Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 23:5 - ಪರಿಶುದ್ದ ಬೈಬಲ್‌

5 ಆದರೆ ಯೆಹೋವನು ನಿಮ್ಮನ್ನು ಪ್ರೀತಿಸುತ್ತಿದ್ದುದರಿಂದ ಆ ಶಾಪವನ್ನು ನಿಮಗೆ ಆಶೀರ್ವಾದವಾಗಿ ಪರಿವರ್ತಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆದರೂ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಪ್ರೀತಿಸಿದ್ದರಿಂದ ಬಿಳಾಮನ ಮಾತಿಗೆ ಸಮ್ಮತಿಸದೆ ಅವನಿಂದ ಶಾಪವನ್ನು ನುಡಿಸದೆ ಆಶೀರ್ವಾದವನ್ನೇ ಹೇಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಆದರೂ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಪ್ರೀತಿಸಿದ್ದರಿಂದ ಬಿಳಾಮನ ಮಾತಿಗೆ ಸಮ್ಮತಿಸದೆ, ಅವನಿಂದ ಶಾಪವನ್ನು ನುಡಿಸದೆ, ಆಶೀರ್ವಾದವನ್ನೇ ಹೇಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 (ಆದರೂ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಪ್ರೀತಿಸಿದ್ದರಿಂದ ಬಿಳಾಮನ ಮಾತಿಗೆ ಸಮ್ಮತಿಸದೆ ಅವನಿಂದ ಶಾಪವನ್ನು ನುಡಿಸದೆ ಆಶೀರ್ವಾದವನ್ನೇ ಹೇಳಿಸಿದನು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆದರೂ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ಪ್ರೀತಿಸಿದ್ದರಿಂದ ಬಿಳಾಮನ ಮಾತಿಗೆ ಸಮ್ಮತಿಸಲಿಲ್ಲ. ನಿಮ್ಮ ದೇವರಾದ ಯೆಹೋವ ದೇವರು ಅವನಿಂದ ಶಾಪವನ್ನು ನುಡಿಸದೆ, ಆಶೀರ್ವಾದವನ್ನೇ ಹೇಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 23:5
23 ತಿಳಿವುಗಳ ಹೋಲಿಕೆ  

ಹೀಗಿರುವಲ್ಲಿ ಇದರ ಬಗ್ಗೆ ನಾವು ಏನು ಹೇಳೋಣ? ದೇವರು ನಮ್ಮೊಂದಿಗೆ ಇರುವಾಗ, ನಮ್ಮನ್ನು ಯಾರೂ ಸೋಲಿಸಲಾರರು.


ಅವರು ಅಡಗಿಕೊಂಡಿರುವರು; ಇಸ್ರೇಲರು ಸಿಂಹದಂತೆಯೂ ಹೆಣ್ಣು ಸಿಂಹದಂತೆಯೂ ವಿಶ್ರಮಿಸುವರು. ಅದನ್ನು ಎಬ್ಬಿಸಲು ಯಾರಿಗೆ ಧೈರ್ಯವಿದೆ? ನಿಮ್ಮನ್ನು ಆಶೀರ್ವದಿಸುವವನು ಆಶೀರ್ವದಿಸಲ್ಪಡುವನು. ನಿಮ್ಮನ್ನು ಶಪಿಸುವವನು ಶಪಿಸಲ್ಪಡುವನು.”


ಸ್ವಲ್ಪಕಾಲದವರೆಗೆ ನಮಗೆ ಚಿಕ್ಕಪುಟ್ಟ ಇಕ್ಕಟ್ಟುಗಳಿರುತ್ತವೆ. ಆದರೆ ನಿತ್ಯವಾದ ಮಹಿಮೆಯನ್ನು ಹೊಂದಿಕೊಳ್ಳಲು ಅವು ನಮಗೆ ಸಹಾಯಕವಾಗಿವೆ. ಆ ಮಹಿಮೆಯು ಇಂದಿನ ಇಕ್ಕಟ್ಟುಗಳಿಗಿಂತಲೂ ಮಹತ್ವವುಳ್ಳದ್ದಾಗಿದೆ.


ಯೆಹೂದ್ಯರು ಸುವಾರ್ತೆಯನ್ನು ಸ್ವೀಕರಿಸಿಕೊಳ್ಳಲಿಲ್ಲ. ಆದ್ದರಿಂದ ಅವರು ದೇವರ ಶತ್ರುಗಳಾಗಿದ್ದಾರೆ. ಯೆಹೂದ್ಯರಲ್ಲದ ಜನರಿಗೆ ಸಹಾಯವಾಗಲೆಂದೇ ಇದಾಯಿತು. ಆದರೆ ಯೆಹೂದ್ಯರು ಇನ್ನೂ ದೇವರಿಂದ ಆರಿಸಲ್ಪಟ್ಟ ಜನರಾಗಿದ್ದಾರೆ. ಆದ್ದರಿಂದ ಆತನು ಪಿತೃಗಳೊಂದಿಗೆ ತಾನು ಮಾಡಿಕೊಂಡ ಒಡಂಬಡಿಕೆಯ ನಿಮಿತ್ತ ಅವರನ್ನು ಪ್ರೀತಿಸುತ್ತಾನೆ.


ನನ್ನ ಜನರೇ, ಮೋವಾಬ್ಯರ ಅರಸನಾದ ಬಾಲಾಕನ ದುಷ್ಟ ಯೋಜನೆಯನ್ನು ನೆನಪುಮಾಡಿರಿ. ಬೆಯೋರನ ಮಗನಾದ ಬಿಳಾಮನು ಬಾಲಾಕನಿಗೆ ಏನು ಹೇಳಿದನೆಂದು ಜ್ಞಾಪಕಮಾಡಿರಿ. ಶಿಟ್ಟೀಮಿನಿಂದ ಗಿಲ್ಗಾಲಿನ ತನಕ ನಡೆದ ಘಟನೆಗಳನ್ನು ನಿಮ್ಮ ನೆನಪಿಗೆ ತಂದುಕೊಳ್ಳಿರಿ. ಅವೆಲ್ಲವನ್ನು ನೀವು ನೆನಪುಮಾಡಿದರೆ ಯೆಹೋವನು ನೀತಿವಂತನು ಎಂದು ನಿಮಗೆ ಗೊತ್ತಾಗುವದು.”


ದೂರದಿಂದ ಯೆಹೋವನು ತನ್ನ ಜನರಿಗೆ ದರ್ಶನವನ್ನು ಕೊಡುವನು. ಯೆಹೋವನು ಹೀಗೆನ್ನುವನು, “ನಾನು ನಿಮ್ಮನ್ನು ಪ್ರೀತಿಸುತ್ತೇನೆ, ನನ್ನ ಪ್ರೇಮವು ಶಾಶ್ವತವಾದದ್ದು. ನಾನು ಎಂದೆಂದಿಗೂ ನಿಮ್ಮ ಹಿತೈಷಿಯಾಗಿರುವೆನು.


ನಾನು ಮತ್ತೆ ಹಾದುಹೋಗುವಾಗ ನಿನ್ನನ್ನು ನೋಡಲಾಗಿ ನೀನು ಸಂಭೋಗಿಸಲು ತಯಾರಾಗಿದ್ದೆ. ನಾನು ನನ್ನ ಹೊದಿಕೆಯನ್ನು ನಿನ್ನ ಮೇಲೆ ಹಾಕಿ ನಿನ್ನ ಬೆತ್ತಲೆ ದೇಹವನ್ನು ಮುಚ್ಚಿದೆನು. ನಿನ್ನನ್ನು ವಿವಾಹವಾಗಲು ಮಾತುಕೊಟ್ಟೆನು. ನಾನು ನಿನ್ನೊಡನೆ ಒಡಂಬಡಿಕೆ ಮಾಡಿಕೊಂಡೆನು. ಆಗ ನೀನು ನನ್ನವಳಾದೆ.’” ಇದು ನನ್ನ ಒಡೆಯನಾದ ಯೆಹೋವನ ನುಡಿ.


ಅಯೋಗ್ಯವಾದ ಶಾಪ ನಿರಪರಾಧಿಗೆ ತಟ್ಟುವುದಿಲ್ಲ. ಆ ಶಾಪದ ಮಾತುಗಳು ಹಾರಿಹೋಗಿ ಎಂದೂ ಕೆಳಗಿಳಿಯದ ಪಕ್ಷಿಗಳಂತಿವೆ.


ದೇವರು ಇಸ್ರೇಲಿಗೆ ಒಳ್ಳೆಯವನೇ ನಿಜ! ಶುದ್ಧ ಹೃದಯವುಳ್ಳವರಿಗೆ ದೇವರು ಒಳ್ಳೆಯವನೇ ಸರಿ!


ಹೌದು, ಯೆಹೋವನು ತನ್ನ ಜನರನ್ನು ಪ್ರೀತಿಸುತ್ತಾನೆ. ಪವಿತ್ರ ಜನರೆಲ್ಲರೂ ಆತನ ಕೈಗಳಲ್ಲಿರುವರು. ಆತನ ಕಾಲ ಬಳಿಯಲ್ಲಿ ಕುಳಿತುಕೊಂಡು ಬೋಧನೆಯನ್ನು ಕೇಳುವರು.


ಅಂತೆಯೇ, “ನಾನು ಯಾಕೋಬನನ್ನು ಪ್ರೀತಿಸಿದೆನು, ಆದರೆ ಏಸಾವನನ್ನು ದ್ವೇಷಿಸಿದೆನು” ಎಂದು ಪವಿತ್ರ ಗ್ರಂಥವು ಹೇಳುತ್ತದೆ.


ಆಗ ಯೆಹೋವನ ದೂತನು ಬಿಳಾಮನಿಗೆ, “ಆ ಮನುಷ್ಯರ ಜೊತೆಯಲ್ಲಿ ಹೋಗು. ಆದರೆ ನಾನು ನಿನಗೆ ಹೇಳುವ ಮಾತನ್ನೇ ಹೊರತು ಬೇರೆ ಯಾವುದನ್ನೂ ಹೇಳಬಾರದು” ಎಂದು ಹೇಳಿದನು. ಆದ್ದರಿಂದ ಬಿಳಾಮನು ಬಾಲಾಕನ ನಾಯಕರೊಡನೆ ಹೋದನು.


ಯೆಹೋವನು, “ನಾನು ನಿಮ್ನನ್ನೆಲ್ಲಾ ಪ್ರೀತಿಸುತ್ತೇನೆ” ಎಂದು ಹೇಳುತ್ತಾನೆ. ಆದರೆ ನೀವು, “ನೀನು ಪ್ರೀತಿಸುವದಕ್ಕೆ ಗುರುತು ಏನು?” ಎಂದು ಕೇಳುತ್ತೀರಿ. ಯೆಹೋವನು ಅದಕ್ಕುತ್ತರವಾಗಿ, “ಏಸಾವನು ಯಾಕೊಬನ ಅಣ್ಣನಲ್ಲವೋ? ಆದರೆ ನಾನು ಯಾಕೋಬನನ್ನು ಆರಿಸಿಕೊಂಡೆನು.


“ದೇವರಾದ ಯೆಹೋವನು ನಿಮ್ಮ ಪೂರ್ವಿಕರನ್ನು ಪ್ರೀತಿಸಿದ್ದರಿಂದ ನಿಮ್ಮನ್ನು ಆರಿಸಿಕೊಂಡನು. ಆತನು ತನ್ನ ಮಹಾಶಕ್ತಿಯಿಂದ ನಿಮ್ಮನ್ನು ಈಜಿಪ್ಟಿನಿಂದ ಹೊರತಂದನು.


ಆದರೆ ಯೆಹೋವನಾದ ನಾನು ಬಿಳಾಮನಿಗೆ ಶಪಿಸಲು ಅನುಮತಿ ಕೊಡಲಿಲ್ಲ. ಅದಕ್ಕಾಗಿ ಬಿಳಾಮನು ನಿಮಗೆ ಶುಭವನ್ನೇ ಕೋರಿದನು. ಅವನು ಅನೇಕ ಸಲ ನಿಮ್ಮನ್ನು ಆಶೀರ್ವದಿಸಿದನು. ನಾನು ನಿಮ್ಮನ್ನು ಅವನ ಕೈಗಳಿಂದ ಬಿಡುಗಡೆ ಮಾಡಿದೆ.


ಯೆಹೋವನು ನನಗುಂಟಾಗುತ್ತಿರುವ ಕೇಡುಗಳನ್ನು ನೋಡಿ ಶಿಮ್ಮಿಯ ಶಾಪಕ್ಕೆ ಬದಲಾಗಿ ಶುಭವನ್ನು ಅನುಗ್ರಹಿಸಬಹುದೇನೋ” ಎಂದನು.


ಯಾಕೆಂದರೆ ಅವರು ಇಸ್ರೇಲರಿಗೆ ಆಹಾರವನ್ನಾಗಲಿ ನೀರನ್ನಾಗಲಿ ಕೊಟ್ಟಿರಲಿಲ್ಲ. ಅಲ್ಲದೆ ಅವರು ಬಿಳಾಮನಿಗೆ ಹಣಕೊಟ್ಟು ಇಸ್ರೇಲರನ್ನು ಶಪಿಸುವಂತೆ ಮಾಡಿದರು. ಆದರೆ ನಮ್ಮ ದೇವರು ಆ ಶಾಪವನ್ನು ನಮಗೆ ಆಶೀರ್ವಾದವಾಗುವಂತೆ ಮಾಡಿದರು.


ಬೆಯೋರನ ಮಗನಾದ ಬಿಳಾಮನನ್ನು ಕರೆಸುವುದಕ್ಕೆ ಕೆಲವು ಸಂದೇಶಕರನ್ನು ಕಳುಹಿಸಿದನು. ಬಿಳಾಮನು ಯೂಫ್ರೆಟೀಸ್ ನದಿಯ ಬಳಿ “ಪೆತೋರ್” ಎಂಬ ಸ್ಥಳದಲ್ಲಿದ್ದನು. ಬಿಳಾಮನ ಜನರು ಇಲ್ಲಿ ವಾಸಿಸುತ್ತಿದ್ದರು. ಬಾಲಾಕನು ತನ್ನ ಸಂದೇಶಕರನ್ನು ಕಳುಹಿಸಿ ಬಿಳಾಮನಿಗೆ, “ಒಂದು ಜನಾಂಗವು ಈಜಿಪ್ಟಿನಿಂದ ಬಂದಿದೆ. ಅವರು ದೇಶವನ್ನೆಲ್ಲಾ ಮುಚ್ಚಿಕೊಂಡು ನನ್ನ ಪಕ್ಕದಲ್ಲಿ ನೆಲೆಸಿದ್ದಾರೆ. ಅವರು ನಮಗಿಂತ ಬಲಿಷ್ಠರು.


ನಾವು ಜೋರ್ಡನ್ ನದಿಯನ್ನು ದಾಟುವವರೆಗೆ ನಿಮ್ಮ ದೇಶದ ಮೂಲಕ ಹೋಗಿ, ನಮ್ಮ ದೇವರಾದ ಯೆಹೋವನು ಕೊಡಲಿರುವ ದೇಶವನ್ನು ಪ್ರವೇಶಿಸುತ್ತೇವೆ. ಸೇಯೀರ್‌ನಲ್ಲಿ ವಾಸಿಸುವ ಏಸಾವನ ಜನರೂ, ಆರ್‌ನಲ್ಲಿ ವಾಸಿಸುವ ಮೋವಾಬ್ಯರೂ ತಮ್ಮ ದೇಶಗಳ ಮೂಲಕ ಹೋಗಲು ನಮಗೆ ಅವಕಾಶ ಮಾಡಿಕೊಟ್ಟಿದ್ದಾರೆ’ ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು