅವನನ್ನು ಹಿಂದಟ್ಟಿ ಹೋಗಬಹುದು ಮತ್ತು ಮಾರ್ಗ ದೂರವಾಗಿರುವ ಪಕ್ಷಕ್ಕೆ ಅವನನ್ನು ಹಿಡಿದು ಕೊಂದು ಹಾಕಿಬಿಡಬಹುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಸತ್ತವನಲ್ಲಿ ಅವನಿಗೆ ಮೊದಲಿನಿಂದಲೂ ದ್ವೇಷವಿರಲಿಲ್ಲ; ಆದುದರಿಂದ ಅವನು ಮರಣಶಿಕ್ಷೆಗೆ ಪಾತ್ರನಲ್ಲ; ಆದರೂ ಹತ್ಯ ಮಾಡಿದವನಿಗೆ ಮುಯ್ಯಿ ತೀರಿಸುವ ಹಂಗುಳ್ಳ ಸಮೀಪಬಂಧು ಕೋಪದಿಂದ ಕೆಂಡ ಕಾರುತ್ತಾ ಅವನನ್ನು ಹಿಂದಟ್ಟಬಹುದು. ಮಾರ್ಗ ಮಧ್ಯದಲ್ಲೇ ಅವನನ್ನು ಹಿಡಿದು ಕೊಂದುಹಾಕಬಹುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಸತ್ತವನಲ್ಲಿ ಅವನಿಗೆ ಮೊದಲು ದ್ವೇಷವಿಲ್ಲದ್ದರಿಂದ ಅವನು ಮರಣಶಿಕ್ಷೆಗೆ ಪಾತ್ರನಲ್ಲವಲ್ಲಾ. ಆದರೂ ಹತ್ಯಮಾಡಿದವನಿಗೆ ಮುಯ್ಯಿತೀರಿಸುವ ಹಂಗುಳ್ಳ ಸಮೀಪಬಂಧುವು ಇನ್ನು ಕೋಪದಿಂದ ಉರಿಯುತ್ತಿರುವಾಗಲೇ ಅವನನ್ನು ಹಿಂದಟ್ಟಾನು; ಮತ್ತು ಮಾರ್ಗ ದೂರವಾಗಿರುವ ಪಕ್ಷಕ್ಕೆ ಅವನನ್ನು ಹಿಡಿದು ಕೊಂದುಹಾಕಿಬಿಟ್ಟಾನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಸತ್ತವನಲ್ಲಿ ಅವನಿಗೆ ಮೊದಲಿನಿಂದಲೂ ದ್ವೇಷವಿರಲಿಲ್ಲ. ಆದ್ದರಿಂದ ಅವನು ಮರಣಶಿಕ್ಷೆಗೆ ಪಾತ್ರನಲ್ಲ. ಆದರೂ ಹತ್ಯೆ ಮಾಡಿದವನಿಗೆ ಮುಯ್ಯಿ ತೀರಿಸುವ ಹಂಗುಳ್ಳ ಸಮೀಪ ಬಂಧು ಕೋಪದಿಂದ ಉರಿಯುತ್ತಾ, ಅವನನ್ನು ಹಿಂದಟ್ಟಬಹುದು. ಮಾರ್ಗದ ಮಧ್ಯದಲ್ಲೇ ಅವನನ್ನು ಹಿಡಿದು ಕೊಂದು ಹಾಕಬಹುದು. ಅಧ್ಯಾಯವನ್ನು ನೋಡಿ |
ಈಗ ನಮ್ಮ ಕುಟುಂಬದವರೆಲ್ಲಾ ನನಗೆ ವಿರುದ್ಧವಾಗಿದ್ದಾರೆ. ಅವರು ನನಗೆ, ‘ತನ್ನ ಸೋದರನನ್ನೇ ಕೊಂದ ಮಗನನ್ನು ಕರೆದುಕೊಂಡು ಬಾ. ಅವನು ತನ್ನ ಸೋದರನನ್ನೇ ಕೊಂದುಹಾಕಿದ್ದರಿಂದ ಅವನನ್ನು ನಾವು ಕೊಂದುಹಾಕುತ್ತೇವೆ’ ಎಂದು ಹೇಳಿದರು. ನನ್ನ ಮಗನನ್ನು ಕೊಲ್ಲಲು ನಾನು ಅವರಿಗೆ ಬಿಟ್ಟುಕೊಟ್ಟರೆ, ತನ್ನ ತಂದೆಯ ಆಸ್ತಿಗೆ ವಾರಸುದಾರನಾದ ಮಗನನ್ನೇ ಕೊಂದುಹಾಕಿದಂತಾಗುತ್ತದೆ. ನನ್ನ ಮಗ ನನ್ನ ಬದುಕಿನ ಕೊನೆಯ ಆಶಾಕಿರಣ. ಆ ಕೊನೆಯ ಆಶಾಕಿರಣವು ಸುಟ್ಟು ನಾಶವಾಗಿಬಿಡುತ್ತದೆ. ನಂತರ ನನ್ನ ಸತ್ತ ಗಂಡನ ಆಸ್ತಿ ಬೇರೊಬ್ಬನಿಗೆ ಹೋಗುತ್ತದೆ ಮತ್ತು ಅವನ ಹೆಸರು ದೇಶದೊಳಗಿಂದ ತೆಗೆದುಹಾಕಲ್ಪಡುತ್ತದೆ” ಎಂದು ಹೇಳಿದಳು.