Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 23:14 - ಪರಿಶುದ್ದ ಬೈಬಲ್‌

14 ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಸಂರಕ್ಷಿಸಲೂ ವೈರಿಗಳನ್ನು ಸೋಲಿಸುವಂತೆ ಸಹಾಯ ಮಾಡಲೂ ನಿಮ್ಮೊಂದಿಗೆ ಪಾಳೆಯದಲ್ಲಿರುವುದರಿಂದ ನಿಮ್ಮ ಪಾಳೆಯವು ಪವಿತ್ರವಾಗಿರಬೇಕು. ಇಲ್ಲದಿದ್ದಲ್ಲಿ ನಿಮ್ಮ ಪಾಳೆಯದಲ್ಲಿರುವ ಹೊಲಸನ್ನು ನೋಡಿ ಆತನು ಹಿಂದಿರುಗಿ ಹೋಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಕಾಪಾಡುವುದಕ್ಕೂ, ಶತ್ರುಗಳನ್ನು ನಿಮ್ಮ ಕೈವಶಮಾಡುವುದಕ್ಕೂ ನಿಮ್ಮ ಪಾಳೆಯದೊಳಗೆ ಸಂಚಾರಮಾಡುತ್ತಾನಲ್ಲಾ; ಆದುದರಿಂದ ಪಾಳೆಯವು ನಿಮರ್ಲವಾಗಿರಬೇಕು; ನಿಮ್ಮಲ್ಲಿ ಅಶುದ್ಧವೇನಾದರೂ ಕಂಡುಬಂದರೆ ಆತನು ನಿಮ್ಮನ್ನು ಬಿಟ್ಟುಹೋದಾನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ನಿಮ್ಮ ದೇವರಾದ ಸರ್ವೇಶ್ವರಾ ನಿಮ್ಮನ್ನು ಕಾಪಾಡಲು, ಶತ್ರುಗಳನ್ನು ನಿಮ್ಮ ಕೈವಶಮಾಡಲು ನಿಮ್ಮ ಪಾಳೆಯದೊಳಗೆ ಸಂಚಾರಮಾಡುತ್ತಾರೆ; ನಿಮ್ಮಲ್ಲಿ ಅಶುಚಿಯೇನಾದರೂ ಕಂಡುಬಂದರೆ ಅವರು ನಿಮ್ಮನ್ನು ಬಿಟ್ಟುಹೋಗದಂತೆ ಪಾಳೆಯವು ನಿರ್ಮಲವಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಕಾಪಾಡುವದಕ್ಕೂ ಶತ್ರುಗಳನ್ನು ನಿಮ್ಮ ಕೈವಶಮಾಡುವದಕ್ಕೂ ನಿಮ್ಮ ಪಾಳೆಯದೊಳಗೆ ಸಂಚಾರಮಾಡುತ್ತಾನಲ್ಲಾ; ಆದದರಿಂದ ಪಾಳೆಯವು ನಿರ್ಮಲವಾಗಿರಬೇಕು; ನಿಮ್ಮಲ್ಲಿ ಅಶುಚಿಯೇನಾದರೂ ಕಂಡುಬಂದರೆ ಆತನು ನಿಮ್ಮನ್ನು ಬಿಟ್ಟುಹೋದಾನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ರಕ್ಷಿಸುವುದಕ್ಕೂ, ನಿಮ್ಮ ಶತ್ರುಗಳನ್ನು ನಿಮ್ಮ ಮುಂದೆ ಒಪ್ಪಿಸಿಬಿಡುವುದಕ್ಕೂ ಪಾಳೆಯದ ಮಧ್ಯದಲ್ಲಿ ಸಂಚಾರ ಮಾಡುತ್ತಾರೆ. ಅವರು ನಿಮ್ಮಲ್ಲಿ ಅಶುದ್ಧವಾದ ಕಾರ್ಯವನ್ನು ನೋಡಿ, ನಿಮ್ಮನ್ನು ಬಿಟ್ಟು ತಿರುಗಿಹೋಗದಂತೆ ನಿಮ್ಮ ಪಾಳೆಯವು ನಿರ್ಮಲವಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 23:14
8 ತಿಳಿವುಗಳ ಹೋಲಿಕೆ  

ನಾನು ನಿಮ್ಮೊಂದಿಗೆ ನಡೆಯುತ್ತಾ ನಿಮ್ಮ ದೇವರಾಗಿರುವೆನು ಮತ್ತು ನೀವು ನನ್ನ ಜನರಾಗಿರುವಿರಿ.


ಅಬ್ರಾಮನಿಗೆ ತೊಂಭತ್ತೊಂಬತ್ತು ವರ್ಷವಾಗಿದ್ದಾಗ ಯೆಹೋವನು ಅವನಿಗೆ ಪ್ರತ್ಯಕ್ಷನಾಗಿ, “ನಾನು ಸರ್ವಶಕ್ತನಾದ ದೇವರು. ನನಗೆ ವಿಧೇಯನಾಗಿದ್ದು ನಿರ್ದೋಷಿಯಾಗಿರು.


ದೇವರ ಆಲಯವು ವಿಗ್ರಹಗಳೊಂದಿಗೆ ಒಪ್ಪಂದವನ್ನು ಮಾಡಿಕೊಳ್ಳಲು ಸಾಧ್ಯವೇ? ನಾವು ಜೀವಸ್ವರೂಪನಾದ ದೇವರ ಆಲಯವಾಗಿದ್ದೇವೆ. ದೇವರು ಹೇಳಿದಂತೆ: “ನಾನು ಅವರೊಂದಿಗೆ ವಾಸಿಸುವೆನು; ಅವರೊಂದಿಗೆ ನಡೆಯುವೆನು; ಅವರ ದೇವರಾಗಿರುವೆನು; ಅವರು ನನ್ನ ಜನರಾಗಿರುವರು.”


ಆಗ ಯೆಹೋವನು, “ಇನ್ನೂ ಹತ್ತಿರ ಬರಬೇಡ. ನಿನ್ನ ಪಾದರಕ್ಷೆಗಳನ್ನು ತೆಗೆದುಹಾಕು. ಏಕೆಂದರೆ ನೀನು ನಿಂತಿರುವ ಸ್ಥಳವು ಪರಿಶುದ್ಧ ಭೂಮಿಯಾಗಿದೆ.


ಸೈತಾನನ ಸೈನ್ಯವು ಭೂಮಿಯಲ್ಲೆಲ್ಲಾ ಶಿಸ್ತಿನಿಂದ ನಡೆದಾಡಿ ದೇವಜನರ ಶಿಬಿರದ ಸುತ್ತಲೂ ದೇವರ ಪ್ರಿಯ ನಗರದ ಸುತ್ತಲೂ ಒಟ್ಟುಗೂಡಿದರು. ಆದರೆ ಪರಲೋಕದಿಂದ ಇಳಿದು ಬಂದ ಬೆಂಕಿಯು ಸೈತಾನನ ಸೈನ್ಯವನ್ನು ನಾಶಗೊಳಿಸಿತು.


ಅಂದು ಸಂಜೆ ತಂಗಾಳಿ ಬೀಸುತ್ತಿರಲು ದೇವರಾದ ಯೆಹೋವನು ತೋಟದಲ್ಲಿ ತಿರುಗಾಡುತ್ತಿದ್ದನು. ಆತನ ಸಪ್ಪಳವನ್ನು ಕೇಳಿದ ಪುರುಷನು ಮತ್ತು ಅವನ ಹೆಂಡತಿಯು ತೋಟದ ಮರಗಳ ಮರೆಯಲ್ಲಿ ಅಡಗಿಕೊಂಡರು.


ನಿಮ್ಮ ಆಯುಧಗಳೊಂದಿಗೆ ನೀವು ಒಂದು ಕೋಲನ್ನು ಇಟ್ಟುಕೊಳ್ಳಬೇಕು. ಈ ಕೋಲಿನಿಂದ ಮಣ್ಣು ಅಗೆದು ನೆಲದಲ್ಲಿ ಚಿಕ್ಕ ಗುಂಡಿ ತೋಡಲೂ ಮತ್ತು ಹೊಟ್ಟೆ ಖಾಲಿ ಮಾಡಿದ ಬಳಿಕ ಆ ಗುಂಡಿಯನ್ನು ಮಣ್ಣಿನಿಂದ ಮುಚ್ಚಲೂ ಸಹಾಯವಾಗುವುದು.


ದೇವರು ಆ ಪಟ್ಟಣದಲ್ಲಿದ್ದಾನೆ, ಆದ್ದರಿಂದ ಅದೆಂದಿಗೂ ನಾಶವಾಗುವುದಿಲ್ಲ. ಸೂರ್ಯೋದಯಕ್ಕಿಂತ ಮೊದಲೇ ದೇವರು ಅದರ ಸಹಾಯಕ್ಕಾಗಿ ಬರುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು