Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 23:23 - ಪರಿಶುದ್ದ ಬೈಬಲ್‌

23 ಆದರೆ ನೀವು ಮಾಡಿದ ಹರಕೆಯನ್ನು ಪೂರೈಸಬೇಕು. ನೀವು ಹರಕೆ ಮಾಡುವಂತೆ ದೇವರು ನಿಮ್ಮನ್ನು ಬಲವಂತ ಮಾಡಲಿಲ್ಲವಲ್ಲಾ. ಆದ್ದರಿಂದ ನೀವು ವಾಗ್ದಾನ ಮಾಡಿದ್ದನ್ನು ಪೂರೈಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಆದರೆ ಬಾಯಿಂದ ನುಡಿದದ್ದನ್ನು ನೆರವೇರಿಸಲೇಬೇಕು. ನಿಮ್ಮ ದೇವರಾದ ಯೆಹೋವನಿಗೆ ಬಾಯಿಂದ ಹರಕೆಮಾಡಿಕೊಂಡಂತೆಯೇ ಅದನ್ನು ಒಪ್ಪಿಸಿಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಆದರೆ ಬಾಯಿಂದ ನುಡಿದದ್ದನ್ನು ನೆರವೇರಿಸಲೇಬೇಕು. ನಿಮ್ಮ ದೇವರಾದ ಸರ್ವೇಶ್ವರನಿಗೆ ಬಾಯಿಂದ ಹರಕೆಮಾಡಿಕೊಂಡಂತೆಯೇ ಅದನ್ನು ಒಪ್ಪಿಸಿಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಆದರೆ ಬಾಯಿಂದ ನುಡಿದದ್ದನ್ನು ನೆರವೇರಿಸಲೇಬೇಕು. ನಿಮ್ಮ ದೇವರಾದ ಯೆಹೋವನಿಗೆ ಬಾಯಿಂದ ಹರಕೆಮಾಡಿಕೊಂಡಂತೆಯೇ ಅದನ್ನು ಒಪ್ಪಿಸಿಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ನಿನ್ನ ತುಟಿಗಳಿಂದ ಹೊರಟಿದ್ದನ್ನು ಮಾಡುವುದಕ್ಕೆ ತಪ್ಪಬೇಡ. ನಿನ್ನ ದೇವರಾದ ಯೆಹೋವ ದೇವರಿಗೆ ನಿನ್ನ ಬಾಯಿಯಿಂದಲೇ ನೀನು ಹರಕೆ ಮಾಡಿದಿಯಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 23:23
20 ತಿಳಿವುಗಳ ಹೋಲಿಕೆ  

ನೀನು ದೇವರಿಗೆ ಹರಕೆ ಮಾಡುವ ಮೊದಲೇ ಎಚ್ಚರಿಕೆಯಿಂದ ಯೋಚಿಸು. ಹರಕೆ ಮಾಡಿದ ಮೇಲೆ ಹರಕೆ ಮಾಡಬಾರದಾಗಿತ್ತು ಎಂದು ಹೇಳಬೇಡ.


ಆದರೆ ಅವರನ್ನು ನಂಬಬೇಡ! ಪೌಲನನ್ನು ಕೊಲ್ಲುವುದಕ್ಕಾಗಿ ನಲವತ್ತಕ್ಕಿಂತಲೂ ಹೆಚ್ಚು ಮಂದಿ ಯೆಹೂದ್ಯರು ಅಡಗಿಕೊಂಡು ಕಾಯುತ್ತಿದ್ದಾರೆ. ಪೌಲನನ್ನು ಕೊಲ್ಲುವ ತನಕ ತಿನ್ನುವುದೂ ಇಲ್ಲ ಕುಡಿಯುವುದೂ ಇಲ್ಲ ಎಂದು ಅವರೆಲ್ಲರೂ ಹರಕೆ ಮಾಡಿಕೊಂಡಿದ್ದಾರೆ! ಈಗ ಅವರು ನಿನ್ನ ಒಪ್ಪಿಗೆಗಾಗಿ ಕಾಯುತ್ತಿದ್ದಾರೆ” ಎಂದು ಹೇಳಿದನು.


ಮರುದಿನ ಮುಂಜಾನೆ ಯೆಹೂದ್ಯರಲ್ಲಿ ಕೆಲವರು, ತಾವು ಪೌಲನನ್ನು ಕೊಲ್ಲದ ಹೊರತು ಏನನ್ನೂ ತಿನ್ನುವುದಿಲ್ಲ ಮತ್ತು ಏನನ್ನೂ ಕುಡಿಯುವುದಿಲ್ಲ ಎಂಬುದಾಗಿ ಹರಕೆ ಮಾಡಿಕೊಂಡರು.


ನನ್ನ ಹರಕೆಗಳನ್ನು ಯೆಹೋವನಿಗೆ ಜನರ ಮುಂದೆ ಸಲ್ಲಿಸುವೆನು.


ಆದರೆ ಸೌಲನು ಆ ದಿನ ಮತ್ತೊಂದು ದೊಡ್ಡ ತಪ್ಪನ್ನು ಮಾಡಿದನು. ಇಸ್ರೇಲರು ಬಳಲಿದ್ದರು ಮತ್ತು ಹಸಿದಿದ್ದರು. ಸೌಲನು ಅವರಿಗೆ, “ನಾನು ಶತ್ರುಗಳನ್ನು ಸೋಲಿಸಬೇಕಾಗಿರುವುದರಿಂದ ನಿಮ್ಮಲ್ಲಿ ಸಾಯಂಕಾಲದೊಳಗೆ ಊಟಮಾಡಿದವನು ಶಾಪಗ್ರಸ್ತನಾಗಲಿ” ಎಂದು ಆಣೆಯಿಟ್ಟು ಹೇಳಿದ್ದರಿಂದ ಇಸ್ರೇಲಿನ ಯಾವ ಸೈನಿಕನೂ ಊಟಮಾಡಲಿಲ್ಲ.


ಅವಳು ದೇವರಲ್ಲಿ ಒಂದು ವಿಶೇಷ ವಾಗ್ದಾನವನ್ನು ಮಾಡಿದಳು. ಅವಳು, “ಯೆಹೋವನೇ, ಸರ್ವಶಕ್ತನೇ, ನಾನು ಎಷ್ಟು ದುಃಖಿತಳೆಂಬುದನ್ನು ನೋಡು, ನನ್ನನ್ನು ಜ್ಞಾಪಿಸಿಕೊ! ನನ್ನನ್ನು ಮರೆಯದಿರು. ನೀನು ನನಗೊಬ್ಬ ಮಗನನ್ನು ಕರುಣಿಸಿದರೆ, ಅವನು ಜೀವದಿಂದಿರುವ ತನಕ ನಿನ್ನವನಾಗಿರುವಂತೆ ನಿನಗೇ ಪ್ರತಿಷ್ಠಿಸುತ್ತೇನೆ. ಅವನು ನಾಜೀರನಾಗಿರುವನು. ಅವನು ದ್ರಾಕ್ಷಾರಸವನ್ನಾಗಲಿ ಇತರೆ ಮದ್ಯವನ್ನಾಗಲಿ ಸೇವಿಸುವುದಿಲ್ಲ. ಅವನ ತಲೆಕೂದಲನ್ನು ಕ್ಷೌರ ಕತ್ತಿಯಿಂದ ಕತ್ತರಿಸುವುದಿಲ್ಲ” ಎಂದು ಹೇಳಿದಳು


“ಯಾವನಾದರೂ ಯೆಹೋವನಿಗೆ ಇಂಥದ್ದನ್ನು ಕೊಡುತ್ತೇನೆಂದು ಹರಕೆ ಮಾಡಿದರೆ ಅಥವಾ ತಾನು ಇಂಥದ್ದನ್ನು ಮಾಡುವುದಿಲ್ಲ ಎಂದು ಆಣೆಯಿಟ್ಟುಕೊಂಡರೆ, ಅವನು ತನ್ನ ಮಾತನ್ನು ಮೀರದೆ ತಾನು ಹೇಳಿದಂತೆಯೇ ನೆರವೇರಿಸಬೇಕು.


ತನ್ನ ಮನೆಯಿಂದ ಹೊರ ಬರುವ ಜೀವಿಗಳಲ್ಲಿ ತನ್ನ ಮಗಳೇ ಮೊದಲನೆಯವಳಾದುದನ್ನು ಕಂಡು ಯೆಫ್ತಾಹನು ದುಃಖದಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡನು. “ಅಯ್ಯೋ! ನನ್ನ ಮಗಳೇ, ನೀನು ನನ್ನನ್ನು ಹಾಳುಮಾಡಿದೆ. ನೀನು ನನಗೆ ಮಹಾಸಂಕಟವನ್ನು ಉಂಟುಮಾಡಿದೆ. ನಾನು ಯೆಹೋವನಿಗೆ ಒಂದು ಹರಕೆ ಹೊತ್ತಿದ್ದೇನೆ; ನಾನು ಅದನ್ನು ಬದಲಾಯಿಸಲು ಸಾಧ್ಯವಿಲ್ಲ” ಎಂದು ಗೋಳಾಡಿದನು.


“‘ನೀವಿಟ್ಟ ಆಣೆಯನ್ನು ಮೀರಬೇಡಿರಿ. ಪ್ರಭುವಿಗೆ ನೀವಿಟ್ಟ ಆಣೆಗಳನ್ನು ಕೈಗೊಳ್ಳಲೇಬೇಕು’ ಎಂದು ನಮ್ಮ ಪೂರ್ವಿಕರಿಗೆ ಹೇಳಿದ್ದನ್ನು ನೀವು ಕೇಳಿದ್ದೀರಿ.


ನೀವು ಹರಕೆ ಮಾಡಿಕೊಳ್ಳದಿದ್ದರೆ ಪಾಪಮಾಡುವುದಿಲ್ಲ.


“ಒಬ್ಬನ ತೋಟದೊಳಗಿಂದ ನೀವು ಹಾದುಹೋಗುತ್ತಿರುವಾಗ ನಿಮಗೆ ಬೇಕಾಗುವಷ್ಟು ಹಣ್ಣನ್ನು ಕಿತ್ತು ತಿನ್ನಿ. ಆದರೆ ನೀವು ಮಕ್ಕರಿಯಲ್ಲಿ ತುಂಬಿಸಿಕೊಂಡು ಹೋಗಬಾರದು.


ನಾವು ಸ್ವರ್ಗದ ರಾಣಿಗೆ ನೈವೇದ್ಯವನ್ನು ಅರ್ಪಿಸುವದಾಗಿ ಹರಕೆ ಮಾಡಿದ್ದೇವೆ ಮತ್ತು ನಮ್ಮ ಹರಕೆಗಳನ್ನೆಲ್ಲ ಪೂರೈಸುತ್ತೇವೆ. ನಾವು ನೈವೇದ್ಯವನ್ನು ಕೊಡುತ್ತೇವೆ ಮತ್ತು ಅವಳ ಪೂಜೆಗಾಗಿ ಪಾನನೈವೇದ್ಯವನ್ನು ಅರ್ಪಿಸುತ್ತೇವೆ. ನಾವು ಮೊದಲು ಹಾಗೆಯೇ ಮಾಡಿದ್ದೇವೆ. ನಮ್ಮ ಪೂರ್ವಿಕರು, ನಮ್ಮ ರಾಜರು, ನಮ್ಮ ಅಧಿಕಾರಿಗಳು ಮೊದಲು ಮಾಡಿದಂತೆಯೇ ನಾವೆಲ್ಲರೂ ಜೆರುಸಲೇಮಿನ ಬೀದಿಗಳಲ್ಲಿ ಮತ್ತು ಯೆಹೂದದ ಪಟ್ಟಣಗಳಲ್ಲಿ ಮಾಡಿದ್ದೆವು. ನಾವು ಸ್ವರ್ಗದ ರಾಣಿಯನ್ನು ಪೂಜಿಸುವ ಕಾಲದಲ್ಲಿ ನಮ್ಮಲ್ಲಿ ಸಾಕಷ್ಟು ಆಹಾರವಿತ್ತು. ನಾವು ಜಯಶೀಲರಾಗಿದ್ದೆವು. ನಮಗೆ ಕೆಟ್ಟದ್ದೇನೂ ಆಗಿರಲಿಲ್ಲ.


“ಇಸ್ರೇಲರಿಗೆ ಹೀಗೆ ಹೇಳು: ಯಾವನಾದರೂ ಯೆಹೋವನಿಗೆ ಒಬ್ಬ ವ್ಯಕ್ತಿಯನ್ನು ಪ್ರತಿಷ್ಠಿಸುವುದಕ್ಕಾಗಿ ಹರಕೆ ಮಾಡಿಕೊಂಡರೆ ಅವನಿಗೆ ಒಂದು ಬೆಲೆಯನ್ನು ನಿಗದಿಮಾಡಬೇಕು. ಅವನನ್ನು ಯೆಹೋವನಿಂದ ಮರಳಿ ಕೊಂಡುಕೊಳ್ಳ ಬಯಸುವವರು ಆ ಬೆಲೆಯನ್ನು ಕೊಡಬೇಕು.


ಆದರೆ ಇಸ್ರೇಲರ ಸೈನ್ಯವು ಆ ಪಟ್ಟಣದ ಜನರೊಂದಿಗೆ ಯುದ್ಧಮಾಡಲಿಲ್ಲ. ಅವರು ಆ ಜನರೊಂದಿಗೆ ಶಾಂತಿ ಒಪ್ಪಂದ ಮಾಡಿಕೊಂಡಿದ್ದರು. ಅವರು ಇಸ್ರೇಲಿನ ದೇವರಾದ ಯೆಹೋವನ ಹೆಸರಿನಲ್ಲಿ ಪ್ರಮಾಣ ಮಾಡಿದ್ದರು. ಒಪ್ಪಂದವನ್ನು ಮಾಡಿಕೊಂಡ ಜನನಾಯಕರ ಬಗ್ಗೆ ಜನರೆಲ್ಲರೂ ಅಸಮಾಧಾನ ವ್ಯಕ್ತಪಡಿಸಿದರು.


ಕೃತಜ್ಞತಾಯಜ್ಞಗಳನ್ನು ದೇವರಿಗೆ ಅರ್ಪಿಸಿರಿ. ನೀವು ಮಾಡಿಕೊಂಡ ಹರಕೆಗಳನ್ನು ಮಹೋನ್ನತನಿಗೆ ಸಲ್ಲಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು