Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 24:7 - ಪರಿಶುದ್ದ ಬೈಬಲ್‌

7 “ಒಬ್ಬನು ಇನ್ನೊಬ್ಬ ಇಸ್ರೇಲನನ್ನು ಕದ್ದುಕೊಂಡು ಹೋಗಿ ಅವನನ್ನು ಗುಲಾಮನನ್ನಾಗಿ ಮಾರಬಾರದು. ಹಾಗೆ ಮಾಡಿದವನನ್ನು ಸಾಯಿಸಬೇಕು. ನಿಮ್ಮ ಕುಲದಿಂದ ಅಂಥಾ ಪಾಪವನ್ನು ತೆಗೆದುಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಯಾವನಾದರೂ ಸ್ವದೇಶದವನಾದ ಇಸ್ರಾಯೇಲನನ್ನು ಕದ್ದು ಅವನನ್ನು ದಾಸತ್ವದಲ್ಲಿ ನಡಿಸಿದ್ದಾಗಲಿ ಅಥವಾ ಮಾರಿಬಿಟ್ಟದ್ದು ಕಂಡುಬಂದರೆ ಕದ್ದವನಿಗೆ ಮರಣಶಿಕ್ಷೆಯಾಗಬೇಕು. ಹೀಗೆ ಅಂಥ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಿಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 “ಒಬ್ಬನು ಸ್ವದೇಶದವನಾದ ಇಸ್ರಯೇಲನನ್ನು ಕದ್ದು ಅವನನ್ನು ಗುಲಾಮನಾಗಿ ನಡೆಸಿಕೊಂಡದ್ದು ಅಥವಾ ಮಾರಿಬಿಟ್ಟದ್ದು ತಿಳಿದುಬಂದರೆ ಕದ್ದವನಿಗೆ ಮರಣಶಿಕ್ಷೆಯಾಗಬೇಕು. ಹೀಗೆ ಅಂಥ ದುಷ್ಟತ್ವವನ್ನು ನಿಮ್ಮ ಮಧ್ಯೆಯಿಂದ ತೆಗೆದುಹಾಕಿಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಯಾವನಾದರೂ ಸ್ವದೇಶದವನಾದ ಇಸ್ರಾಯೇಲ್ಯನನ್ನು ಕದ್ದು ಅವನನ್ನು ದಾಸತ್ವದಲ್ಲಿ ನಡಿಸಿದ್ದಾಗಲಿ ಮಾರಿಬಿಟ್ಟದ್ದಾಗಲಿ ಕಂಡುಬಂದರೆ ಕದ್ದವನಿಗೆ ಮರಣಶಿಕ್ಷೆಯಾಗಬೇಕು. ಹೀಗೆ ಅಂಥ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಿಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಒಬ್ಬನು ತನ್ನ ಸಹೋದರರಾದ ಇಸ್ರಾಯೇಲರಲ್ಲಿ ಒಬ್ಬನನ್ನು ಕದ್ದು ಅವನನ್ನು ಗುಲಾಮನಾಗಿ ನಡೆಸಿಕೊಂಡದ್ದು ಅಥವಾ ಮಾರಿಬಿಟ್ಟದ್ದು ತಿಳಿದುಬಂದರೆ ಕದ್ದವನಿಗೆ ಮರಣಶಿಕ್ಷೆಯಾಗಬೇಕು. ಹೀಗೆ ಕೆಟ್ಟದ್ದನ್ನು ನಿಮ್ಮ ನಡುವೆಯಿಂದ ತೆಗೆದುಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 24:7
11 ತಿಳಿವುಗಳ ಹೋಲಿಕೆ  

“ಯಾವನಾದರೂ ಮತ್ತೊಬ್ಬನನ್ನು ಕದ್ದು ಗುಲಾಮನನ್ನಾಗಿ ಮಾರಿದರೆ ಅಥವಾ ತನ್ನ ಗುಲಾಮನನ್ನಾಗಿ ಮಾಡಿಕೊಂಡರೆ ಅವನಿಗೆ ಮರಣಶಿಕ್ಷೆಯಾಗಬೇಕು.


ಆ ವರ್ತಕರು ದಾಲ್ಚಿನ್ನಿ, ಸಾಂಬಾರ ಪದಾರ್ಥಗಳು, ಧೂಪ, ಪರಿಮಳತೈಲ, ಸಾಂಬ್ರಾಣಿ, ದ್ರಾಕ್ಷಾರಸ ಮತ್ತು ಆಲಿವ್‌ಎಣ್ಣೆ, ನಯವಾದ ಹಿಟ್ಟು, ಗೋಧಿ, ದನಕರು, ಕುರಿ, ಕುದುರೆಗಳು, ರಥಗಳು, ಗುಲಾಮರು ಮತ್ತು ಮಾನವ ಪ್ರಾಣಗಳನ್ನು ಮಾರುತ್ತಾರೆ. ವರ್ತಕರು ಅಳುತ್ತಾ ಹೀಗೆ ಹೇಳುವರು:


ಲೈಂಗಿಕ ಪಾಪಗಳನ್ನು ಮಾಡುವವರಿಗೆ, ಸಲಿಂಗಕಾಮಿಗಳಿಗೆ, ಗುಲಾಮರನ್ನು ಮಾರಾಟ ಮಾಡುವವರಿಗೆ, ಸುಳ್ಳನ್ನು ಹೇಳುವವರಿಗೆ, ಒಪ್ಪಂದವನ್ನು ಮೀರುವ ಜನರಿಗೆ, ದೇವರ ಸತ್ಯೋಪದೇಶಕ್ಕೆ ವಿರುದ್ಧವಾಗಿ ಏನನ್ನು ಬೇಕಾದರೂ ಮಾಡುವವರಿಗೆ ಅದನ್ನು ರೂಪಿಸಲಾಗಿದೆ.


ಗ್ರೀಸ್, ತುರ್ಕಿ ಮತ್ತು ಕಪ್ಪು ಸಮುದ್ರದ ಸುತ್ತಲಿರುವ ದೇಶಗಳವರು ನಿನ್ನಲ್ಲಿಗೆ ವ್ಯಾಪಾರಕ್ಕಾಗಿ ಬಂದರು. ಅವರು ನಿನ್ನ ವಸ್ತುಗಳಿಗೆ ಬದಲಾಗಿ ಗುಲಾಮರನ್ನೂ ತಾಮ್ರವನ್ನೂ ಕೊಟ್ಟರು.


ಆ ಸಾಕ್ಷಿಯವನಿಗೆ ಶಿಕ್ಷೆ ವಿಧಿಸಬೇಕು. ತನ್ನ ವಿರೋಧಿಗೆ ಯಾವ ಶಿಕ್ಷೆ ಬರಬೇಕೆಂಬುದಾಗಿ ಅವನು ಸುಳ್ಳಾಡಿದ್ದನೋ, ಅದೇ ಶಿಕ್ಷೆಯನ್ನು ಅವನಿಗೆ ವಿಧಿಸಬೇಕು. ಈ ರೀತಿಯಾಗಿ ಆ ದುಷ್ಟತನವನ್ನು ನಿಮ್ಮ ಕುಲಗಳಿಂದ ತೆಗೆದುಹಾಕಬೇಕು.


“ಒಬ್ಬನು ನಿಮ್ಮಿಂದ ಏನಾದರೊಂದು ವಸ್ತುವನ್ನು ಎರವಲಾಗಿ ತೆಗೆದುಕೊಳ್ಳುವುದಾದರೆ ಅವನ ಬೀಸುವ ಕಲ್ಲಿನ ಒಂದು ಭಾಗವನ್ನು ಒತ್ತೆಯಾಗಿಟ್ಟುಕೊಳ್ಳಬಾರದು. ಇಲ್ಲವಾದರೆ ಅವನ ಆಹಾರವನ್ನೇ ಅವನಿಂದ ಕಿತ್ತುಕೊಂಡ ಹಾಗಾಯಿತು.


“ನಿಮ್ಮ ಹತ್ತಿರದ ಸಂಬಂಧಿಕರಲ್ಲಿ ಯಾರಾದರೂ ಇತರ ದೇವರುಗಳನ್ನು ಅನುಸರಿಸಲು ನಿಮ್ಮನ್ನು ಗುಪ್ತವಾಗಿ ಒತ್ತಾಯ ಮಾಡಬಹುದು. ಅವರು ನಿಮ್ಮ ಸ್ವಂತ ಸಹೋದರನಾಗಿರಬಹುದು, ನಿಮ್ಮ ಮಕ್ಕಳಾಗಿರಬಹುದು, ನಿಮ್ಮ ಹೆಂಡತಿಯಾಗಿರಬಹುದು, ಅಥವಾ ಆಪ್ತಗೆಳೆಯನಾಗಿರಬಹುದು. ಅವರು ಬಂದು, ‘ಬಾ, ನಾವು ಬೇರೆ ದೇವರನ್ನು ಹಿಂಬಾಲಿಸೋಣ’ (ಈ ದೇವರನ್ನು ನೀವಾಗಲಿ ನಿಮ್ಮ ಪೂರ್ವಿಕರಾಗಲಿ ತಿಳಿದಿರಲಿಲ್ಲ.


ಸತ್ಯವೆಂದು ಹೇಳಿದ ಸಾಕ್ಷಿಗಳು ಮೊದಲು ಅವರ ಮೇಲೆ ಕಲ್ಲೆಸೆಯಬೇಕು. ಅನಂತರ ಬೇರೆಯವರು ಕಲ್ಲೆಸೆದು ಅವರನ್ನು ಸಾಯಿಸಬೇಕು. ಈ ರೀತಿಯಾಗಿ ನಿಮ್ಮ ಮಧ್ಯೆ ಇದ್ದ ದುಷ್ಕೃತ್ಯವನ್ನು ತೆಗೆದುಹಾಕಬೇಕು.


ಅವರು ಅನಾಥರ ಕತ್ತೆಯನ್ನು ಹೊಡೆದುಕೊಂಡು ಹೋಗುವರು; ವಿಧವೆಯ ಹಸುವನ್ನು ಒತ್ತೆಯಿಟ್ಟುಕೊಳ್ಳುವರು;


ದುಷ್ಟರು ತಂದೆಯಿಲ್ಲದ ಮಗುವನ್ನು ಅದರ ತಾಯಿಯಿಂದ ಕಿತ್ತುಕೊಳ್ಳುವರು. ಬಡವರ ಮಗುವನ್ನು ಸಾಲಕ್ಕೆ ಒತ್ತೆಯಾಗಿಟ್ಟುಕೊಳ್ಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು