Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 28:15 - ಪರಿಶುದ್ದ ಬೈಬಲ್‌

15 “ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ಆಜ್ಞೆ, ಕಟ್ಟಳೆಗಳಿಗೆ ನೀವು ವಿಧೇಯರಾಗದಿದ್ದರೆ ಈ ಕೆಟ್ಟ ಸಂಗತಿಗಳು ನಿಮಗೆ ತಟ್ಟುವವು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆದರೆ ನೀವು ನಿಮ್ಮ ದೇವರಾದ ಯೆಹೋವನ ಮಾತಿಗೆ ಕಿವಿಗೊಡದೆ, ನಾನು ಈಗ ನಿಮಗೆ ಬೋಧಿಸುವ ಆತನ ಆಜ್ಞಾವಿಧಿಗಳನ್ನು ಅನುಸರಿಸದೆ ಹೋದರೆ ಈ ಶಾಪಗಳು ನಿಮಗೆ ಪ್ರಾಪ್ತವಾಗುವವು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 “ಆದರೆ ನೀವು ನಿಮ್ಮ ದೇವರಾದ ಸರ್ವೇಶ್ವರನ ಮಾತಿಗೆ ಕಿವಿಗೊಡದೆ, ನಾನು ಈಗ ನಿಮಗೆ ಬೋಧಿಸುವ ಅವರ ಆಜ್ಞಾವಿಧಿಗಳನ್ನು ಅನುಸರಿಸದೆ ಹೋದರೆ, ಈ ಕೆಳಕಂಡ ಅಶುಭಗಳು ನಿಮಗೆ ಪ್ರಾಪ್ತವಾಗುವುವು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆದರೆ ನೀವು ನಿಮ್ಮ ದೇವರಾದ ಯೆಹೋವನ ಮಾತಿಗೆ ಕಿವಿಗೊಡದೆ ನಾನು ಈಗ ನಿಮಗೆ ಬೋಧಿಸುವ ಆತನ ಆಜ್ಞಾವಿಧಿಗಳನ್ನು ಅನುಸರಿಸದೆ ಹೋದರೆ ಈ ಅಶುಭಗಳು ನಿಮಗೆ ಪ್ರಾಪ್ತವಾಗುವವು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ನೀವು ನಿಮ್ಮ ದೇವರಾದ ಯೆಹೋವ ದೇವರ ಮಾತನ್ನು ಕೇಳದೆ, ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವ ಅವರ ಎಲ್ಲಾ ಆಜ್ಞೆಗಳನ್ನು ಕೈಗೊಳ್ಳದೇ ಹೋದರೆ, ಈ ಎಲ್ಲಾ ಶಾಪಗಳು ನಿಮ್ಮ ಮೇಲೆ ಬಂದು ನಿಮ್ಮನ್ನು ಹಿಡಿದುಕೊಳ್ಳುವವು:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 28:15
31 ತಿಳಿವುಗಳ ಹೋಲಿಕೆ  

ನನ್ನ ನಾಮವನ್ನು ಘನಪಡಿಸದೆ ಹೋದರೆ ಕೆಟ್ಟ ವಿಷಯಗಳು ನಿಮಗೆ ಪ್ರಾಪ್ತಿಯಾಗುವವು. ನೀವು ಆಶೀರ್ವದಿಸುವಿರಿ. ಆದರೆ ಅದು ಶಾಪವಾಗುವದು. ಕೆಟ್ಟ ವಿಷಯಗಳು ನೆರವೇರುವಂತೆ ನಾನು ಮಾಡುವೆನು. ಯಾಕೆಂದರೆ ನೀವು ನನ್ನ ಹೆಸರನ್ನು ಘನಪಡಿಸುವದಿಲ್ಲ.” ಇದನ್ನು ಸರ್ವಶಕ್ತನಾದ ಯೆಹೋವನು ನುಡಿದಿದ್ದಾನೆ.


ನೀವು ದೇವರಿಗೆ ವಿಧೇಯರಾದರೆ ಈ ಎಲ್ಲಾ ಆಶೀರ್ವಾದಗಳು ನಿಮ್ಮದಾಗುವವು.


ಯೆಹೋವನು ತಾನು ನಿಯೋಜಿಸಿದಂತೆ ಮಾಡಿದನು. ತಾನು ಮಾಡುತ್ತೇನೆಂದು ಹೇಳಿದ್ದನ್ನು ಆತನು ಮಾಡಿದ್ದಾನೆ. ಪುರಾತನ ಕಾಲದಿಂದ ತಾನು ವಿಧಿಸಿದ್ದನ್ನು ಆತನು ಮಾಡಿದ್ದಾನೆ. ಆತನು ನಿಷ್ಕರುಣೆಯಿಂದ ನಾಶಮಾಡಿದ್ದಾನೆ. ನಿನಗೆ ಸಂಭವಿಸಿದವುಗಳ ಮೂಲಕವಾಗಿ ಆತನು ನಿನ್ನ ವೈರಿಗಳನ್ನು ಸಂತೋಷಪಡಿಸಿದ್ದಾನೆ. ಆತನು ನಿನ್ನ ವೈರಿಗಳ ಸಾಮರ್ಥ್ಯವನ್ನು ಹೆಚ್ಚಿಸಿದ್ದಾನೆ.


ಯೆಹೋವನು ಆ ಮನುಷ್ಯನನ್ನು ಕ್ಷಮಿಸುವುದಿಲ್ಲ. ಅವನ ಮೇಲೆ ಕೋಪಗೊಂಡು ಅವನನ್ನು ಶಿಕ್ಷಿಸುವನು. ಅವನನ್ನು ಇಸ್ರೇಲ್ ಕುಲಗಳಿಂದ ತೆಗೆದುಹಾಕುವನು. ಈ ಪುಸ್ತಕದಲ್ಲಿ ಬರೆದ ಎಲ್ಲಾ ಶಾಪಗಳಿಂದ ಬಾಧಿಸಿ ನಾಶಪಡಿಸುವನು. ಈ ಬೋಧನಾ ಪುಸ್ತಕದಲ್ಲಿ ಬರೆದಿರುವ ಒಡಂಬಡಿಕೆಗೆ ಅದು ಸೇರಿರುತ್ತದೆ.


ನಿಮ್ಮ ದೇವರಾದ ಯೆಹೋವನು ಮಾಡಿದ ಪ್ರತಿಯೊಂದು ಒಳ್ಳೆಯ ವಾಗ್ದಾನವು ನೆರವೇರಿದೆ. ಅದೇ ರೀತಿಯಲ್ಲಿ ಯೆಹೋವನು ತನ್ನ ಉಳಿದ ವಾಗ್ದಾನವನ್ನು ನೆರವೇರಿಸುವನು. ನೀವು ತಪ್ಪುಗಳನ್ನು ಮಾಡಿದರೆ ನಿಮಗೆ ಕೆಟ್ಟದ್ದಾಗುವುದೆಂದೂ ಆತನು ನಿಮಗೆ ಕೊಟ್ಟ ಈ ಒಳ್ಳೆಯ ದೇಶದಿಂದ ಬಲವಂತವಾಗಿ ಹೊರಗಟ್ಟುವದಾಗಿಯೂ ಆತನು ಹೇಳಿದ್ದಾನೆ.


ಆದರೆ ನೀತಿವಂತರಾಗಲು ಧರ್ಮಶಾಸ್ತ್ರವನ್ನು ಅವಲಂಬಿಸಿಕೊಂಡಿರುವವರು ಶಾಪಗ್ರಸ್ತರಾಗಿದ್ದಾರೆ. ಏಕೆಂದರೆ ಪವಿತ್ರ ಗ್ರಂಥವು ಹೇಳುವಂತೆ, “ಧರ್ಮಶಾಸ್ತ್ರದಲ್ಲಿ ಬರೆದಿರುವ ನಿಯಮಗಳನ್ನೆಲ್ಲಾ ಕೈಕೊಂಡು ನಡೆಯಬೇಕು. ಅವುಗಳಿಗೆ ಎಂದಾದರೂ ಅವಿಧೇಯನಾದವನು ಶಾಪಗ್ರಸ್ತನಾಗಿದ್ದಾನೆ.”


ಆದರೆ ದುಷ್ಟರ ಗತಿಯನ್ನು ಏನು ಹೇಳಲಿ. ದುಷ್ಟರಿಗೆ ಕೆಡುಕು ಸಂಭವಿಸುವದು. ಅವರಿಗೆ ಬಹಳ ಸಂಕಟಗಳು ಬಂದೊದಗುವವು. ಅವರು ಮಾಡಿರುವ ಎಲ್ಲಾ ದುಷ್ಟಕ್ರಿಯೆಗಳಿಗೆ ಶಿಕ್ಷೆ ಕೊಡಲ್ಪಡುವದು.


ಆಗ ದೇವರಾದ ಯೆಹೋವನು ಹಾವಿಗೆ, “ನೀನು ಮಾಡಿದ ಈ ಕೆಟ್ಟಕಾರ್ಯದಿಂದ ನಿನಗೂ ಕೇಡುಗಳಾಗುತ್ತವೆ. ಬೇರೆಲ್ಲಾ ಪ್ರಾಣಿಗಳಿಗಿಂತಲೂ ನಿನಗೆ ಹೀನಸ್ಥಿತಿ ಉಂಟಾಗುವುದು. ನೀನು ಹೊಟ್ಟೆಯಿಂದಲೇ ತೆವಳಿಕೊಂಡು ನಿನ್ನ ಜೀವಮಾನವೆಲ್ಲಾ ಮಣ್ಣನ್ನೇ ತಿನ್ನುವೆ.


ನೀನು ನಿನ್ನ ತಮ್ಮನನ್ನು ಕೊಂದುಹಾಕಿದೆ. ನಿನ್ನ ಕೈಗಳಿಂದ ಸುರಿಸಿದ ಅವನ ರಕ್ತವನ್ನು ಕುಡಿಯಲು ಭೂಮಿಯು ಬಾಯಿ ತೆರೆಯಿತು. ಆದ್ದರಿಂದ ಈಗ ಅದು ಶಾಪಗ್ರಸ್ತವಾಗಿದೆ.


ಕಳೆದ ದಿನಗಳಲ್ಲಿ ನೀನು ಸಸಿಗಳನ್ನು ನೆಟ್ಟಾಗ ಸಸಿಗಳು ಚೆನ್ನಾಗಿ ಬೆಳೆದವು. ಆದರೆ ಈಗ ನೀನು ಸಸಿ ನೆಟ್ಟರೂ ಭೂಮಿ ಫಲಿಸುವುದಿಲ್ಲ. ನಿನಗೆ ಭೂಮಿಯ ಮೇಲೆ ಮನೆ ಇರುವುದಿಲ್ಲ. ನೀನು ಸ್ಥಳದಿಂದ ಸ್ಥಳಕ್ಕೆ ಅಲೆದಾಡುವೆ” ಎಂದು ಹೇಳಿದನು.


ಆದರೆ ನೀವು ವಿಧೇಯರಾಗದಿದ್ದರೆ ಶಾಪವನ್ನು ಹೊಂದುವಿರಿ. ನಾನು ನಿಮಗೆ ಕೊಡುವ ಯೆಹೋವನ ನಿಯಮಗಳನ್ನು ಅನುಸರಿಸುವುದನ್ನು ನಿಲ್ಲಿಸಬೇಡಿರಿ. ಅನ್ಯದೇವತೆಗಳನ್ನು ಪೂಜಿಸಬೇಡಿರಿ. ನಾನು ನಿಮಗೆ ಬೋಧಿಸುತ್ತಿರುವುದು ಯೆಹೋವನ ಮಾರ್ಗದ ಕುರಿತೇ ಹೊರತು ಬೇರೆ ದೇವರುಗಳ ಕುರಿತಲ್ಲ.


ಇಸ್ರೇಲರು ಯುದ್ಧಕ್ಕೆ ಹೋದಾಗಲೆಲ್ಲಾ ಸೋಲನ್ನನುಭವಿಸಿದರು; ಏಕೆಂದರೆ ಯೆಹೋವನು ಅವರ ಸಂಗಡವಿರಲಿಲ್ಲ. ಸುತ್ತಮುತ್ತಲಿನ ಜನರ ದೇವತೆಗಳನ್ನು ಪೂಜಿಸಿದರೆ ಸೋಲಾಗುವುದೆಂದು ಈಗಾಗಲೇ ಯೆಹೋವನು ಇಸ್ರೇಲರಿಗೆ ಮುನ್ನೆಚ್ಚರಿಕೆಯನ್ನು ಕೊಟ್ಟಿದ್ದನು. ಇಸ್ರೇಲರು ಹೆಚ್ಚಿನ ಕಷ್ಟನಷ್ಟಗಳನ್ನು ಅನುಭವಿಸಿದರು.


ಫಿಲಿಷ್ಟಿಯರು ಶೌರ್ಯದಿಂದ ಹೋರಾಡಿ ಇಸ್ರೇಲರನ್ನು ಸೋಲಿಸಿದರು. ಇಸ್ರೇಲರ ಪ್ರತಿಯೊಬ್ಬ ಸೈನಿಕನೂ ತನ್ನ ಪಾಳೆಯಕ್ಕೆ ಓಡಿಹೋದನು. ಇಸ್ರೇಲರಿಗೆ ಭೀಕರ ಸೋಲಾಯಿತು. ಮೂವತ್ತು ಸಾವಿರ ಇಸ್ರೇಲರು ಹತರಾದರು.


“ಆದರೆ ನಾನು ಕೊಟ್ಟ ಕಟ್ಟಳೆಗಳನ್ನು ಮತ್ತು ಆಜ್ಞೆಗಳನ್ನು ನೀನು ಮೀರಿ ಇತರ ದೇವರುಗಳನ್ನು ಪೂಜಿಸಿದರೆ,


ಆಗ ಪ್ರವಾದಿಯಾದ ಶೆಮಾಯನು, ಶೀಶಕನಿಗೆ ಹೆದರಿಕೊಂಡು ಜೆರುಸಲೇಮಿನಲ್ಲಿ ಒಟ್ಟಾಗಿ ಸೇರಿ ಬಂದಿದ್ದ ರೆಹಬ್ಬಾಮನ ಮತ್ತು ಇಸ್ರೇಲಿನ ಪ್ರಧಾನರ ಬಳಿಗೆ ಬಂದು, “ಯೆಹೋವನು ಹೇಳುವುದೇನೆಂದರೆ, ರೆಹಬ್ಬಾಮನೇ, ನೀನು ಮತ್ತು ಯೆಹೂದದ ಜನರು ನನ್ನನ್ನು ತೊರೆದಿದ್ದೀರಿ. ನನ್ನ ಕಟ್ಟಳೆಗಳನ್ನು ಅನುಸರಿಸಲು ನಿರಾಕರಿಸಿದ್ದೀರಿ. ಈಗ ನಾನು ನಿಮಗೆ ಸಹಾಯ ಮಾಡದೆ ಶೀಶಕನನ್ನು ಎದುರಿಸಲು ನಿಮ್ಮನ್ನು ಬಿಟ್ಟುಬಿಡುವೆನು” ಎಂದು ಹೇಳಿದನು.


ಯೆಹೋವನು ಹೇಳುವುದೇನೆಂದರೆ, ‘ನಾನು ಈ ಸ್ಥಳಕ್ಕೂ ಇಲ್ಲಿ ವಾಸಿಸುವವರಿಗೂ ಸಂಕಟವನ್ನು ಬರಮಾಡುವೆನು. ಯೆಹೂದ ದೇಶದ ಅರಸನ ಮುಂದೆ ಓದಿದಂಥ ಪುಸ್ತಕದಲ್ಲಿ ಬರೆಯಿಸಿದ ಎಲ್ಲಾ ಶಾಪಗಳನ್ನು ನಾನು ಬರಮಾಡುವೆನು.


ಬಹುಶಃ ಆ ಜನರು ತಮಗೆ ಸಹಾಯಮಾಡೆಂದು ಯೆಹೋವನನ್ನು ಪ್ರಾರ್ಥಿಸಬಹುದು. ಆಗ ಪ್ರತಿಯೊಬ್ಬನೂ ದುಷ್ಕೃತ್ಯ ಮಾಡುವದನ್ನು ನಿಲ್ಲಿಸಬಹುದು. ಆ ಜನರ ಮೇಲೆ ತನಗೆ ಬಹಳ ಕೋಪಬಂದಿದೆ ಎಂದು ಯೆಹೋವನು ಪ್ರಕಟಿಸಿದ್ದಾನೆ.”


ಯೆಹೋವನಾದ ನಾನು ಯೆಹೋಯಾಕೀಮ ಮತ್ತು ಅವನ ಮಕ್ಕಳನ್ನು ದಂಡಿಸುವೆನು. ನಾನು ಅವನ ಅಧಿಕಾರಿಗಳನ್ನೂ ದಂಡಿಸುವೆನು. ಅವರು ದುಷ್ಟರಾದುದರಿಂದ ಹೀಗೆ ಮಾಡುವೆನು. ನಾನು ಅವರ ಮೇಲೂ ಜೆರುಸಲೇಮಿನಲ್ಲಿ ವಾಸಮಾಡುವ ಜನರೆಲ್ಲರ ಮೇಲೂ ಮತ್ತು ಯೆಹೂದದ ಜನರ ಮೇಲೂ ಭಯಂಕರವಾದ ಕೇಡನ್ನು ತರಲು ನಿಶ್ಚಯಿಸಿದ್ದೇನೆ. ನಾನು ಹೇಳಿದಂತೆ ಅವರಿಗೆ ಎಲ್ಲಾ ಕೆಡುಕನ್ನು ಉಂಟುಮಾಡುವೆನು. ಏಕೆಂದರೆ ಅವರು ನನ್ನ ಮಾತನ್ನು ಕೇಳಲಿಲ್ಲ.’”


ಅಧಿಪತಿಯಾದ ನೆಬೂಜರದಾನನು ಯೆರೆಮೀಯನನ್ನು ಕಂಡಾಗ ಅವನನ್ನು ಮಾತನಾಡಿಸಿ ಹೀಗೆಂದನು: “ಯೆರೆಮೀಯನೇ, ನಿಮ್ಮ ದೇವರಾದ ಯೆಹೋವನು ಈ ಸ್ಥಳಕ್ಕೆ ಇಂಥಾ ದುಸ್ಥಿತಿ ಬರುವದೆಂದು ಸಾರಿದ್ದನು.


ಅವರು ಆ ದೇಶಗಳಿಗೆ ಹೋಗುವಾಗ ನಾನು ಅವರನ್ನು ಉರುಲಿನೊಳಗೆ ಸಿಕ್ಕಿಸುವೆನು. ನನ್ನ ಬಲೆಯನ್ನು ಅವರ ಮೇಲೆ ಬೀಸುವೆನು. ಆಕಾಶದ ಪಕ್ಷಿಗಳ ರೀತಿಯಲ್ಲಿ ಅವರನ್ನು ಕೆಳಗೆ ಬೀಳಿಸುವೆನು. ಅವರು ಮಾಡಿದ ಒಪ್ಪಂದಕ್ಕಾಗಿ ನಾನು ಅವರನ್ನು ಶಿಕ್ಷಿಸುವೆನು.


ಇಸ್ರೇಲ್ ಸಮೂಹದವರನ್ನೆಲ್ಲಾ ಮೋಶೆ ಒಟ್ಟಾಗಿ ಸೇರಿಸಿ ಅವರಿಗೆ ಹೇಳಿದ್ದೇನೆಂದರೆ: “ಇಸ್ರೇಲ್ ಜನರೇ, ನಾನು ಈ ಹೊತ್ತು ಹೇಳುವ ಕಟ್ಟಳೆಗಳಿಗೆ ಕಿವಿಗೊಡಿರಿ. ಇವುಗಳನ್ನು ಕಲಿತುಕೊಂಡು ಪಾಲಿಸುವವರಾಗಿರಿ.


“ನಿಮ್ಮ ದೇವರಾದ ಯೆಹೋವನು ಹೇಳಿದ ಸಂಗತಿಗಳಿಗೆ ನೀವು ಕಿವಿಗೊಡದೆ ಹೋದದ್ದರಿಂದ, ಆತನು ಕೊಟ್ಟ ಆಜ್ಞೆಗಳಿಗೂ ನಿಯಮಗಳಿಗೂ ನೀವು ವಿಧೇಯರಾಗದಿದ್ದ ಕಾರಣ ಈ ಶಾಪಗಳೆಲ್ಲಾ ನಿಮ್ಮ ಮೇಲೆ ಬರುತ್ತವೆ. ನೀವು ನಾಶವಾಗುವವರೆಗೂ ಅವು ನಿಮ್ಮನ್ನು ಅಟ್ಟಿಸಿಕೊಂಡು ಬರುತ್ತವೆ.


“ನಾನು ತಿಳಿಸಿದ ಶಾಪವನ್ನೆಲ್ಲಾ ಕೇಳಿಸಿಕೊಂಡು, ‘ನಾನು ನನ್ನ ಇಷ್ಟ ಬಂದಂತೆ ಮಾಡುತ್ತೇನೆ. ನನಗೆ ಯಾವ ಕೇಡೂ ಆಗುವುದಿಲ್ಲ’ ಎಂದು ಯಾವನಾದರೂ ಹೇಳಿಕೊಂಡು ತನ್ನನ್ನು ತಾನೇ ಸಮಾಧಾನಪಡಿಸಿಕೊಂಡರೆ, ಅವನು ತನಗೆ ಮಾತ್ರವಲ್ಲ ಎಲ್ಲಾ ಒಳ್ಳೆಯ ಜನರಿಗೂ ಕೇಡಾಗುವಂತೆ ಮಾಡುತ್ತಾನೆ.


ನಿಮ್ಮ ದೇವರಾದ ಯೆಹೋವನೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಪಾಲಿಸದೆ ಬೇರೆ ದೇವರುಗಳ ಸೇವೆಮಾಡಿದರೆ ಈ ದೇಶವನ್ನು ಕಳೆದುಕೊಳ್ಳುವಿರಿ. ನೀವು ಅನ್ಯದೇವರುಗಳನ್ನು ಪೂಜಿಸಬಾರದು. ಇಲ್ಲವಾದರೆ, ಯೆಹೋವನು ನಿಮ್ಮ ಮೇಲೆ ಬಹು ಕೋಪಗೊಂಡು ಆತನು ನಿಮಗೆ ಕೊಟ್ಟ ಈ ಒಳ್ಳೆಯ ದೇಶದಿಂದ ಬಲವಂತವಾಗಿ ಹೊರಡಿಸುವನು,” ಅಂದನು.


ಆದರೆ ನಿಮ್ಮ ಪೂರ್ವಿಕರು ನನ್ನ ಮಾತನ್ನು ಕೇಳಲಿಲ್ಲ. ಅವರು ಮೊಂಡರಾಗಿದ್ದು ತಮ್ಮ ದುಷ್ಟಹೃದಯ ಹೇಳಿದಂತೆ ಮಾಡಿದರು. ಆಜ್ಞಾಪಾಲನೆ ಮಾಡದಿದ್ದರೆ ಅವರಿಗೆ ಕೆಡುಕಾಗುವದೆಂದು ಒಡಂಬಡಿಕೆಯಲ್ಲಿ ಹೇಳಲಾಗಿದೆ. ಅದಕ್ಕಾಗಿ ನಾನು ಅವರಿಗೆ ಕೇಡುಂಟಾಗುವಂತೆ ಮಾಡಿದೆ, ಒಡಂಬಡಿಕೆಯನ್ನು ಪಾಲಿಸಬೇಕೆಂದು ನಾನು ಅವರಿಗೆ ಆಜ್ಞಾಪಿಸಿದೆ ಆದರೆ ಅವರು ಪಾಲಿಸಲಿಲ್ಲ.”


ನೀನು ಅವರಿಗೆ ಹೀಗೆ ಹೇಳು: ‘ಯೆಹೋವನು ಹೀಗೆನ್ನುತ್ತಾನೆ: ನಾನು ನಿಮಗೆ ನನ್ನ ಧರ್ಮೋಪದೇಶಗಳನ್ನು ಕೊಟ್ಟಿದ್ದೇನೆ. ನೀವು ಅವುಗಳನ್ನು ಪಾಲಿಸಬೇಕು; ಅನುಸರಿಸಬೇಕು.


ಇಸ್ರೇಲಿನ ಜನರು ಈ ಪ್ರದೇಶಕ್ಕೆ ಬಂದು ಅದನ್ನು ತಮ್ಮದನ್ನಾಗಿ ಮಾಡಿಕೊಂಡರು. ಆದರೆ ಅವರು ನಿನ್ನ ಆಜ್ಞೆಯನ್ನು ಪಾಲಿಸಲಿಲ್ಲ; ನಿನ್ನ ಉಪದೇಶಗಳನ್ನು ಅನುಸರಿಸಲಿಲ್ಲ; ನಿನ್ನ ಆಜ್ಞೆಯಂತೆ ಮಾಡಲಿಲ್ಲ. ಆದ್ದರಿಂದ ನೀನು ಇಸ್ರೇಲರಿಗೆ ಇಂಥಾ ದುರ್ಗತಿ ಬರುವಂತೆ ಮಾಡಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು