ಧರ್ಮೋಪದೇಶಕಾಂಡ 28:20 - ಪರಿಶುದ್ದ ಬೈಬಲ್20 “ನೀವು ಕೆಟ್ಟಕಾರ್ಯಗಳನ್ನು ಮಾಡಿ ಯೆಹೋವನಿಂದ ದೂರವಾಗಿ ಹೋದರೆ ನಿಮಗೆ ಕೆಟ್ಟಸಂಗತಿಗಳು ಉಂಟಾಗುವವು. ನಿಮಗೆ ಉಪದ್ರವಗಳೂ ಮನಸ್ಸಿಗೆ ಅಸಮಾಧಾನವೂ ಉಂಟಾಗುವವು. ನೀವು ಸಂಪೂರ್ಣವಾಗಿ ನಾಶವಾಗುವ ತನಕ ಈ ಸಂಗತಿಗಳು ನಿಮ್ಮನ್ನು ಬಾಧಿಸುವವು. ನೀವು ಆತನನ್ನು ತೊರೆದದ್ದರಿಂದ ನಿಮಗೆ ಹಾಗೆ ಮಾಡುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ನೀವು ದುರ್ನಡತೆಯುಳ್ಳವರಾಗಿ ಯೆಹೋವನನ್ನು ಬಿಟ್ಟಿದ್ದರಿಂದ ಆತನು ನಿಮ್ಮ ಎಲ್ಲಾ ಪ್ರಯತ್ನಗಳಲ್ಲಿಯೂ ವಿಪತ್ತು, ಕಳವಳ, ಶಾಪ ಇವುಗಳನ್ನು ಉಂಟುಮಾಡುತ್ತಾ ನಿಮ್ಮನ್ನು ಬೇಗನೆ ನಾಶಮಾಡುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 “ನೀವು ದುರ್ನಡತೆಯುಳ್ಳವರಾಗಿ ಸರ್ವೇಶ್ವರನನ್ನು ಬಿಟ್ಟದ್ದರಿಂದ ಅವರು ನಿಮ್ಮ ಎಲ್ಲ ಪ್ರಯತ್ನಗಳಲ್ಲೂ ವಿಪತ್ತು, ಕಳವಳ, ಶಾಪ, ಇವುಗಳನ್ನುಂಟುಮಾಡುತ್ತಾ ನಿಮ್ಮನ್ನು ಬೇಗನೆ ನಾಶಮಾಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ನೀವು ದುರ್ನಡತೆಯುಳ್ಳವರಾಗಿ ಯೆಹೋವನನ್ನು ಬಿಟ್ಟದ್ದರಿಂದ ಆತನು ನಿಮ್ಮ ಎಲ್ಲಾ ಪ್ರಯತ್ನಗಳಲ್ಲಿಯೂ ವಿಪತ್ತು, ಕಳವಳ, ಶಾಪ ಇವುಗಳನ್ನುಂಟುಮಾಡುತ್ತಾ ನಿಮ್ಮನ್ನು ಬೇಗನೆ ನಾಶಮಾಡುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ನೀವು ನಿಮ್ಮ ಯೆಹೋವ ದೇವರನ್ನು ಬಿಟ್ಟ ದುಷ್ಟಕ್ರಿಯೆಯ ನಿಮಿತ್ತ, ಯೆಹೋವ ದೇವರು ನೀವು ಬೇಗ ನಾಶವಾಗುವವರೆಗೂ ನಿಮ್ಮ ಎಲ್ಲಾ ಕೆಲಸಗಳಲ್ಲಿಯೂ ನಿಮಗೆ ಶಾಪ, ಗಲಿಬಿಲಿ ಹಾಗು ಗದರಿಕೆ ಮುಂತಾದವುಗಳನ್ನು ಉಂಟುಮಾಡುವರು. ಅಧ್ಯಾಯವನ್ನು ನೋಡಿ |
ಯೆಹೂದದ ಜನರು ನನ್ನ ಅನುಸರಣೆಯನ್ನು ಬಿಟ್ಟಿದ್ದರಿಂದ ನಾನು ಹೀಗೆ ಮಾಡುವೆನು. ಇದನ್ನು ಅವರು ಅನ್ಯದೇವರುಗಳ ಸ್ಥಳವನ್ನಾಗಿ ಮಾಡಿದ್ದಾರೆ. ಯೆಹೂದದ ಜನರು ಈ ಸ್ಥಳದಲ್ಲಿ ಅನ್ಯದೇವರುಗಳಿಗಾಗಿ ಧೂಪವನ್ನು ಹಾಕಿದ್ದಾರೆ. ಬಹಳ ಹಿಂದೆ ಈ ಜನರು ಆ ದೇವರುಗಳನ್ನು ಪೂಜಿಸುತ್ತಿರಲಿಲ್ಲ. ಅವರ ಹಿರಿಯರೂ ಆ ದೇವರುಗಳನ್ನು ಪೂಜಿಸುತ್ತಿರಲಿಲ್ಲ. ಇವುಗಳು ಅನ್ಯದೇಶದ ಹೊಸ ದೇವರುಗಳು. ಯೆಹೂದದ ರಾಜರು ಈ ಸ್ಥಳವನ್ನು ಮುಗ್ಧಮಕ್ಕಳ ರಕ್ತದಿಂದ ತುಂಬಿದರು.