Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 27:2 - ಪರಿಶುದ್ದ ಬೈಬಲ್‌

2 ನೀವು ಬೇಗನೆ ಜೋರ್ಡನ್ ನದಿಯನ್ನು ದಾಟಿ ನಿಮ್ಮ ದೇವರಾದ ಯೆಹೋವನು ಕೊಡುವ ದೇಶವನ್ನು ಪ್ರವೇಶಿಸುವಿರಿ. ಆ ದಿವಸ ದೊಡ್ಡ ದೊಡ್ಡ ಕಲ್ಲುಗಳನ್ನು ರಾಶಿ ಹಾಕಿ ಅದನ್ನು ಗಾರೆ ಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದಲ್ಲಿ ಪ್ರವೇಶಿಸುವುದಕ್ಕೆ ನೀವು ಯೊರ್ದನ್ ನದಿಯನ್ನು ದಾಟುವಾಗ ನೀವು ದೊಡ್ಡ ಕಲ್ಲುಗಳನ್ನು ನಿಲ್ಲಿಸಿ, ಅವುಗಳಿಗೆ ಗಿಲಾವು ಮಾಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2-3 ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಕೊಡುವ ನಾಡನ್ನು ಪ್ರವೇಶಿಸುವುದಕ್ಕೆ ನೀವು ಜೋರ್ಡನ್ ನದಿಯನ್ನು ದಾಟುವಾಗ ಅಂದರೆ, ನಿಮ್ಮ ಪಿತೃಗಳ ದೇವರಾದ ಸರ್ವೇಶ್ವರ ತಾವು ವಾಗ್ದಾನ ಮಾಡಿದಂತೆ ನಿಮಗೆ ಕೊಡುವ ಹಾಲೂ ಜೇನೂ ಹರಿಯುವ ನಾಡನ್ನು ಪ್ರವೇಶಿಸುವುದಕ್ಕೆ ನೀವು ಜೋರ್ಡನ್ ನದಿಯನ್ನು ದಾಟುವಾಗ, ನೀವು ದೊಡ್ಡ ಕಲ್ಲುಗಳನ್ನು ನಿಲ್ಲಿಸಬೇಕು. ಅವುಗಳಿಗೆ ಗಿಲಾವು ಮಾಡಿಸಿ ಈ ಧರ್ಮಶಾಸ್ತ್ರದ ವಾಕ್ಯಗಳನ್ನೆಲ್ಲಾ ಅವುಗಳ ಮೇಲೆ ಬರೆಯಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2-3 ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದಲ್ಲಿ ಪ್ರವೇಶಿಸುವದಕ್ಕೆ ನೀವು ಯೊರ್ದನ್ ಹೊಳೆಯನ್ನು ದಾಟುವಾಗ ಅಂದರೆ ನಿಮ್ಮ ಪಿತೃಗಳ ದೇವರಾದ ಯೆಹೋವನು ತಾನು ವಾಗ್ದಾನ ಮಾಡಿದಂತೆ ನಿಮಗೆ ಕೊಡುವ ಹಾಲೂ ಜೇನೂ ಹರಿಯುವ ದೇಶವನ್ನು ಪ್ರವೇಶಿಸುವದಕ್ಕೆ ನೀವು ಯೊರ್ದನ್ ಹೊಳೆಯನ್ನು ದಾಟುವಾಗ ನೀವು ದೊಡ್ಡ ಕಲ್ಲುಗಳನ್ನು ನಿಲ್ಲಿಸಿ ಅವುಗಳಿಗೆ ಗಿಲಾವುಮಾಡಿಸಿ ಈ ಧರ್ಮಶಾಸ್ತ್ರದ ವಾಕ್ಯಗಳನ್ನೆಲ್ಲಾ ಅವುಗಳ ಮೇಲೆ ಬರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಡುವ ದೇಶಕ್ಕೆ ನೀವು ಯೊರ್ದನನ್ನು ದಾಟಿ ಪ್ರವೇಶಿಸುವಾಗ, ದೊಡ್ಡ ಕಲ್ಲುಗಳನ್ನು ನಿಲ್ಲಿಸಿ, ಅವುಗಳಿಗೆ ಗಿಲಾವು ಮಾಡಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 27:2
16 ತಿಳಿವುಗಳ ಹೋಲಿಕೆ  

ದೇವರು ಹೇಳಿದ್ದೇನೆಂದರೆ, “ನಾನು ನಿಮ್ಮಲ್ಲಿ ಒಂದು ಹೊಸ ಆತ್ಮವನ್ನಿಟ್ಟು ನಿಮ್ಮ ಯೋಚನೆಯ ರೀತಿಯನ್ನು ಬದಲಾಯಿಸುವೆನು. ನಿಮ್ಮ ಕಲ್ಲಿನ ಹೃದಯವನ್ನು ತೆಗೆದುಬಿಟ್ಟು ಮೃದುವಾದ ಮಾನವ ಹೃದಯವನ್ನು ಕೊಡುವೆನು.


ಅವರನ್ನು ಹಿಂದಕ್ಕೆ ಬರಮಾಡಿ ಒಗ್ಗಟ್ಟಿನಲ್ಲಿರುವಂತೆ ಮಾಡುವೆನು. ಅವರಲ್ಲಿ ಹೊಸ ಆತ್ಮವನ್ನು ಇರಿಸುವೆನು. ಅವರಲ್ಲಿರುವ ಕಲ್ಲಿನ ಹೃದಯವನ್ನು ತೆಗೆದು ಮೃದುವಾದ ಹೃದಯವನ್ನಿಡುವೆನು.


ಯಜ್ಞವೇದಿಕೆಯನ್ನು ಹೇಗೆ ಕಟ್ಟಬೇಕೆಂಬುದನ್ನು ಯೆಹೋವನ ಸೇವಕನಾದ ಮೋಶೆಯು ಇಸ್ರೇಲರಿಗೆ ಹೇಳಿ ಕೊಟ್ಟಿದ್ದನು. ಆದ್ದರಿಂದ ಮೋಶೆಯ ಧರ್ಮಶಾಸ್ತ್ರದ ಗ್ರಂಥದಲ್ಲಿ ವಿವರಿಸಿದಂತೆ ಯೆಹೋಶುವನು ಯಜ್ಞವೇದಿಕೆಯನ್ನು ಕಟ್ಟಿಸಿದನು. ಯಜ್ಞವೇದಿಕೆಯನ್ನು ಕಡಿಯದ ಕಲ್ಲುಗಳಿಂದ ಮಾಡಲಾಯಿತು. ಆ ಕಲ್ಲುಗಳ ಮೇಲೆ ಯಾವ ಉಪಕರಣವನ್ನೂ ಉಪಯೋಗಿಸಿರಲಿಲ್ಲ. ಯೆಹೋವನಿಗೆ ಆ ಯಜ್ಞವೇದಿಕೆಯ ಮೇಲೆ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಅರ್ಪಿಸಿದರು.


ಜನರೆಲ್ಲರೂ ಜೋರ್ಡನ್ ನದಿಯನ್ನು ದಾಟಿದರು. ಆಗ ಯೆಹೋವನು ಯೆಹೋಶುವನಿಗೆ,


“ನೀವು ಪಾಳೆಯದ ಎಲ್ಲಾ ಕಡೆಗೆ ಹೋಗಿ ಜನರಿಗೆ ಸಿದ್ಧವಾಗಿರಲು ತಿಳಿಸಿರಿ; ಸ್ವಲ್ಪ ಆಹಾರವನ್ನು ಸಿದ್ಧಪಡಿಸಿಕೊಳ್ಳಲು ಹೇಳಿರಿ. ಇನ್ನು ಮೂರು ದಿವಸಗಳಲ್ಲಿ ನಾವು ಈ ಜೋರ್ಡನ್ ನದಿಯನ್ನು ದಾಟಿ ಹೋಗುವೆವು. ನಾನು ಹೋಗಿ ಯೆಹೋವನಾದ ನಮ್ಮ ದೇವರು ನಮಗೆ ಕೊಡುವ ದೇಶವನ್ನು ವಶಪಡಿಸಿಕೊಳ್ಳುವೆವು ಎಂದು ಹೇಳಿರಿ” ಎಂದು ಆಜ್ಞಾಪಿಸಿದನು.


ಅದರ ಮೇಲೆ ನಾನು ಆಜ್ಞಾಪಿಸಿದ್ದನ್ನೆಲ್ಲಾ ಬರೆಯಿರಿ. ನೀವು ನದಿಯನ್ನು ದಾಟಿದಾಗ ಈ ಕಾರ್ಯವನ್ನು ಮಾಡಬೇಕು. ಅನಂತರ, ಆತನು ನಿಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿದ ಸಮೃದ್ಧಿಯಾದ ದೇಶದೊಳಕ್ಕೆ ಹೋಗಿರಿ.


“ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶವನ್ನು ನೀವು ಬೇಗನೆ ಪ್ರವೇಶಿಸಲಿದ್ದೀರಿ. ಆ ದೇಶವನ್ನು ಸ್ವಾಧೀನಮಾಡಿಕೊಂಡು ಅಲ್ಲಿ ನೆಲೆಸುವಿರಿ.


ನೀವು ಜೋರ್ಡನ್ ನದಿಯನ್ನು ದಾಟಿ, ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶವನ್ನು ಸ್ವಾಧೀನಮಾಡಿಕೊಳ್ಳಿರಿ. ಈ ದೇಶವು ನಿಮ್ಮದೇ.


“ಇಸ್ರೇಲ್ ಜನರೇ, ಕೇಳಿರಿ. ಈ ದಿನ ನೀವು ಜೋರ್ಡನ್ ನದಿಯನ್ನು ದಾಟಿ ಆ ದೇಶವನ್ನು ಪ್ರವೇಶಿಸಿ ನಿಮಗಿಂತ ಬಲಿಷ್ಠವಾದ ಜನಾಂಗಗಳನ್ನು ಹೊಡೆದೋಡಿಸುವಿರಿ. ಅವರ ಪಟ್ಟಣಗಳು ದೊಡ್ಡದಾಗಿವೆ; ಅದರ ಗೋಡೆಗಳು ಆಕಾಶದಷ್ಟು ಎತ್ತರವಾಗಿವೆ;


“ನಿಮ್ಮದೇವರಾದ ಯೆಹೋವನು ನಿಮಗೆ ಉಪದೇಶಿಸಲೆಂದು ನನಗೆ ಕೊಟ್ಟ ಆಜ್ಞೆಗಳು, ಕಟ್ಟಳೆಗಳು ಮತ್ತು ನಿಯಮಗಳು ಇವೇ. ನೀವು ವಾಸಮಾಡಲು ಪ್ರವೇಶಿಸಲಿರುವ ದೇಶದಲ್ಲಿ ಅವುಗಳನ್ನು ಪಾಲಿಸಿರಿ.


ಮೋಶೆ ಮತ್ತು ಸಮೂಹದ ಹಿರಿಯರು ಜನರೊಂದಿಗೆ ಮಾತನಾಡಿದರು. ಮೋಶೆಯು ಹೇಳಿದ್ದೇನೆಂದರೆ: “ನಾನು ಆಜ್ಞಾಪಿಸಿದ ಎಲ್ಲಾ ವಿಧಿಗಳನ್ನು ಅನುಸರಿಸಿರಿ.


“ನೀವು ಆ ದೇಶದೊಳಗೆ ಪ್ರವೇಶ ಮಾಡಿದ ನಂತರ ನಾನು ಹೇಳಿದ್ದೆಲ್ಲವನ್ನು ನೀವು ಪರಿಪಾಲಿಸಬೇಕು. ಏಬಾಲ್ ಬೆಟ್ಟದ ಮೇಲೆ ಸ್ಮಾರಕ ಸ್ತಂಭವನ್ನು ನಿಲ್ಲಿಸಬೇಕು. ಅದಕ್ಕೆ ಗಾರೆ ಮಾಡಿ.


ಆಗ ಇಸ್ರೇಲಿನ ದೇವರಾದ ಯೆಹೋವನಿಗಾಗಿ ಯೆಹೋಶುವನು ಒಂದು ಯಜ್ಞವೇದಿಕೆಯನ್ನು ಏಬಾಲ್ ಬೆಟ್ಟದ ಮೇಲೆ ಕಟ್ಟಿಸಿದನು.


ಆ ಸ್ಥಳದಲ್ಲಿ ಯೆಹೋಶುವನು ಮೋಶೆಯ ಧರ್ಮಶಾಸ್ತ್ರವನ್ನು ಕಲ್ಲಿನ ಹಲಗೆಗಳ ಮೇಲೆ ಬರೆಸಿದನು. ಇಸ್ರೇಲರೆಲ್ಲರೂ ಅದನ್ನು ನೋಡಬೇಕೆಂಬುದೇ ಅದರ ಉದ್ದೇಶವಾಗಿತ್ತು.


ನನ್ನ ಮಾತುಗಳನ್ನು ಸೀಸದ ಹಲಗೆಯ ಮೇಲೆಯೂ ಬಂಡೆಯ ಮೇಲೆಯೂ ಕೆತ್ತಿದರೆ ಎಷ್ಟೋ ಒಳ್ಳೆಯದು. ಆಗ ಅವು ಶಾಶ್ವತವಾಗಿರುತ್ತವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು