Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 21:21 - ಪರಿಶುದ್ದ ಬೈಬಲ್‌

21 ಆಗ ಆ ಪಟ್ಟಣದ ಜನರು ಸೇರಿ ಆ ಮಗನನ್ನು ಕಲ್ಲೆಸೆದು ಕೊಲ್ಲಬೇಕು. ಹೀಗೆ ನಿಮ್ಮಲ್ಲಿರುವ ದುಷ್ಟತನವನ್ನು ತೆಗೆದುಹಾಕಬೇಕು. ಎಲ್ಲಾ ಇಸ್ರೇಲರು ಇದನ್ನು ಕೇಳಿ ಭಯಗ್ರಸ್ತರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಆಗ ಊರಿನವರೆಲ್ಲರೂ ಅವನನ್ನು ಕಲ್ಲೆಸೆದು ಕೊಲ್ಲಬೇಕು. ಹೀಗೆ ನೀವು ಆ ದುಷ್ಟತ್ವವನ್ನು ನಿಮ್ಮ ಮಧ್ಯದೊಳಗಿಂದ ತೆಗೆದುಹಾಕಿಬಿಡಬೇಕು. ಇಸ್ರಾಯೇಲರೆಲ್ಲರೂ ಇದನ್ನು ಕೇಳಿ ಭಯಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಅಗ ಊರಿನವರೆಲ್ಲರು ಅವನನ್ನು ಕಲ್ಲೆಸೆದು ಕೊಲ್ಲಬೇಕು. ಹೀಗೆ ನೀವು ಆ ದುಷ್ಟತ್ವವನ್ನು ನಿಮ್ಮ ಮಧ್ಯೆಯಿಂದ ತೆಗೆದು ಹಾಕಿಬಿಡಬೇಕು. ಇಸ್ರಯೇಲರೆಲ್ಲರು ಕೇಳಿ ಭಯಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಹೀಗೆ ನೀವು ಆ ದುಷ್ಟತ್ವವನ್ನು ನಿಮ್ಮ ಮಧ್ಯದೊಳಗಿಂದ ತೆಗೆದುಹಾಕಿಬಿಡಬೇಕು. ಇಸ್ರಾಯೇಲ್ಯರೆಲ್ಲರೂ ಕೇಳಿ ಭಯಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಆಗ ಅವನ ಪಟ್ಟಣದ ಜನರೆಲ್ಲರೂ ಅವನು ಸಾಯುವಂತೆ ಅವನ ಮೇಲೆ ಕಲ್ಲೆಸೆಯಬೇಕು. ಹೀಗೆ ಕೆಟ್ಟದ್ದನ್ನು ನಿಮ್ಮ ಮಧ್ಯದಲ್ಲಿಂದ ತೆಗೆದುಹಾಕಬೇಕು. ಇಸ್ರಾಯೇಲರಲ್ಲಿ ಇದನ್ನು ಕೇಳಿ ಭಯಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 21:21
21 ತಿಳಿವುಗಳ ಹೋಲಿಕೆ  

ಅಂಥ ಪ್ರವಾದಿ ಅಥವಾ ಕನಸಿನ ಅರ್ಥ ಹೇಳುವವನನ್ನು ಕೊಂದು ಹಾಕಬೇಕು. ಯಾಕೆಂದರೆ ಅವನು ಯೆಹೋವನನ್ನು ತೊರೆಯಲು ಪ್ರೇರೇಪಿಸಿದನಲ್ಲಾ? ದೇವರಾದ ಯೆಹೋವನೇ ನಿಮ್ಮನ್ನು ಈಜಿಪ್ಟಿನಿಂದ ಬಿಡಿಸಿದವನು. ಆತನು ನಿಮಗೆ ಹೇಳಿದ ನಿಯಮಗಳಿಗೆ ವಿರುದ್ಧವಾಗಿ ನಡೆಯಲು ಪ್ರೇರೇಪಿಸುವವನನ್ನು ಕೊಲ್ಲಬೇಕು; ನಿಮ್ಮ ಮಧ್ಯದಿಂದ ಅಂಥ ದುಷ್ಟತನವನ್ನು ತೆಗೆದುಹಾಕಬೇಕು.


ಯಾವನಾದರೂ ಯೆಹೋವನ ನಾಮದ ವಿರುದ್ಧ ಮಾತಾಡಿದರೆ, ಅವನಿಗೆ ಮರಣಶಿಕ್ಷೆಯಾಗಬೇಕು. ಜನರೆಲ್ಲರೂ ಅವನಿಗೆ ಕಲ್ಲೆಸೆದು ಕೊಲ್ಲಬೇಕು. ಯೆಹೋವನ ನಾಮವನ್ನು ನಿಂದಿಸುವ ಪರದೇಶಸ್ಥರಿಗೂ ಅದೇ ರೀತಿಯ ಶಿಕ್ಷೆಯಾಗಬೇಕು. ಯೆಹೋವನ ನಾಮವನ್ನು ನಿಂದಿಸುವವನಿಗೆ ಮರಣಶಿಕ್ಷೆಯಾಗಬೇಕು.


ನಗರದ ಬಾಗಿಲಿನ ಬಳಿಯಿರುವ ಸಾರ್ವಜನಿಕ ಸ್ಥಳಕ್ಕೆ ನೀವು ಅವರಿಬ್ಬರನ್ನು ಕರೆದುಕೊಂಡು ಬಂದು ಅವರಿಬ್ಬರನ್ನೂ ಕಲ್ಲೆಸೆದು ಕೊಲ್ಲಬೇಕು. ನೀವು ಆ ಪುರುಷನನ್ನು ಕೊಲ್ಲಬೇಕು. ಏಕೆಂದರೆ ಅವನು ಮತ್ತೊಬ್ಬನ ಹೆಂಡತಿಯನ್ನು ಲೈಂಗಿಕವಾಗಿ ಹಿಂಸಿಸಿದನು. ನೀವು ಆ ಸ್ತ್ರೀಯನ್ನು ಕೊಲ್ಲಬೇಕು; ಯಾಕೆಂದರೆ ಆಕೆಯು ನಗರದಲ್ಲಿದ್ದರೂ ಸಹಾಯಕ್ಕಾಗಿ ಕೂಗಿಕೊಳ್ಳಲಿಲ್ಲ. ಆ ಕೆಡುಕನ್ನು ನೀವು ನಿಮ್ಮ ಜನರಿಂದ ತೆಗೆದುಹಾಕಬೇಕು.


ಊರಹಿರಿಯರು ಆ ಹುಡುಗಿಯನ್ನು ಆಕೆಯ ತಂದೆಯ ಮನೆಬಾಗಿಲಿಗೆ ತರಬೇಕು. ಅಲ್ಲಿ ಊರಜನರು ಆಕೆಯನ್ನು ಕಲ್ಲೆಸೆದು ಸಾಯಿಸಬೇಕು. ಯಾಕೆಂದರೆ ಆಕೆಯು ಇಸ್ರೇಲಿನಲ್ಲಿ ನಾಚಿಕೆಕರವಾದ ಕೃತ್ಯವನ್ನು ನಡೆಸಿದ್ದಾಳೆ; ತನ್ನ ತಂದೆಯ ಮನೆಯಲ್ಲಿದ್ದುಕೊಂಡು ವೇಶ್ಯಾವೃತ್ತಿ ನಡಿಸಿದ್ದಾಳೆ. ಅಂಥಾ ಪಾಪವನ್ನು ನೀವು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.


ಆ ಪಾಪಮಾಡಿದವನಿಗೆ ಶಿಕ್ಷೆಯನ್ನು ವಿಧಿಸಬೇಕು. ಪಟ್ಟಣದ ಹೆಬ್ಬಾಗಿಲ ಹೊರಗಿರುವ ಬಯಲಿಗೆ ಆ ತಪ್ಪು ಮಾಡಿದ ಸ್ತ್ರೀಯನ್ನೂ, ಪುರುಷನನ್ನೂ ತೆಗೆದುಕೊಂಡು ಹೋಗಿ ಅಲ್ಲಿ ಅವರನ್ನು ಕಲ್ಲೆಸೆದು ಸಾಯಿಸಬೇಕು.


“ನೀನು ಇಸ್ರೇಲರಿಗೆ ಹೀಗೆ ಆಜ್ಞಾಪಿಸಬೇಕು. ನಿಮ್ಮ ದೇಶದಲ್ಲಿರುವ ಒಬ್ಬನು ತನ್ನ ಮಕ್ಕಳಲ್ಲಿ ಒಬ್ಬನನ್ನು ಸುಳ್ಳು ದೇವರಾದ ಮೊಲೆಕನಿಗೆ ಅರ್ಪಿಸಿದರೆ ಅವನನ್ನು ಕೊಲ್ಲಬೇಕು. ಅವನು ಸ್ವದೇಶಸ್ಥನಾದರೂ ಇಸ್ರೇಲರಲ್ಲಿ ವಾಸಿಸುವ ಪರದೇಶಸ್ಥನಾದರೂ ಅವನನ್ನು ಕಲ್ಲೆಸೆದು ಕೊಲ್ಲಬೇಕು.


“ಸತ್ತವರಲ್ಲಿ ವಿಚಾರಿಸುವವರು ಅಥವಾ ಬೇತಾಳಿಕರು, ಪುರುಷರಾಗಲಿ ಸ್ತ್ರೀಯರಾಗಲಿ ಆಗಿದ್ದರೂ, ಅವರಿಗೆ ಮರಣಶಿಕ್ಷೆಯಾಗಬೇಕು. ಜನರು ಅವರನ್ನು ಕಲ್ಲೆಸೆದು ಕೊಲ್ಲಬೇಕು. ಅವರ ಮರಣಕ್ಕೆ ಅವರೇ ಜವಾಬ್ದಾರರಾಗಿದ್ದಾರೆ.”


“ದೂಷಣೆ ಮಾಡಿದ ಮನುಷ್ಯನನ್ನು ಪಾಳೆಯದ ಹೊರಗಿರುವ ಸ್ಥಳಕ್ಕೆ ತನ್ನಿರಿ. ಬಳಿಕ ಅವನ ದೂಷಣೆ ಮಾತುಗಳನ್ನು ಕೇಳಿದ ಎಲ್ಲಾ ಜನರನ್ನು ಒಟ್ಟಾಗಿ ಕರೆಸಿರಿ. ಆ ಜನರು ತಮ್ಮ ಕೈಗಳನ್ನು ಅವನ ತಲೆಯ ಮೇಲೆ ಇಡುವರು. ಆ ಬಳಿಕ ಎಲ್ಲಾ ಜನರು ಅವನಿಗೆ ಕಲ್ಲೆಸೆದು ಕೊಲ್ಲಬೇಕು.


“ಈ ರೀತಿಯಲ್ಲಿ ಇಸ್ರೇಲರ ಇಡೀ ಸಮುದಾಯದವರ ಕ್ಷಮೆಗಾಗಿ ಯಾಜಕನು ಪ್ರಾಯಶ್ಚಿತ್ತ ಮಾಡುವನು. ಯಾಕೆಂದರೆ ಅದು ತಿಳಿಯದೆ ಮಾಡಿದ ತಪ್ಪಾಗಿತ್ತು ಮತ್ತು ಆ ತಪ್ಪಿಗಾಗಿ ಅವರು ತಮ್ಮ ಅರ್ಪಣೆಯನ್ನು ಯೆಹೋವನಿಗೆ ಕಾಣಿಕೆಯಾಗಿ ತಂದರು ಮತ್ತು ಯೆಹೋವನ ಎದುರಿನಲ್ಲಿ ಪಾಪಪರಿಹಾರಕ ಯಜ್ಞವನ್ನು ಅರ್ಪಿಸಿದರು.


ಆಗ ಯೆಹೋವನು ಮೋಶೆಗೆ, “ಆ ಮನುಷ್ಯನು ಸಾಯಬೇಕು. ಅವನನ್ನು ಪಾಳೆಯದ ಹೊರಗೆ ತೆಗೆದುಕೊಂಡು ಹೋಗಿ ಎಲ್ಲಾ ಜನರು ಕಲ್ಲೆಸೆದು ಕೊಲ್ಲಬೇಕು” ಎಂದು ಹೇಳಿದನು.


ಆಗ ಜನರು ಅವನನ್ನು ಪಾಳೆಯದ ಹೊರಗೆ ಕರೆದುಕೊಂಡು ಹೋಗಿ ಕಲ್ಲೆಸೆದು ಕೊಂದರು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ ಅವರು ಇದನ್ನು ಮಾಡಿದರು.


ಪಟ್ಟಣದ ಹಿರಿಯರಿಗೆ ಹೀಗೆ ಹೇಳಬೇಕು: ‘ನಮ್ಮ ಮಗನು ಹಠಮಾರಿಯೂ ಅವಿಧೇಯನೂ ಆಗಿರುತ್ತಾನೆ. ನಾವು ಹೇಳಿದ ಮಾತುಗಳೊಂದನ್ನೂ ಅವನು ಕೇಳುವುದಿಲ್ಲ. ಅವನು ಬಹಳವಾಗಿ ತಿಂದು ಕುಡಿಯುತ್ತಾನೆ.’


ನಂತರ ಯೋವಾಬನ ಜನರು ಅಬ್ಷಾಲೋಮನ ದೇಹವನ್ನು ತೆಗೆದುಕೊಂಡು ಹೋಗಿ, ಕಾಡಿನ ಒಂದು ದೊಡ್ಡ ಕುಣಿಯಲ್ಲಿ ಎಸೆದರು. ಅವರು ಆ ದೊಡ್ಡ ಕುಣಿಯನ್ನು ಕಲ್ಲುಗಳಿಂದ ತುಂಬಿಸಿದರು. ಅಬ್ಷಾಲೋಮನನ್ನು ಹಿಂಬಾಲಿಸಿಕೊಂಡು ಬಂದಿದ್ದ ಇಸ್ರೇಲರೆಲ್ಲ ಮನೆಗೆ ಓಡಿಹೋದರು.


“ತಂದೆಯನ್ನಾಗಲಿ ತಾಯಿಯನ್ನಾಗಲಿ ಶಪಿಸುವವನನ್ನೂ ಕೊಲ್ಲಬೇಕು.


“ನಿಮ್ಮ ಹತ್ತಿರದ ಸಂಬಂಧಿಕರಲ್ಲಿ ಯಾರಾದರೂ ಇತರ ದೇವರುಗಳನ್ನು ಅನುಸರಿಸಲು ನಿಮ್ಮನ್ನು ಗುಪ್ತವಾಗಿ ಒತ್ತಾಯ ಮಾಡಬಹುದು. ಅವರು ನಿಮ್ಮ ಸ್ವಂತ ಸಹೋದರನಾಗಿರಬಹುದು, ನಿಮ್ಮ ಮಕ್ಕಳಾಗಿರಬಹುದು, ನಿಮ್ಮ ಹೆಂಡತಿಯಾಗಿರಬಹುದು, ಅಥವಾ ಆಪ್ತಗೆಳೆಯನಾಗಿರಬಹುದು. ಅವರು ಬಂದು, ‘ಬಾ, ನಾವು ಬೇರೆ ದೇವರನ್ನು ಹಿಂಬಾಲಿಸೋಣ’ (ಈ ದೇವರನ್ನು ನೀವಾಗಲಿ ನಿಮ್ಮ ಪೂರ್ವಿಕರಾಗಲಿ ತಿಳಿದಿರಲಿಲ್ಲ.


“ನಿಮ್ಮ ದೇವರಾದ ಯೆಹೋವನು ನಿಮ್ಮ ವಾಸಕ್ಕಾಗಿ ನಿಮಗೆ ಪಟ್ಟಣಗಳನ್ನು ಕೊಟ್ಟಿದ್ದಾನೆ. ಒಂದುವೇಳೆ, ಆ ಪಟ್ಟಣಗಳಲ್ಲಿ ಯಾವುದಾದರೊಂದರ ಬಗ್ಗೆ ನೀವು ಕೆಟ್ಟ ಸುದ್ದಿಯನ್ನು ಕೇಳಬಹುದು.


ಸತ್ಯವೆಂದು ಹೇಳಿದ ಸಾಕ್ಷಿಗಳು ಮೊದಲು ಅವರ ಮೇಲೆ ಕಲ್ಲೆಸೆಯಬೇಕು. ಅನಂತರ ಬೇರೆಯವರು ಕಲ್ಲೆಸೆದು ಅವರನ್ನು ಸಾಯಿಸಬೇಕು. ಈ ರೀತಿಯಾಗಿ ನಿಮ್ಮ ಮಧ್ಯೆ ಇದ್ದ ದುಷ್ಕೃತ್ಯವನ್ನು ತೆಗೆದುಹಾಕಬೇಕು.


ತನ್ನ ತಂದೆಯನ್ನು ಗೇಲಿಮಾಡುವವನಾಗಲಿ ವೃದ್ಧ ತಾಯಿಯನ್ನು ಕಡೆಗಣಿಸುವವನಾಗಲಿ ದಂಡನೆ ಹೊಂದುವನು. ಕಾಗೆಗಳೂ ಕ್ರೂರಪಕ್ಷಿಗಳೂ ಅವನ ಕಣ್ಣುಗಳನ್ನು ತಿನ್ನುವಂತಿರುವುದು ಆ ದಂಡನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು