Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 26:17 - ಪರಿಶುದ್ದ ಬೈಬಲ್‌

17 ಯೆಹೋವನು ನಿಮ್ಮ ದೇವರೆಂದು ನೀವು ಈ ದಿನ ಪ್ರತಿಜ್ಞೆ ಮಾಡಿದ್ದೀರಿ. ಆತನು ಹೇಳಿದ ಎಲ್ಲಾ ಕಟ್ಟಳೆ, ವಿಧಿ, ನಿಯಮಗಳನ್ನು ಅನುಸರಿಸುವಿರೆಂದು ಪ್ರತಿಜ್ಞೆ ಮಾಡಿರುತ್ತೀರಿ. ಆತನು ಹೇಳಿದ್ದನ್ನೆಲ್ಲಾ ಮಾಡುವುದಾಗಿ ಹೇಳಿರುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ನಮಗೆ ಯೆಹೋವನೇ ದೇವರಾಗಿರುವನೆಂದೂ, ಆತನು ಹೇಳಿದ ಮಾರ್ಗದಲ್ಲೇ ನಡೆದು ಆತನ ಆಜ್ಞಾವಿಧಿನಿಯಮಗಳನ್ನು ಕೈಕೊಂಡು, ಆತನ ಮಾತಿಗೆ ಲಕ್ಷ್ಯವಿಡುವೆವು ಎಂದು ನೀವು ಈಗ ಒಡಂಬಟ್ಟಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ನಮಗೆ ಸರ್ವೇಶ್ವರನೇ ದೇವರಾಗಿರುವರೆಂದು ಹಾಗು ಅವರು ಹೇಳಿದ ಮಾರ್ಗದಲ್ಲೇ ನಡೆದು ಅವರ ಆಜ್ಞಾವಿಧಿನಿರ್ಣಯಗಳನ್ನು ಕೈಕೊಂಡು ಅವರ ಮಾತಿಗೆ ಲಕ್ಷ್ಯಕೊಡುವೆವೆಂದೂ ನೀವು ಈಗ ಒಡಂಬಟ್ಟಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ನಮಗೆ ಯೆಹೋವನೇ ದೇವರಾಗಿರುವನೆಂದೂ ಆತನು ಹೇಳಿದ ಮಾರ್ಗದಲ್ಲೇ ನಡೆದು ಆತನ ಆಜ್ಞಾವಿಧಿನಿರ್ಣಯಗಳನ್ನು ಕೈಕೊಂಡು ಆತನ ಮಾತಿಗೆ ಲಕ್ಷ್ಯವಿಡುವೆವೆಂದೂ ನೀವು ಈಗ ಒಡಂಬಟ್ಟಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ನೀವು ಈ ಹೊತ್ತು, ಯೆಹೋವ ದೇವರೇ ನಮಗೆ ದೇವರು ಎಂದೂ, ಅವರ ಮಾರ್ಗಗಳಲ್ಲಿ ನಡೆದು, ಅವರು ಹೇಳಿದ ಆಜ್ಞಾವಿಧಿನಿಯಮಗಳನ್ನು ಪಾಲಿಸಿ, ಅವರ ಮಾತಿಗೆ ವಿಧೇಯರಾಗಿರುತ್ತೇವೆ ಎಂದೂ ದೃಢವಾಗಿ ಹೇಳಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 26:17
26 ತಿಳಿವುಗಳ ಹೋಲಿಕೆ  

ದೇವರು ನನ್ನನ್ನು ರಕ್ಷಿಸುತ್ತಾನೆ. ಆತನಲ್ಲಿ ಭರವಸವಿಟ್ಟಿದ್ದೇನೆ. ಆದ್ದರಿಂದ ನಾನು ಭಯಪಡೆನು. ಆತನು ನನ್ನನ್ನು ರಕ್ಷಿಸುತ್ತಾನೆ. ಯೆಹೋವನೇ ನನ್ನ ಬಲವು. ಆತನು ನನ್ನನ್ನು ರಕ್ಷಿಸುತ್ತಾನೆ. ನಾನು ಆತನಿಗೆ ಸ್ತೋತ್ರಗಾನ ಹಾಡುವೆನು.”


ವಿಶೇಷ ಒಡಂಬಡಿಕೆಯಿಂದ ಬರೆಯಲ್ಪಟ್ಟಿದ್ದ ಸುರುಳಿಯನ್ನು ಮೋಶೆಯು ಎಲ್ಲಾ ಜನರಿಗೆ ಕೇಳುವಂತೆ ಓದಿದನು. ಆಗ ಜನರು, “ಯೆಹೋವನ ಆಜ್ಞೆಗಳನ್ನೆಲ್ಲ ಅನುಸರಿಸಿ ಆತನಿಗೆ ವಿಧೇಯರಾಗಿರುತ್ತೇವೆ” ಅಂದರು.


ನಾವೆಂದೂ ನೆನಸಿಲ್ಲದ ರೀತಿಯಲ್ಲಿ ಅವರು ಕೊಟ್ಟರು. ಅವರು ತಮ್ಮ ಹಣವನ್ನು ನಮಗೆ ಕೊಡುವುದಕ್ಕಿಂತ ಮೊದಲು ತಮ್ಮನ್ನೇ ಪ್ರಭುವಿಗೂ ನಮಗೂ ಒಪ್ಪಿಸಿಕೊಟ್ಟರು. ದೇವರು ಬಯಸುವುದು ಇದನ್ನೇ.


ನಿಮ್ಮ ದೇಹದ ಅಂಗಗಳನ್ನು ಪಾಪದ ಸೇವೆಗೆ ಒಪ್ಪಿಸಬೇಡಿ; ನಿಮ್ಮ ದೇಹಗಳನ್ನು ಪಾಪಕ್ಕೆ ಒಪ್ಪಿಸಿ ದುಷ್ಟತ್ವವನ್ನು ನಡೆಸುವ ಸಾಧನಗಳಾಗಬೇಡಿ. ಅದಕ್ಕೆ ಬದಲಾಗಿ, ನಿಮ್ಮನ್ನೇ ದೇವರಿಗೆ ಸಮರ್ಪಿಸಿಕೊಳ್ಳಿರಿ; ಸತ್ತು ಈಗ ಜೀವಂತವಾಗಿ ಎದ್ದುಬಂದಿರುವವರಂತೆ ಜೀವಿಸಿರಿ; ಒಳ್ಳೆಯ ಕಾರ್ಯಗಳನ್ನು ಮಾಡುವ ಸಾಧನಗಳನ್ನಾಗಿ ನಿಮ್ಮ ದೇಹದ ಅಂಗಗಳನ್ನು ದೇವರಿಗೆ ಸಮರ್ಪಿಸಿರಿ.


ಕಳೆದ ರಾತ್ರಿ ದೇವರ ಬಳಿಯಿಂದ ದೂತನೊಬ್ಬನು ನನ್ನ ಬಳಿಗೆ ಬಂದಿದ್ದನು. ಆ ದೇವರನ್ನೇ ನಾನು ಆರಾಧಿಸುವುದು. ನಾನು ಆತನವನು.


“ಒಬ್ಬನು: ‘ನಾನು ಯೆಹೋವನಿಗೆ ಸೇರಿದವನು’ ಎಂದು ಹೇಳುತ್ತಾನೆ. ಇನ್ನೊಬ್ಬನು ಯಾಕೋಬನ ಹೆಸರನ್ನು ಬಳಸುವನು. ಮತ್ತೊಬ್ಬನು, ‘ನಾನು ಯೆಹೋವನವನು’ ಎಂದು ಸಹಿ ಹಾಕುವನು. ಮತ್ತೊಬ್ಬನು, ನಾನು ‘ಇಸ್ರೇಲನು’ ಎಂಬ ಹೆಸರನ್ನು ಬಳಸಿಕೊಳ್ಳುವನು.”


ಆದರೆ ಮೋಶೆಯು ನಿಮಗೆ ಕೊಟ್ಟ ಧರ್ಮೋಪದೇಶವನ್ನು ಮತ್ತು ವಿಧಿಗಳನ್ನು ಪಾಲಿಸಬೇಕೆಂಬುದನ್ನು ಜ್ಞಾಪಕದಲ್ಲಿಡಿ. ನೀವು ನಿಮ್ಮ ದೇವರಾದ ಯೆಹೋವನನ್ನು ನಿಮ್ಮ ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಪ್ರೀತಿಸಬೇಕು ಮತ್ತು ಆತನ ಸೇವೆ ಮಾಡಬೇಕು. ನೀವು ಆತನನ್ನು ಅನುಸರಿಸುತ್ತಾ ನಿಮ್ಮಿಂದ ಸಾಧ್ಯವಾದಷ್ಟು ಆತನ ಸೇವೆ ಮಾಡಬೇಕು” ಎಂದು ಹೇಳಿದನು.


ನಿಮ್ಮ ದೇವರಾದ ಯೆಹೋವನನ್ನು ನೀವು ಸಂಪೂರ್ಣವಾಗಿ ಪ್ರೀತಿಸಬೇಕೆಂದು ಆಜ್ಞಾಪಿಸುತ್ತೇನೆ. ಆತನ ಆಜ್ಞೆಗಳಿಗೆ, ನಿಯಮಗಳಿಗೆ ಮತ್ತು ವಿಧಿಗಳಿಗೆ ವಿಧೇಯರಾಗಬೇಕೆಂದು ನಾನು ನಿಮಗೆ ಆಜ್ಞಾಪಿಸುತ್ತೇನೆ. ಆಗ ನೀವು ಬದುಕುವಿರಿ ಮತ್ತು ನಿಮ್ಮ ಜನಾಂಗ ದೊಡ್ಡದಾಗಿ ಬೆಳೆಯುವುದು. ನಿಮಗಾಗಿ ತೆಗೆದುಕೊಳ್ಳಲು ಪ್ರವೇಶಿಸಲಿರುವ ದೇಶದಲ್ಲಿ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಆಶೀರ್ವದಿಸುವನು.


ನೀವು ಆತನ ಆಜ್ಞೆಗಳನ್ನು ಅನುಸರಿಸುವವರಾಗಿದ್ದಲ್ಲಿ, ಆತನ ವಿಧಿಕ್ರಮಗಳಿಗೆ ವಿಧೇಯರಾಗಿದ್ದಲ್ಲಿ ದೇವರು ನಿಮ್ಮನ್ನು ಆಶೀರ್ವದಿಸುವನು.


ನಿಮ್ಮ ದೇವರಾದ ಯೆಹೋವನಿಗೆ ನೀವು ಕಿವಿಗೊಟ್ಟರೆ, ನಾನು ನಿಮಗೆ ಕೊಡುವ ಆತನ ಎಲ್ಲಾ ಆಜ್ಞೆಗಳಿಗೆ ವಿಧೇಯರಾದರೆ ಇದು ಸಂಭವಿಸುವುದು. ನಿಮ್ಮ ದೇವರಾದ ಯೆಹೋವನು ಸರಿಯೆಂದು ಹೇಳುವ ಕಾರ್ಯಗಳನ್ನೇ ನೀವು ಮಾಡಬೇಕು.


ಆಗ ಜನರು ಮೋಶೆಗೆ, “ನೀನು ನಮ್ಮೊಡನೆ ಮಾತಾಡು; ನಾವು ನಿನಗೆ ಕಿವಿಗೊಡುವೆವು. ಆದರೆ ಯೆಹೋವನು ನಮ್ಮೊಡನೆ ಮಾತಾಡದಿರಲಿ. ಇಲ್ಲವಾದರೆ ನಾವು ಸಾಯುವೆವು” ಅಂದರು.


ಆ ಬಳಿಕ ನಾನು ಉಳಿದವರನ್ನು ಪರೀಕ್ಷಿಸುವೆನು. ಅವರಿಗೆ ಅನೇಕ ಸಂಕಟ ಬರಮಾಡುವೆನು. ಅದು ಬೆಳ್ಳಿಯನ್ನು ಬೆಂಕಿಯಲ್ಲಿ ಪರೀಕ್ಷಿಸಿದಂತಿರುವುದು. ಒಬ್ಬನು ಬಂಗಾರವನ್ನು ಪರೀಕ್ಷಿಸುವಂತೆ ನಾನು ಅವರನ್ನು ಪರೀಕ್ಷಿಸುವೆನು. ಆಗ ಅವರು ಸಹಾಯ ಮಾಡುವಂತೆ ನನಗೆ ಮೊರೆಯಿಡುವರು ಮತ್ತು ನಾನು ಅವರಿಗೆ ಉತ್ತರಕೊಡುವೆನು. ಆಗ ನಾನು, ‘ನೀವು ನನ್ನ ಜನರು’ ಎಂದು ಹೇಳುವೆನು. ಅದಕ್ಕವರು, ‘ಯೆಹೋವನು ನಮ್ಮ ದೇವರು’ ಎಂದು ಹೇಳುವರು.”


ಆಮೇಲೆ ಅರಸನು ತನ್ನ ಸ್ಥಳದಲ್ಲಿ ಎದ್ದುನಿಂತು, ಯೆಹೋವನ ಎಲ್ಲಾ ಕಟ್ಟಳೆಗಳಿಗೆ ವಿಧೇಯನಾಗಿ ಆತನನ್ನು ಪೂರ್ಣಹೃದಯದಿಂದಲೂ ಪೂರ್ಣಮನಸ್ಸಿನಿಂದಲೂ ಅನುಸರಿಸುವುದಾಗಿ ಪ್ರಮಾಣಮಾಡಿದನು.


ಯೆಹೋವನೇ ನನ್ನ ಬಲ, ಆತನು ನನ್ನನ್ನು ರಕ್ಷಿಸುತ್ತಾನೆ. ನನ್ನ ಬಲವೂ ಕೀರ್ತನೆಯೂ ಯಾಹುವೇ; ಆತನಿಂದ ನನಗೆ ರಕ್ಷಣೆ ಆಯಿತು. ಯೆಹೋವನು ನನ್ನ ದೇವರು. ಮತ್ತು ನಾನು ಆತನನ್ನು ಸ್ತುತಿಸುತ್ತೇನೆ. ಯೆಹೋವನೇ ನಮ್ಮ ಪೂರ್ವಿಕರ ದೇವರು. ನಾನು ಆತನನ್ನು ಸನ್ಮಾನಿಸುತ್ತೇನೆ.


ನಾನು ಸಮಾಧಾನದಿಂದ ನನ್ನ ತಂದೆಯ ಮನೆಗೆ ಹಿಂತಿರುಗಿ ಬರುವಂತೆ ಮಾಡಿದರೆ ಯೆಹೋವನೇ ನನ್ನ ದೇವರಾಗಿರುವನು.


ಜನರೆಲ್ಲರೂ ಒಟ್ಟಾಗಿ ಮಾತಾಡಿದರು. “ಯೆಹೋವನು ಹೇಳುವ ಪ್ರತಿಯೊಂದಕ್ಕೂ ನಾವು ವಿಧೇಯರಾಗುವೆವು” ಎಂದು ಅವರು ಅರಿಕೆಮಾಡಿದರು. ಬಳಿಕ ಮೋಶೆಯು ತಿರುಗಿ ಬೆಟ್ಟವನ್ನೇರಿ ಯೆಹೋವನ ಸನ್ನಿಧಿಗೆ ಹೋಗಿ ಜನರ ಪ್ರತಿಕ್ರಿಯೆಯನ್ನು ದೇವರಿಗೆ ತಿಳಿಸಿದನು.


ಈ ದೇವರೇ ಎಂದೆಂದಿಗೂ ನಮ್ಮ ದೇವರು! ನಮ್ಮನ್ನು ಶಾಶ್ವತವಾಗಿ ನಡೆಸುವಾತನು ಆತನೇ!


ಆದ್ದರಿಂದ ಆತನು ಹೇಳಿದ್ದೆಲ್ಲವನ್ನೂ ಮಾಡಿರಿ. ನಾನು ಈ ಹೊತ್ತು ನಿಮಗೆ ಹೇಳುವಂಥ ಆತನ ಅಪ್ಪಣೆಗಳಿಗೂ ವಿಧಿನಿಯಮಗಳಿಗೂ ವಿಧೇಯರಾಗಿರಿ” ಎಂದು ಹೇಳಿದನು.


ನೀವೆಲ್ಲಾ ನಿಮ್ಮ ದೇವರಾದ ಯೆಹೋವನೊಂದಿಗೆ ಒಡಂಬಡಿಕೆಯನ್ನು ಮಾಡುವುದಕ್ಕೋಸ್ಕರ ನಿಂತಿದ್ದೀರಿ. ದೇವರು ನಿಮ್ಮೊಂದಿಗೆ ಒಡಂಬಡಿಕೆಯನ್ನು ಮಾಡುತ್ತಾನೆ.


ಅದಕ್ಕೆ ಯೆಹೋಶುವನು, “ನೀವು ನಿಮ್ಮನ್ನೂ ನಿಮ್ಮ ಸುತ್ತಲಿರುವ ಜನರನ್ನೂ ನೋಡಿರಿ. ನೀವು ಯೆಹೋವನ ಸೇವೆಯನ್ನೇ ಆರಿಸಿಕೊಂಡಿದ್ದೀರಿ ಎಂಬುದು ನಿಮ್ಮೆಲ್ಲರಿಗೆ ಗೊತ್ತು ಮತ್ತು ಅದಕ್ಕೆ ನೀವು ಒಪ್ಪಿದ್ದೀರಿ. ನೀವೆಲ್ಲರೂ ಇದಕ್ಕೆ ಸಾಕ್ಷಿಯಾಗಿರುವಿರಾ?” ಎಂದು ಕೇಳಿದನು. ಜನರು, “ಹೌದು, ಇದು ನಿಜ! ನಾವೆಲ್ಲರು ಯೆಹೋವನ ಸೇವೆಯನ್ನೇ ಆರಿಸಿಕೊಂಡಿದ್ದೇವೆ” ಎಂದು ಉತ್ತರಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು