Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 23:6 - ಪರಿಶುದ್ದ ಬೈಬಲ್‌

6 ಅಮ್ಮೋನಿಯರೊಂದಿಗಾಗಲಿ ಮೋವಾಬ್ಯರೊಂದಿಗಾಗಲಿ ನೀವು ಸಂಧಾನ ಮಾಡಿಕೊಳ್ಳಲೇಬಾರದು; ನಿಮ್ಮ ಜೀವಮಾನವೆಲ್ಲಾ ಅವರೊಂದಿಗೆ ಸ್ನೇಹತ್ವದಲ್ಲಿರಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನಿಮ್ಮ ಜೀವಮಾನಕಾಲವೆಲ್ಲಾ ಅವರ ಯೋಗಕ್ಷೇಮವನ್ನು ಬಯಸಲೇ ಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ನಿಮ್ಮ ಜೀವಮಾನಕಾಲವನ್ನೆಲ್ಲಾ ಅವರ ಯೋಗಕ್ಷೇಮವನ್ನು ಬಯಸಲೇಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನಿಮ್ಮ ಜೀವಮಾನಕಾಲವೆಲ್ಲಾ ಅವರ ಯೋಗಕ್ಷೇಮವನ್ನು ಬಯಸಲೇ ಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನೀವು ಇರುವವರೆಗೆ ಎಂದಿಗೂ ಅವರ ಏಳಿಗೆಯನ್ನು, ಕ್ಷೇಮವನ್ನು ಬಯಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 23:6
9 ತಿಳಿವುಗಳ ಹೋಲಿಕೆ  

ಆದ್ದರಿಂದ ಇಸ್ರೇಲ್ ಜನರೇ, ನಿಮ್ಮ ಮಕ್ಕಳು ಅವರ ಮಕ್ಕಳನ್ನು ಮದುವೆಯಾಗಲು ಬಿಡಬೇಡಿ. ಅವರ ಸಹವಾಸ ಮಾಡಬೇಡಿರಿ. ಅವರ ವಸ್ತುಗಳನ್ನು ಆಶಿಸಬೇಡಿರಿ. ನನ್ನ ಕಟ್ಟಳೆಗಳನ್ನು ಪಾಲಿಸಿರಿ; ಆಗ ನೀವು ಬಲಶಾಲಿಗಳಾಗಿ ಈ ದೇಶವನ್ನು ಅನುಭವಿಸುವಿರಿ. ಈ ದೇಶವನ್ನು ನೀನು ಇಟ್ಟುಕೊಂಡವರಾಗಿ ನಿಮ್ಮ ಮಕ್ಕಳಿಗೆ ಸ್ವಾಸ್ತ್ಯವಾಗಿ ಕೊಡುವಿರಿ.’


ದಾವೀದನು ರಬ್ಬ ನಗರದ ಜನರನ್ನು ಹೊರದೂಡಿದನು. ದಾವೀದನು ಅವರನ್ನು ಗರಗಸ, ಕಬ್ಬಿಣದ ಗುದ್ದಲಿ ಮತ್ತು ಕೊಡಲಿಗಳಿಂದ ಕೆಲಸ ಮಾಡಿಸಿದನು. ಅವನು ಅವರಿಂದ ಬಲವಂತವಾಗಿ ಇಟ್ಟಿಗೆಗಳಿಂದ ಕಟ್ಟಡವನ್ನು ಕಟ್ಟಿಸಿದನು. ಅಮ್ಮೋನಿಯರ ನಗರಗಳಲ್ಲೆಲ್ಲಾ ದಾವೀದನು ಇದೇ ರೀತಿ ಮಾಡಿದನು. ನಂತರ ದಾವೀದನು ತನ್ನ ಸೈನ್ಯದೊಂದಿಗೆ ಜೆರುಸಲೇಮಿಗೆ ಹಿಂದಿರುಗಿದನು.


ಮೋವಾಬಿನ ಜನರನ್ನು ಸಹ ದಾವೀದನು ಸೋಲಿಸಿದನು. ಅವರನ್ನು ನೆಲದ ಮೇಲೆ ಬಲವಂತದಿಂದ ಮಲಗಿಸಿ ಹಗ್ಗದಿಂದ ಅವರನ್ನು ಸಾಲುಸಾಲಾಗಿ ವಿಂಗಡಿಸಿದನು. ಎರಡು ಸಾಲಿನ ಗಂಡಸರನ್ನು ಕೊಲ್ಲಿಸಿದನು; ಆದರೆ ಮೂರನೆಯ ಸಾಲಿನ ಗಂಡಸರನ್ನು ಜೀವಂತವಾಗಿ ಉಳಿಸಿದನು. ಮೋವಾಬಿನ ಜನರು ದಾವೀದನ ಸೇವಕರಾದರು. ಅವರು ಅವನಿಗೆ ಕಪ್ಪಕಾಣಿಕೆಗಳನ್ನು ಅರ್ಪಿಸಿದರು.


ಆದ್ದರಿಂದ ರಾಜನೇ, ನನ್ನ ಬುದ್ಧಿವಾದವನ್ನು ದಯವಿಟ್ಟು ಒಪ್ಪಿಕೊ. ನೀನು ಪಾಪಕೃತ್ಯಗಳನ್ನು ಮಾಡಬೇಡ. ನೀತಿಯನ್ನು ಅನುಸರಿಸು; ಕೆಟ್ಟದ್ದನ್ನು ಮಾಡಬೇಡ. ಬಡಜನರಿಗೆ ಕರುಣೆಯನ್ನು ತೋರು. ಇದರಿಂದ ನಿನ್ನ ನೆಮ್ಮದಿಯ ಕಾಲವು ಹೆಚ್ಚಾಗುವುದು. ಇದೇ ನನ್ನ ಬುದ್ಧಿವಾದ” ಎಂದು ಅರಿಕೆ ಮಾಡಿದನು.


ಬಾಲಾಕನು ಬಿಳಾಮನ ಮೇಲೆ ಕೋಪಗೊಂಡು, ಚಪ್ಪಾಳೆ ಹೊಡೆದು ಅವನಿಗೆ, “ನನ್ನ ಶತ್ರುಗಳನ್ನು ಶಪಿಸುವುದಕ್ಕೆ ನಿನ್ನನ್ನು ಕರೆಸಿದೆನು. ಆದರೆ ನೀನು ಅವರನ್ನು ಮೂರು ಸಾರಿಯೂ ಆಶೀರ್ವದಿಸಿದೆ.


ಆದರೆ ಯೆಹೋವನು ತನ್ನ ಪರಾಕ್ರಮವನ್ನು ತೋರಿಸಿ ನಿಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದನು. ನಿಮ್ಮನ್ನು ದಾಸತ್ವದಿಂದ ಬಿಡುಗಡೆ ಮಾಡಿದನು; ಫರೋಹನ ಹಿಡಿತದಿಂದ ನಿಮ್ಮನ್ನು ಬಿಡಿಸಿದನು; ಯಾಕೆಂದರೆ ಆತನು ನಿಮ್ಮನ್ನು ಪ್ರೀತಿಸುತ್ತಾನೆ; ನಿಮ್ಮ ಪೂರ್ವಿಕರಿಗೆ ತಾನು ಮಾಡಿದ ವಾಗ್ದಾನವನ್ನು ನೆರವೇರಿಸಬೇಕೆಂದಿದ್ದಾನೆ.


ಯೆಹೋವನು ನನಗುಂಟಾಗುತ್ತಿರುವ ಕೇಡುಗಳನ್ನು ನೋಡಿ ಶಿಮ್ಮಿಯ ಶಾಪಕ್ಕೆ ಬದಲಾಗಿ ಶುಭವನ್ನು ಅನುಗ್ರಹಿಸಬಹುದೇನೋ” ಎಂದನು.


ನನ್ನ ಜನರೇ, ಮೋವಾಬ್ಯರ ಅರಸನಾದ ಬಾಲಾಕನ ದುಷ್ಟ ಯೋಜನೆಯನ್ನು ನೆನಪುಮಾಡಿರಿ. ಬೆಯೋರನ ಮಗನಾದ ಬಿಳಾಮನು ಬಾಲಾಕನಿಗೆ ಏನು ಹೇಳಿದನೆಂದು ಜ್ಞಾಪಕಮಾಡಿರಿ. ಶಿಟ್ಟೀಮಿನಿಂದ ಗಿಲ್ಗಾಲಿನ ತನಕ ನಡೆದ ಘಟನೆಗಳನ್ನು ನಿಮ್ಮ ನೆನಪಿಗೆ ತಂದುಕೊಳ್ಳಿರಿ. ಅವೆಲ್ಲವನ್ನು ನೀವು ನೆನಪುಮಾಡಿದರೆ ಯೆಹೋವನು ನೀತಿವಂತನು ಎಂದು ನಿಮಗೆ ಗೊತ್ತಾಗುವದು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು