Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 21:6 - ಪರಿಶುದ್ದ ಬೈಬಲ್‌

6 ಕೊಲೆಯಾದವನ ದೇಹದ ಸಮೀಪವಿರುವ ಪಟ್ಟಣದ ಹಿರಿಯರು ಕುತ್ತಿಗೆ ಮುರಿಯಲ್ಪಟ್ಟ ಹಸುವಿನ ಮೇಲೆ ತಮ್ಮತಮ್ಮ ಕೈಗಳನ್ನು ತೊಳೆಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಹತನಾದ ಮನುಷ್ಯನಿಗೆ ಹತ್ತಿರವಿರುವ ಗ್ರಾಮದ ಹಿರಿಯರು, ತಗ್ಗಿನಲ್ಲಿ ಕುತ್ತಿಗೆ ಮುರಿಯಲ್ಪಟ್ಟ ಆ ಮಣಕದ ಮೇಲೆ ತಮ್ಮ ಕೈಗಳನ್ನು ತೊಳೆದುಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಹತನಾದವನ ಶವಕ್ಕೆ ಹತ್ತಿರವಿರುವ ಗ್ರಾಮದ ಹಿರಿಯರು, ಆ ತಗ್ಗಿನಲ್ಲಿ ಕುತ್ತಿಗೆ ಮುರಿದ ಆ ಕಡಸಿನ ಮೇಲೆ ಕೈಗಳನ್ನು ತೊಳೆದುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಹತನಾದವನ ಶವಕ್ಕೆ ಹತ್ತಿರವಿರುವ ಗ್ರಾಮದ ಹಿರಿಯರು ತಗ್ಗಿನಲ್ಲಿ ಕುತ್ತಿಗೆ ಮುರಿಯಲ್ಪಟ್ಟ ಆ ಮಣಕದ ಮೇಲೆ ಕೈಗಳನ್ನು ತೊಳೆದುಕೊಂಡು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆಮೇಲೆ ಹತನಾದವನ ಶವಕ್ಕೆ ಸಮೀಪವಾಗಿರುವ ಆ ಊರಿನ ಹಿರಿಯರೆಲ್ಲರೂ ತಗ್ಗಿನಲ್ಲಿ ವಧಿಸಿದ ಕಡಸಿನ ಮೇಲೆ ಕೈಗಳನ್ನು ತೊಳೆದುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 21:6
12 ತಿಳಿವುಗಳ ಹೋಲಿಕೆ  

ಹೀಗಿರಲು, ನನ್ನ ಹೃದಯವನ್ನು ನಾನೇಕೆ ನಿರ್ಮಲಗೊಳಿಸಿಕೊಳ್ಳಲಿ? ನನ್ನ ಕೈಗಳನ್ನು ನಾನೇಕೆ ಸ್ವಚ್ಛಗೊಳಿಸಿಕೊಳ್ಳಲಿ?


ಯೆಹೋವನೇ, ನಾನು ನಿನ್ನ ಯಜ್ಞವೇದಿಕೆಯ ಸುತ್ತಲೂ ನಡೆಯಲು ನನ್ನ ಕೈಗಳನ್ನು ತೊಳೆದುಕೊಳ್ಳುತ್ತೇನೆ.


ಆ ಯಜ್ಞಗಳು ಮತ್ತು ಕಾಣಿಕೆಗಳು ಅನ್ನಪಾನಾದಿಗಳನ್ನೂ ವಿಶೇಷವಾದ ಸ್ನಾನಗಳನ್ನೂ ಕುರಿತಾಗಿದ್ದವು. ಅವು ದೇಹಕ್ಕೆ ಸಂಬಂಧಿಸಿದ ನಿಯಮಗಳೇ ಹೊರತು ಜನರ ಹೃದಯಕ್ಕೆ ಸಂಬಂಧಿಸಿದ್ದವುಗಳಲ್ಲ. ಜನರಿಗೆ ದೇವರ ಹೊಸ ಮಾರ್ಗವು ಲಭಿಸುವ ಕಾಲದವರೆಗೆ, ಅವರು ಅನುಸರಿಸಲೆಂದು ಆ ನಿಯಮಗಳನ್ನು ದೇವರೇ ಕೊಟ್ಟನು.


ನೀನು ಚೌಳನಿಂದ ತೊಳೆದುಕೊಂಡರೂ ಹೆಚ್ಚು ಸೋಪನ್ನು ಉಪಯೋಗಿಸಿದರೂ ನಾನು ನಿನ್ನ ದೋಷವನ್ನು ಕಂಡುಹಿಡಿಯಬಲ್ಲೆ” ಅನ್ನುತ್ತಾನೆ ಯೆಹೋವನು.


ದೇವರೇ, ನನ್ನನ್ನು ಮರಣದಂಡನೆಯಿಂದ ತಪ್ಪಿಸು. ನನ್ನ ದೇವರೇ, ನನ್ನನ್ನು ರಕ್ಷಿಸುವಾತನು ನೀನೇ. ನಿನ್ನ ಒಳ್ಳೆಯತನವನ್ನು ಕುರಿತು ನಾನು ಹಾಡುವೆನು!


ಹಿಸ್ಸೋಪ್ ಗಿಡದ ಬರಲಿನಿಂದ ನನ್ನನ್ನು ತೊಳೆದು ಶುದ್ಧೀಕರಿಸು; ನಾನು ಹಿಮಕ್ಕಿಂತಲೂ ಬಿಳುಪಾಗುವ ತನಕ ನನ್ನನ್ನು ತೊಳೆ!


ನನ್ನ ದೋಷವನ್ನು ತೊಳೆದುಬಿಡು. ನನ್ನ ಪಾಪವನ್ನು ಪರಿಹರಿಸಿ ನನ್ನನ್ನು ಮತ್ತೆ ಶುದ್ಧೀಕರಿಸು!


ಯೆಹೋವನೇ, ಯಾವನೂ ತನ್ನ ತಪ್ಪುಗಳನ್ನೆಲ್ಲಾ ತಿಳಿದುಕೊಳ್ಳುವುದಿಲ್ಲ. ಆದ್ದರಿಂದ ಗುಪ್ತ ಪಾಪಗಳನ್ನು ಮಾಡಲು ನನ್ನನ್ನು ಬಿಟ್ಟುಬಿಡಬೇಡ.


ನಾನು ಹಿಮದಿಂದ ಸ್ನಾನಮಾಡಿದರೂ ಸಾಬೂನಿನಿಂದ ಕೈತೊಳೆದುಕೊಂಡರೂ


ಆ ಹಿರಿಯರು ಹೀಗೆನ್ನಬೇಕು: ‘ನಾವು ಈ ವ್ಯಕ್ತಿಯನ್ನು ಹತ್ಯೆ ಮಾಡಲಿಲ್ಲ ಮತ್ತು ಅವನು ಕೊಲೆ ಮಾಡಲ್ಪಟ್ಟದ್ದನ್ನು ನಾವು ನೋಡಿಲ್ಲ.


ಯೋವಾಬನು ಮತ್ತು ಅವನ ವಂಶದವರು ಇದಕ್ಕೆ ಜವಾಬ್ದಾರರು. ಅವನ ವಂಶದವರನ್ನು ಇದಕ್ಕಾಗಿ ದೂಷಿಸಬೇಕು. ಯೋವಾಬನ ವಂಶಕ್ಕೆ ಅನೇಕ ಕಷ್ಟಗಳು ಬರಲಿ. ಅವನ ವಂಶದವರಲ್ಲಿ ಕುಷ್ಠರೋಗಿಗಳು, ಊರುಗೋಲು ಬಳಸುವವರು. ಕತ್ತಿಯಿಂದ ಸಾಯುವವರು, ಭಿಕ್ಷೆ ಬೇಡುವವರು ಇದ್ದೇ ಇರಲಿ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು