Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 2:4 - ಪರಿಶುದ್ದ ಬೈಬಲ್‌

4 ಇದನ್ನು ಜನರಿಗೆ ತಿಳಿಸು: ನೀವು ಸೇಯೀರ್ ದೇಶದ ಮೂಲಕ ದಾಟಿಹೋಗುವಿರಿ. ಇದು ನಿಮ್ಮ ಸಂಬಂಧಿಕರ ದೇಶ. ಇವರು ಏಸಾವನ ಸಂತತಿಯವರು. ಅವರು ನಿಮಗೆ ಭಯಪಡುವರು; ಆದರೆ ನೀವು ಅವರ ವಿಷಯದಲ್ಲಿ ಎಚ್ಚರಿಕೆಯಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಮತ್ತು ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು, ‘ಸೇಯೀರ್ ದೇಶದಲ್ಲಿ ವಾಸವಾಗಿರುವ ನಿಮ್ಮ ಬಂಧುಗಳಾದ ಏಸಾವನ ವಂಶದವರ ದೇಶವನ್ನು ದಾಟುವುದಕ್ಕಿದ್ದೀರಷ್ಟೆ. ಅವರು ನಿಮಗೆ ಭಯಪಡುವರು; ನೀವು ಅವರ ಸಂಗಡ ಯುದ್ಧಕ್ಕೆ ಹೋಗದೆ ಬಹಳ ಜಾಗರೂಕತೆಯಿಂದಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಇಸ್ರಯೇಲರಿಗೆ ಹೀಗೆ ಆಜ್ಞಾಪಿಸು; ಸೇಯೀರ್ ನಾಡಿನಲ್ಲಿ ವಾಸವಾಗಿರುವ ನಿಮ್ಮ ಬಂಧುಗಳಾದ ಏಸಾವನ ವಂಶದವರ ನಾಡನ್ನು ದಾಟುವುದಕ್ಕಿದ್ದೀರಿ. ಅವರು ನಿಮಗೆ ಅಂಜುವರು; ನೀವು ಅವರ ಸಂಗಡ ಯುದ್ಧಕ್ಕೆ ಹೋಗದೆ ಬಹಳ ಜಾಗರೂಕತೆಯಿಂದಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಸೇಯೀರ್ ದೇಶದಲ್ಲಿ ವಾಸವಾಗಿರುವ ನಿಮ್ಮ ಬಂಧುಗಳಾದ ಏಸಾವನ ವಂಶದವರ ದೇಶವನ್ನು ದಾಟುವದಕ್ಕಿದ್ದೀರಷ್ಟೆ. ಅವರು ನಿಮಗೆ ಅಂಜುವರು; ನೀವು ಅವರ ಸಂಗಡ ಯುದ್ಧಕ್ಕೆ ಹೋಗದೆ ಬಹಳ ಜಾಗರೂಕತೆಯಿಂದಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನೀವು ಜನರಿಗೆ ಆಜ್ಞಾಪಿಸಬೇಕಾದದ್ದೇನೆಂದರೆ, ‘ನೀವು ಸೇಯೀರಿನಲ್ಲಿ ವಾಸಮಾಡುವ ನಿಮ್ಮ ಸಹೋದರರಾದ ಏಸಾವನ ಪುತ್ರರ ಗಡಿಯನ್ನು ದಾಟಬೇಕು. ಅವರು ನಿಮಗೆ ಭಯಪಡುವರು. ಆದ್ದರಿಂದ ನೀವು ಬಹಳ ಜಾಗ್ರತೆಯಿಂದಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 2:4
15 ತಿಳಿವುಗಳ ಹೋಲಿಕೆ  

“ಎದೋಮ್ಯರನ್ನು ನೀವು ದ್ವೇಷಿಸಬಾರದು, ಅವರು ನಿಮ್ಮ ಸಂಬಂಧಿಕರಾಗಿದ್ದಾರೆ. ಈಜಿಪ್ಟಿನವರನ್ನು ನೀವು ದ್ವೇಷಿಸಬಾರದು, ಅವರ ದೇಶದಲ್ಲಿ ನೀವು ಪರದೇಶಿಗಳಾಗಿದ್ದಿರಲ್ಲಾ.


ಆಗ ಎದೋಮಿನ ಕುಟುಂಬಗಳು ಭಯಭೀತರಾಗುವರು. ಮೋವಾಬಿನ ನಾಯಕರು ಭಯದಿಂದ ನಡುಗುವರು. ಕಾನಾನಿನ ಜನರು ತಮ್ಮ ಧೈರ್ಯವನ್ನು ಕಳೆದುಕೊಳ್ಳುವರು.


ಅವಿಶ್ವಾಸಿಗಳೊಂದಿಗೆ ವ್ಯವಹರಿಸುವಾಗ ಜ್ಞಾನವುಳ್ಳವರಾಗಿರಿ. ನಿಮ್ಮ ಸಮಯವನ್ನು ಅತ್ಯುತ್ತಮವಾದ ರೀತಿಯಲ್ಲಿ ಬಳಸಿರಿ.


ಆಗ ಮುಗ್ಧರೂ ಪರಿಶುದ್ಧರೂ ಆಗಿದ್ದು ಕಳಂಕರಹಿತವಾದ ದೇವಮಕ್ಕಳಾಗಿರುತ್ತೀರಿ. ದುಷ್ಟಜನರ ಮಧ್ಯದಲ್ಲಿ ವಾಸವಾಗಿರುವ ನೀವು ಕಾರ್ಗತ್ತಲೆಯಲ್ಲಿ ಪ್ರಕಾಶಿಸುವ ನಕ್ಷತ್ರಮಂಡಲದಂತಿದ್ದೀರಿ.


ಆದ್ದರಿಂದ ನೀವು ಹೇಗೆ ಜೀವಿಸುತ್ತಿದ್ದೀರಿ ಎಂಬುದರ ಬಗ್ಗೆ ಬಹು ಎಚ್ಚರಿಕೆಯಿಂದಿರಿ. ಅವಿವೇಕಿಗಳಂತೆ ಜೀವಿಸದೆ ವಿವೇಕಿಗಳಾಗಿ ಜೀವಿಸಿರಿ.


ಬಳಿಕ ಯೇಸು ನೆರೆದಿದ್ದ ಜನರಿಗೆ, “ಎಚ್ಚರಿಕೆ, ಯಾವ ವಿಧವಾದ ಸ್ವಾರ್ಥಕ್ಕೂ ಒಳಗಾಗದಂತೆ ಜಾಗರೂಕರಾಗಿರಿ. ಒಬ್ಬನಿಗೆ ಎಷ್ಟೇ ಆಸ್ತಿಯಿದ್ದರೂ ಅದರಿಂದ ಅವನು ಜೀವವನ್ನು ಪಡೆದುಕೊಳ್ಳಲಾರನು” ಎಂದನು.


ಅದೇ ರೀತಿಯಲ್ಲಿ ನೀವು ಜನರಿಗೆ ಬೆಳಕಾಗಿರಬೇಕು. ಹೀಗೆ ಅವರು ನಿಮ್ಮ ಸತ್ಕಾರ್ಯಗಳನ್ನು ಕಂಡು ಪರಲೋಕದಲ್ಲಿರುವ ನಿಮ್ಮ ತಂದೆಯನ್ನು ಕೊಂಡಾಡಲಿ.


ಯೆಹೋವನು ಅವಳಿಗೆ, “ನಿನ್ನ ಗರ್ಭದಲ್ಲಿ ಎರಡು ಜನಾಂಗಗಳಿವೆ. ಎರಡು ಕುಟುಂಬಗಳನ್ನು ಆಳುವವರು ನಿನ್ನಲ್ಲಿ ಹುಟ್ಟುವರು; ಅವರು ವಿಭಾಗವಾಗುವರು. ಒಬ್ಬ ಮಗನು ಮತ್ತೊಬ್ಬನಿಗಿಂತ ಬಲಶಾಲಿಯಾಗಿರುವನು. ದೊಡ್ಡ ಮಗನು ಚಿಕ್ಕ ಮಗನ ಸೇವೆ ಮಾಡುವನು” ಎಂದು ಹೇಳಿದನು.


ನಿನ್ನ ಭುಜಬಲವನ್ನು ಅವರು ಕಂಡು ಭಯಭೀತರಾಗುವರು. ಯೆಹೋವನ ಜನರು ದಾಟಿ ಹೋಗುವವರೆಗೆ, ನೀನು ರೂಪಿಸಿದ ಜನರು ದಾಟಿ ಹೋಗುವವರೆಗೆ, ಅವರು ಬಂಡೆಯಂತೆ ಮೌನವಾಗಿರುವರು.


‘ನೀವು ಬೆಟ್ಟದ ಸುತ್ತ ಸುತ್ತುತ್ತಾ ಬಹಳ ದಿವಸಗಳನ್ನು ಕಳೆದಿರಿ. ಈಗ ನೀವು ಉತ್ತರದಿಕ್ಕಿಗೆ ತಿರುಗಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು