Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 28:22 - ಪರಿಶುದ್ದ ಬೈಬಲ್‌

22 ಜ್ವರ, ಬಾಧೆ, ದೇಹ ಊದಿಕೊಳ್ಳುವಿಕೆ ಇವುಗಳಿಂದ ನಿಮ್ಮನ್ನು ಶಿಕ್ಷಿಸುವನು. ನಿಮ್ಮ ದೇಶದೊಳಗೆ ಸಹಿಸಲಾರದ ಉಷ್ಣವನ್ನು ಕಳುಹಿಸಿ ಮಳೆಬೀಳದಂತೆ ಮಾಡುವನು. ನಿಮ್ಮ ಬೆಳೆ ರೋಗದಿಂದಲೂ ಬಿಸಿಲಿನಿಂದಲೂ ನಾಶವಾಗುವುದು. ಇವೆಲ್ಲಾ ನಿಮಗೆ ಉಂಟಾಗಿ ನೀವು ನಾಶವಾಗುವ ತನಕ ಮುಂದುವರಿಯುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆತನು ನಿಮ್ಮನ್ನು ಕ್ಷಯರೋಗ, ಚಳಿಜ್ವರ, ಉರಿತ, ಉಷ್ಣಜ್ವರಗಳಿಂದಲೂ, ದೇಶವನ್ನು ಕ್ಷಾಮದಿಂದಲೂ ಮತ್ತು ಬೆಳೆಯನ್ನು ಕಾಡಿನ ಬಿಸಿಗಾಳಿಗಳಿಂದಲೂ ನರಳುವಂತೆ ಮಾಡುವನು. ನೀವು ಸಾಯುವ ತನಕ ಇವು ನಿಮ್ಮನ್ನು ಬೆನ್ನತ್ತುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ನಿಮ್ಮನ್ನು ಕ್ಷಯರೋಗ, ಚಳಿಜ್ವರ, ಉರಿತ, ಉಷ್ಣಜ್ವರ ಇವುಗಳಿಂದಲೂ, ನಾಡನ್ನು ಕ್ಷಾಮದಿಂದಲೂ, ಬೆಳೆಯನ್ನು ಕಾಡಿನ ಬಿಸಿಗಾಳಿಗಳಿಂದಲೂ ಪೀಡಿಸುವರು. ನೀವು ಸಾಯುವ ತನಕ ಈ ಪೀಡೆಗಳು ನಿಮ್ಮನ್ನು ಬೆನ್ನತ್ತುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಆತನು ನಿಮ್ಮನ್ನು ಕ್ಷಯರೋಗ ಚಳಿಜ್ವರ ಉರಿತ ಉಷ್ಣಜ್ವರಗಳಿಂದಲೂ ದೇಶವನ್ನು ಕ್ಷಾಮದಿಂದಲೂ ಬೆಳೆಯನ್ನು ಕಾಡಿಗೆ ಬಿಸಿಗಾಳಿಗಳಿಂದಲೂ ಬಾಧಿಸಲಾಗಿ ನೀವು ಸಾಯುವ ತನಕ ಇವು ನಿಮ್ಮನ್ನು ಬೆನ್ಹತ್ತುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಯೆಹೋವ ದೇವರು ಕ್ಷಯರೋಗದಿಂದಲೂ, ಚಳಿಜ್ವರದಿಂದಲೂ, ಉರಿವಾತದಿಂದಲೂ, ಉಷ್ಣಜ್ವರದಿಂದಲೂ ಕುಗ್ಗಿಸಿ, ದೇಶವನ್ನು ಕ್ಷಾಮದಿಂದಲೂ, ಬೆಳೆಯನ್ನು ಕಾಡಿನ ಬಿಸಿಗಾಳಿಯಿಂದಲೂ ಬಾಧಿಸುವರು. ನೀವು ನಾಶವಾಗುವ ತನಕ ಅವು ನಿಮ್ಮನ್ನು ಹಿಂದಟ್ಟಿಬರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 28:22
14 ತಿಳಿವುಗಳ ಹೋಲಿಕೆ  

“ನಿಮ್ಮ ಬೆಳೆಗಳು ಸೂರ್ಯನ ಶಾಖದಿಂದಲೂ ರೋಗದಿಂದಲೂ ಸಾಯುವಂತೆ ಮಾಡಿದೆನು. ನಿಮ್ಮ ತೋಟಗಳನ್ನೂ ದ್ರಾಕ್ಷಿತೋಟಗಳನ್ನೂ ನಾನು ನಾಶಮಾಡಿದೆನು. ಮಿಡತೆಗಳು ನಿಮ್ಮ ಅಂಜೂರದ ಮತ್ತು ಆಲೀವ್ ಮರಗಳನ್ನು ತಿಂದುಬಿಟ್ಟವು. ಆದಾಗ್ಯೂ ಸಹಾಯಕ್ಕಾಗಿ ನೀವು ನನ್ನ ಬಳಿಗೆ ಬರಲಿಲ್ಲ.” ಇದು ಯೆಹೋವನ ನುಡಿ.


ಆಗ ನಾನು ನಿಮ್ಮ ಮಧ್ಯೆ ಭಯಂಕರ ಸಂಗತಿಗಳು ನಡೆಯುವಂತೆ ಮಾಡುವೆ. ನೀವು ವ್ಯಾಧಿಯಿಂದಲೂ ಜ್ವರದಿಂದಲೂ ನರಳುವಂತೆ ಮಾಡುವೆ. ಅವು ನಿಮ್ಮ ಕಣ್ಣುಗಳನ್ನು ನಾಶಮಾಡಿ ನಿಮ್ಮ ಪ್ರಾಣವನ್ನು ತೆಗೆದುಬಿಡುತ್ತವೆ; ನೀವು ಬೀಜ ಬಿತ್ತಿದರೂ ಅದರ ಫಲವು ದೊರೆಯುವುದಿಲ್ಲ: ನಿಮ್ಮ ವೈರಿಗಳು ನಿಮ್ಮ ಬೆಳೆಗಳನ್ನು ತಿಂದುಬಿಡುವರು!


ಯಾಕೆ ಹೀಗಾಯಿತು? ಯಾಕೆಂದರೆ ನಾನು ನಿಮ್ಮನ್ನು ಶಿಕ್ಷಿಸಿದೆನು. ನೀವು ನೆಟ್ಟ ಮರಗಳನ್ನು ನಾಶಮಾಡಲು ನಾನು ರೋಗವನ್ನು ಕಳುಹಿಸಿದೆನು. ನಿಮ್ಮ ಕೈಕೆಲಸವನ್ನು ಹಾಳುಮಾಡಲು ನಾನು ಆಲಿಕಲ್ಲಿನ ಮಳೆಯನ್ನು ಕಳುಹಿಸಿದೆನು. ನಾನು ಇಷ್ಟೆಲ್ಲಾ ಮಾಡಿದರೂ ನೀವು ಯಾರೂ ನನ್ನ ಬಳಿಗೆ ಬರಲಿಲ್ಲ.’ ಇದು ಯೆಹೋವನ ನುಡಿ.”


“ಭೂಮಿಯು ಬಹಳ ಬರಡಾಗಿ ಅದರ ಮೇಲೆ ಬೆಳಗಳೇ ಬೆಳೆಯದಂತಾಗಬಹುದು, ಬಹುಶಃ ಘೋರವಾದ ವ್ಯಾಧಿಗಳು ಜನರಲ್ಲಿ ಹರಡಬಹುದು. ಬೆಳೆಯುವ ಬೆಳೆಗಳೆಲ್ಲ ಬಹುಶಃ ಕ್ರಿಮಿಕೀಟಗಳಿಂದ ನಾಶವಾಗಬಹುದು. ಇಲ್ಲವೆ ನಿನ್ನ ಜನರ ಮೇಲೆ ಕೆಲವು ನಗರಗಳಲ್ಲಿ ಅವರ ಶತ್ರುಗಳು ಆಕ್ರಮಣ ಮಾಡಬಹುದು. ನಿನ್ನ ಜನರಲ್ಲಿ ಅನೇಕರು ವ್ಯಾಧಿಗೆ ಒಳಗಾಗಬಹುದು.


ಯೆಹೂದದ ಜನರು ಉಪವಾಸ ವ್ರತವನ್ನು ಕೈಕೊಳ್ಳಬಹುದು ಮತ್ತು ನನಗೆ ಪ್ರಾರ್ಥನೆ ಮಾಡಬಹುದು. ಆದರೆ ನಾನು ಅವರ ಪ್ರಾರ್ಥನೆಗಳನ್ನು ಕೇಳುವದಿಲ್ಲ. ಅವರು ನನಗೆ ಸರ್ವಾಂಗಹೋಮಗಳನ್ನು ಮತ್ತು ಧಾನ್ಯನೈವೇದ್ಯಗಳನ್ನು ಅರ್ಪಿಸಿದರೂ ಸಹ ನಾನು ಅವರನ್ನು ಸ್ವಿಕರಿಸುವದಿಲ್ಲ. ನಾನು ಯುದ್ಧದಿಂದ ಯೆಹೂದದ ಜನರನ್ನು ನಾಶಮಾಡುತ್ತೇನೆ. ನಾನು ಅವರ ಆಹಾರವನ್ನು ಕಿತ್ತುಕೊಳ್ಳುತ್ತೇನೆ; ಯೆಹೂದದ ಜನರು ಉಪವಾಸದಿಂದ ಸಾಯುವಂತೆ ಮಾಡುತ್ತೇನೆ. ನಾನು ಅವರನ್ನು ಭಯಂಕರವಾದ ವ್ಯಾಧಿಗಳಿಂದ ನಾಶಮಾಡುತ್ತೇನೆ” ಎಂದು ಹೇಳಿದನು.


“ಆ ದೇಶದಲ್ಲಿ ಬರಗಾಲ ಬಂದಾಗ ಅಥವಾ ಸೋಂಕುರೋಗ ತಗಲಿದಾಗ, ಅಥವಾ ಮಿಡತೆಗಳಿಂದ ಬಾಧಿಸಲ್ಪಟ್ಟಾಗ, ವೈರಿಗಳು ಬಂದು ನಿನ್ನ ಜನರ ಮೇಲೆ ಅವರ ನಗರಗಳಲ್ಲಿಯೇ ಯುದ್ಧಮಾಡಿದಾಗ, ಅಥವಾ ಭಯಂಕರವಾದ ಕಾಯಿಲೆಯು ದೇಶದ ಜನರನ್ನು ಕಾಡಿದಾಗ


ಆದ್ದರಿಂದ ನಾನು ನಿಮಗೆ ಎಚ್ಚರಿಕೆ ಕೊಡುತ್ತಿದ್ದೇನೆ. ಆಕಾಶವೂ ಭೂಮಿಯೂ ಇದಕ್ಕೆ ಸಾಕ್ಷಿ. ಆ ಕೆಟ್ಟ ಕೆಲಸವನ್ನು ನೀವು ಮಾಡಿದರೆ ನೀವು ಹಾಳಾಗಿ ಹೋಗುವಿರಿ. ನೀವೀಗ ಜೋರ್ಡನ್ ನದಿಯನ್ನು ದಾಟಿ ಆ ದೇಶವನ್ನು ಸ್ವಾಧೀನ ಮಾಡಿಕೊಳ್ಳಲು ಹೋಗುತ್ತೀರಿ. ಆದರೆ ನೀವು ಮೂರ್ತಿಗಳನ್ನು ಮಾಡಿಕೊಂಡರೆ ಅಲ್ಲಿ ಹೆಚ್ಚುಕಾಲ ಬಾಳುವುದಿಲ್ಲ. ನೀವು ಸಂಪೂರ್ಣವಾಗಿ ನಾಶವಾಗುವಿರಿ.


ಆಕಾಶವು ಮೋಡಗಳೇ ಇರದ ಕಾದ ಹಿತ್ತಾಳೆಯಂತಿರುವುದು. ಕಾಲಿನ ಅಡಿಯಲ್ಲಿರುವ ನೆಲವು ಕಬ್ಬಿಣದಂತೆ ಗಟ್ಟಿಯಾಗಿರುವುದು.


ಹಸಿವೆಯಿಂದ ಅವರು ಕ್ಷೀಣವಾಗುವರು; ಭಯಂಕರ ವ್ಯಾಧಿಯಿಂದ ಅವರು ನಾಶವಾಗುವರು. ಕಾಡುಪ್ರಾಣಿಗಳನ್ನು ಅವರ ಮಧ್ಯೆ ಕಳುಹಿಸುವೆನು. ವಿಷಸರ್ಪಗಳೂ ಹಲ್ಲಿಗಳೂ ಅವರನ್ನು ಕಚ್ಚುವವು.


ಯೆಹೋವನು ಹೇಳುವುದೇನೆಂದರೆ, “ನಾನು ಭೂಮಿಗೂ ಪರ್ವತಗಳಿಗೂ ಒಣಗಿಹೋಗಲು ಆಜ್ಞಾಪಿಸಿದ್ದೇನೆ. ಬೆಳೆ, ಹೊಸ ದ್ರಾಕ್ಷಾರಸ, ಆಲೀವ್ ಎಣ್ಣೆ ಮತ್ತು ಭೂಮಿಯು ಫಲಿಸುವ ಯಾವ ವಸ್ತುವಾಗಲಿ ನಾಶವಾಗುವುದು. ಮತ್ತು ಎಲ್ಲಾ ಮನುಷ್ಯರೂ ಬಲಹೀನರಾಗುವರು; ಪ್ರಾಣಿಗಳೂ ಬಲಹೀನವಾಗುವವು.”


ಆದರೆ ಜೆರುಸಲೇಮಿಗೆ ವಿರುದ್ಧವಾಗಿ ಯುದ್ಧ ಮಾಡಿದ ಜನಾಂಗಗಳನ್ನೆಲ್ಲಾ ಯೆಹೋವನು ಶಿಕ್ಷಿಸುವನು. ಅವರಿಗೆ ಭಯಂಕರ ರೋಗವನ್ನು ಬರಮಾಡುವನು. ಅವರು ಜೀವಂತರಾಗಿರುವಾಗಲೇ ಅವರ ಚರ್ಮವು ಕೊಳೆತುಹೋಗುವದು. ಅವರ ಕಣ್ಣುಗಳು ಅವು ಇರುವಲ್ಲಿಯೇ ಕೊಳೆತುಹೋಗುವವು. ಅವರ ಬಾಯೊಳಗೆ ಅವರ ನಾಲಿಗೆಗಳು ಕೊಳೆತುಹೋಗುವವು.


ಅಲ್ಲಿಯೂ ಮಳೆಯಿಲ್ಲದ್ದರಿಂದ, ಸ್ವಲ್ಪಕಾಲದ ಬಳಿಕ ಹಳ್ಳವೂ ಬತ್ತಿಹೋಯಿತು.


“ಅವರು ಒಂದು ಭಯಾನಕವಾದ ರೀತಿಯಲ್ಲಿ ಮರಣಹೊಂದುತ್ತಾರೆ. ಅವರನ್ನು ಯಾರೂ ಹೂಳುವುದಿಲ್ಲ. ಅವರ ದೇಹಗಳು ಭೂಮಿಯ ಮೇಲೆ ಗೊಬ್ಬರದಂತೆ ಬಿದ್ದಿರುತ್ತವೆ. ಅವರು ವೈರಿಗಳ ಖಡ್ಗಗಳಿಂದ ಮಡಿಯುವರು. ಅವರು ಅನ್ನವಿಲ್ಲದೆ ಸಾಯುವರು. ಅವರ ಶವಗಳು ಆಕಾಶದ ಪಕ್ಷಿಗಳಿಗೂ ಭೂಮಿಯ ಮೇಲಿನ ಕಾಡುಪ್ರಾಣಿಗಳಿಗೂ ಆಹಾರವಾಗುವವು.”


ಉಗ್ರಾಣದಲ್ಲಿ ಗೋಧಿಯ ಕಾಳು ಏನಾದರೂ ಉಳಿದಿದೆಯೋ? ಇಲ್ಲ! ದ್ರಾಕ್ಷಿಬಳ್ಳಿಗಳನ್ನು, ಅಂಜೂರದ ಮರಗಳನ್ನು, ದಾಳಿಂಬದ ಮರಗಳನ್ನು, ಆಲೀವ್ ಮರಗಳನ್ನು ನೋಡಿರಿ. ಅವು ಹಣ್ಣುಗಳನ್ನು ಬಿಡುತ್ತವೋ? ಇಲ್ಲ. ಆದರೆ ಈ ದಿನದಿಂದ ನಾನು ನಿಮ್ಮನ್ನು ಆಶೀರ್ವದಿಸುತ್ತೇನೆ!”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು