Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 26:9 - ಪರಿಶುದ್ದ ಬೈಬಲ್‌

9 ಅಲ್ಲಿಂದ ನಮ್ಮನ್ನು ಕರೆದುತಂದು ನಮಗೆ ಈ ಒಳ್ಳೆಯ ದೇಶವನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅವನು ನಮ್ಮನ್ನು ಐಗುಪ್ತದೇಶದಿಂದ ಕರೆತಂದು ಹಾಲೂ ಮತ್ತು ಜೇನೂ ಹರಿಯುವ ಈ ದೇಶವನ್ನು ನಮಗೆ ಕೊಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಈಜಿಪ್ಟ್ ದೇಶದಿಂದ ಕರೆದುತಂದು ಹಾಲೂಜೇನೂ ಹರಿಯುವ ಈ ನಾಡನ್ನು ನಮಗೆ ಕೊಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನಮ್ಮನ್ನು ಬಿಡಿಸಿ ಐಗುಪ್ತದೇಶದಿಂದ ಕರತಂದು ಹಾಲೂ ಜೇನೂ ಹರಿಯುವ ಈ ದೇಶವನ್ನು ನಮಗೆ ಕೊಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ನಮ್ಮನ್ನು ಈ ಸ್ಥಳಕ್ಕೆ ಕರೆತಂದು, ಹಾಲೂ ಜೇನೂ ಹರಿಯುವ ದೇಶವಾಗಿರುವ ಈ ದೇಶವನ್ನು ನಮಗೆ ಕೊಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 26:9
12 ತಿಳಿವುಗಳ ಹೋಲಿಕೆ  

ಈಗ ನಾನು ಇಳಿದುಹೋಗಿ ಈಜಿಪ್ಟಿನವರಿಂದ ನನ್ನ ಜನರನ್ನು ರಕ್ಷಿಸುವೆನು. ನಾನು ಅವರನ್ನು ಆ ದೇಶದಿಂದ ಬಿಡುಗಡೆ ಮಾಡಿ ಒಳ್ಳೆಯದಾದ ಮತ್ತು ವಿಶಾಲವಾದ ದೇಶಕ್ಕೆ ಅವರನ್ನು ನಡೆಸುವೆನು. ಅದು ಸಮೃದ್ಧಿಕರವಾದ ದೇಶ. ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು ಮತ್ತು ಯೆಬೂಸಿಯರು ವಾಸವಾಗಿರುವ ದೇಶ ಅದಾಗಿದೆ.


ಆದರೆ ದೇವರು ನನಗೆ ಸಹಾಯಮಾಡಿದನು. ಆತನು ಇಂದಿನವರೆಗೂ ನನಗೆ ಸಹಾಯಮಾಡುತ್ತಿದ್ದಾನೆ. ಆದ್ದರಿಂದಲೇ ಇಂದು ಇಲ್ಲಿ ನಿಂತುಕೊಂಡಿದ್ದೇನೆ ಮತ್ತು ನಾನು ಕಂಡ ಸಂಗತಿಗಳ ಬಗ್ಗೆ ಜನರಿಗೆಲ್ಲಾ ಸಾಕ್ಷಿ ಹೇಳುತ್ತಿದ್ದೇನೆ. ಆದರೆ ನಾನು ಯಾವ ಹೊಸದನ್ನೂ ಹೇಳದೆ, ಮೋಶೆ ಮತ್ತು ಪ್ರವಾದಿಗಳು ಮುಂದೆ ನೆರವೇರುತ್ತವೆ ಎಂದು ಹೇಳಿದ ಸಂಗತಿಗಳನ್ನೇ ಹೇಳುತ್ತಿದ್ದೇನೆ.


ಅವರು ಅಡವಿಯಲ್ಲಿದ್ದಾಗ ನಾನು ಮತ್ತೊಂದು ಪ್ರಮಾಣವನ್ನು ಮಾಡಿದೆನು. ನಾನು ಅವರಿಗೆ ಕೊಟ್ಟಿದ್ದ ದೇಶಕ್ಕೆ ಅವರನ್ನು ಹೋಗಗೊಡಿಸುವದಿಲ್ಲ ಎಂದು ಪ್ರಮಾಣ ಮಾಡಿದೆನು. ಆ ದೇಶವು ಅತ್ಯುತ್ತಮವಾಗಿತ್ತು. ಎಲ್ಲಾ ದೇಶಗಳಿಗಿಂತ ಬಹು ಸುಂದರವಾದ ದೇಶ.


ಅವರನ್ನು ಈಜಿಪ್ಟಿನಿಂದ ಹೊರಗೆ ತಂದು, ನಾನು ಅವರಿಗಾಗಿ ಹುಡುಕಿಟ್ಟಿರುವ ದೇಶಕ್ಕೆ ಕರೆದುಕೊಂಡು ಹೋಗುವುದಾಗಿ ವಾಗ್ದಾನ ಮಾಡಿದೆನು. ಅದು ಹಾಲೂ ಜೇನೂ ಹರಿಯುವ ದೇಶವಾಗಿತ್ತು. ಅದು ಎಲ್ಲಾ ದೇಶಗಳಿಗಿಂತಲೂ ಸುಂದರವಾದ ದೇಶ.


ಅನ್ಯಜನರು ವಾಸವಾಗಿದ್ದ ದೇಶವನ್ನು ದೇವರು ತನ್ನ ಜನರಿಗೆ ಕೊಟ್ಟನು. ಅನ್ಯಜನರು ದುಡಿದು ಸಂಪಾದಿಸಿದ್ದವುಗಳನ್ನು ದೇವಜನರು ಪಡೆದುಕೊಂಡರು.


ಅನಂತರ ಸಮುವೇಲನು ವಿಶೇಷವಾದ ಕಲ್ಲನ್ನು ನೆಡಿಸಿದನು. ಯೆಹೋವನು ಮಾಡಿದ ಕಾರ್ಯಗಳನ್ನು ಜನರು ಜ್ಞಾಪಿಸಿಕೊಳ್ಳುತ್ತಿರಲಿ ಎಂಬುದಕ್ಕಾಗಿ ಅವನು ಈ ರೀತಿ ಮಾಡಿದನು. ಸಮುವೇಲನು ಮಿಚ್ಪೆ ಮತ್ತು ಶೇನಿಗಳ ಮಧ್ಯೆ ಕಲ್ಲನ್ನು ನೆಟ್ಟು, “ಯೆಹೋವನು ಇಲ್ಲಿಯವರೆಗೂ ನಮಗೆ ಸಹಾಯ ಮಾಡಿದನು” ಎಂದು ಹೇಳಿ, ಅದಕ್ಕೆ “ಸಹಾಯದ ಕಲ್ಲು” ಎಂದು ಹೆಸರಿಟ್ಟನು.


“ನಾನು ಇಹಲೋಕ ಯಾತ್ರೆಯನ್ನು ಮುಗಿಸುವ ಕಾಲಬಂದಂತಿದೆ. ಯೆಹೋವನು ನಿಮಗಾಗಿ ಅನೇಕ ಮಹತ್ಕಾರ್ಯಗಳನ್ನು ಮಾಡಿದ್ದು ನಿಮಗೆ ಗೊತ್ತಿದೆ; ಅದನ್ನು ನೀವು ಮನಃಪೂರ್ವಕವಾಗಿ ನಂಬುತ್ತೀರಿ. ಆತನು ತನ್ನ ಯಾವ ವಾಗ್ದಾನವನ್ನೂ ನೆರವೇರಿಸದೆ ಬಿಟ್ಟಿಲ್ಲ. ಯೆಹೋವನು ನಮಗೆ ಮಾಡಿದ ಪ್ರತಿಯೊಂದು ವಾಗ್ದಾನವನ್ನು ನೆರವೇರಿಸಿದ್ದಾನೆ.


ಈಜಿಪ್ಟಿನಲ್ಲಿ ನೀವು ಅನುಭವಿಸುತ್ತಿರುವ ಸಂಕಟಗಳಿಂದ ಬಿಡಿಸಬೇಕೆಂದು ತೀರ್ಮಾನಿಸಿದ್ದೇನೆ. ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು ಮತ್ತು ಯೆಬೂಸಿಯರು ವಾಸವಾಗಿರುವ ಸಮೃದ್ಧಿಕರವಾದ ದೇಶಕ್ಕೆ ನಾನು ನಿಮ್ಮನ್ನು ನಡೆಸುವೆನು!’ ಎಂದು ಹೇಳು.


ನಿನ್ನ ಪರಿಶುದ್ಧ ನಿವಾಸದಿಂದ ನನ್ನನ್ನು ನೋಡು. ನಿನ್ನ ಜನಾಂಗವಾದ ಇಸ್ರೇಲನ್ನು ಆಶೀರ್ವದಿಸು. ನೀನು ನಮಗೆ ಕೊಟ್ಟಿರುವ ದೇಶವನ್ನು ಆಶೀರ್ವದಿಸು. ಸಮೃದ್ಧಿಯಿಂದ ಕೂಡಿದ ಈ ದೇಶವನ್ನು ನಮಗೆ ಕೊಡುವೆ ಎಂದು ನಮ್ಮ ಪೂರ್ವಿಕರಿಗೆ ನೀನು ವಾಗ್ದಾನ ಮಾಡಿರುವೆ.’


ಅದರ ಮೇಲೆ ನಾನು ಆಜ್ಞಾಪಿಸಿದ್ದನ್ನೆಲ್ಲಾ ಬರೆಯಿರಿ. ನೀವು ನದಿಯನ್ನು ದಾಟಿದಾಗ ಈ ಕಾರ್ಯವನ್ನು ಮಾಡಬೇಕು. ಅನಂತರ, ಆತನು ನಿಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿದ ಸಮೃದ್ಧಿಯಾದ ದೇಶದೊಳಕ್ಕೆ ಹೋಗಿರಿ.


ಇಸ್ರೇಲಿನ ಜನರೇ, ಕಿವಿಗೊಟ್ಟು ಕೇಳಿರಿ. ದೇವರ ಆಜ್ಞೆಗಳಿಗೆ ವಿಧೇಯರಾಗಿರಿ. ಆಗ ನಿಮಗೆ ಎಲ್ಲಾದರಲ್ಲಿ ಶುಭವಾಗುವುದು. ನಿಮಗೆ ಹೆಚ್ಚು ಮಕ್ಕಳಾಗುವವು. ನೀವು ನೆಲೆಸುವ ದೇಶವು ನಿಮ್ಮ ಪೂರ್ವಿಕರಿಗೆ ದೇವರು ವಾಗ್ದಾನ ಮಾಡಿದ ಪ್ರಕಾರ ಫಲಭರಿತವಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು