Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 2:14 - ಪರಿಶುದ್ದ ಬೈಬಲ್‌

14 ಕಾದೇಶ್‌ಬರ್ನೇಯದಿಂದ ಜೆರೆದ್ ಕಣಿವೆಯನ್ನು ದಾಟಿ ಆಗಲೇ ಮೂವತ್ತೆಂಟು ವರ್ಷಗಳು ದಾಟಿದ್ದವು. ನಮ್ಮ ಸಮೂಹದಲ್ಲಿದ್ದ ಯುದ್ಧಭಟರೆಲ್ಲಾ ಸತ್ತುಹೋಗಿದ್ದರು. ಹೀಗೆ ಆಗುವುದೆಂದು ದೇವರು ಪ್ರಮಾಣ ಮಾಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನಾವು ಕಾದೇಶ್‌ಬರ್ನೇಯದಿಂದ ಹೊರಟು ಜೆರೆದ್ ಹಳ್ಳವನ್ನು ದಾಟಲು ಮೂವತ್ತೆಂಟು ವರ್ಷವಾಯಿತು. ಯೆಹೋವನು ಪ್ರಮಾಣಪೂರ್ವಕವಾಗಿ ಹೇಳಿದ್ದಂತೆ ಅಷ್ಟರಲ್ಲಿ ಆ ತಲೆಮಾರಿನ ಸೈನಿಕರೆಲ್ಲರೂ ಸತ್ತುಹೋಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನಾವು ಕಾದೇಶ್ ಬರ್ನೇಯವನ್ನು ಬಿಟ್ಟಂದಿನಿಂದ ಜೆರೆದ್ ಹಳ್ಳವನ್ನು ದಾಟಿದವರೆಗೆ ಗತಿಸಿದ ಕಾಲವು ಮೂವತ್ತೆಂಟು ವರ್ಷ. ಯೆಹೋವ ದೇವರು ಅವರಿಗೆ ಪ್ರಮಾಣ ಮಾಡಿದ ಪ್ರಕಾರ ಅಷ್ಟರಲ್ಲಿ ಆ ಸಂತತಿಯ ಸೈನಿಕರೆಲ್ಲರು ಸತ್ತುಹೋಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 2:14
24 ತಿಳಿವುಗಳ ಹೋಲಿಕೆ  

ಅವರು ಅಡವಿಯಲ್ಲಿದ್ದಾಗ ನಾನು ಮತ್ತೊಂದು ಪ್ರಮಾಣವನ್ನು ಮಾಡಿದೆನು. ನಾನು ಅವರಿಗೆ ಕೊಟ್ಟಿದ್ದ ದೇಶಕ್ಕೆ ಅವರನ್ನು ಹೋಗಗೊಡಿಸುವದಿಲ್ಲ ಎಂದು ಪ್ರಮಾಣ ಮಾಡಿದೆನು. ಆ ದೇಶವು ಅತ್ಯುತ್ತಮವಾಗಿತ್ತು. ಎಲ್ಲಾ ದೇಶಗಳಿಗಿಂತ ಬಹು ಸುಂದರವಾದ ದೇಶ.


ಆದ್ದರಿಂದ ನಾನು ಕೋಪಗೊಂಡು ನನ್ನ ವಿಶ್ರಾಂತಿಯ ನಾಡನ್ನು ಅವರು ಪ್ರವೇಶಿಸಕೂಡದೆಂದು ನಾನು ಪ್ರಮಾಣ ಮಾಡಿದೆನು.”


ಆದ್ದರಿಂದ ಅವರು ಅರಣ್ಯದಲ್ಲಿ ಸಾಯುವುದಾಗಿ ದೇವರು ಪ್ರಮಾಣ ಮಾಡಿದನು.


“ಬಳಿಕ ನಾವು ನಮ್ಮ ದೇವರಾದ ಯೆಹೋವನ ಆಜ್ಞಾನುಸಾರವಾಗಿ ಹೋರೇಬ್ ಬೆಟ್ಟಪ್ರದೇಶವನ್ನು ಬಿಟ್ಟು ಅಮೋರಿಯರ ಗುಡ್ಡಗಾಡು ಪ್ರದೇಶದಲ್ಲಿ ಪ್ರಯಾಣಮಾಡುತ್ತಾ ನೀವು ನೋಡಿದ ಅತ್ಯಂತ ಭಯಂಕರವಾದ ಮತ್ತು ವಿಶಾಲವಾದ ಮರುಭೂಮಿಯನ್ನು ದಾಟಿ ಕಾದೇಶ್‌ಬರ್ನೇಯಕ್ಕೆ ಬಂದೆವು.


ಹೋರೇಬ್ (ಸೀನಾಯಿ) ಬೆಟ್ಟದಿಂದ ಸೇಯೀರ್ ಬೆಟ್ಟದ ಮಾರ್ಗವಾಗಿ ಕಾದೇಶ್‌ಬರ್ನೇಯಕ್ಕೆ ತಲುಪಲು ಹನ್ನೊಂದು ದಿವಸದ ಪ್ರಯಾಣ ಮಾಡಬೇಕಾಗುತ್ತದೆ.


ಇಸ್ರೇಲರು ಪಾರಾನ್ ಮರುಭೂಮಿಯ ಕಾದೇಶಿನಲ್ಲಿ ತಂಗಿದ್ದರು. ಅವರು ನೋಡಿದ್ದರ ಬಗ್ಗೆ ಎಲ್ಲವನ್ನು ಮೋಶೆಗೂ ಆರೋನನಿಗೂ ಎಲ್ಲಾ ಇಸ್ರೇಲರಿಗೂ ತಿಳಿಸಿದರು. ಅವರು ಕಾನಾನ್ ದೇಶದಿಂದ ತಂದ ಹಣ್ಣುಗಳನ್ನು ತೋರಿಸಿದರು.


ನೀವು ಈಗಾಗಲೇ ತಿಳಿದುಕೊಂಡಿರುವ ಕೆಲವು ವಿಚಾರಗಳನ್ನು ನೆನಪು ಮಾಡಿಕೊಳ್ಳಲು ನಾನು ನಿಮಗೆ ಸಹಾಯ ಮಾಡಲಿಚ್ಛಿಸುತ್ತೇನೆ. ಪ್ರಭುವು ತನ್ನ ಜನರನ್ನು ಈಜಿಪ್ಟ್ ದೇಶದಿಂದ ಹೊರಗೆ ತಂದು ಅವರನ್ನು ರಕ್ಷಿಸಿದನೆಂಬುದನ್ನು ನೆನಪು ಮಾಡಿಕೊಳ್ಳಿರಿ. ತರುವಾಯ ಪ್ರಭುವು ನಂಬಿಕೆಯಿಲ್ಲದ ಜನರೆಲ್ಲರನ್ನೂ ನಾಶಪಡಿಸಿದನು.


ಆದರೂ ಅವರಲ್ಲಿ ಅನೇಕರು ದೇವರ ಮೆಚ್ಚುಗೆಗೆ ಪಾತ್ರರಾಗಲಿಲ್ಲ. ಅವರು ಮರುಭೂಮಿಯಲ್ಲಿ ಕೊಲ್ಲಲ್ಪಟ್ಟರು.


ನಿನ್ನ ಕೋಪವು ನಮ್ಮ ಜೀವನವನ್ನು ಕೊನೆಗೊಳಿಸಬಲ್ಲದು. ನಮ್ಮ ಜೀವಿತಗಳು ನಿಟ್ಟುಸಿರಿನಂತೆ ತೀರಿಹೋದವು.


ಜನರಿಗೆ ಜನ್ಮನೀಡುವಾತನೂ ನೀನೇ; ಅವರನ್ನು ಮತ್ತೆ ಧೂಳನ್ನಾಗಿ ಮಾಡುವಾತನೂ ನೀನೇ.


ಹೀಗೆ ನೀವು ಕಾದೇಶಿನಲ್ಲಿ ತುಂಬ ದಿನಗಳನ್ನು ಕಳೆದಿರುವಿರಿ.


‘ಈಜಿಪ್ಟಿನಿಂದ ಬಂದ ಈ ಜನರಲ್ಲಿ ಮತ್ತು ಇಪ್ಪತ್ತು ವರ್ಷ ಮೊದಲುಗೊಂಡು ಅದಕ್ಕಿಂತ ಹೆಚ್ಚು ವಯಸ್ಸಾದ ನಿಮ್ಮವರೆಲ್ಲಾ ಕೆನಿಜ್ಜೀಯನಾದ ಯೆಫುನ್ನೆಯ ಮಗ ಕಾಲೇಬನ ಮತ್ತು ನೂನನ ಮಗನಾದ ಯೆಹೋಶುವನ ಹೊರತು ಯಾರೂ ನನ್ನನ್ನು ನಿಜವಾಗಿಯೂ ಅನುಸರಿಸದೆ ಹೋದದ್ದರಿಂದ, ನಾನು ಅಬ್ರಹಾಮ್, ಇಸಾಕ್, ಯಾಕೋಬರಿಗೆ ಪ್ರಮಾಣಪೂರ್ವಕವಾಗಿ ಕೊಟ್ಟ ದೇಶವನ್ನು ಅವರಿಬ್ಬರೇ ಹೊರತು ಬೇರೆ ಯಾರೂ ನೋಡುವುದೇ ಇಲ್ಲ’ ಎಂದು ಖಂಡಿತವಾಗಿ ಹೇಳಿದನು.


ನಿಮ್ಮ ದೇವರಾದ ಯೆಹೋವನು ಪ್ರತಿಯೊಂದು ವಿಷಯದಲ್ಲಿ ನಿಮ್ಮನ್ನು ಆಶೀರ್ವದಿಸಿದ್ದನ್ನು ನೆನಪಿಗೆ ತಂದುಕೊಳ್ಳಿರಿ. ಈ ಮಹಾ ಮರುಭೂಮಿಯ ಮೂಲಕ ನೀವು ನಡೆದುಹೋದದ್ದರ ಬಗ್ಗೆಯೂ ಆತನಿಗೆ ತಿಳಿದಿದೆ. ಕಳೆದ ನಲವತ್ತು ವರ್ಷಗಳಿಂದ ದೇವರು ನಿಮ್ಮೊಂದಿಗಿದ್ದು ನಿಮ್ಮನ್ನು ನಡಿಸಿದ್ದಾನೆ. ನಿಮಗೆ ಬೇಕಾದವುಗಳನ್ನೆಲ್ಲಾ ಒದಗಿಸಿರುತ್ತಾನೆ.’


“ಯೆಹೋವನು ನನಗೆ, ‘ಜೆರೆದ್ ಕಣಿವೆಯ ಆಚೆಕಡೆಗೆ ಹೋಗು’ ಎಂದು ಹೇಳಿದನು. ಆದ್ದರಿಂದ ನಾವು ಜೆರೆದ್ ಕಣಿವೆಯನ್ನು ದಾಟಿದೆವು.


“ಯುದ್ಧಭಟರೆಲ್ಲಾ ಸತ್ತುಹೋದ ಬಳಿಕ


ಯೆಹೋಶುವನು ಸುನ್ನತಿ ಮಾಡಲು ಕಾರಣವೇನೆಂದರೆ: ಈಜಿಪ್ಟನ್ನು ಬಿಟ್ಟುಹೊರಟಾಗ ಸೈನ್ಯಸೇರಲು ಯೋಗ್ಯರಾದ ಇಸ್ರೇಲಿನ ಗಂಡಸರಿಗೆ ಸುನ್ನತಿಯಾಗಿತ್ತು. ಅವರು ಮರುಭೂಮಿಯಲ್ಲಿದ್ದಾಗ ಅನೇಕ ಯುದ್ಧವೀರರು ಯೆಹೋವನಿಗೆ ಕಿವಿಗೂಡಲಿಲ್ಲ. ಆದಕಾರಣ, “ಹಾಲೂ ಜೇನೂ ಹರಿಯುವ ವಾಗ್ದತ್ತ ನಾಡನ್ನು” ಆ ಜನರು ಕಾಣುವುದಿಲ್ಲ ಎಂದು ಯೆಹೋವನು ಪ್ರಮಾಣ ಮಾಡಿದನು. ನಮ್ಮ ಪೂರ್ವಿಕರಿಗೆ ಆ ಭೂಮಿಯನ್ನು ಕೊಡುವುದಾಗಿ ಯೆಹೋವನು ವಾಗ್ದಾನ ಮಾಡಿದ್ದನು. ಆದರೆ ಆ ಜನರು ಯೆಹೋವನ ಮಾತನ್ನು ಕೇಳದೆ ಅವಿಧೇಯರಾದ ಕಾರಣ ಆತನು ಅವರನ್ನು ನಲವತ್ತು ವರ್ಷಗಳ ಕಾಲ ಅಂದರೆ ಆ ಯೋಧರು ಸಾಯುವವರೆಗೆ ಮರುಭೂಮಿಯಲ್ಲಿ ಅಲೆದಾಡುವಂತೆ ಮಾಡಿದನು. ಆ ಎಲ್ಲ ಯುದ್ಧವೀರರು ಸತ್ತುಹೋದರು ಮತ್ತು ಅವರ ಸ್ಥಾನಕ್ಕೆ ಅವರ ಗಂಡುಮಕ್ಕಳು ಬಂದರು. ಆದರೆ ಈಜಿಪ್ಟಿನಿಂದ ಹೊರಟು ಮರುಭೂಮಿಯಲ್ಲಿ ಪ್ರಯಾಣ ಮಾಡುತ್ತಿದ್ದಾಗ ಹುಟ್ಟಿದ ಯಾವ ಗಂಡುಮಕ್ಕಳಿಗೂ ಸುನ್ನತಿ ಆಗಿರಲಿಲ್ಲ. ಅದಕ್ಕಾಗಿ ಯೆಹೋಶುವನು ಅವರಿಗೆ ಸುನ್ನತಿ ಮಾಡಿಸಿದನು.


ಆಗ ನಿಮ್ಮ ಜನರು ಯೆಹೋವನಾದ ನನ್ನ ಸಹಾಯ ಕೋರಿದರು. ನಾನು ಈಜಿಪ್ಟಿನ ಜನರಿಗೂ ಅವರಿಗೂ ಮಧ್ಯದಲ್ಲಿ ಕತ್ತಲೆಯಾಗುವಂತೆ ಮಾಡಿದೆ; ಸಮುದ್ರವು ಅವರನ್ನು ಮುಚ್ಚಿಬಿಡುವಂತೆ ಮಾಡಿದೆ. ಈಜಿಪ್ಟಿನ ಸೈನ್ಯಕ್ಕೆ ನಾನು ಮಾಡಿದ್ದನ್ನು ನೀವೇ ನೋಡಿದ್ದೀರಿ. “‘ತರುವಾಯ ಬಹಳ ಕಾಲದವರೆಗೆ ನೀವು ಅರಣ್ಯದಲ್ಲಿ ಪ್ರವಾಸ ಮಾಡಿಕೊಂಡಿದ್ದಿರಿ.


ನೀನು ನಮಗೆ ಬಹು ದುಃಖವನ್ನೂ ಕಷ್ಟಗಳನ್ನೂ ಬರಮಾಡಿದೆ. ಈಗ ನಮ್ಮನ್ನು ಸಂತೋಷಗೊಳಿಸು.


ಯೆಹೋವನು ದೇವದರ್ಶನಗುಡಾರದೊಳಗೆ ಮೋಶೆಯೊಡನೆ ಮಾತಾಡಿದನು. ಆಗ ದೇವದರ್ಶನಗುಡಾರವು ಸೀನಾಯಿ ಮರುಭೂಮಿಯಲ್ಲಿತ್ತು. ಇಸ್ರೇಲರು ಈಜಿಪ್ಟನ್ನು ಬಿಟ್ಟ ಎರಡನೆಯ ವರ್ಷದ ಎರಡನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಇದು ನಡೆಯಿತು. ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು