Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 20:10 - ಪರಿಶುದ್ದ ಬೈಬಲ್‌

10 “ನೀವು ಒಂದು ಪಟ್ಟಣವನ್ನು ಆಕ್ರಮಿಸಲು ಹೋದಾಗ, ಅಲ್ಲಿಯ ಜನರಿಗೆ ‘ಶಾಂತಿಸಂಧಾನಕ್ಕೆ’ ಕರೆಯನ್ನು ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನೀವು ಒಂದು ಪಟ್ಟಣವನ್ನು ಸ್ವಾಧೀನಮಾಡಿಕೊಳ್ಳುವುದಕ್ಕೆ ಅದರ ಹತ್ತಿರಕ್ಕೆ ಬಂದಾಗ ಮೊದಲು ಅದು ಯುದ್ಧವಿಲ್ಲದೆ ಸಮಾಧಾನದಿಂದಲೇ ಅಧೀನವಾಗಬಹುದೆಂದು ಪ್ರಕಟಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 “ನೀವು ಒಂದು ಪಟ್ಟಣವನ್ನು ಸ್ವಾಧೀನಮಾಡಿಕೊಳ್ಳಲು ಅದರ ಹತ್ತಿರಕ್ಕೆ ಬಂದಾಗ, ಮೊದಲು ಅದು ಯುದ್ಧವಿಲ್ಲದೆ ಸಮಾಧಾನದಿಂದಲೇ ಶರಣಾಗಬಹುದೆಂದು ಪ್ರಕಟಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನೀವು ಒಂದು ಪಟ್ಟಣವನ್ನು ಸ್ವಾಧೀನಮಾಡಿಕೊಳ್ಳುವದಕ್ಕೆ ಅದರ ಹತ್ತಿರಕ್ಕೆ ಬಂದಾಗ ಮೊದಲು ಅದು ಯುದ್ಧವಿಲ್ಲದೆ ಸಮಾಧಾನದಿಂದಲೇ ಅಧೀನವಾಗಬಹುದೆಂದು ಪ್ರಕಟಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನೀವು ಯುದ್ಧಮಾಡುವುದಕ್ಕಾಗಿ ಒಂದು ಪಟ್ಟಣದ ಹತ್ತಿರ ಬಂದಾಗ, ಮೊದಲು ಅದನ್ನು ಸಮಾಧಾನಕ್ಕಾಗಿ ಕರೆಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 20:10
13 ತಿಳಿವುಗಳ ಹೋಲಿಕೆ  

ದೇವರಿಗೆ ದೂರವಾಗಿದ್ದ ನಿಮ್ಮ ಬಳಿಗೂ ಸಮೀಪಸ್ಥರಾಗಿದ್ದವರ ಬಳಿಗೂ ಕ್ರಿಸ್ತನು ಬಂದು ಸಮಾಧಾನದ ಕುರಿತು ಉಪದೇಶಿಸಿದನು.


ಇದೆಲ್ಲಾ ದೇವರಿಂದಲೇ ಆಯಿತು. ಕ್ರಿಸ್ತನ ಮೂಲಕವಾಗಿ ದೇವರು ನಮ್ಮನ್ನು ತನ್ನೊಂದಿಗೆ ಸಮಾಧಾನ ಪಡಿಸಿಕೊಂಡಿದ್ದಾನೆ. ಇದಲ್ಲದೆ ಇತರರನ್ನು ಈ ಸಮಾಧಾನಕ್ಕೆ ಕರೆದುಕೊಂಡು ಬರುವ ಕೆಲಸವನ್ನು ದೇವರು ನಮಗೆ ಕೊಟ್ಟಿದ್ದಾನೆ.


ದೇವರು ಯೆಹೂದ್ಯ ಜನರೊಂದಿಗೆ ಮಾತಾಡಿದ್ದಾನೆ. ಯೇಸು ಕ್ರಿಸ್ತನ ಮೂಲಕವಾಗಿ ಶಾಂತಿ ಬಂದಿದೆ ಎಂಬ ಸುವಾರ್ತೆಯನ್ನು ದೇವರು ಅವರಿಗೆ ಕಳುಹಿಸಿದನು. ಯೇಸುವು ಎಲ್ಲಾ ಜನರಿಗೆ ಪ್ರಭುವಾಗಿದ್ದಾನೆ!


ಅರಸನು ಹೀಗೆನ್ನುತ್ತಾನೆ: “ಎಫ್ರಾಯೀಮಿನಲ್ಲಿ ರಥಗಳನ್ನೂ ಜೆರುಸಲೇಮಿನಲ್ಲಿ ಅಶ್ವಾರೂಢರಾದ ಸೈನಿಕರನ್ನೂ ನಾಶಮಾಡಿದೆನು; ಯುದ್ಧದ ಬಿಲ್ಲುಗಳನ್ನು ತುಂಡು ಮಾಡಿದೆನು.” ಆ ಅರಸನು ಸಮಾಧಾನದ ವರ್ತಮಾನವನ್ನು ರಾಜ್ಯಗಳಿಗೆ ತರುವನು. ಸಮುದ್ರದಿಂದ ಸಮುದ್ರದ ತನಕ ಯುಫ್ರೇಟೀಸ್ ನದಿಯಿಂದ ಭೂಮಿಯ ಕಟ್ಟಕಡೆಯವರೆಗೆ ಆತನು ರಾಜ್ಯವನ್ನಾಳುವನು.


ನಾನು ಅವರಿಗೆ ‘ಸಮಾಧಾನ’ ಎಂಬ ಹೊಸ ಪದವನ್ನು ಕಲಿಸುತ್ತೇನೆ. ನನ್ನ ಬಳಿಯಲ್ಲಿರುವವರಿಗೂ ನನ್ನಿಂದ ದೂರದಲ್ಲಿರುವವರಿಗೂ ಸಮಾಧಾನವನ್ನು ಅನುಗ್ರಹಿಸುವೆನು. ನಾನು ಅವರನ್ನು ಗುಣಪಡಿಸುವೆನು.” ಇದು ಯೆಹೋವನ ನುಡಿ.


ಲೇವಿಯ ಅಧಿಕಾರಿಗಳು ಸೈನಿಕರೊಂದಿಗೆ ಮಾತಾಡುವುದನ್ನು ನಿಲ್ಲಿಸಿದ ಬಳಿಕ ಅವರು ತಮಗೆ ಸೈನ್ಯಾಧಿಕಾರಿಗಳನ್ನು ನೇಮಿಸಬೇಕು.


ಅವರು ನಿಮ್ಮ ಸಂಧಾನವನ್ನು ಸ್ವೀಕರಿಸಿ ನಿಮಗೆ ತಮ್ಮ ಬಾಗಿಲುಗಳನ್ನು ತೆರೆದುಕೊಟ್ಟರೆ ಆ ಪಟ್ಟಣದಲ್ಲಿರುವವರೆಲ್ಲರೂ ನಿಮಗೆ ಗುಲಾಮರಾಗುವರು. ಅವರು ನಿಮ್ಮ ಕೆಲಸಗಳನ್ನು ಮಾಡಲೇಬೇಕು.


ಇಸ್ರೇಲರು ಬೆನ್ಯಾಮೀನ್ಯರಿಗೆ ಒಂದು ಸಂದೇಶವನ್ನು ಕಳುಹಿಸಿದರು. ಅವರು ಬೆನ್ಯಾಮೀನ್ಯರೊಂದಿಗೆ ಶಾಂತಿಯ ಪ್ರಸ್ತಾಪವನ್ನು ಮಾಡಿದರು. ಬೆನ್ಯಾಮೀನ್ಯರು ರಿಮ್ಮೋನ್‌ಗಿರಿ ಎಂಬ ಸ್ಥಳದಲ್ಲಿದ್ದರು.


“ನಾವು ಕೆದೇಮೋತಿನ ಮರುಭೂಮಿಯಲ್ಲಿರುವಾಗ ಹೆಷ್ಬೋನಿನ ಅರಸನಾದ ಸೀಹೋನನ ಬಳಿಗೆ ದೂತರನ್ನು ಸಮಾಧಾನದ ಸಂದೇಶದೊಂದಿಗೆ ಕಳುಹಿಸಿದೆನು. ಆ ದೂತರು ಸೀಹೋನನಿಗೆ ಸಮಾಧಾನವನ್ನು ತಂದಿದ್ದರು.


ಯೆಫ್ತಾಹನು ಅಮ್ಮೋನಿಯರ ಅರಸನಿಗೆ ತನ್ನ ದೂತರ ಮೂಲಕ, “ಅಮ್ಮೋನಿಯರ ಮತ್ತು ಇಸ್ರೇಲರ ಮಧ್ಯೆ ಯಾವ ಸಮಸ್ಯೆ ಇದೆ? ನೀವು ನಮ್ಮ ದೇಶದಲ್ಲಿ ಯುದ್ಧಮಾಡಲು ಏಕೆ ಬಂದಿರುವಿರಿ?” ಎಂಬ ಸಂದೇಶವನ್ನು ಕಳುಹಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು