Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 26:5 - ಪರಿಶುದ್ದ ಬೈಬಲ್‌

5 ಆಗ ನಿಮ್ಮ ದೇವರಾದ ಯೆಹೋವನ ಸನ್ನಿಧಾನದಲ್ಲಿ ನೀವು ಹೀಗೆ ಅರಿಕೆ ಮಾಡಬೇಕು: ‘ನಮ್ಮ ಪೂರ್ವಿಕರು ಊರೂರು ತಿರುಗುತ್ತಿದ್ದ ಅರಾಮ್ಯರಾಗಿದ್ದರು. ಅವರು ಈಜಿಪ್ಟನ್ನು ಸೇರಿ ಅಲ್ಲಿಯೇ ನೆಲೆಸಿದರು. ಅಲ್ಲಿಗೆ ಅವರು ಹೋದಾಗ ಅವರು ಕೆಲವರೇ ಆಗಿದ್ದರು. ಆದರೆ ಕಾಲಕ್ರಮೇಣ ಅವರು ದೊಡ್ಡ ಜನಾಂಗವಾಗಿ ಅಭಿವೃದ್ಧಿ ಹೊಂದಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆಗ ನೀವು ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ, “ಅರಾಮ್ಯನಾದ ನಮ್ಮ ಮೂಲಪಿತೃವು ಗತಿಯಿಲ್ಲದವನಾಗಿ ಅಲೆದಾಡುತ್ತಾ ಸ್ವಲ್ಪ ಜನರೊಡನೆ ಐಗುಪ್ತದೇಶಕ್ಕೆ ಹೋಗಿ ಅಲ್ಲಿ ಇಳಿದುಕೊಂಡನು. ಅಲ್ಲಿ ಅವನ ಸಂತಾನದವರು ಹೆಚ್ಚಿ ಅವರು ಮಹಾಬಲಿಷ್ಠ ಜನಾಂಗವಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಆಗ ನೀವು ನಿಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ, ಅರಾಮ್ಯನಾದ ನಮ್ಮ ಮೂಲಪಿತೃವು ಗತಿಯಿಲ್ಲದವನಾಗಿ ಸ್ವಲ್ಪ ಮಂದಿಯೊಡನೆ ಈಜಿಪ್ಟ್ ದೇಶಕ್ಕೆ ಹೋಗಿ ಅಲ್ಲಿ ಇಳಿದುಕೊಂಡನು. ಅಲ್ಲಿ ಅವನ ಸಂತಾನದವರು ಹೆಚ್ಚಿ ಮಹಾಬಲಿಷ್ಠ ಜನಾಂಗವಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನೀವು ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ - ಅರಾಮ್ಯನಾದ ನಮ್ಮ ಮೂಲಪಿತೃವು ಗತಿಯಿಲ್ಲದವನಾಗಿ ಸ್ವಲ್ಪ ಮಂದಿಯೊಡನೆ ಐಗುಪ್ತದೇಶಕ್ಕೆ ಹೋಗಿ ಅಲ್ಲಿ ಇಳಿದುಕೊಂಡನು. ಅಲ್ಲಿ ಅವನ ಸಂತಾನದವರು ಹೆಚ್ಚಿ ಮಹಾಬಲಿಷ್ಠ ಜನಾಂಗವಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆಮೇಲೆ ನೀವು ನಿಮ್ಮ ದೇವರಾದ ಯೆಹೋವ ದೇವರ ಮುಂದೆ, “ಅರಾಮ್ಯನಾದ ನಮ್ಮ ಮೂಲಪಿತೃವು ಗತಿಯಿಲ್ಲದವನಾಗಿ ಅಲೆದಾಡುತ್ತಾ ಸ್ವಲ್ಪ ಜನರೊಡನೆ ಈಜಿಪ್ಟ್ ದೇಶಕ್ಕೆ ಹೋಗಿ ಅಲ್ಲಿ ಇಳಿದುಕೊಂಡನು. ಅಲ್ಲಿ ಅವನ ಸಂತಾನದವರು ಹೆಚ್ಚಿ ಬಲಿಷ್ಠವಾದ ಮಹಾಜನಾಂಗವಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 26:5
28 ತಿಳಿವುಗಳ ಹೋಲಿಕೆ  

ನಿಮ್ಮ ಪೂರ್ವಿಕರು ಈಜಿಪ್ಟಿಗೆ ಹೋದಾಗ ಅವರಲ್ಲಿ ಕೇವಲ ಎಪ್ಪತ್ತು ಮಂದಿ ಮಾತ್ರ ಇದ್ದರು. ಆದರೆ ನಿಮ್ಮ ದೇವರಾದ ಯೆಹೋವನು ಆಕಾಶದಲ್ಲಿರುವ ನಕ್ಷತ್ರಗಳಂತೆ ನಿಮ್ಮನ್ನು ಅನೇಕಾನೇಕ ಜನರನ್ನಾಗಿ ಮಾಡಿದ್ದಾನೆ.


ಅಲ್ಲಿ ಯೋಸೇಫನ ಇಬ್ಬರು ಗಂಡುಮಕ್ಕಳು ಸಹ ಇದ್ದರು. ಅವರು ಈಜಿಪ್ಟಿನಲ್ಲಿ ಹುಟ್ಟಿದವರು. ಆದ್ದರಿಂದ ಈಜಿಪ್ಟಿಗೆ ಬಂದ ಯಾಕೋಬನ ಕುಟುಂಬದವರು ಒಟ್ಟು ಎಪ್ಪತ್ತು ಮಂದಿ.


ಅರಾಮ್ಯನಾದ ಲಾಬಾನನಿಗೆ ಯಾಕೋಬನು ಮೋಸ ಮಾಡಿದನು. ತಾನು ಹೋಗುತ್ತಿರುವುದಾಗಿ ಯಾಕೋಬನು ಅವನಿಗೆ ತಿಳಿಸಲಿಲ್ಲ.


ಮುಂದಿನ ಐದು ವರ್ಷಗಳ ಬರಗಾಲದಲ್ಲಿ ನಾನು ನಿಮ್ಮನ್ನು ಪೋಷಿಸುವೆನು. ಆಗ ನಿನಗಾಗಲಿ ನಿನ್ನ ಕುಟುಂಬದವರಿಗಾಗಲಿ ಬಡತನವಿರುವುದಿಲ್ಲ’ ಎಂಬುದಾಗಿ ತಿಳಿಸಿರಿ” ಎಂದು ಹೇಳಿದನು.


ಆದ್ದರಿಂದ ಈ ದೇಶದಲ್ಲಿ ತನ್ನ ಜನರನ್ನು ಕಾಪಾಡಲು ದೇವರು ನನ್ನನ್ನು ನಿಮಗಿಂತ ಮೊದಲೇ ಇಲ್ಲಿಗೆ ಕಳುಹಿಸಿದ್ದಾನೆ.


ಈ ಸಲ ಎರಡರಷ್ಟು ಹಣವನ್ನು ನಿಮ್ಮೊಂದಿಗೆ ತೆಗೆದುಕೊಂಡು ಹೋಗಿ. ಕಳೆದ ಸಲ ನೀವು ಪಾವತಿ ಮಾಡಿದ್ದರೂ ಹಿಂತಿರುಗಿಸಲಾದ ಹಣವನ್ನು ತೆಗೆದುಕೊಂಡು ಹೋಗಿ. ಒಂದುವೇಳೆ ರಾಜ್ಯಪಾಲನು ತಪ್ಪು ಮಾಡಿದ್ದಿರಬೇಕು.


ಆ ರಾತ್ರಿ ದೇವರು ಲಾಬಾನನಿಗೆ ಕನಸಿನಲ್ಲಿ ಕಾಣಿಸಿಕೊಂಡು, “ಎಚ್ಚರಿಕೆಯಾಗಿರು; ನೀನು ಯಾಕೋಬನಿಗೆ ಹೇಳುವ ಪ್ರತಿಯೊಂದು ಮಾತಿನ ಬಗ್ಗೆ ಎಚ್ಚರಿಕೆಯಾಗಿರು” ಎಂದು ಹೇಳಿದನು.


ಆದ್ದರಿಂದ ಯಾಕೋಬನು ಈಜಿಪ್ಟಿಗೆ ಹೋದನು. ಯಾಕೋಬನು ಮತ್ತು ನಮ್ಮ ಪಿತೃಗಳು ತಾವು ಸಾಯುವವರೆಗೆ ಅಲ್ಲೇ ಇದ್ದರು.


“ಯಾಕೋಬನು ಅರಾಮ್ ದೇಶಕ್ಕೆ ಓಡಿಹೋದನು. ಅಲ್ಲಿ ಇಸ್ರೇಲನು ಒಬ್ಬ ಹೆಂಡತಿಗಾಗಿ ಸೇವೆ ಮಾಡಿದನು. ಇನ್ನೊಂದು ಹೆಂಡತಿಯನ್ನು ಮಾಡಿಕೊಳ್ಳಲಿಕ್ಕೆ ಕುರಿಗಳನ್ನು ಕಾಯ್ದನು.


ಇಸಾಕನು ನಲವತ್ತು ವರ್ಷದವನಾಗಿದ್ದಾಗ ರೆಬೆಕ್ಕಳನ್ನು ಮದುವೆಯಾದನು. ರೆಬೆಕ್ಕಳು ಪದ್ದನ್ ಅರಾಮಿನವಳು. ಆಕೆ ಬೆತೂವೇಲನ ಮಗಳು ಮತ್ತು ಅರಾಮ್ಯನಾದ ಲಾಬಾನನ ತಂಗಿ.


ನನ್ನ ಸ್ವದೇಶದಲ್ಲಿರುವ ನನ್ನ ಸ್ವಜನರ ಬಳಿಗೆ ಹೋಗಿ ನನ್ನ ಮಗನಾದ ಇಸಾಕನಿಗೆ ಕನ್ನಿಕೆಯನ್ನು ಹುಡುಕಿ ಕರೆದುಕೊಂಡು ಬರುವುದಾಗಿಯೂ ಭೂಪರಲೋಕಗಳ ದೇವರಾದ ಯೆಹೋವನ ಮೇಲೆ ಪ್ರಮಾಣಮಾಡು” ಎಂದು ಹೇಳಿದನು.


ದೇವರು ನಿಮ್ಮನ್ನೇ ಯಾಕೆ ಪ್ರೀತಿಸಿ ಆರಿಸಿಕೊಂಡನು? ನೀವು ದೊಡ್ಡ ಜನಾಂಗವಾಗಿರುವ ಕಾರಣದಿಂದಲ್ಲ, ನಿಜವಾಗಿಯೂ ನೀವು ಚಿಕ್ಕ ಜನಾಂಗವೇ.


ಈಜಿಪ್ಟಿನವರು ಇಸ್ರೇಲರಿಂದ ಪ್ರಯಾಸಕರವಾದ ಕೆಲಸಗಳನ್ನು ಬಲವಂತವಾಗಿ ಮಾಡಿಸಿದಷ್ಟೂ ಇಸ್ರೇಲರು ಹೆಚ್ಚು ಹರಡಿಕೊಂಡದ್ದರಿಂದ ಈಜಿಪ್ಟಿನ ಜನರು ಇಸ್ರೇಲರಿಗೆ ಹೆಚ್ಚೆಚ್ಚಾಗಿ ಭಯಪಟ್ಚರು.


ಆದರೆ ಇಸ್ರೇಲರಿಗೆ ಅನೇಕ ಮಕ್ಕಳಿದ್ದರು; ಅವರ ಸಂಖ್ಯೆಯು ಹೆಚ್ಚಾಗತೊಡಗಿತು. ಇಸ್ರೇಲರು ಬಲಗೊಂಡರು; ಈಜಿಪ್ಟಿನಲ್ಲೆಲ್ಲಾ ತುಂಬಿಕೊಂಡರು.


ಯಾಕೋಬನ ಸಂತತಿಯವರಲ್ಲಿ ಒಟ್ಟು ಎಪ್ಪತ್ತು ಮಂದಿ ಇದ್ದರು. (ಯಾಕೋಬನ ಹನ್ನೆರಡು ಮಂದಿ ಗಂಡುಮಕ್ಕಳಲ್ಲಿ ಒಬ್ಬನಾದ ಯೋಸೇಫನು ಮೊದಲೇ ಈಜಿಪ್ಟಿನಲ್ಲಿದ್ದನು.)


ಇಸ್ರೇಲನು ಈಜಿಪ್ಟಿನಲ್ಲಿ ಇಳಿದುಕೊಂಡನು. ಅವನು ಗೋಷೆನ್ ಪ್ರಾಂತ್ಯದಲ್ಲಿ ವಾಸಿಸಿದನು. ಅವನ ಕುಟುಂಬವು ಬೆಳೆದು ತುಂಬ ದೊಡ್ಡದಾಯಿತು. ಅವರು ಈಜಿಪ್ಟಿನಲ್ಲಿ ಜಮೀನನ್ನು ಪಡೆದುಕೊಂಡರು ಮತ್ತು ಸುಖವಾಗಿದ್ದರು.


ಹಗಲಿನಲ್ಲಿ ಸೂರ್ಯನಿಂದ ನನ್ನ ಶಕ್ತಿಯನ್ನು ಕುಂದಿಸಿದೆ; ರಾತ್ರಿಯಲ್ಲಿ ಚಳಿಯಿಂದ ನನಗೆ ನಿದ್ರೆಯು ಬರಲಿಲ್ಲ.


ಅಂತೆಯೇ ಯಾಕೋಬನು ಪದ್ದನ್‌ಅರಾಮಿಗೆ ಹೊರಟು ರೆಬೆಕ್ಕಳ ಅಣ್ಣನಾದ ಲಾಬಾನನ ಬಳಿಗೆ ಹೋದನು. ಬೆತೂವೇಲನು ಲಾಬಾನನ ಮತ್ತು ರೆಬೆಕ್ಕಳ ತಂದೆ. ರೆಬೆಕ್ಕಳು ಯಾಕೋಬನ ಮತ್ತು ಏಸಾವನ ತಾಯಿ.


ಅಂದಿನಿಂದ ಏಸಾವನು ಯಾಕೋಬನನ್ನು ದ್ವೇಷಿಸಿದನು. ಏಸಾವನು ತನ್ನೊಳಗೆ, “ನನ್ನ ತಂದೆ ಬಹುಬೇಗನೆ ಸತ್ತುಹೋಗುವನು. ಆಗ ನಾನು ಅವನಿಗಾಗಿ ದುಃಖಿಸಿ ಆ ಬಳಿಕ ಯಾಕೋಬನನ್ನು ಕೊಲ್ಲುವೆನು” ಅಂದುಕೊಂಡನು.


ನಾನು ನಿನ್ನನ್ನು ಆಶೀರ್ವದಿಸುವೆನು; ನಿನ್ನನ್ನು ದೊಡ್ಡ ಜನಾಂಗವನ್ನಾಗಿ ಮಾಡಿ ನಿನ್ನ ಹೆಸರನ್ನು ಪ್ರಖ್ಯಾತಿಪಡಿಸುವೆನು; ನೀನು ಆಶೀರ್ವಾದದಾಯಕನಾಗುವಂತೆ ಮಾಡುವೆನು.


ಅವರು ಫರೋಹನಿಗೆ, “ಬರಗಾಲವು ಕಾನಾನ್ ದೇಶದಲ್ಲಿ ತುಂಬ ಘೋರವಾಗಿದೆ. ಯಾವ ಹೊಲದಲ್ಲಿಯೂ ನಮ್ಮ ಪಶುಗಳಿಗೆ ಹುಲ್ಲು ಉಳಿದಿಲ್ಲ. ಆದ್ದರಿಂದ ನಾವು ಈ ದೇಶದಲ್ಲಿ ವಾಸಿಸಲು ಬಂದಿದ್ದೇವೆ. ನಾವು ಗೋಷೆನ್ ಪ್ರಾಂತ್ಯದಲ್ಲಿ ವಾಸಿಸಲು ದಯವಿಟ್ಟು ನಮಗೆ ಅವಕಾಶ ಮಾಡಿಕೊಡಬೇಕೆಂದು ಕೇಳಿಕೊಳ್ಳುತ್ತಿದ್ದೇವೆ” ಎಂದು ಹೇಳಿದರು.


ಈಗ ನಿಮ್ಮ ಜನಸಂಖ್ಯೆಯು ಇನ್ನೂ ಅಧಿಕವಾಗಿರುತ್ತದೆ. ದೇವರಾದ ಯೆಹೋವನು ನಿಮ್ಮನ್ನು ವೃದ್ಧಿಪಡಿಸುತ್ತಿರುವುದರಿಂದ ನೀವು ಈಗ ಆಕಾಶದ ನಕ್ಷತ್ರಗಳಷ್ಟು ಇರುವಿರಿ.


“ಯಾಜಕನು ನಿಮ್ಮ ಕೈಯಲ್ಲಿರುವ ಪುಟ್ಟಿಯನ್ನು ತೆಗೆದುಕೊಂಡು ಯೆಹೋವನ ಯಜ್ಞವೇದಿಕೆಯ ಎದುರು ಇಡುವನು.


ಆದರೆ ದೇವರು ಇಸ್ರೇಲರನ್ನು ಈಜಿಪ್ಟಿನಿಂದ ಹೊರತರುವದಕ್ಕಾಗಿ ಒಬ್ಬ ಪ್ರವಾದಿಯನ್ನು ಉಪಯೋಗಿಸಿದನು. ಇಸ್ರೇಲರನ್ನು ಪ್ರವಾದಿಯ ಮೂಲಕ ಬಿಡಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು