Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 28:33 - ಪರಿಶುದ್ದ ಬೈಬಲ್‌

33 “ನೀವು ಅರಿಯದಿರುವ ದೇಶದವರು ಬಂದು ನಿಮ್ಮ ಪೈರನ್ನು ಕೊಯ್ದುಕೊಂಡು ಹೋಗುವರು; ನೀವು ದುಡಿದು ಸಂಪಾದಿಸಿದವುಗಳನ್ನು ಎತ್ತಿಕೊಂಡು ಹೋಗುವರು. ಜನರು ನಿಮ್ಮನ್ನು ಕುಗ್ಗಿಸಿ ಬಲಹೀನರನ್ನಾಗಿ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ನಿಮಗೆ ಗುರುತೇ ಇಲ್ಲದ ಜನಾಂಗದವರು ಬಂದು ನಿಮ್ಮ ದೇಶದ ಬೆಳೆಯನ್ನೂ ಮತ್ತು ನಿಮ್ಮ ಕಷ್ಟಾರ್ಜಿತವನ್ನೂ ತಿಂದುಬಿಡುವರು. ನೀವಾದರೋ ಯಾವಾಗಲೂ ಹಿಂಸೆಗೂ ಬಲಾತ್ಕಾರಕ್ಕೂ ಗುರಿಯಾಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ನಿಮಗೆ ಗುರುತೇ ಇಲ್ಲದ ಜನಾಂಗದವರು ಬಂದು ನಿಮ್ಮ ನಾಡಿನ ಬೆಳೆಯನ್ನೂ ನಿಮ್ಮ ಕಷ್ಟಾರ್ಜಿತವನ್ನೂ ತಿಂದುಬಿಡುವರು. ನೀವಾದರೋ ನಿರಂತರ ಹಿಂಸೆಗೂ ಬಲಾತ್ಕಾರಕ್ಕೂ ಗುರಿಯಾಗುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ನಿಮಗೆ ಗುರುತೇ ಇಲ್ಲದ ಜನಾಂಗದವರು ಬಂದು ನಿಮ್ಮ ದೇಶದ ಬೆಳೆಯನ್ನೂ ನಿಮ್ಮ ಕಷ್ಟಾರ್ಜಿತವನ್ನೂ ತಿಂದುಬಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ನಿಮ್ಮ ಭೂಮಿಯ ಫಲವನ್ನೂ, ನಿಮ್ಮ ಎಲ್ಲಾ ಆದಾಯವನ್ನೂ ನಿಮ್ಮನ್ನರಿಯದ ಜನರು ತಿಂದುಬಿಡುವರು. ನೀವು ಯಾವಾಗಲೂ ಬಲಾತ್ಕಾರವನ್ನೂ, ಸಂಕಟವನ್ನೂ ಅನುಭವಿಸುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 28:33
18 ತಿಳಿವುಗಳ ಹೋಲಿಕೆ  

ಆ ಸೈನಿಕರು ನೀವು ಬೆಳೆದ ಬೆಳೆಯನ್ನು ತಿಂದುಬಿಡುವರು. ಅವರು ನಿಮ್ಮೆಲ್ಲ ಆಹಾರವನ್ನು ತಿಂದುಬಿಡುವರು. ಅವರು ನಿಮ್ಮ ಗಂಡುಮಕ್ಕಳನ್ನೂ ಹೆಣ್ಣುಮಕ್ಕಳನ್ನೂ ತಿಂದುಬಿಡುವರು (ನಾಶಮಾಡುವರು). ಅವರು ನಿಮ್ಮ ದನಕರುಗಳ ಹಿಂಡುಗಳನ್ನು, ಕುರಿಗಳ ಮಂದೆಗಳನ್ನು ತಿಂದುಬಿಡುವರು. ಅವರು ನಿಮ್ಮ ದ್ರಾಕ್ಷಿಗಳನ್ನೂ ನಿಮ್ಮ ಅಂಜೂರಗಳನ್ನೂ ತಿಂದುಬಿಡುವರು. ಅವರು ತಮ್ಮ ಖಡ್ಗಗಳಿಂದ ನಿಮ್ಮ ಭದ್ರವಾದ ನಗರಗಳನ್ನು ನಾಶಮಾಡುವರು. ನೀವು ನಂಬಿಕೊಂಡಿದ್ದ ನಿಮ್ಮ ಭದ್ರವಾದ ನಗರಗಳನ್ನು ಅವರು ಹಾಳುಮಾಡುತ್ತಾರೆ.”


ದಾನ್‌ಕುಲದವರ ಪ್ರದೇಶದಿಂದ ನಾವು ಶತ್ರುಗಳ ಕುದುರೆಗಳ ಕೆನೆತವನ್ನು ಕೇಳುತ್ತಿದ್ದೇವೆ. ಅವುಗಳ ಪಾದಗಳ ಬಡಿತದಿಂದ ಭೂಮಿ ನಡುಗುತ್ತಿದೆ. ಅವರು ನಮ್ಮ ಪ್ರದೇಶವನ್ನು ಮತ್ತು ಅಲ್ಲಿದ್ದ ಎಲ್ಲವನ್ನು ಹಾಳುಮಾಡಲು ಬಂದಿದ್ದಾರೆ. ಅವರು ನಗರವನ್ನು ಮತ್ತು ಅಲ್ಲಿದ್ದ ಎಲ್ಲಾ ಜನರನ್ನು ಹಾಳುಮಾಡಲು ಬಂದಿದ್ದಾರೆ.


ಇದು ಯೆಹೋವನ ಮಾತು: “ಇಸ್ರೇಲ್ ಮನೆತನವೇ, ನಿನ್ನ ಮೇಲೆ ಧಾಳಿ ಮಾಡುವುದಕ್ಕೆ ನಾನು ಬಹಳ ದೂರದಿಂದ ಒಂದು ಜನಾಂಗವನ್ನು ತರುತ್ತೇನೆ. ಅದು ಒಂದು ಬಲಿಷ್ಠ ಜನಾಂಗ; ಅದೊಂದು ಪುರಾತನ ಕಾಲದಿಂದ ಬಂದ ಜನಾಂಗ. ಆ ಜನಾಂಗದವರು ಮಾತನಾಡುವ ಭಾಷೆ ನಿನಗೆ ತಿಳಿಯುವದಿಲ್ಲ. ಅವರು ಹೇಳುವುದು ನಿನಗೆ ಅರ್ಥವಾಗುವದಿಲ್ಲ.


ಹೊಲವನ್ನು ಕಾಯುವ ಜನರಂತೆ ವೈರಿಗಳು ಜೆರುಸಲೇಮನ್ನು ಮುತ್ತಿಕೊಂಡಿದ್ದಾರೆ. ಯೆಹೂದವೇ, ನೀನು ನನಗೆ ತಿರುಗಿಬಿದ್ದೆ, ಅದಕ್ಕಾಗಿ ನಿನ್ನ ಮೇಲೆ ಶತ್ರುಗಳು ಬೀಳುತ್ತಿದ್ದಾರೆ” ಎಂದು ಯೆಹೋವನು ಹೇಳುವನು.


ನಿಮ್ಮ ದೇಶವು ಹಾಳಾಗಿದೆ; ನಿಮ್ಮ ನಗರಗಳು ಬೆಂಕಿಯಿಂದ ಸುಡಲ್ಪಟ್ಟಿವೆ. ನಿಮ್ಮ ಶತ್ರುಗಳು ನಿಮ್ಮ ದೇಶವನ್ನು ವಶಪಡಿಸಿಕೊಂಡಿದ್ದಾರೆ; ಅನ್ಯದೇಶವು ಶತ್ರುಸೈನ್ಯದಿಂದ ಹಾಳಾಗುವಂತೆಯೇ, ನಿಮ್ಮ ದೇಶವೂ ಹಾಳಾಗಿದೆ.


ಅವರು ನಿಮ್ಮ ಪಶುಗಳನ್ನು ಅಟ್ಟಿಸಿಕೊಂಡು ಹೋಗುವರು; ನೀವು ಬೆಳೆದ ಬೆಳೆಯನ್ನು ಕೊಂಡೊಯ್ಯುವರು. ನಿಮ್ಮನ್ನು ನಾಶಪಡಿಸುವ ತನಕ ಅವರು ಪ್ರತಿಯೊಂದನ್ನೂ ತೆಗೆದುಕೊಂಡು ಹೋಗುವರು. ಅವರು ನಿಮಗೆ ದವಸಧಾನ್ಯವನ್ನಾಗಲಿ ದ್ರಾಕ್ಷಾರಸವನ್ನಾಗಲಿ ಎಣ್ಣೆಯನ್ನಾಗಲಿ ಹಸುಗಳನ್ನಾಗಲಿ ಕುರಿಗಳನ್ನಾಗಲಿ ಮೇಕೆಗಳನ್ನಾಗಲಿ ಬಿಟ್ಟುಹೋಗುವುದಿಲ್ಲ. ಅವರು ನಿಮ್ಮನ್ನು ನಾಶಪಡಿಸುವ ತನಕ ಪ್ರತಿಯೊಂದನ್ನೂ ತೆಗೆದುಕೊಂಡು ಹೋಗುವರು.


ಆಗ ನಾನು ನಿಮ್ಮ ಮಧ್ಯೆ ಭಯಂಕರ ಸಂಗತಿಗಳು ನಡೆಯುವಂತೆ ಮಾಡುವೆ. ನೀವು ವ್ಯಾಧಿಯಿಂದಲೂ ಜ್ವರದಿಂದಲೂ ನರಳುವಂತೆ ಮಾಡುವೆ. ಅವು ನಿಮ್ಮ ಕಣ್ಣುಗಳನ್ನು ನಾಶಮಾಡಿ ನಿಮ್ಮ ಪ್ರಾಣವನ್ನು ತೆಗೆದುಬಿಡುತ್ತವೆ; ನೀವು ಬೀಜ ಬಿತ್ತಿದರೂ ಅದರ ಫಲವು ದೊರೆಯುವುದಿಲ್ಲ: ನಿಮ್ಮ ವೈರಿಗಳು ನಿಮ್ಮ ಬೆಳೆಗಳನ್ನು ತಿಂದುಬಿಡುವರು!


ನೀವು ನೋಡುವ ಸಂಗತಿಗಳು ನಿಮ್ಮನ್ನು ಹುಚ್ಚರನ್ನಾಗಿ ಮಾಡುತ್ತವೆ.


ಯೆಹೋವನು ವಾಗ್ದಾನವನ್ನು ಮಾಡಿರುತ್ತಾನೆ. ಆತನ ಸ್ವಂತ ಹೆಸರೇ ಅದಕ್ಕೆ ಸಾಕ್ಷಿಯಾಗಿದೆ. ಆತನು ತನ್ನ ಸಾಮರ್ಥ್ಯದಿಂದ ವಾಗ್ದಾನವನ್ನು ನೆರವೇರಿಸುವನು. ಯೆಹೋವನು ಹೇಳಿದ್ದೇನೆಂದರೆ, “ನಿನ್ನ ಆಹಾರವನ್ನು ನಾನು ನಿನ್ನ ವೈರಿಗಳಿಗೆ ಮತ್ತೆ ಕೊಡುವದಿಲ್ಲವೆಂದು ವಾಗ್ದಾನ ಮಾಡುತ್ತೇನೆ. ನೀನು ತಯಾರಿಸುವ ದ್ರಾಕ್ಷಾರಸವನ್ನು ಇನ್ನು ಮುಂದೆ ನಿನ್ನ ವೈರಿಗಳು ಸೇವಿಸುವದಿಲ್ಲವೆಂದು ನಾನು ವಾಗ್ದಾನ ಮಾಡುತ್ತೇನೆ.


ಅದಕ್ಕಾಗಿ ನಾನು ನಿಮ್ಮನ್ನು ಪೂರ್ವದ ಜನರಿಗೆ ಬಿಟ್ಟುಕೊಡುವೆನು. ಅವರು ಬಂದು ನಿಮ್ಮ ದೇಶವನ್ನು ಕಿತ್ತುಕೊಳ್ಳುವರು. ಅವರ ಸೈನ್ಯವು ಬಂದು ನಿಮ್ಮ ದೇಶದೊಳಗೆ ಪಾಳೆಯ ಮಾಡುವದು. ಅವರು ನಿಮ್ಮ ಮಧ್ಯದಲ್ಲಿ ವಾಸಿಸಿ ನಿಮ್ಮ ಹಣ್ಣುಗಳನ್ನು ತಿಂದು ನಿಮ್ಮ ಹಾಲನ್ನು ಕುಡಿಯುವರು.


ಎಫ್ರಾಯೀಮ್ ಶಿಕ್ಷಿಸಲ್ಪಡುವನು. ಅವನು ದ್ರಾಕ್ಷಿಹಣ್ಣಿನಂತೆ ನಜ್ಜುಗುಜ್ಜಾಗುವನು. ಕಾರಣವೇನೆಂದರೆ, ಅವನು ಹೊಲಸನ್ನು ಹಿಂಬಾಲಿಸಲು ತೀರ್ಮಾನಿಸಿದ್ದಾನೆ.


ಪೂರ್ವದಿಂದ ಮಿದ್ಯಾನ್ಯರೂ ಅಮಾಲೇಕ್ಯರೂ ಯಾವಾಗಲೂ ಬಂದು ಇವರ ಬೆಳೆಗಳನ್ನು ನಾಶಪಡಿಸುತ್ತಿದ್ದರು.


ಮಿದ್ಯಾನ್ಯರು ಬಂದು ಈ ಪ್ರದೇಶದಲ್ಲಿ ಪಾಳೆಯ ಮಾಡಿಕೊಂಡರು. ಅವರು ತಮ್ಮ ಸಂಗಡ ತಮ್ಮ ಕುಟುಂಬದವರನ್ನೂ ಪಶುಗಳನ್ನೂ ತಂದರು. ಅವರು ಮಿಡತೆಗಳ ಗುಂಪಿನಂತೆ ಅಸಂಖ್ಯರಾಗಿದ್ದರು. ಅವರು ಮತ್ತು ಅವರ ಒಂಟೆಗಳು ಅತಿದೊಡ್ಡ ಪ್ರಮಾಣದಲ್ಲಿದ್ದು ಎಣಿಸಲು ಸಾಧ್ಯವಿರಲಿಲ್ಲ. ಇವರೆಲ್ಲರೂ ಇಸ್ರೇಲರ ಪ್ರದೇಶಕ್ಕೆ ನುಗ್ಗಿ ಹಾಳುಮಾಡಿದರು.


ದುಷ್ಟನು ಗಳಿಸಿದ ಲಾಭಗಳು ಬೇರೆಯವರ ಪಾಲಾಗುವುದು. ತನ್ನ ಲಾಭವನ್ನು ಅನುಭವಿಸಲು ಅವನಿಗೆ ಸಾಧ್ಯವಾಗದು.


ಆದರೆ, ಜನರನ್ನು ನೋಡಿರಿ. ಅವರನ್ನು ಬೇರೆಯವರು ಸೋಲಿಸಿದ್ದಾರೆ. ಅವರಿಂದ ವಸ್ತುಗಳನ್ನು ದೋಚಿದ್ದಾರೆ. ತರುಣರೆಲ್ಲರೂ ಭಯಪಟ್ಟಿದ್ದಾರೆ; ಅವರನ್ನು ಸೆರೆಮನೆಯಲ್ಲಿ ಬಂಧಿಸಿದ್ದಾರೆ. ಅವರಿಂದ ಹಣವನ್ನು ಜನರು ಕಿತ್ತುಕೊಂಡಿದ್ದಾರೆ. ಅವರನ್ನು ರಕ್ಷಿಸಲು ಯಾರೂ ಇಲ್ಲ. ಅವರಲ್ಲಿ ಹಣವನ್ನು “ಹಿಂದಕ್ಕೆ ಕೊಡು” ಎಂದು ಹೇಳುವವರೇ ಇಲ್ಲ.


ಇಸ್ರೇಲರು ಅಜ್ಞಾನದ ಕಾರ್ಯ ಮಾಡಿದರು. ಅವರು ಗಾಳಿಯನ್ನು ನೆಡಲು ಪ್ರಯತ್ನಿಸಿದರು. ಆದರೆ ಅವರಿಗೆ ತೊಂದರೆಗಳೇ ಪ್ರಾಪ್ತವಾಗುವದು. ಅವರು ಸುಂಟರಗಾಳಿಯನ್ನು ಕೊಯ್ಯುವರು. ಹೊಲದಲ್ಲಿ ಧಾನ್ಯವು ಬೆಳೆಯುವದು. ಆದರೆ ಅವು ಆಹಾರವನ್ನು ಕೊಡುವದಿಲ್ಲ. ಒಂದುವೇಳೆ ಅದು ಕೊಟ್ಟರೂ ಅಪರಿಚಿತರು ಅದನ್ನು ತಿನ್ನುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು