Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 20:19 - ಪರಿಶುದ್ದ ಬೈಬಲ್‌

19 “ನೀವು ಒಂದು ಪಟ್ಟಣವನ್ನು ಬಹುಕಾಲದಿಂದ ಮುತ್ತಿಗೆ ಹಾಕಿದರೆ ಸುತ್ತಮುತ್ತಲಿರುವ ಮರಗಳನ್ನು ಕಡಿದುಹಾಕಬಾರದು. ಅವುಗಳ ಫಲಗಳನ್ನು ತಿನ್ನಬಹುದು; ಆದರೆ ಕಡಿಯಬಾರದು. ಅವು ನಿಮ್ಮ ವೈರಿಗಳಲ್ಲವಲ್ಲಾ? ಅವು ನಿಮ್ಮೊಂದಿಗೆ ಯುದ್ಧ ಮಾಡುವುದಿಲ್ಲವಲ್ಲಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನೀವು ಒಂದು ಪಟ್ಟಣವನ್ನು ಸ್ವಾಧೀನಮಾಡಿಕೊಳ್ಳುವುದಕ್ಕಾಗಿ ಅದಕ್ಕೆ ಬಹುದಿನ ಮುತ್ತಿಗೆಹಾಕಿದಾಗ, ಅದಕ್ಕೆ ಸೇರಿರುವ ಮರಗಳನ್ನು ಹಾಳುಮಾಡಬಾರದು; ಅವುಗಳಿಗೆ ಕೊಡಲಿಯನ್ನು ಹಾಕಲೇಬಾರದು. ಅವುಗಳ ಹಣ್ಣನ್ನು ತಿನ್ನಬಹುದೇ ಹೊರತು ಮರಗಳನ್ನು ಕಡಿಯಬಾರದು. ಅಡವಿಯ ಮರಗಳು ಯಾರಿಗೂ ಶತ್ರುಗಳಲ್ಲ! ಅವುಗಳೊಡನೆ ಯುದ್ಧಮಾಡಬಹುದೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 “ನೀವು ಒಂದು ಪಟ್ಟಣವನ್ನು ಸ್ವಾಧೀನ ಮಾಡಿಕೊಳ್ಳಲು ಅದಕ್ಕೆ ಬಹುದಿವಸ ಮುತ್ತಿಗೆ ಹಾಕಬೇಕಾಗಬಹುದು; ಅದಕ್ಕೆ ಸೇರಿದ ಮರಗಳನ್ನು ಹಾಳುಮಾಡಬಾರದು; ಅವುಗಳಿಗೆ ಕೊಡಲಿಯನ್ನು ಹಾಕಲೇಬಾರದು. ಅವುಗಳ ಹಣ್ಣನ್ನು ತಿನ್ನಬಹುದೇ ಹೊರತು ಮರಗಳನ್ನು ಕಡಿಯಬಾರದು. ಅಡವಿಯ ಮರಗಳು ಶತ್ರುಗಳೇನು? ಅವುಗಳೊಡನೆ ಯುದ್ಧಮಾಡಬಹುದೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನೀವು ಒಂದು ಪಟ್ಟಣವನ್ನು ಸ್ವಾಧೀನಮಾಡಿಕೊಳ್ಳುವದಕ್ಕಾಗಿ ಅದಕ್ಕೆ ಬಹುದಿವಸ ಮುತ್ತಿಗೆಹಾಕಿರುವಾಗ ಅದಕ್ಕೆ ಸೇರಿರುವ ಮರಗಳನ್ನು ಹಾಳುಮಾಡಬಾರದು; ಅವುಗಳಿಗೆ ಕೊಡಲಿಯನ್ನು ಹಾಕಲೇಬಾರದು. ಅವುಗಳ ಹಣ್ಣನ್ನು ತಿನ್ನಬಹುದೇ ಹೊರತು ಮರಗಳನ್ನು ಕಡಿಯಬಾರದು. ಅಡವಿಯ ಮರಗಳು ಶತ್ರುಗಳೇನು? ಅವುಗಳೊಡನೆ ಯುದ್ಧಮಾಡಬಹುದೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ನೀವು ಒಂದು ಪಟ್ಟಣವನ್ನು ಸ್ವಾಧೀನಮಾಡಿಕೊಳ್ಳಲು ಅದಕ್ಕೆ ಬಹು ದಿವಸ ಮುತ್ತಿಗೆ ಹಾಕಬೇಕಾಗಬಹುದು. ಆಗ ಅದಕ್ಕೆ ಸೇರಿದ ಮರಗಳನ್ನು ಹಾಳುಮಾಡಬಾರದು. ಅವುಗಳಿಗೆ ಕೊಡಲಿಯನ್ನು ಹಾಕಲೇಬಾರದು. ಅವುಗಳ ಹಣ್ಣನ್ನು ತಿನ್ನಬಹುದೇ ಹೊರತು ಮರಗಳನ್ನು ಕಡಿಯಬಾರದು. ಅಡವಿಯ ಮರಗಳು ಶತ್ರುಗಳೇನು? ಅವುಗಳೊಡನೆ ಯುದ್ಧ ಮಾಡಬಹುದೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 20:19
11 ತಿಳಿವುಗಳ ಹೋಲಿಕೆ  

ಮರಗಳನ್ನು ಕಡಿದುಹಾಕಲು ಕೊಡಲಿ ಈಗಲೇ ಸಿದ್ಧವಾಗಿದೆ. ಒಳ್ಳೆಯ ಫಲಬಿಡದ ಪ್ರತಿಯೊಂದು ಮರವನ್ನು ಕಡಿದು ಬೆಂಕಿಗೆ ಹಾಕಲಾಗುವುದು.


ಈಜಿಪ್ಟಿನವರು ನಮ್ಮನ್ನು ಕಠಿಣವಾಗಿ ನೋಡಿಕೊಳ್ಳುತ್ತಿದ್ದರು. ನಮ್ಮನ್ನು ಗುಲಾಮರಾಗಿ ಉಪಯೋಗಿಸಿದರು. ನಮ್ಮನ್ನು ಹಿಂಸಿಸಿ, ಕಷ್ಟಕರವಾದ ಕೆಲಸವನ್ನು ಕೊಟ್ಟರು.


ಆತನು ದಾರಿಯ ಪಕ್ಕದಲ್ಲಿದ್ದ ಒಂದು ಅಂಜೂರದ ಮರವನ್ನು ನೋಡಿ ಹಣ್ಣನ್ನು ತಿನ್ನಲು ಅದರ ಬಳಿಗೆ ಹೋದನು. ಆದರೆ ಮರದಲ್ಲಿ ಬರೀ ಎಲೆಗಳೇ ಇದ್ದವು. ಆದ್ದರಿಂದ ಯೇಸು ಆ ಮರಕ್ಕೆ, “ಇನ್ನು ಮೇಲೆ ನೀನೆಂದಿಗೂ ಹಣ್ಣುಬಿಡದಂತಾಗಲಿ!” ಎಂದನು. ಆ ಕೂಡಲೇ ಅಂಜೂರದ ಮರ ಒಣಗಿಹೋಯಿತು.


ಯಾಕೆಂದರೆ ಆಗ ಅವರು ನಿಮ್ಮ ದೇವರಾದ ಯೆಹೋವನಿಗೆ ವಿರೋಧವಾಗಿ ಪಾಪಮಾಡುವಂತೆ ನಿಮಗೆ ಉಪದೇಶಿಸಲು ಸಾಧ್ಯವಾಗುವುದಿಲ್ಲ; ಅವರು ತಮ್ಮ ದೇವರುಗಳನ್ನು ಪೂಜಿಸುವಾಗ ಮಾಡುವ ಭಯಂಕರ ಕೃತ್ಯಗಳನ್ನು ಮಾಡುವಂತೆ ನಿಮಗೆ ಉಪದೇಶಿಸಲು ಸಾಧ್ಯವಾಗುವುದಿಲ್ಲ.


ಹಣ್ಣುಗಳನ್ನು ಕೊಡದ ಮರಗಳನ್ನು ಕಡಿಯಬಹುದು. ಆ ಮರಗಳಿಂದ ಆಯುಧಗಳನ್ನು ತಯಾರಿಸಿ ಆ ಪಟ್ಟಣದ ಜನರೊಂದಿಗೆ ಯುದ್ಧ ಮಾಡಬಹುದು. ಆ ಪಟ್ಟಣವು ನಿಮ್ಮ ಕೈವಶವಾಗುವ ತನಕ ನೀವು ಅದನ್ನು ಉಪಯೋಗಿಸಬಹುದು.


ಸರ್ವಶಕ್ತನಾದ ಯೆಹೋವನು ಹೀಗೆ ಹೇಳಿದನು: “ಜೆರುಸಲೇಮಿನ ಸುತ್ತಮುತ್ತಲಿನ ಮರಗಳನ್ನು ಕಡಿದುಹಾಕಿರಿ; ಜೆರುಸಲೇಮಿನ ಎದುರಿಗೆ ಒಂದು ದಿಬ್ಬ ನಿರ್ಮಿಸಿರಿ. ನಗರವನ್ನು ದಂಡಿಸಬೇಕು. ನಗರದ ಒಳಗಡೆ ದಬ್ಬಾಳಿಕೆಯ ಹೊರತು ಮತ್ತೇನಿಲ್ಲ.


ಪ್ರತಿಯೊಂದು ಬಲಾಢ್ಯವಾದ ನಗರವನ್ನು ಮತ್ತು ಉತ್ತಮ ನಗರವನ್ನು ನೀವು ಮುತ್ತಿಗೆ ಹಾಕುವಿರಿ. ಪ್ರತಿಯೊಂದು ಒಳ್ಳೆಯ ಮರವನ್ನೂ ನೀವು ಕಡಿದು ಉರುಳಿಸುತ್ತೀರಿ. ಎಲ್ಲಾ ನೀರಿನ ಬುಗ್ಗೆಗಳನ್ನೂ ನೀವು ನಿಲ್ಲಿಸುವಿರಿ. ನೀವು ಕಲ್ಲುಗಳನ್ನೆಸೆದು ಪ್ರತಿಯೊಂದು ಒಳ್ಳೆಯ ತೋಟವನ್ನು ನಾಶಗೊಳಿಸುತ್ತೀರಿ.”


ಇಸ್ರೇಲರು ನಗರಗಳನ್ನು ಕೆಡವಿಹಾಕಿದರು. ಅವರು ಮೋವಾಬಿನ ಪ್ರತಿಯೊಂದು ಉತ್ತಮ ತೋಟದ ಕಡೆಗೆ ಕಲ್ಲುಗಳನ್ನೆಸೆದರು. ಅವರು ನೀರಿನ ಬುಗ್ಗೆಗಳನ್ನೆಲ್ಲ ನಿಲ್ಲಿಸಿದರು. ಅವರು ಉತ್ತಮವಾದ ಮರಗಳನ್ನು ಕಡಿದು ಉರುಳಿಸಿದರು. ಇಸ್ರೇಲರು ಕೀರ್ಹರೆಷೆತ್‌ನ ಮಾರ್ಗದುದ್ದಕ್ಕೂ ಹೋರಾಟ ಮಾಡಿದರು. ಸೈನಿಕರು ಕೀರ್ಹರೆಷೆತನ್ನು ಸುತ್ತುವರಿದು ಅದಕ್ಕೂ ಮುತ್ತಿಗೆ ಹಾಕಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು