Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 20:6 - ಪರಿಶುದ್ದ ಬೈಬಲ್‌

6 ನಿಮ್ಮಲ್ಲಿ ಯಾವನಾದರೂ ದ್ರಾಕ್ಷಿತೋಟವನ್ನು ಮಾಡಿ ಅದರ ಫಲವನ್ನು ಕೂಡಿಸಿಲ್ಲದಿದ್ದರೆ ಅವನು ತನ್ನ ಮನೆಗೆ ಹೋಗಲಿ. ಅವನು ರಣರಂಗದಲ್ಲಿ ಮಡಿದರೆ ಅವನ ದ್ರಾಕ್ಷಿತೋಟದ ಫಲಗಳು ಬೇರೊಬ್ಬನ ಪಾಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಯಾವನಾದರೂ ದ್ರಾಕ್ಷಿತೋಟವನ್ನು ಮಾಡಿ ಅದರ ಹಣ್ಣುಗಳನ್ನು ಇನ್ನೂ ಅನುಭೋಗಿಸದಿದ್ದರೆ ಅವನು ಮನೆಗೆ ಹೋಗಲಿ; ಅವನು ಕಾಳಗದಲ್ಲಿ ಸತ್ತರೆ ಮತ್ತೊಬ್ಬನು ಆ ತೋಟದ ಹಣ್ಣುಗಳನ್ನು ಅನುಭೋಗಿಸಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಯಾವನಾದರು ದ್ರಾಕ್ಷೀತೋಟವನ್ನು ಮಾಡಿ ಅದರ ಹಣ್ಣುಗಳನ್ನು ಇನ್ನೂ ಅನುಭೋಗಿಸದಿದ್ದರೆ, ಅವನು ಮನೆಗೆ ಹೋಗಲಿ; ಅವನು ಕಾಳಗದಲ್ಲಿ ಸತ್ತರೆ ಮತ್ತೊಬ್ಬನು ಆ ತೋಟದ ಹಣ್ಣುಗಳನ್ನು ಅನುಭೋಗಿಸಾನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಯಾವನಾದರೂ ದ್ರಾಕ್ಷೇತೋಟವನ್ನು ಮಾಡಿ ಅದರ ಹಣ್ಣುಗಳನ್ನು ಇನ್ನೂ ಅನುಭೋಗಿಸದಿದ್ದರೆ ಅವನು ಮನೆಗೆ ಹೋಗಲಿ; ಅವನು ಕಾಳಗದಲ್ಲಿ ಸತ್ತರೆ ಮತ್ತೊಬ್ಬನು ಆ ತೋಟದ ಹಣ್ಣುಗಳನ್ನು ಅನುಭೋಗಿಸಾನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ದ್ರಾಕ್ಷಿತೋಟವನ್ನು ನೆಟ್ಟು ಅದರ ಫಲವನ್ನು ತಿನ್ನದೇ ಇರುವ ಮನುಷ್ಯನು, ತನ್ನ ಮನೆಗೆ ಹೋಗಲಿ. ಅವನು ಯುದ್ಧದಲ್ಲಿ ಸತ್ತರೆ ಬೇರೊಬ್ಬನು ಆ ಫಲ ತಿಂದಾನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 20:6
8 ತಿಳಿವುಗಳ ಹೋಲಿಕೆ  

ಆಗ ಇತರ ಜನರು ಬಂದು ಅವರ ಐಶ್ವರ್ಯವನ್ನು ಸುಲುಕೊಂಡು ಅವರ ಮನೆಯನ್ನು ನಾಶಮಾಡುವರು. ಆ ಸಮಯಗಳಲ್ಲಿ ಮನೆಕಟ್ಟಿದ ಜನರು ಅದರಲ್ಲಿ ವಾಸಮಾಡುವುದಿಲ್ಲ. ದ್ರಾಕ್ಷಿತೋಟವನ್ನು ನೆಟ್ಟವರು, ಅದರ ಹಣ್ಣಿನ ರಸವನ್ನು ಕುಡಿಯುವುದಿಲ್ಲ. ಬೇರೆಯವರು ಅದನ್ನು ಪಡೆದುಕೊಳ್ಳುವರು.”


ಇಸ್ರೇಲಿನ ರೈತರಾದ ನೀವು ಮತ್ತೆ ದ್ರಾಕ್ಷಿತೋಟಗಳನ್ನು ಬೆಳೆಸುವಿರಿ. ನೀವು ಸಮಾರ್ಯ ನಗರದ ಸುತ್ತಮುತ್ತಲಿನ ಬೆಟ್ಟಗಳಲ್ಲಿ ಆ ದ್ರಾಕ್ಷಿತೋಟವನ್ನು ಬೆಳೆಸುವಿರಿ. ರೈತರಾದ ನೀವು ಅದರ ಫಲವನ್ನು ಅನುಭವಿಸುವಿರಿ.


ಇನ್ನು ಮುಂದೆ ಯಾರಾದರೂ ಮನೆಯನ್ನು ಕಟ್ಟಿದರೆ, ಬೇರೆಯವರು ಅದನ್ನು ವಶಮಾಡಿಕೊಂಡು ಅದರಲ್ಲಿ ವಾಸಿಸುವದಿಲ್ಲ. ಇನ್ನು ಮುಂದೆ ಯಾರಾದರೂ ದ್ರಾಕ್ಷಿತೋಟವನ್ನು ಮಾಡಿದರೆ ಅದರ ಫಲವನ್ನು ಇತರರು ತಿನ್ನುವದಿಲ್ಲ. ಮರಗಳು ಎಷ್ಟು ಕಾಲ ಬೆಳೆಯುತ್ತವೋ ಅಷ್ಟುಕಾಲ ನನ್ನ ಜನರು ಜೀವಿಸುವರು. ನಾನು ಆರಿಸಿಕೊಂಡ ಜನರು ತಾವು ಮಾಡಿದ ಕಾರ್ಯಗಳಲ್ಲಿ ಆನಂದಿಸುವರು.


ಸೈನ್ಯದಲ್ಲಿ ಸೇವೆಮಾಡುವ ಯಾವ ಸೈನಿಕನಾದರೂ ತನಗೆ ತಾನೇ ಸಂಬಳವನ್ನು ಕೊಡುವುದಿಲ್ಲ. ಯಾವ ದ್ರಾಕ್ಷಿತೋಟಗಾರನಾಗಲಿ ತಾನು ಬೆಳೆದ ಹಣ್ಣಿನಲ್ಲಿ ಸ್ವಲ್ಪವನ್ನು ತಿನ್ನದೆ ಇರುವುದಿಲ್ಲ. ಹಸುಗಳನ್ನು ಸಾಕಿದ ಯಾವನೇ ಆಗಲಿ ಅವುಗಳ ಹಾಲಿನಲ್ಲಿ ಸ್ವಲ್ಪವನ್ನು ಕುಡಿಯದೆ ಇರುವುದಿಲ್ಲ.


“ಆ ಲೇವಿಯ ಅಧಿಕಾರಿಗಳು ಸೈನಿಕರಿಗೆ, ‘ನಿಮ್ಮಲ್ಲಿ ಯಾರಾದರೂ ಹೊಸಮನೆಯನ್ನು ಕಟ್ಟಿ ಗೃಹಪ್ರವೇಶ ಮಾಡಿರದಿದ್ದರೆ ಅವನು ತನ್ನ ಮನೆಗೆ ಹೋಗಲಿ. ಒಂದುವೇಳೆ ಅವನು ರಣರಂಗದಲ್ಲಿ ಸತ್ತರೆ ಇನ್ನೊಬ್ಬನು ಅವನ ಮನೆಗೆ ಸೇರಿಕೊಳ್ಳಬಹುದು.


ನಿಮ್ಮಲ್ಲಿ ಯಾರಾದರೂ ಮದುವೆಯಾಗಲು ಹೆಣ್ಣನ್ನು ನಿಶ್ಚಯಿಸಿದ್ದರೆ ಅವನು ತನ್ನ ಮನೆಗೆ ಹಿಂತಿರುಗಿಹೋಗಲಿ; ಯಾಕೆಂದರೆ ಅವನು ರಣರಂಗದಲ್ಲಿ ಮಡಿದರೆ ಅವನಿಗೆ ನಿಶ್ಚಯವಾದ ಹೆಣ್ಣನ್ನು ಇನ್ನೊಬ್ಬನು ಮದುವೆ ಮಾಡಿಕೊಳ್ಳಬಹುದು’ ಎಂದು ಹೇಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು