Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 25:19 - ಪರಿಶುದ್ದ ಬೈಬಲ್‌

19 ಆದ್ದರಿಂದಲೇ ಅಮಾಲೇಕ್ಯರನ್ನು ಈ ಭೂಮುಖದಲ್ಲಿರದಂತೆ ಮಾಡಬೇಕು. ನೀವು ನಿಮ್ಮ ದೇಶವನ್ನು ಪ್ರವೇಶಿಸುವಾಗ ನೀವು ಹಾಗೆ ಮಾಡಬೇಕು. ನಿಮ್ಮ ಸುತ್ತಮುತ್ತಲಿರುವ ವೈರಿಗಳಿಂದ ದೇವರು ನಿಮಗೆ ಶಾಂತಿಯನ್ನು ಅನುಗ್ರಹಿಸುವನು. ಆದರೆ ಅಮಾಲೇಕ್ಯರನ್ನು ನಾಶಮಾಡುವ ಕಾರ್ಯವನ್ನು ಮರೆಯಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಆದಕಾರಣ ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವ ದೇಶದಲ್ಲಿ ನಿಮ್ಮನ್ನು ಸೇರಿಸಿ ಸುತ್ತಲು ಯಾವ ಶತ್ರುಗಳೂ ಇಲ್ಲದಂತೆ ಮಾಡಿದಾಗ ಭೂಮಿಯ ಮೇಲೆ ಅಮಾಲೇಕ್ಯರ ಹೆಸರೇ ಉಳಿಯದಂತೆ ನೀವು ಮಾಡಬೇಕು; ಇದನ್ನು ಮರೆಯಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಆದಕಾರಣ ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಸ್ವದೇಶವಾಗಲೆಂದು ಕೊಡುವ ನಾಡಿನಲ್ಲಿ ನಿಮ್ಮನ್ನು ಸೇರಿಸಿ, ಸುತ್ತಲು ಯಾವ ಶತ್ರುಗಳೂ ಇಲ್ಲದಂತೆ ಮಾಡಿದಾಗ, ಜಗದಲ್ಲಿ ಅಮಾಲೇಕ್ಯರ ಹೆಸರೇ ಉಳಿಯದಂತೆ ಮಾಡಬೇಕು; ಇದನ್ನು ಮರೆಯಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಆದಕಾರಣ ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವದಕ್ಕೆ ಕೊಡುವ ದೇಶದಲ್ಲಿ ನಿಮ್ಮನ್ನು ಸೇರಿಸಿ ಸುತ್ತಲು ಯಾವ ಶತ್ರುಗಳೂ ಇಲ್ಲದಂತೆ ಮಾಡಿದಾಗ ಭೂವಿುಯ ಮೇಲೆ ಅಮಾಲೇಕ್ಯರ ಹೆಸರೇ ಉಳಿಯದಂತೆ ನೀವು ಮಾಡಬೇಕು; ಇದನ್ನು ಮರೆಯಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಆದ್ದರಿಂದ ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ವಶಮಾಡಿಕೊಳ್ಳುವುದಕ್ಕೆ ಸೊತ್ತಾಗಿ ಕೊಡುವ ದೇಶದ ಸುತ್ತಲು ಇರುವ ಶತ್ರುಗಳಿಂದ ನಿಮ್ಮನ್ನು ಬಿಡಿಸಿ, ವಿಶ್ರಾಂತಿ ಕೊಡುವರು. ಆಗ ನೀವು ಅಮಾಲೇಕ್ಯರ ಜ್ಞಾಪಕವನ್ನು ಆಕಾಶದ ಕೆಳಗಿಂದ ಅಳಿಸಿಬಿಡಬೇಕು, ಇದನ್ನು ಮರೆಯಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 25:19
22 ತಿಳಿವುಗಳ ಹೋಲಿಕೆ  

ಬಳಿಕ ಯೆಹೋವನು ಮೋಶೆಗೆ, “ಈ ಯುದ್ಧದ ಕುರಿತು ಬರೆ: ಜನರು ಇಲ್ಲಿ ನಡೆದದ್ದನ್ನು ಜ್ಞಾಪಿಸಿಕೊಳ್ಳುವಂತೆ ಈ ಸಂಗತಿಗಳನ್ನು ಒಂದು ಪುಸ್ತಕದಲ್ಲಿ ಬರೆದಿಡು. ನಾನು ಅಮಾಲೇಕ್ಯರನ್ನು ಭೂಮಿಯ ಮೇಲಿಂದ ಸಂಪೂರ್ಣವಾಗಿ ನಾಶಮಾಡುವೆನೆಂದು ಯೆಹೋಶುವನಿಗೆ ಹೇಳಲು ಮರೆಯಬೇಡ” ಎಂದು ಹೇಳಿದನು.


ಸೌಲನು ಬಹಳ ಧೈರ್ಯಶಾಲಿ. ಅವನು ಅಮಾಲೇಕ್ಯರನ್ನೂ ಸೋಲಿಸಿದನು. ಇಸ್ರೇಲರನ್ನು ಕೊಳ್ಳೆಹೊಡೆಯಬೇಕೆಂದಿದ್ದ ಶತ್ರುಗಳಿಂದ ಸೌಲನು ಇಸ್ರೇಲರನ್ನು ರಕ್ಷಿಸಿದನು.


ಇವರನ್ನು ನಾನು ಸಂಪೂರ್ಣವಾಗಿ ನಾಶಮಾಡುತ್ತೇನೆ. ಅವರ ಹೆಸರುಗಳನ್ನು ಯಾರೂ ನೆನಪಿನಲ್ಲಿಟ್ಟುಕೊಳ್ಳದಂತೆ ಮಾಡುತ್ತೇನೆ. ಆಮೇಲೆ ನಾನು ನಿನ್ನಿಂದ ಬಲಿಷ್ಠವಾದ ಮಹಾಜನಾಂಗವನ್ನು ನಿರ್ಮಿಸುತ್ತೇನೆ’ ಎಂದು ಹೇಳಿದನು.


ಮೋಶೆ, “ನಾನು ನನ್ನ ಕೈಗಳನ್ನು ಯೆಹೋವನ ಸಿಂಹಾಸನದ ಕಡೆಗೆ ಎತ್ತಿದೆನು. ಆದ್ದರಿಂದ ಯೆಹೋವನು ಎಂದಿನಂತೆ ಅಮಾಲೇಕ್ಯರ ವಿರುದ್ಧವಾಗಿ ಯುದ್ಧಮಾಡಿದನು” ಅಂದನು.


ಮೊರ್ದೆಕೈಗೋಸ್ಕರ ಸಿದ್ಧಮಾಡಿದ್ದ ಗಲ್ಲುಮರಕ್ಕೆ ಸೇವಕರು ಹಾಮಾನನನ್ನು ತೂಗುಹಾಕಿದರು. ಅನಂತರ ರಾಜನ ಸಿಟ್ಟು ಇಳಿಯಿತು.


ಇದಾದ ಬಳಿಕ ರಾಜನಾದ ಅಹಷ್ವೇರೋಷನು ಹಾಮಾನನನ್ನು ಗೌರವಿಸಿದನು. ಹಾಮಾನನು ಹಮ್ಮೆದಾತನೆಂಬವನ ಮಗನು. ಇವನು ಅಗಾಗನ ವಂಶಕ್ಕೆ ಸೇರಿದವನಾಗಿದ್ದನು. ಅರಸನು ಹಾಮಾನನನ್ನು ಉನ್ನತಸ್ಥಾನಕ್ಕೆ ನೇಮಿಸಿ ಬೇರೆ ಅಧಿಕಾರಿಗಳಿಗಿಂತ ವಿಶೇಷವಾದ ಗೌರವವನ್ನು ಕೊಡಿಸಿದನು.


ಆಗ ಅಲ್ಲಿ ಸ್ವಲ್ಪವೇ ಮಂದಿ ಅಮಾಲೇಕ್ಯರು ವಾಸಿಸುತ್ತಿದ್ದರು. ಈ ಸಿಮೆಯೋನರು ಅವರನ್ನು ಕೊಂದು ಆ ಸ್ಥಳದಲ್ಲಿ ನೆಲೆಸಿದರು. ಇಂದಿನವರೆಗೂ ಸಿಮೆಯೋನರು ಅಲ್ಲಿ ನೆಲೆಸಿದ್ದಾರೆ.


ದಾವೀದನು ಮತ್ತು ಅವನ ಜನರು ಅಮಾಲೇಕ್ಯರ ಮೇಲೆಯೂ ಗೆಷೂರ್ಯರ ಮೇಲೆಯೂ ಗಿಜ್ರೀಯರ ಮೇಲೆಯೂ ಯುದ್ಧಮಾಡಲು ಹೋದರು. ದಾವೀದನ ಜನರು ಅವರನ್ನು ಸೋಲಿಸಿ ಅವರ ಸಂಪತ್ತನ್ನು ವಶಪಡಿಸಿಕೊಂಡರು. ಈಜಿಪ್ಟಿನವರೆಗೆ ವಿಸ್ತರಿಸಿರುವ ಶೂರಿನ ಸಮೀಪದ ತೇಲಾಮಿನವರೆಗೂ ಆ ಜನರು ವಾಸಿಸುತ್ತಿದ್ದರು.


ಯೆಹೋವನು ಇಸ್ರೇಲರ ಶತ್ರುಗಳನ್ನು ಸದೆಬಡೆದು ಅವರಿಗೆ ವಿಶ್ರಾಂತಿಯನ್ನು ಕೊಟ್ಟನು. ಯೆಹೋವನು ಇಸ್ರೇಲನ್ನು ಸುರಕ್ಷಿತಗೊಳಿಸಿದನು. ಅನೇಕ ವರ್ಷಗಳು ಕಳೆದವು. ಯೆಹೋಶುವನು ಬಹಳ ಮುದುಕನಾದನು.


ಅದಕ್ಕಾಗಿಯೇ ಇಸ್ರೇಲಿನ ಸೈನ್ಯವು ಯುದ್ಧದಿಂದ ವಿಮುಖವಾಗಿ ಓಡಿಬಂತು. ಅವರು ತಪ್ಪನ್ನು ಮಾಡಿದ್ದರಿಂದಲೇ ಶಾಪಕ್ಕೆ ಗುರಿಯಾಗಿದ್ದಾರೆ. ಆ ಪಾಪವನ್ನು ನಿಮ್ಮಿಂದ ತೆಗೆದುಹಾಕಬೇಕು, ಅಲ್ಲಿಯವರೆಗೆ ನಾನು ನಿಮಗೆ ಸಹಾಯ ಮಾಡುವುದಿಲ್ಲ, ನಾನು ನಿಮ್ಮ ಸಂಗಡ ಬರುವುದೇ ಇಲ್ಲ.


ಪ್ರತಿ ನಿತ್ಯ ಒಂದು ಸಲ ನಿನ್ನ ಸೇನೆಯೊಂದಿಗೆ ನಗರದ ಸುತ್ತಲೂ ಸುತ್ತಬೇಕು. ಹೀಗೆ ಆರು ದಿನಗಳವರೆಗೆ ಸುತ್ತಬೇಕು.


ಯೆಹೋವನು “ನಾನೇ ನಿಮ್ಮೊಡನೆ ಬರುವೆನು. ನಾನೇ ನಿಮ್ಮನ್ನು ಮುನ್ನಡೆಸುವೆನು” ಎಂದು ಉತ್ತರಿಸಿದನು.


“ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶವನ್ನು ನೀವು ಬೇಗನೆ ಪ್ರವೇಶಿಸಲಿದ್ದೀರಿ. ಆ ದೇಶವನ್ನು ಸ್ವಾಧೀನಮಾಡಿಕೊಂಡು ಅಲ್ಲಿ ನೆಲೆಸುವಿರಿ.


ಬಹಳ ಹಿಂದೆಯೇ ಯೆಹೋವನು ಮೋಶೆಗೆ ಹೇಳಿದ ಪ್ರಕಾರ ಯೆಹೋಶುವನು ಇಸ್ರೇಲಿನ ಪ್ರದೇಶವನ್ನೆಲ್ಲ ಸ್ವಾಧೀನಪಡಿಸಿಕೊಂಡನು. ಯೆಹೋವನು ತಾನು ವಾಗ್ದಾನ ಮಾಡಿದಂತೆ ಆ ಪ್ರದೇಶವನ್ನು ಇಸ್ರೇಲರಿಗೆ ಕೊಟ್ಟುಬಿಟ್ಟನು. ಆಗ ಯೆಹೋಶುವನು ಆ ಪ್ರದೇಶವನ್ನು ಕುಲಗಳ ಪ್ರಕಾರ ಹಂಚಿಕೊಟ್ಟನು. ಆಗ ಯುದ್ಧವು ಮುಗಿಯಿತು, ಕೊನೆಗೆ ಆ ಪ್ರದೇಶದಲ್ಲಿ ಶಾಂತಿ ನೆಲೆಸಿತು.


“ಆ ಕಾಲದಲ್ಲಿ ನಾನು ನಿಮಗೆ ಆಜ್ಞಾಪಿಸಿದ್ದೇನೆಂದರೆ: ‘ನಿಮ್ಮ ದೇವರಾದ ಯೆಹೋವನು ನಿಮಗೆ ಜೋರ್ಡನ್ ನದಿಯ ಪೂರ್ವದಿಕ್ಕಿನಲ್ಲಿ ಸ್ವಾಸ್ತ್ಯವನ್ನು ಕೊಟ್ಟಿದ್ದಾನೆ. ಆದರೆ ನಿಮ್ಮಲ್ಲಿರುವ ಸೈನಿಕರು ತಮ್ಮ ಆಯುಧಗಳನ್ನು ತೆಗೆದುಕೊಂಡು ಇತರ ಇಸ್ರೇಲರೊಂದಿಗೆ ನದಿಯಾಚೆಗೆ ಬರಬೇಕು. ಅಲ್ಲಿಯ ದೇಶಗಳನ್ನು ಸ್ವಾಧೀನಪಡಿಸಿಕೊಂಡು ಶಾಂತಿ ನೆಲೆಸುವ ತನಕ ಅವರೊಂದಿಗಿರಬೇಕು.


ಇಡೀ ರಾತ್ರಿ ಆ ಮರದಲ್ಲಿ ಅವನ ಶರೀರ ನೇತಾಡುವಂತೆ ಮಾಡಬಾರದು. ಅದೇ ದಿವಸದಲ್ಲಿ ಅವನ ಶವವು ಹೂಳಲ್ಪಡಬೇಕು. ಯಾಕೆಂದರೆ ಮರದಲ್ಲಿ ತೂಗುಹಾಕಲ್ಪಟ್ಟ ಮನುಷ್ಯನು ದೇವರಿಂದ ಶಪಿಸಲ್ಪಟ್ಟವನು. ನಿಮ್ಮ ದೇವರಾದ ಯೆಹೋವನು ನಿಮಗೆ ಕೊಟ್ಟ ದೇಶವನ್ನು ನೀವು ಹೊಲಸು ಮಾಡಬೇಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು