Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 20:16 - ಪರಿಶುದ್ದ ಬೈಬಲ್‌

16 “ಆದರೆ ನಿಮಗೆ ವಾಗ್ದಾನ ಮಾಡಿದ ದೇಶದ ಪಟ್ಟಣಗಳನ್ನು ಸ್ವಾಧೀನ ಮಾಡುವಾಗ ನೀವು ಪಟ್ಟಣದಲ್ಲಿರುವವರೆಲ್ಲರನ್ನು ಕೊಲ್ಲಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆದರೆ ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವಂತಕ್ಕಾಗಿ ಕೊಡುವ ಈ ಜನಾಂಗಗಳ ಪಟ್ಟಣಗಳ ವಿಷಯದಲ್ಲಿ ಹಾಗೆ ಮಾಡದೆ ಉಸಿರಾಡುವ ಒಬ್ಬರನ್ನಾದರೂ ಉಳಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಆದರೆ ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಸ್ವಂತಕ್ಕಾಗಿ ಕೊಡುವ ಈ ಜನಾಂಗಗಳ ಪಟ್ಟಣಗಳ ವಿಷಯದಲ್ಲಿ ಹಾಗೆ ಮಾಡದೆ ಉಸಿರಾಡುವ ಒಬ್ಬರನ್ನಾದರೂ ಉಳಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಆದರೆ ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವಂತಕ್ಕಾಗಿ ಕೊಡುವ ಈ ಜನಾಂಗಗಳ ಪಟ್ಟಣಗಳ ವಿಷಯದಲ್ಲಿ ಹಾಗೆ ಮಾಡದೆ ಉಸುರುಬಿಡುವ ಒಬ್ಬರನ್ನಾದರೂ ಉಳಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಆದರೆ ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಸೊತ್ತಾಗಿ ಕೊಡುವ ಈ ಜನರ ಪಟ್ಟಣಗಳಲ್ಲಿ ಉಸಿರಾಡುವ ಯಾವುದನ್ನಾದರೂ ಉಳಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 20:16
25 ತಿಳಿವುಗಳ ಹೋಲಿಕೆ  

ಆ ಪಟ್ಟಣಗಳಲ್ಲಿ ಸಿಕ್ಕಿದ ಎಲ್ಲ ಪದಾರ್ಥಗಳನ್ನು ಮತ್ತು ಎಲ್ಲ ಪಶುಗಳನ್ನು ಇಸ್ರೇಲರು ತಮಗಾಗಿ ಇಟ್ಟುಕೊಂಡರು. ಆದರೆ ಅಲ್ಲಿದ್ದ ಜನರನ್ನೆಲ್ಲ ಕೊಂದರು. ಅವರಲ್ಲಿ ಯಾರನ್ನೂ ಸಜೀವವಾಗಿ ಉಳಿಸಲಿಲ್ಲ.


ಆ ದೇಶದ ನಿವಾಸಿಗಳನ್ನೆಲ್ಲ ಹೊರಡಿಸಿಬಿಟ್ಟು ಅವರ ಕೆತ್ತಿದ ಪ್ರತಿಮೆಗಳನ್ನು ಮತ್ತು ಲೋಹದ ವಿಗ್ರಹಗಳನ್ನು ನಾಶಮಾಡಿ ಅವರ ಪೂಜಾಸ್ಥಳಗಳನ್ನು ಹಾಳುಮಾಡಬೇಕು.


ಹೀಗೆ ಯೆಹೋಶುವನು ಬೆಟ್ಟದ ಮೇಲಿನ ಪ್ರದೇಶ, ನೆಗೆವ್ ಪ್ರದೇಶ, ಪಶ್ಚಿಮದ ಇಳಕಲಿನ ಪ್ರದೇಶ, ಪೂರ್ವದ ಇಳಕಲಿನ ಪ್ರದೇಶ, ಈ ಎಲ್ಲ ಪ್ರದೇಶಗಳ ಅರಸರನ್ನು ಸೋಲಿಸಿದನು. ಇಸ್ರೇಲಿನ ದೇವರಾದ ಯೆಹೋವನು ಎಲ್ಲಾ ಜನರನ್ನು ಕೊಲ್ಲು ಎಂದು ಯೆಹೋಶುವನಿಗೆ ಹೇಳಿದ್ದನು. ಅದಕ್ಕಾಗಿ ಯೆಹೋಶುವನು ಆ ಸ್ಥಳಗಳಲ್ಲಿ ಯಾರೊಬ್ಬರನ್ನೂ ಸಜೀವವಾಗಿ ಉಳಿಸಲಿಲ್ಲ.


ಆ ದಿನ ಯೆಹೋಶುವನು ಮಕ್ಕೇದವನ್ನು ಸ್ವಾಧೀನಪಡಿಸಿಕೊಂಡು ಆ ಪಟ್ಟಣದ ಅರಸನನ್ನು ಮತ್ತು ಜನರನ್ನು ಸಂಹರಿಸಿದನು. ಒಬ್ಬರೂ ಜೀವಂತವಾಗಿ ಉಳಿಯಲಿಲ್ಲ. ಯೆಹೋಶುವನು ಜೆರಿಕೊವಿನ ಅರಸನಿಗೆ ಮಾಡಿದಂತೆಯೇ ಮಕ್ಕೇದದ ಅರಸನಿಗೂ ಮಾಡಿದನು.


ಆ ದೇಶದಲ್ಲಿ ನೀವು ಯೆಹೋವನ ಸಹಾಯದಿಂದ ಸೋಲಿಸುವ ಜನರನ್ನೆಲ್ಲಾ ಕೊಂದುಬಿಡಬೇಕು. ಅವರಿಗೆ ಕನಿಕರ ತೋರಬಾರದು. ಅವರ ದೇವರುಗಳನ್ನು ಪೂಜಿಸಕೂಡದು! ಯಾಕೆಂದರೆ ಅವು ನಿಮಗೆ ಉರುಲಾಗಿ ನಿಮ್ಮ ಜೀವಿತವನ್ನು ಹಾಳುಮಾಡುತ್ತವೆ.


ಇಸ್ರೇಲರು ಓಗನನ್ನೂ ಅವನ ಸೈನ್ಯವನ್ನೂ ಸೋಲಿಸಿದರು. ಅವರು ಅವನನ್ನೂ ಅವನ ಪುತ್ರರನ್ನೂ ಕೊಂದುಹಾಕಿ ಅವನ ಸೈನ್ಯವನ್ನೆಲ್ಲಾ ನಾಶಮಾಡಿದರು. ಯಾರನ್ನೂ ಜೀವಂತವಾಗಿ ಉಳಿಸಲಿಲ್ಲ. ಇಸ್ರೇಲರು ಅವನ ದೇಶವನ್ನು ವಶಪಡಿಸಿಕೊಂಡರು.


ಯೆಹೋಶುವನು ಗಿಬ್ಯೋನಿನ ಜನರನ್ನು ಇಸ್ರೇಲರ ಸೇವಕರನ್ನಾಗಿ ಮಾಡಿಕೊಂಡನು. ತನ್ನ ನಿವಾಸಕ್ಕಾಗಿ ಯೆಹೋವನು ಆರಿಸಿಕೊಳ್ಳುವ ಸ್ಥಳಗಳಲ್ಲಿ ಅವರು ಇಸ್ರೇಲರಿಗಾಗಿಯೂ ಯೆಹೋವನ ಯಜ್ಞವೇದಿಕೆಗಾಗಿಯೂ ಮರವನ್ನು ಕಡಿಯುತ್ತಿದ್ದರು ಮತ್ತು ನೀರನ್ನು ಹೊರುತ್ತಿದ್ದರು. ಆ ಜನರು ಇಂದಿಗೂ ಗುಲಾಮರಾಗಿಯೇ ಇದ್ದಾರೆ.


ಗಿಬ್ಯೋನ್ಯರು, “ನೀವು ನಮ್ಮನ್ನು ಕೊಲ್ಲಬಹುದೆಂಬ ಭಯದಿಂದ ನಾವು ನಿಮಗೆ ಸುಳ್ಳು ಹೇಳಿದೆವು; ದೇವರು ತನ್ನ ಸೇವಕನಾದ ಮೋಶೆಗೆ ಈ ಎಲ್ಲ ಭೂಪ್ರದೇಶವನ್ನು ನಿಮಗೆ ಕೊಡಬೇಕೆಂದು ಆಜ್ಞಾಪಿಸಿರುವುದನ್ನೂ ಈ ಪ್ರದೇಶದ ಎಲ್ಲ ಜನರನ್ನು ಕೊಂದುಬಿಡಬೇಕೆಂದು ನಿಮಗೆ ಹೇಳಿರುವನೆಂದೂ ನಾವು ಕೇಳಿದ್ದೆವು. ಆದ್ದರಿಂದ ನಾವು ನಿಮಗೆ ಸುಳ್ಳು ಹೇಳಿದೆವು.


ಆದ್ದರಿಂದ ಈ ಗುಂಪಿನಲ್ಲಿರುವ ಎಲ್ಲಾ ಗಂಡುಮಕ್ಕಳನ್ನೂ ಪುರುಷಸಂಗಮ ಮಾಡಿದ ಎಲ್ಲಾ ಮಿದ್ಯಾನ್ ಹೆಂಗಸರನ್ನೂ ಕೊಲ್ಲಬೇಕು.


ನಿಮ್ಮಿಂದ ಬಹುದೂರವಿರುವ ಪಟ್ಟಣಗಳಿಗೆ ಅಂದರೆ ನೀವು ವಾಸಿಸಲಿರುವ ದೇಶದಿಂದ ದೂರವಿರುವ ಪಟ್ಟಣಗಳಿಗೆ ನೀವು ಆ ರೀತಿಯಾಗಿ ಮಾಡಬೇಕು.


ನೀವು ಹಿತ್ತಿಯರನ್ನು, ಅಮೋರಿಯರನ್ನು, ಕಾನಾನ್ಯರನ್ನು, ಪೆರಿಜ್ಜೀಯರನ್ನು, ಹಿವ್ವಿಯರನ್ನು ಮತ್ತು ಯೆಬೂಸಿಯರನ್ನು ಸಂಪೂರ್ಣವಾಗಿ ಹತ್ಯೆ ಮಾಡಬೇಕು. ಇದು ನಿಮ್ಮ ದೇವರಾದ ಯೆಹೋವನ ಅಪ್ಪಣೆ.


ಬಳಿಕ ಇಸ್ರೇಲರು ಇಡೀ ನಗರವನ್ನು ಸುಟ್ಟು ಹಾಕಿದರು. ಅವರು ಬೆಳ್ಳಿ, ಬಂಗಾರ, ಕಂಚು ಮತ್ತು ಕಬ್ಬಿಣಗಳಿಂದ ಮಾಡಿದ ವಸ್ತುಗಳನ್ನು ಬಿಟ್ಟು ನಗರದಲ್ಲಿನ ಉಳಿದೆಲ್ಲವನ್ನು ಸುಟ್ಟು ಹಾಕಿದರು. ಅವರು ಆ ವಸ್ತುಗಳನ್ನು ಯೆಹೋವನಿಗಾಗಿ ಉಳಿಸಿದರು.


“ಯೆಹೋವನು ಹೇಳಿದಂತೆಯೇ ನೀವು ಮಾಡಬೇಕು. ನೀವು ಪಟ್ಟಣವನ್ನು ಸ್ವಾಧೀನಪಡಿಸಿಕೊಂಡ ಮೇಲೆ ಅದನ್ನು ಸುಟ್ಟುಹಾಕಬೇಕು. ನನ್ನ ಕಡೆಗೆ ಗಮನವಿರಲಿ! ಆಕ್ರಮಣ ಮಾಡುವುದಕ್ಕೆ ನಾನು ಆಜ್ಞೆಯನ್ನು ಕೊಡುತ್ತೇನೆ” ಎಂದು ಆಜ್ಞಾಪಿಸಿದನು.


“ಆಯಿ”ಯ ಜನರೆಲ್ಲಾ ಆ ದಿನ ಸತ್ತುಹೋದರು. ಅಲ್ಲಿ ಹನ್ನೆರಡು ಸಾವಿರ ಗಂಡಸರು ಮತ್ತು ಹೆಂಗಸರು ಇದ್ದರು.


ಯೆಹೋಶುವನು ಮತ್ತು ಇಸ್ರೇಲಿನ ಜನರು ವೈರಿಗಳನ್ನು ಕೊಂದರು. ಆದರೆ ಕೆಲವು ಶತ್ರುಗಳು ಎತ್ತರವಾದ ಗೋಡೆಗಳುಳ್ಳ ತಮ್ಮ ಪಟ್ಟಣಗಳಿಗೆ ಹೋಗಿ ಅಡಗಿಕೊಳ್ಳಲು ಸಾಧ್ಯವಾಯಿತು. ಆ ಜನರು ಕೊಲ್ಲಲ್ಪಡಲಿಲ್ಲ.


ಈಗ, ನೀನು ಹೋಗಿ ಅಮಾಲೇಕ್ಯರ ವಿರುದ್ಧ ಹೋರಾಡು. ನೀನು ಅಮಾಲೇಕ್ಯರನ್ನೂ ಮತ್ತು ಅವರಿಗೆ ಸೇರಿದ ಎಲ್ಲವನ್ನೂ ನಾಶಗೊಳಿಸಬೇಕು. ಯಾರನ್ನೂ ಜೀವದಿಂದ ಉಳಿಸಬೇಡ, ನೀನು ಎಲ್ಲ ಗಂಡಸರನ್ನು ಮತ್ತು ಹೆಂಗಸರನ್ನು ಕೊಲ್ಲಬೇಕು. ನೀನು ಎಲ್ಲ ಮಕ್ಕಳನ್ನೂ ಎಳೆಕೂಸುಗಳನ್ನೂ ಕೊಲ್ಲಬೇಕು. ನೀನು ಅವರಿಗೆ ಸೇರಿದ ಎಲ್ಲ ಹಸುಗಳನ್ನೂ ಕುರಿಗಳನ್ನೂ ಒಂಟೆಗಳನ್ನೂ ಕತ್ತೆಗಳನ್ನೂ ಕೊಂದುಹಾಕಬೇಕು’” ಎಂದು ಹೇಳಿದನು.


“ನಿಮ್ಮ ದೆಸೆಯಿಂದ ಯೆಹೋವನು ನನ್ನ ಮೇಲೆ ಸಿಟ್ಟುಗೊಂಡನು. ಆ ಕಾರಣದಿಂದ ಕಾನಾನ್ ದೇಶವನ್ನು ನಾನು ಪ್ರವೇಶಿಸಬಾರದು ಎಂದು ನನಗೆ ಹೇಳಿರುತ್ತಾನೆ. ಜೋರ್ಡನ್ ನದಿಯಾಚೆ ನಿಮಗೆ ಕೊಡುವ ಆ ಉತ್ತಮ ದೇಶವನ್ನು ನಾನು ನೋಡುವುದಿಲ್ಲವೆಂದು ಪ್ರಮಾಣ ಮಾಡಿದ್ದಾನೆ.


ಯೆಹೋವನು ಆ ಜನಾಂಗಗಳನ್ನು ಸೋಲಿಸಲು ಸಹಾಯ ಮಾಡುವನು. ಆದರೆ ನಾನು ಹೇಳಿದ ಪ್ರಕಾರ ನೀವು ಅವರಿಗೆ ಮಾಡಬೇಕು.


ಹಿವ್ವಿಯರಾದ ಅವರಿಗೆ ಇಸ್ರೇಲಿನ ಜನರು, “ಒಂದುವೇಳೆ ನೀವು ನಮ್ಮನ್ನು ಮೋಸಗೊಳಿಸಲು ಪ್ರಯತ್ನಿಸುತ್ತಿರಬಹುದು. ಒಂದುವೇಳೆ ನೀವು ನಮ್ಮ ಹತ್ತಿರದಲ್ಲಿಯೇ ವಾಸಮಾಡುತ್ತಿರಬಹುದು; ನೀವು ಎಲ್ಲಿಯವರು ಎಂಬುದು ನಮಗೆ ಗೊತ್ತಾಗುವವರೆಗೆ ನಾವು ನಿಮ್ಮ ಸಂಗಡ ಶಾಂತಿ ಒಪ್ಪಂದವನ್ನು ಮಾಡಿಕೊಳ್ಳಲು ಸಾಧ್ಯವಿಲ್ಲ” ಎಂದು ಉತ್ತರಕೊಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು