ಧರ್ಮೋಪದೇಶಕಾಂಡ 22:21 - ಪರಿಶುದ್ದ ಬೈಬಲ್21 ಊರಹಿರಿಯರು ಆ ಹುಡುಗಿಯನ್ನು ಆಕೆಯ ತಂದೆಯ ಮನೆಬಾಗಿಲಿಗೆ ತರಬೇಕು. ಅಲ್ಲಿ ಊರಜನರು ಆಕೆಯನ್ನು ಕಲ್ಲೆಸೆದು ಸಾಯಿಸಬೇಕು. ಯಾಕೆಂದರೆ ಆಕೆಯು ಇಸ್ರೇಲಿನಲ್ಲಿ ನಾಚಿಕೆಕರವಾದ ಕೃತ್ಯವನ್ನು ನಡೆಸಿದ್ದಾಳೆ; ತನ್ನ ತಂದೆಯ ಮನೆಯಲ್ಲಿದ್ದುಕೊಂಡು ವೇಶ್ಯಾವೃತ್ತಿ ನಡಿಸಿದ್ದಾಳೆ. ಅಂಥಾ ಪಾಪವನ್ನು ನೀವು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಅವಳು ತಂದೆಯ ಅಧೀನದಲ್ಲಿರುವಾಗಲ್ಲೇ ಪರಪುರುಷನೊಡನೆ ಸಂಪರ್ಕಮಾಡಿ ಇಸ್ರಾಯೇಲರೊಳಗೆ ದುರಾಚಾರವನ್ನು ನಡಿಸಿದ್ದರಿಂದ, ಅವರು ಅವಳನ್ನು ತಂದೆಯ ಮನೆಯ ಬಾಗಿಲಿಗೆ ಕರೆಯಿಸಬೇಕು; ಊರಿನವರೆಲ್ಲರು ಅವಳನ್ನು ಕಲ್ಲೆಸೆದು ಕೊಲ್ಲಬೇಕು. ಹೀಗೆ ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ನಿವಾರಿಸಿಕೊಳ್ಳಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಅವಳು ತಂದೆಯ ಮನೆಯಲ್ಲೇ ಸೂಳೆತನಮಾಡಿ ಇಸ್ರಯೇಲರಲ್ಲಿ ದುರಾಚಾರವನ್ನು ನಡೆಸಿದ್ದರಿಂದ ಅವಳನ್ನು ತಂದೆಯ ಮನೆಯ ಬಾಗಿಲಿಗೆ ಬರಮಾಡಬೇಕು; ಊರಿನವರೆಲ್ಲರು ಕಲ್ಲೆಸೆದು ಅವಳನ್ನು ಕೊಲ್ಲಬೇಕು. ಹೀಗೆ ಇಂಥ ಕೇಡನ್ನು ನಿಮ್ಮ ಮಧ್ಯೆಯಿಂದ ತೆಗೆದುಹಾಕಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಅವಳು ತಂದೆಯ ಮನೆಯಲ್ಲೇ ಸೂಳೆತನಮಾಡಿ ಇಸ್ರಾಯೇಲ್ಯರೊಳಗೆ ದುರಾಚಾರವನ್ನು ನಡಿಸಿದ್ದರಿಂದ ಅವರು ಅವಳನ್ನು ತಂದೆಯ ಮನೆಯ ಬಾಗಿಲಿಗೆ ತರಿಸಬೇಕು; ಊರಿನವರೆಲ್ಲರು ಕಲ್ಲೆಸೆದು ಅವಳನ್ನು ಕೊಲ್ಲಬೇಕು. ಹೀಗೆ ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಆ ಹುಡುಗಿಯನ್ನು ಅವಳ ತಂದೆಯ ಮನೆ ಬಾಗಿಲಿಗೆ ತರಬೇಕು. ಅವಳ ಪಟ್ಟಣದ ಮನುಷ್ಯರು ಅವಳನ್ನು ಸಾಯುವ ಹಾಗೆ ಕಲ್ಲೆಸೆಯಬೇಕು. ಏಕೆಂದರೆ ಅವಳು ತಂದೆಯ ಮನೆಯಲ್ಲಿರುವಾಗಲೇ ಅಕ್ರಮವಾಗಿ ನಡೆದು, ಇಸ್ರಾಯೇಲಿನಲ್ಲಿ ಸೂಳೆತನ ಮಾಡಿದ್ದಾಳೆ. ಹೀಗೆ ಕೆಟ್ಟದ್ದನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು. ಅಧ್ಯಾಯವನ್ನು ನೋಡಿ |
ನಾವು ಇಸ್ರೇಲಿನ ಎಲ್ಲ ಕುಲಗಳಲ್ಲಿ ಪ್ರತಿ ನೂರು ಮಂದಿಗೆ ಹತ್ತು ಮಂದಿಯನ್ನು ಆರಿಸಿಕೊಳ್ಳೋಣ. ಪ್ರತಿ ಸಾವಿರ ಮಂದಿಗೆ ನೂರು ಮಂದಿಯನ್ನು ಆರಿಸಿಕೊಳ್ಳೋಣ. ಪ್ರತಿ ಹತ್ತು ಸಾವಿರ ಮಂದಿಗೆ ಒಂದು ಸಾವಿರ ಮಂದಿಯನ್ನು ಆರಿಸಿಕೊಳ್ಳೋಣ. ಹೀಗೆ, ನಾವು ಆರಿಸಿಕೊಂಡ ಜನರು ಸೈನ್ಯಕ್ಕೆ ಆಹಾರ ಸರಬರಾಜು ಮಾಡಲಿ. ಆಮೇಲೆ ಬೆನ್ಯಾಮೀನ್ಯರ ಪ್ರದೇಶದಲ್ಲಿರುವ ಗಿಬೆಯಕ್ಕೆ ಸೈನ್ಯ ಕಳುಹಿಸೋಣ. ಇಸ್ರೇಲರಿಗೆ ಹೀಗೆ ನಿಂದೆಗೆ ಗುರಿಮಾಡಿದ ದುಷ್ಕರ್ಮಿಗಳಿಗೆ ತಕ್ಕ ಶಿಕ್ಷೆ ದೊರಕಲಿ” ಎಂದು ಹೇಳಿದರು.
ನಗರದ ಬಾಗಿಲಿನ ಬಳಿಯಿರುವ ಸಾರ್ವಜನಿಕ ಸ್ಥಳಕ್ಕೆ ನೀವು ಅವರಿಬ್ಬರನ್ನು ಕರೆದುಕೊಂಡು ಬಂದು ಅವರಿಬ್ಬರನ್ನೂ ಕಲ್ಲೆಸೆದು ಕೊಲ್ಲಬೇಕು. ನೀವು ಆ ಪುರುಷನನ್ನು ಕೊಲ್ಲಬೇಕು. ಏಕೆಂದರೆ ಅವನು ಮತ್ತೊಬ್ಬನ ಹೆಂಡತಿಯನ್ನು ಲೈಂಗಿಕವಾಗಿ ಹಿಂಸಿಸಿದನು. ನೀವು ಆ ಸ್ತ್ರೀಯನ್ನು ಕೊಲ್ಲಬೇಕು; ಯಾಕೆಂದರೆ ಆಕೆಯು ನಗರದಲ್ಲಿದ್ದರೂ ಸಹಾಯಕ್ಕಾಗಿ ಕೂಗಿಕೊಳ್ಳಲಿಲ್ಲ. ಆ ಕೆಡುಕನ್ನು ನೀವು ನಿಮ್ಮ ಜನರಿಂದ ತೆಗೆದುಹಾಕಬೇಕು.
“ನಿಮ್ಮ ಹತ್ತಿರದ ಸಂಬಂಧಿಕರಲ್ಲಿ ಯಾರಾದರೂ ಇತರ ದೇವರುಗಳನ್ನು ಅನುಸರಿಸಲು ನಿಮ್ಮನ್ನು ಗುಪ್ತವಾಗಿ ಒತ್ತಾಯ ಮಾಡಬಹುದು. ಅವರು ನಿಮ್ಮ ಸ್ವಂತ ಸಹೋದರನಾಗಿರಬಹುದು, ನಿಮ್ಮ ಮಕ್ಕಳಾಗಿರಬಹುದು, ನಿಮ್ಮ ಹೆಂಡತಿಯಾಗಿರಬಹುದು, ಅಥವಾ ಆಪ್ತಗೆಳೆಯನಾಗಿರಬಹುದು. ಅವರು ಬಂದು, ‘ಬಾ, ನಾವು ಬೇರೆ ದೇವರನ್ನು ಹಿಂಬಾಲಿಸೋಣ’ (ಈ ದೇವರನ್ನು ನೀವಾಗಲಿ ನಿಮ್ಮ ಪೂರ್ವಿಕರಾಗಲಿ ತಿಳಿದಿರಲಿಲ್ಲ.