Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 20:11 - ಪರಿಶುದ್ದ ಬೈಬಲ್‌

11 ಅವರು ನಿಮ್ಮ ಸಂಧಾನವನ್ನು ಸ್ವೀಕರಿಸಿ ನಿಮಗೆ ತಮ್ಮ ಬಾಗಿಲುಗಳನ್ನು ತೆರೆದುಕೊಟ್ಟರೆ ಆ ಪಟ್ಟಣದಲ್ಲಿರುವವರೆಲ್ಲರೂ ನಿಮಗೆ ಗುಲಾಮರಾಗುವರು. ಅವರು ನಿಮ್ಮ ಕೆಲಸಗಳನ್ನು ಮಾಡಲೇಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅದರಲ್ಲಿರುವವರು ಒಪ್ಪಿ ಬಾಗಿಲನ್ನು ನಿಮಗೆ ತೆರೆದುಕೊಟ್ಟರೆ ಅವರೆಲ್ಲರೂ ನಿಮಗೆ ಬಿಟ್ಟೀಕೆಲಸವನ್ನು ಮಾಡುವ ದಾಸರಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಅದರಲ್ಲಿರುವವರು ಒಪ್ಪಿ ಬಾಗಿಲನ್ನು ನಿಮಗೆ ತೆರೆದುಕೊಟ್ಟರೆ ಅವರೆಲ್ಲರೂ ನಿಮಗೆ ಬಿಟ್ಟೀ ಕೆಲಸವನ್ನು ಮಾಡುವ ಗುಲಾಮರಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅದರಲ್ಲಿರುವವರು ಒಪ್ಪಿ ಬಾಗಿಲನ್ನು ನಿಮಗೆ ತೆರೆದುಕೊಟ್ಟರೆ ಅವರೆಲ್ಲರೂ ನಿಮಗೆ ಬಿಟ್ಟೀಕೆಲಸವನ್ನು ಮಾಡುವ ದಾಸರಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆ ಪಟ್ಟಣವು ನಿಮಗೆ ಸಮಾಧಾನದ ಉತ್ತರಕೊಟ್ಟು ಬಾಗಿಲನ್ನು ತೆರೆದರೆ, ಅದರಲ್ಲಿರುವ ಜನರೆಲ್ಲರೂ ನಿಮಗೆ ಕಪ್ಪಕೊಟ್ಟು, ನಿಮಗಾಗಿ ಕೆಲಸ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 20:11
16 ತಿಳಿವುಗಳ ಹೋಲಿಕೆ  

ಆದರೆ ಅವನ ದೇಶದ ಜನರು ಅವನನ್ನು ದ್ವೇಷಿಸಿ, ಜನರ ಒಂದು ಗುಂಪನ್ನು ಅವನ ಹಿಂದೆ ಕಳುಹಿಸಿದರು. ಆ ಗುಂಪಿನ ಜನರು ದೂರದೇಶದಲ್ಲಿ, ‘ಇವನು ನಮ್ಮ ರಾಜನಾಗುವುದು ನಮಗೆ ಇಷ್ಟವಿಲ್ಲ!’ ಎಂದು ಹೇಳಿದರು.


ಶಾಂತಿ ನೆಲೆಸಿರಲಿ ಎಂದು ನಾನು ಹೇಳಿದರೂ ಅವರು ಯುದ್ಧವನ್ನೇ ಇಷ್ಟಪಡುತ್ತಾರೆ.


ಅನಂತರ ಇಸ್ರೇಲರು ಪ್ರಬಲರಾಗಿ ಬಲವಂತದಿಂದ ಕಾನಾನ್ಯರನ್ನು ತಮ್ಮ ಗುಲಾಮರನ್ನಾಗಿ ಮಾಡಿಕೊಂಡರು. ಆದರೆ ಎಲ್ಲಾ ಕಾನಾನ್ಯರನ್ನೂ ಅವರ ಮನೆಗಳಿಂದ ಹೊರಗಟ್ಟಲು ಇಸ್ರೇಲರಿಗೆ ಸಾಧ್ಯವಾಗಲಿಲ್ಲ.


ಆದರೆ ಎಫ್ರಾಯೀಮಿನ ಜನರಿಗೆ ಗೆಜೆರಿನಲ್ಲಿದ್ದ ಕಾನಾನ್ಯರನ್ನು ಅಲ್ಲಿಂದ ಹೊರದೂಡುವುದು ಸಾಧ್ಯವಾಗಲಿಲ್ಲ. ಅದಕ್ಕಾಗಿ ಇಂದಿಗೂ ಕಾನಾನ್ಯರು ಎಫ್ರಾಯೀಮ್ ಜನರೊಂದಿಗೆ ಇರುತ್ತಾರೆ. ಆದರೆ ಕಾನಾನ್ಯರು ಎಫ್ರಾಯೀಮ್ ಜನರ ದಾಸರಾಗಿದ್ದಾರೆ.


ಯೆಹೋಶುವನು ಗಿಬ್ಯೋನಿನ ಜನರನ್ನು ಇಸ್ರೇಲರ ಸೇವಕರನ್ನಾಗಿ ಮಾಡಿಕೊಂಡನು. ತನ್ನ ನಿವಾಸಕ್ಕಾಗಿ ಯೆಹೋವನು ಆರಿಸಿಕೊಳ್ಳುವ ಸ್ಥಳಗಳಲ್ಲಿ ಅವರು ಇಸ್ರೇಲರಿಗಾಗಿಯೂ ಯೆಹೋವನ ಯಜ್ಞವೇದಿಕೆಗಾಗಿಯೂ ಮರವನ್ನು ಕಡಿಯುತ್ತಿದ್ದರು ಮತ್ತು ನೀರನ್ನು ಹೊರುತ್ತಿದ್ದರು. ಆ ಜನರು ಇಂದಿಗೂ ಗುಲಾಮರಾಗಿಯೇ ಇದ್ದಾರೆ.


“ನೀವು ಒಂದು ಪಟ್ಟಣವನ್ನು ಆಕ್ರಮಿಸಲು ಹೋದಾಗ, ಅಲ್ಲಿಯ ಜನರಿಗೆ ‘ಶಾಂತಿಸಂಧಾನಕ್ಕೆ’ ಕರೆಯನ್ನು ಕೊಡಬೇಕು.


ಆದರೆ ಆ ಪಟ್ಟಣದವರು ನಿಮ್ಮೊಂದಿಗೆ ಶಾಂತಿಸಂಧಾನ ಮಾಡಲು ಒಪ್ಪದಿದ್ದರೆ ಮತ್ತು ನಿಮ್ಮೊಂದಿಗೆ ಕಾದಾಡಲು ಬಂದರೆ ನೀವು ಆ ಪಟ್ಟಣಕ್ಕೆ ಮುತ್ತಿಗೆ ಹಾಕಬೇಕು.


ಹಿವ್ವಿಯರು ಯೆಹೋಶುವನಿಗೆ, “ನಾವು ನಿಮ್ಮ ಸೇವಕರು” ಎಂದು ಹೇಳಿದರು. ಆದರೆ ಯೆಹೋಶುವನು, “ನೀವು ಯಾರು? ಎಲ್ಲಿಂದ ಬಂದಿರುವಿರಿ?” ಎಂದು ಪ್ರಶ್ನಿಸಿದನು.


ಎಲೀಷನು, “ಬೇಡ, ಅವರನ್ನು ಕೊಲ್ಲಬೇಡ. ನೀನು ಯುದ್ಧದಲ್ಲಿ, ನಿನ್ನ ಖಡ್ಗದಿಂದ, ನಿನ್ನ ಬಿಲ್ಲುಬಾಣಗಳಿಂದ ಸೆರೆಹಿಡಿದ ಜನರನ್ನು ಕೊಲ್ಲಬಾರದು, ಅರಾಮ್ಯರ ಸೇನೆಗೆ ಸ್ವಲ್ಪ ನೀರನ್ನು ಮತ್ತು ರೊಟ್ಟಿಗಳನ್ನು ಕೊಡು. ಅವರು ತಿಂದು, ನೀರು ಕುಡಿಯಲಿ. ನಂತರ ಅವರು ತಮ್ಮ ಮನೆಗೆ, ಅವರ ಒಡೆಯನ ಬಳಿಗೆ ಹೋಗಲಿ” ಎಂದು ಉತ್ತರಿಸಿದನು.


ಅದಕ್ಕೆ ಅವರು, “ನಿನ್ನ ಸೇವಕರಾದ ನಾವು ಬಹುದೂರ ದೇಶದಿಂದ ಬಂದಿದ್ದೇವೆ. ನಾವು ಬಂದದ್ದಕ್ಕೆ ಕಾರಣವೇನೆಂದರೆ ನಾವು ನಿಮ್ಮ ದೇವರಾದ ಯೆಹೋವನ ಅದ್ಭುತಶಕ್ತಿಯ ಬಗ್ಗೆ ಕೇಳಿದೆವು. ಆತನು ಮಾಡಿದ ಅದ್ಭುತಕಾರ್ಯಗಳ ಬಗ್ಗೆ ಕೇಳಿದೆವು. ಆತನು ಈಜಿಪ್ಟಿನಲ್ಲಿ ಮಾಡಿದ ಪ್ರತಿಯೊಂದು ಅದ್ಭುತದ ಬಗ್ಗೆ ಕೇಳಿದೆವು.


ಹೀರಾಮನು ತೂರಿನ ರಾಜನಾಗಿದ್ದನು. ಹೀರಾಮನು ಯಾವಾಗಲೂ ದಾವೀದನ ಸ್ನೇಹಿತನಾಗಿದ್ದನು. ದಾವೀದನ ನಂತರ ಸೊಲೊಮೋನನು ನೂತನ ರಾಜನಾದನೆಂದು ಹೀರಾಮನು ಕೇಳಿ, ತನ್ನ ಸೇವಕರನ್ನು ಸೊಲೊಮೋನನ ಬಳಿಗೆ ಕಳುಹಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು