Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 22:9 - ಪರಿಶುದ್ದ ಬೈಬಲ್‌

9 “ನೀವು ಧಾನ್ಯವನ್ನು ಮತ್ತು ದ್ರಾಕ್ಷಾಲತೆಗಳನ್ನು ಒಂದೇ ಹೊಲದಲ್ಲಿ ಬೆಳೆಸಬಾರದು. ಯಾಕೆಂದರೆ ಅವೆರಡೂ ಚೆನ್ನಾಗಿ ಬೆಳೆಯದೆ ಫಲ ಕೊಡದೆ ಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ದ್ರಾಕ್ಷಿತೋಟಗಳಲ್ಲಿ ಬೇರೆ ವಿಧವಾದ ಬೀಜವನ್ನು ಬಿತ್ತಬಾರದು; ಹಾಗೆ ಮಾಡಿದರೆ ಯಾಜಕರು ಆ ಬೆಳೆಯನ್ನು, ದ್ರಾಕ್ಷಿಯ ಬೆಳೆಯನ್ನು ಅಂತೂ ಆ ತೋಟದ ಎಲ್ಲಾ ಬೆಳೆಯನ್ನು ದೇವರಿಗೆ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 “ದ್ರಾಕ್ಷಿತೋಟಗಳಲ್ಲಿ ಬೇರೆ ವಿಧವಾದ ಬಿತ್ತನೆ ಮಾಡಬಾರದು; ಹಾಗೆ ಮಾಡಿದರೆ ಆ ಬೆಳೆಗೂ ಮತ್ತು ದ್ರಾಕ್ಷಿಬೆಳೆಗೂ ಹೀಗೆ ಆ ತೋಟದ ಬೆಳೆಗೂ ಗತಿಕೇಡಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ದ್ರಾಕ್ಷೇತೋಟಗಳಲ್ಲಿ ಬೇರೆ ವಿಧವಾದ ಬಿತ್ತನೆ ಮಾಡಬಾರದು; ಹಾಗೆ ಮಾಡಿದರೆ ಆ ಬೆಳೆಯೂ ಮತ್ತು ದ್ರಾಕ್ಷೆಯ ಬೆಳೆಯೂ ಅಂತೂ ಆ ತೋಟದ ಎಲ್ಲಾ ಬೆಳೆಯೂ ದೇವರದಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ನಿನ್ನ ದ್ರಾಕ್ಷಿತೋಟದಲ್ಲಿ ಎರಡು ತರವಾದ ಬೀಜ ಬಿತ್ತಬಾರದು; ಬಿತ್ತಿದರೆ ನೀನು ಬಿತ್ತಿದ ಬೀಜವೂ, ಬಿತ್ತಿದ ಬೀಜದ ಪೈರೂ, ದ್ರಾಕ್ಷಿತೋಟದ ಹುಟ್ಟುವಳಿಯೂ ಅಶುದ್ಧವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 22:9
9 ತಿಳಿವುಗಳ ಹೋಲಿಕೆ  

“ನೀವು ನನ್ನ ಕಟ್ಟಳೆಗಳಿಗೆ ವಿಧೇಯರಾಗಿರಬೇಕು. ಎರಡು ಬೇರೆ ಜಾತಿಯ ಪಶುಗಳನ್ನು ಒಟ್ಟಿಗೆ ಸೇರಿಸಿ ಈಯಿಸಬಾರದು. ನಿಮ್ಮ ಹೊಲಗಳಲ್ಲಿ ಎರಡು ವಿಧದ ಬೀಜಗಳನ್ನು ಬಿತ್ತಬಾರದು. ಎರಡು ವಿಧದ ದಾರಗಳನ್ನು ಸೇರಿಸಿ ಮಾಡಿದ ಬಟ್ಟೆಯನ್ನು ಧರಿಸಿಕೊಳ್ಳಬಾರದು.


ಹವ್ವಳು ಸರ್ಪದ ಕುಯುಕ್ತಿಯಿಂದ ಮೋಸಗೊಂಡಂತೆ ನಿಮ್ಮ ಮನಸ್ಸು ಕ್ರಿಸ್ತನ ವಿಷಯದಲ್ಲಿ ಇರಬೇಕಾದ ಯಥಾರ್ಥತೆಯನ್ನೂ ಪರಿಶುದ್ಧತೆಯನ್ನೂ ಬಿಟ್ಟು ಕೆಟ್ಟುಹೋದೀತೆಂಬ ಭಯ ನನಗಿದೆ.


“ಒಬ್ಬನು ಹರಿದುಹೋದ ಹಳೆ ಮೇಲಂಗಿಗೆ ಹೊಸ ಬಟ್ಟೆಯ ತುಂಡನ್ನು ತೇಪೆಹಾಕಿ ಹೊಲಿಯುವುದಿಲ್ಲ. ಒಂದುವೇಳೆ ಹೊಲಿದರೆ, ಆ ತೇಪೆಯು ಹಿಂಜಿಕೊಂಡು ಮೇಲಂಗಿಯಿಂದ ಕಿತ್ತುಬರುವುದು. ಆಗ ಆ ಮೇಲಂಗಿಯು ಮತ್ತಷ್ಟು ಹರಿದುಹೋಗುವುದು.


ಹೊಗಳಿಕೆ ಮತ್ತು ತೆಗಳಿಕೆಗಳೆರಡೂ ಒಂದೇ ಬಾಯಿಂದ ಬರುತ್ತವೆ! ನನ್ನ ಸಹೋದರ ಸಹೋದರಿಯರೇ, ಇದು ಸಂಭವಿಸಲೇಬಾರದು.


ದೇವರ ಕೃಪೆಯ ಮೂಲಕ ಆರಿಸಲ್ಪಟ್ಟಿರುವ ಅವರು ದೇವರ ಮಕ್ಕಳಾದದ್ದು ತಮ್ಮ ಕ್ರಿಯೆಗಳಿಂದಲ್ಲ. ಇಲ್ಲದಿದ್ದರೆ, ದೇವರ ಕೃಪಾವರವು ಕೃಪಾವರವೆನಿಸಿಕೊಳ್ಳುತ್ತಿರಲಿಲ್ಲ.


“ಯಾವನೂ ಇಬ್ಬರು ಯಜಮಾನರಿಗೆ ಒಂದೇ ಸಮಯದಲ್ಲಿ ಸೇವೆ ಮಾಡಲಾರನು. ಅವನು ಒಬ್ಬ ಯಜಮಾನನನ್ನು ದ್ವೇಷಿಸಿ ಮತ್ತೊಬ್ಬನನ್ನು ಪ್ರೀತಿಸುತ್ತಾನೆ ಅಥವಾ ಒಬ್ಬ ಯಜಮಾನನನ್ನು ಹಿಂಬಾಲಿಸಿ ಮತ್ತೊಬ್ಬನನ್ನು ತಾತ್ಸಾರ ಮಾಡುತ್ತಾನೆ. ಆದ್ದರಿಂದ ನೀನು ದೇವರಿಗೆ ಮತ್ತು ಹಣಕ್ಕೆ ಒಂದೇ ಸಮಯದಲ್ಲಿ ಸೇವೆ ಮಾಡಲಾರೆ.


ನಾವು ಈ ವಿಷಯದಲ್ಲಿ ಹೆಮ್ಮೆಪಡುತ್ತೇವೆ ಮತ್ತು ಇದು ಸತ್ಯವೆಂದು ನಾನು ಹೃದಯಪೂರ್ವಕವಾಗಿ ಹೇಳಬಲ್ಲೆನು. ಅದೇನೆಂದರೆ ಈ ಲೋಕದಲ್ಲಿ ಮಾಡಿದ ಎಲ್ಲಾ ಕಾರ್ಯಗಳನ್ನು ದೇವರಿಂದ ಕೊಡಲ್ಪಟ್ಟ ಯಥಾರ್ಥವಾದ ಮತ್ತು ಪರಿಶುದ್ಧವಾದ ಹೃದಯದಿಂದ ಮಾಡಿದೆವು. ನಾವು ನಿಮ್ಮ ಮಧ್ಯದಲ್ಲಿ ಮಾಡಿದ ಕಾರ್ಯಗಳಲ್ಲಂತೂ ಇದು ಮತ್ತಷ್ಟು ಸತ್ಯವಾಗಿದೆ. ನಾವು ಇದನ್ನು ಮಾಡಿದ್ದು ದೇವರ ಕೃಪೆಯಿಂದಲೇ ಹೊರತು ಲೋಕದ ಜ್ಞಾನದಿಂದಲ್ಲ.


“ನೀವು ಮನೆ ಕಟ್ಟುವಾಗ ಅದರ ಮೇಲ್ಛಾವಣಿಯ ಸುತ್ತಲೂ ಅರ್ಧ ಗೋಡೆಯನ್ನು ಕಟ್ಟಬೇಕು. ಹೀಗೆ ಮಾಡದೆಹೋದರೆ ಯಾರಾದರೂ ಮೇಲ್ಛಾವಣಿಯಿಂದ ಕೆಳಗೆ ಬಿದ್ದು ಸತ್ತಲ್ಲಿ ಅವನ ಸಾವಿಗೆ ನೀವು ಕಾರಣರಾಗುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು