Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 2:15 - ಪರಿಶುದ್ದ ಬೈಬಲ್‌

15 ಯೆಹೋವನು ಅವರಿಗೆ ವಿರುದ್ಧವಾಗಿ ಇದ್ದುದರಿಂದ ಅವರೆಲ್ಲಾ ಸತ್ತು ಜನಸಮೂಹದಿಂದ ಇಲ್ಲವಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಯೆಹೋವನ ಹಸ್ತವು ಅವರಿಗೆ ವಿರುದ್ಧವಾಗಿದ್ದುದರಿಂದ ಪಾಳೆಯದಲ್ಲಿ ಒಬ್ಬನೂ ಉಳಿಯದಂತೆ ನಾಶವಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಸರ್ವೇಶ್ವರನ ಹಸ್ತವು ಅವರಿಗೆ ವಿರೋಧವಾಗಿದ್ದುದರಿಂದ ಪಾಳೆಯದಲ್ಲಿ ಒಬ್ಬನೂ ಉಳಿಯದಂತೆ ನಾಶವಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಯೆಹೋವನ ಹಸ್ತವು ಅವರಿಗೆ ವಿರೋಧವಾದದರಿಂದ ಪಾಳೆಯದಲ್ಲಿ ಒಬ್ಬನೂ ಉಳಿಯದಂತೆ ನಾಶವಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಪಾಳೆಯದಿಂದ ಅವರನ್ನು ಸಂಪೂರ್ಣವಾಗಿ ಹೊರಹಾಕುವವರೆಗೂ ಯೆಹೋವ ದೇವರ ಹಸ್ತವು ಅವರ ಮೇಲಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 2:15
13 ತಿಳಿವುಗಳ ಹೋಲಿಕೆ  

ಆದ್ದರಿಂದ ಅವರು ಅರಣ್ಯದಲ್ಲಿ ಸಾಯುವುದಾಗಿ ದೇವರು ಪ್ರಮಾಣ ಮಾಡಿದನು.


ಆದರೂ ಅವರಲ್ಲಿ ಅನೇಕರು ದೇವರ ಮೆಚ್ಚುಗೆಗೆ ಪಾತ್ರರಾಗಲಿಲ್ಲ. ಅವರು ಮರುಭೂಮಿಯಲ್ಲಿ ಕೊಲ್ಲಲ್ಪಟ್ಟರು.


ನಿಮ್ಮನ್ನು ಹರ್ಷಗೊಳಿಸುವಂಥ ಸಂಗತಿಗಳನ್ನು ನೀವು ನೋಡುವಿರಿ. ನೀವು ಸ್ವತಂತ್ರರಾಗಿದ್ದು ಹುಲ್ಲಿನಂತೆ ಹುಲುಸಾಗಿ ಬೆಳೆಯುವಿರಿ. ಯೆಹೋವನ ಸೇವಕರು ಆತನ ಶಕ್ತಿಯನ್ನು ನೋಡುವರು. ಆದರೆ ಯೆಹೋವನ ವೈರಿಗಳು ಆತನ ಕೋಪವನ್ನು ಕಾಣುವರು.


ಆದ್ದರಿಂದ ಆತನು ಆಪತ್ತುಗಳನ್ನು ಬರಮಾಡಿ ಅವರ ಅಯೋಗ್ಯ ಜೀವಿತಗಳನ್ನು ಉಸಿರಿನಂತೆ ಅಂತ್ಯಗೊಳಿಸಿದನು.


ಹಗಲಿರುಳು ನಿನ್ನ ಶಿಕ್ಷಾಹಸ್ತವು ನನ್ನ ಮೇಲೆ ಭಾರವಾಗಿತ್ತು. ನಾನು ಬೇಸಿಗೆಯಲ್ಲಿ ಒಣಗಿಹೋದ ಭೂಮಿಯಂತಾದೆನು.


ಫಿಲಿಷ್ಟಿಯರು ಸೋತುಹೋದರು. ಅವರು ಮತ್ತೆ ಇಸ್ರೇಲರ ಭೂಮಿಯಲ್ಲಿ ಹೆಜ್ಜೆ ಇಡಲಿಲ್ಲ. ಸಮುವೇಲನ ಜೀವಿತದ ಉಳಿದ ಭಾಗದಲ್ಲಿ ಯೆಹೋವನು ಫಿಲಿಷ್ಟಿಯರಿಗೆ ವಿರುದ್ಧವಾಗಿದ್ದನು.


ಎಕ್ರೋನಿನ ಜನರು ಫಿಲಿಷ್ಟಿಯರ ಅಧಿಪತಿಗಳನ್ನೆಲ್ಲಾ ಒಟ್ಟಿಗೆ ಸೇರಿಸಿ, “ಇಸ್ರೇಲರ ದೇವರ ಪವಿತ್ರಪೆಟ್ಟಿಗೆಯು ನಮ್ಮನ್ನೂ ನಮ್ಮ ಜನರನ್ನೂ ಕೊಲ್ಲುವುದಕ್ಕೆ ಮೊದಲೇ ಅದನ್ನು ಅದರ ಸ್ವಸ್ಥಳಕ್ಕೆ ಕಳುಹಿಸಿ” ಎಂದು ಹೇಳಿದರು. ಎಕ್ರೋನಿನ ಜನರು ಬಹಳ ಹೆದರಿಕೊಂಡಿದ್ದರು. ದೇವರು ಅಲ್ಲಿಯ ಜನರ ಜೀವನವನ್ನು ಬಹು ಕಠಿಣಗೊಳಿಸಿದ್ದನು.


ಆದರೆ ಫಿಲಿಷ್ಟಿಯರು ದೇವರ ಪವಿತ್ರ ಪೆಟ್ಟಿಗೆಯನ್ನು “ಗತ್”ಗೆ ಕಳುಹಿಸಿದ ನಂತರ ಯೆಹೋವನು “ಗತ್” ನಗರವನ್ನು ದಂಡಿಸಿದನು. ಅಲ್ಲಿಯ ಜನರು ಬಹಳ ಭಯಗೊಂಡರು. ಚಿಕ್ಕವರು, ದೊಡ್ಡವರು ಎನ್ನದೆ ಎಲ್ಲರಿಗೂ ದೇವರು ತೊಂದರೆ ಮಾಡಿದನು. ಗತ್ ಜನರಿಗೂ ದೇವರು ಗಡ್ಡೆರೋಗವನ್ನು ಬರಮಾಡಿದನು.


ಅಷ್ಡೋದಿನ ಮತ್ತು ಅವರ ನೆರೆಹೊರೆಯ ಜನರ ಜೀವನವನ್ನು ಯೆಹೋವನು ಕಠಿಣಗೊಳಿಸಿದನು. ಯೆಹೋವನು ಅವರಿಗೆ ಹೆಚ್ಚು ತೊಂದರೆ ಕೊಟ್ಟನು. ಆತನು ಅವರಿಗೆ ಗಡ್ಡೆರೋಗವನ್ನು ಬರಮಾಡಿದನು. ಅಲ್ಲದೆ ಯೆಹೋವನು ಅವರ ಬಳಿಗೆ ಇಲಿಗಳನ್ನು ಕಳುಹಿಸಿದನು. ಆ ಇಲಿಗಳು ಅವರ ಹಡಗುಗಳಲ್ಲೆಲ್ಲಾ ಮತ್ತು ಭೂಮಿಯಲ್ಲೆಲ್ಲಾ ಹರಡಿಕೊಂಡವು. ನಗರದ ಜನರು ಬಹು ಭಯಗೊಂಡರು.


ಇಸ್ರೇಲರು ಯುದ್ಧಕ್ಕೆ ಹೋದಾಗಲೆಲ್ಲಾ ಸೋಲನ್ನನುಭವಿಸಿದರು; ಏಕೆಂದರೆ ಯೆಹೋವನು ಅವರ ಸಂಗಡವಿರಲಿಲ್ಲ. ಸುತ್ತಮುತ್ತಲಿನ ಜನರ ದೇವತೆಗಳನ್ನು ಪೂಜಿಸಿದರೆ ಸೋಲಾಗುವುದೆಂದು ಈಗಾಗಲೇ ಯೆಹೋವನು ಇಸ್ರೇಲರಿಗೆ ಮುನ್ನೆಚ್ಚರಿಕೆಯನ್ನು ಕೊಟ್ಟಿದ್ದನು. ಇಸ್ರೇಲರು ಹೆಚ್ಚಿನ ಕಷ್ಟನಷ್ಟಗಳನ್ನು ಅನುಭವಿಸಿದರು.


ನೀವು ಈಗಾಗಲೇ ತಿಳಿದುಕೊಂಡಿರುವ ಕೆಲವು ವಿಚಾರಗಳನ್ನು ನೆನಪು ಮಾಡಿಕೊಳ್ಳಲು ನಾನು ನಿಮಗೆ ಸಹಾಯ ಮಾಡಲಿಚ್ಛಿಸುತ್ತೇನೆ. ಪ್ರಭುವು ತನ್ನ ಜನರನ್ನು ಈಜಿಪ್ಟ್ ದೇಶದಿಂದ ಹೊರಗೆ ತಂದು ಅವರನ್ನು ರಕ್ಷಿಸಿದನೆಂಬುದನ್ನು ನೆನಪು ಮಾಡಿಕೊಳ್ಳಿರಿ. ತರುವಾಯ ಪ್ರಭುವು ನಂಬಿಕೆಯಿಲ್ಲದ ಜನರೆಲ್ಲರನ್ನೂ ನಾಶಪಡಿಸಿದನು.


ಆದ್ದರಿಂದ ನೀನು ಅವರಿಗೆ ಹೀಗೆ ಹೇಳಬೇಕು: ‘ಯೆಹೋವನು ಹೇಳುವುದೇನೆಂದರೆ: ನನ್ನ ಜೀವದಾಣೆ. ನೀವು ಏನನ್ನು ಹೇಳಿದಿರೋ ಅದನ್ನೇ ನಿಮಗೆ ಮಾಡುತ್ತೇನೆ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು