Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 23:21 - ಪರಿಶುದ್ದ ಬೈಬಲ್‌

21 “ನೀವು ನಿಮ್ಮ ದೇವರಾದ ಯೆಹೋವನಿಗೆ ಹರಕೆ ಹೊತ್ತರೆ ಅದನ್ನು ಸಲ್ಲಿಸಲು ನಿಧಾನ ಮಾಡಬೇಡಿ. ನಿಮ್ಮ ದೇವರಾದ ಯೆಹೋವನು ಅದನ್ನು ನಿಮ್ಮಿಂದ ಕೇಳುವವನಾಗಿದ್ದಾನೆ. ಹರಕೆಹೊತ್ತು ಸಲ್ಲಿಸದಿದ್ದರೆ ನೀವು ಪಾಪಮಾಡುವವರಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ನಿಮ್ಮ ದೇವರಾದ ಯೆಹೋವನಿಗೆ ಹರಕೆಮಾಡಿದ ಮೇಲೆ ಅದನ್ನು ತಡಮಾಡದೆ ತೀರಿಸಬೇಕು; ಆತನು ತಪ್ಪದೆ ಅದನ್ನು ವಿಚಾರಿಸುವನು; ತೀರಿಸದೆ ಹೋಗುವುದು ಪಾಪ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 “ನಿಮ್ಮ ದೇವರಾದ ಸರ್ವೇಶ್ವರನಿಗೆ ಹರಕೆಮಾಡಿದ ಮೇಲೆ ಅದನ್ನು ತಡಮಾಡದೆ ತೀರಿಸಬೇಕು; ಅವರು ತಪ್ಪದೆ ಅದನ್ನು ವಿಚಾರಿಸುವರು; ತೀರಿಸದೆ ಹೋಗುವುದು ಪಾಪ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ನಿಮ್ಮ ದೇವರಾದ ಯೆಹೋವನಿಗೆ ಹರಕೆಮಾಡಿದ ಮೇಲೆ ಅದನ್ನು ತಡಮಾಡದೆ ತೀರಿಸಬೇಕು; ಆತನು ತಪ್ಪದೆ ಅದನ್ನು ವಿಚಾರಿಸುವನು; ತೀರಿಸದೆ ಹೋಗುವದು ಪಾಪ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ನೀನು ನಿನ್ನ ದೇವರಾದ ಯೆಹೋವ ದೇವರಿಗೆ ಹರಕೆಮಾಡಿದ ಮೇಲೆ ಅದನ್ನು ಸಲ್ಲಿಸುವುದಕ್ಕೆ ತಡಮಾಡಬೇಡ. ಏಕೆಂದರೆ ನಿನ್ನ ದೇವರಾದ ಯೆಹೋವ ದೇವರು ಅದನ್ನು ನಿಶ್ಚಯವಾಗಿಯೂ ನಿನ್ನ ಬಳಿಯಲ್ಲಿ ವಿಚಾರಿಸುವರು. ತೀರಿಸದೆ ಹೋಗುವದು ಪಾಪ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 23:21
24 ತಿಳಿವುಗಳ ಹೋಲಿಕೆ  

ನನ್ನ ಹರಕೆಗಳನ್ನು ಯೆಹೋವನಿಗೆ ಜನರ ಮುಂದೆ ಸಲ್ಲಿಸುವೆನು.


ದೇವರಾದ ಯೆಹೋವನಿಗೆ ಹರಕೆಗಳನ್ನು ಮಾಡಿದವರೇ, ನಿಮ್ಮ ಹರಕೆಗಳನ್ನು ಸಲ್ಲಿಸಿರಿ. ಸರ್ವಭೂನಿವಾಸಿಗಳೇ, ದೇವರಲ್ಲಿ ಭಯಭಕ್ತಿಯುಳ್ಳವರಾಗಿರಿ.


ಸೂಳೆತನದಿಂದ ಗಳಿಸಿದ ಹಣವನ್ನು ನಿಮ್ಮ ದೇವರಾದ ಯೆಹೋವನ ವಿಶೇಷ ವಾಸಸ್ಥಾನಕ್ಕೆ ತೆಗೆದುಕೊಂಡು ಬರಬಾರದು. ಒಬ್ಬನು ತಾನು ಹೊತ್ತುಕೊಂಡ ಹರಕೆಯನ್ನು ಆ ಹಣದಿಂದ ಪೂರೈಸಕೂಡದು. ಯಾಕೆಂದರೆ ಲೈಂಗಿಕ ಪಾಪದಲ್ಲಿ ತಮ್ಮ ದೇಹಗಳನ್ನು ಮಾರುವವರನ್ನು ನಿಮ್ಮ ದೇವರಾದ ಯೆಹೋವನು ದ್ವೇಷಿಸುತ್ತಾನೆ; ಲೈಂಗಿಕ ಪಾಪಗಳ ಆದಾಯದಿಂದ ಬಂದ ಹಣದಿಂದ ಖರೀದಿ ಮಾಡಿದ ಕಾಣಿಕೆಗಳನ್ನು ಆತನು ದ್ವೇಷಿಸುತ್ತಾನೆ.


“‘ನೀವಿಟ್ಟ ಆಣೆಯನ್ನು ಮೀರಬೇಡಿರಿ. ಪ್ರಭುವಿಗೆ ನೀವಿಟ್ಟ ಆಣೆಗಳನ್ನು ಕೈಗೊಳ್ಳಲೇಬೇಕು’ ಎಂದು ನಮ್ಮ ಪೂರ್ವಿಕರಿಗೆ ಹೇಳಿದ್ದನ್ನು ನೀವು ಕೇಳಿದ್ದೀರಿ.


ಜನರು ಇದನ್ನು ನೋಡಿದಾಗ ಅವರು ಯೆಹೋವನಿಗೆ ಭಯಪಟ್ಟು ಗೌರವಿಸಿದರು. ಅವರು ಆತನಿಗೆ ಯಜ್ಞವನ್ನರ್ಪಿಸಿ ಹರಕೆ ಹಾಕಿಕೊಂಡರು.


ದೇವರೇ, ನಾನು ನಿನಗೆ ವಿಶೇಷ ಹರಕೆಗಳನ್ನು ಮಾಡಿದ್ದೇನೆ. ನಾನು ಮಾಡಿದ ಹರಕೆಗಳನ್ನು ಸಲ್ಲಿಸುವೆನು. ನಾನು ನಿನಗೆ ಕೃತಜ್ಞತಾ ಕಾಣಿಕೆಯನ್ನು ಅರ್ಪಿಸುವೆನು.


ನಂತರ ಯಾಕೋಬನು ಈ ಪ್ರಮಾಣವನ್ನು ಮಾಡಿದನು: “ದೇವರು ನನ್ನ ಸಂಗಡವಿದ್ದು ನಾನು ಹೋದಲ್ಲೆಲ್ಲ ನನ್ನನ್ನು ಕಾಪಾಡಿ ಊಟಕ್ಕೆ ಆಹಾರವನ್ನೂ, ಉಡಲು ಬಟ್ಟೆಗಳನ್ನೂ ಕೊಟ್ಟು,


ಯೆಹೂದವೇ, ನೋಡು! ಬೆಟ್ಟಗಳ ಮೇಲಿನಿಂದ ಬರುವವನನ್ನು ನೋಡು. ಅವನು ಶುಭಸಮಾಚಾರವನ್ನು ತರುವನು. ಸಮಾಧಾನ ಉಂಟೆಂದು ಅವನು ಸಾರುತ್ತಾನೆ. ಯೆಹೂದವೇ, ನಿನ್ನ ವಿಶೇಷ ಹಬ್ಬಗಳನ್ನು ಆಚರಿಸು. ನೀನು ವಾಗ್ದಾನ ಮಾಡಿದ್ದನ್ನು ನೆರವೇರಿಸು. ಕೆಲಸಕ್ಕೆ ಬಾರದ ಆ ಜನರು ನಿನ್ನ ಬಳಿಗೆ ಬಂದು ನಿನ್ನ ಮೇಲೆ ದಾಳಿ ಮಾಡುವದಿಲ್ಲ. ಯಾಕೆಂದರೆ ಆ ದುಷ್ಟ ಜನರೆಲ್ಲಾ ನಾಶವಾಗಿರುತ್ತಾರೆ.


ರಕ್ಷಣೆಯು ಯೆಹೋವನಿಂದಲೇ ಉಂಟಾಗುವದು. ಯೆಹೋವನೇ, ನಾನು ನಿನಗೆ ಯಜ್ಞವನ್ನರ್ಪಿಸುವೆನು. ನಾನು ನಿನ್ನನ್ನು ಕೊಂಡಾಡಿ ಸ್ತೋತ್ರಸಲ್ಲಿಸುವೆನು. ನಾನು ನಿನಗೆ ವಿಶೇಷವಾದ ಹರಕೆಗಳನ್ನು ಮಾಡುವೆನು. ನಾನು ಕೊಟ್ಟ ವಚನಗಳನ್ನು ಪಾಲಿಸುವೆನು.”


ನೀವು ಹರಕೆ ಮಾಡಿಕೊಳ್ಳದಿದ್ದರೆ ಪಾಪಮಾಡುವುದಿಲ್ಲ.


ಒಂದುವೇಳೆ ಆ ಸಮಯದಲ್ಲಿ ಯೋನಾತಾನನ ಕುಟುಂಬವು ದಾವೀದನಿಂದ ಅಗಲಿ ಹೋಗಬೇಕಿದ್ದರೆ ಅಗಲಿ ಹೋಗಲಿ. ದಾವೀದನ ಶತ್ರುಗಳನ್ನು ಯೆಹೋವನು ದಂಡಿಸಲಿ” ಎಂದು ಹೇಳಿದನು.


ನೀನು ಪ್ರಾರ್ಥಿಸುವೆ, ಆತನು ನಿನಗೆ ಕಿವಿಗೊಡುವನು; ಆತನಿಗೆ ನಿನ್ನ ಹರಕೆಗಳನ್ನು ಸಲ್ಲಿಸುವೆ.


ಕೃತಜ್ಞತಾಯಜ್ಞಗಳನ್ನು ದೇವರಿಗೆ ಅರ್ಪಿಸಿರಿ. ನೀವು ಮಾಡಿಕೊಂಡ ಹರಕೆಗಳನ್ನು ಮಹೋನ್ನತನಿಗೆ ಸಲ್ಲಿಸಿರಿ.


ಆಗ ನಾನು ನಿನ್ನ ಹೆಸರನ್ನು ಸದಾಕಾಲ ಕೊಂಡಾಡುವೆನು. ನನ್ನ ಹರಕೆಗಳನ್ನು ಪ್ರತಿದಿನವೂ ಸಲ್ಲಿಸುವೆನು.


ನಿಮ್ಮ ಮೇಲೆ ಕೋಪಗೊಳ್ಳುವೆನು; ಕತ್ತಿಯಿಂದ ನಿಮ್ಮನ್ನು ಕೊಲ್ಲುವೆನು. ಆಗ ನಿಮ್ಮ ಹೆಂಡತಿಯರು ವಿಧವೆಯರಾಗುವರು; ನಿಮ್ಮ ಮಕ್ಕಳು ಅನಾಥರಾಗುವರು.


ಇದು ಲೇವಿಯರಿಗಾಗಿ. ಯಾಕೆಂದರೆ ಅವರಿಗೆ ಸ್ವಂತ ಭೂಮಿ ಇಲ್ಲವಲ್ಲಾ. ಅಲ್ಲದೆ ಈ ಧಾನ್ಯವನ್ನು ನಿಮ್ಮ ಊರಲ್ಲಿರುವ ಬಡಜನರಿಗೋಸ್ಕರವಾಗಿಯೂ ಪರದೇಶಿಗಳಿಗಾಗಿಯೂ ವಿಧವೆಯರಿಗಾಗಿಯೂ ಅನಾಥ ಮಕ್ಕಳಿಗಾಗಿಯೂ ಉಪಯೋಗಿಸಬೇಕು. ಅವರು ಬಂದು ಊಟಮಾಡಿ ತೃಪ್ತರಾಗಲಿ. ನೀವು ಹೀಗೆ ಮಾಡಿದರೆ ನಿಮ್ಮ ದೇವರಾದ ಯೆಹೋವನು ನಿಮ್ಮ ಕಾರ್ಯಗಳನ್ನೆಲ್ಲಾ ಸಫಲಪಡಿಸಿ ಆಶೀರ್ವದಿಸುವನು.


ಸಾಲಗಾರನು ಪರದೇಶಿಯಾಗಿದ್ದರೆ ಅವನು ಸಾಲ ಹಿಂತಿರುಗಿಸಬೇಕು. ಆದರೆ ಇಸ್ರೇಲರಲ್ಲಿ ಯಾರಾದರೂ ನಿಮ್ಮಿಂದ ಸಾಲ ತೆಗೆದುಕೊಂಡಿದ್ದರೆ ಅದನ್ನು ವಜಾ ಮಾಡಬೇಕು.


ಅವನು ಕೊಟ್ಟ ಸಾಲಕ್ಕೆ ಬಡ್ಡಿ ಕೇಳದವನೂ ನಿರಪರಾಧಿಗೆ ಕೇಡುಮಾಡಲು ಲಂಚ ತೆಗೆದುಕೊಳ್ಳದವನೂ ಆಗಿರಬೇಕು. ಹೀಗೆ ಜೀವಿಸುವವನು ದೇವರಿಗೆ ಸಮೀಪವಾಗಿಯೇ ಇರುತ್ತಾನೆ.


ಅವನು ಸಾಲ ಕೊಡುವಾಗ ಬಡ್ಡಿಹಾಕುವುದಿಲ್ಲ. ಅವನು ಕೆಡುಕುಗಳನ್ನು ಮಾಡುವುದಿಲ್ಲ. ಅವನು ತನ್ನ ವ್ಯವಹಾರಗಳಲ್ಲಿ ಪ್ರತಿಯೊಬ್ಬನೊಂದಿಗೂ ಯಥಾರ್ಥವಾಗಿಯೂ ನ್ಯಾಯವಾಗಿಯೂ ಇರುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು