Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 28:46 - ಪರಿಶುದ್ದ ಬೈಬಲ್‌

46 ನೀವೂ ನಿಮ್ಮ ಸಂತತಿಯವರೂ ದೇವರ ಶಾಶ್ವತವಾದ ತೀರ್ಪನ್ನು ಹೊಂದಿದ್ದೀರೆಂಬುದಕ್ಕೆ ಬೇರೆಯವರಿಗೆ ಈ ಶಾಪಗಳೇ ಸೂಚನೆಯಾಗಿಯೂ ರುಜುವಾತಾಗಿಯೂ ಇರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

46 ಇವು ನಿಮಗೂ ಮತ್ತು ನಿಮ್ಮ ಸಂತತಿಯವರಿಗೂ ಯಾವಾಗಲೂ ಪ್ರಾಪ್ತವಾಗುತ್ತಾ ಎಲ್ಲರಿಗೂ ಎಚ್ಚರಿಕೆಯನ್ನೂ ಮತ್ತು ಬೆರಗನ್ನೂ ಉಂಟುಮಾಡುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

46 ಇವು ನಿಮಗೂ ನಿಮ್ಮ ಸಂತತಿಯವರಿಗೂ ನಿರಂತರವಾಗಿ ಪ್ರಾಪ್ತವಾಗುವುವು; ಸರ್ವರಿಗೆ ಬೆರಗನ್ನೂ ಎಚ್ಚರಿಕೆಯನ್ನೂ ಉಂಟುಮಾಡುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

46 ಇವು ನಿಮಗೂ ನಿಮ್ಮ ಸಂತತಿಯವರಿಗೂ ಯಾವಾಗಲೂ ಪ್ರಾಪ್ತವಾಗುತ್ತಾ [ಎಲ್ಲರಿಗೂ] ಎಚ್ಚರಿಕೆಯನ್ನೂ ಬೆರಗನ್ನೂ ಉಂಟುಮಾಡುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

46 ಅವು ನಿಮ್ಮ ಮೇಲೂ ನಿಮ್ಮ ಸಂತತಿಯ ಮೇಲೂ ಯಾವಾಗಲೂ ಗುರುತೂ ಅದ್ಭುತವೂ ಆಗಿರುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 28:46
13 ತಿಳಿವುಗಳ ಹೋಲಿಕೆ  

“ನಾನೂ ನನ್ನ ಮಕ್ಕಳೂ ಇಸ್ರೇಲ್ ಜನರಿಗೆ ಒಂದು ಗುರುತಾಗಿದ್ದೇವೆ. ಸರ್ವಶಕ್ತನಾದ ಯೆಹೋವನು ನಮ್ಮನ್ನು ಕಳುಹಿಸಿದ್ದಾನೆ. ಆತನು ಚೀಯೋನ್ ಬೆಟ್ಟದಲ್ಲಿ ವಾಸಿಸುತ್ತಾನೆ.”


ನಾನು ಅವನ ವಿರುದ್ಧವಾಗಿ ತಿರುಗಿ ಅವನನ್ನು ನಾಶಮಾಡುವೆನು. ಅವನು ಇಸ್ರೇಲರಿಗೆ ನಿದರ್ಶನವಾಗಿರಬೇಕು, ಜನರು ಅವನನ್ನು ನೋಡಿ ನಗಾಡುವರು. ನಾನು ಅವನನ್ನು ನನ್ನ ಜನರ ಮಧ್ಯದಿಂದ ತೆಗೆದು ಬಿಡುವೆನು. ಆಗ ನೀವು ನಾನೇ ಯೆಹೋವನೆಂದು ತಿಳಿಯುವಿರಿ.


ನೀವು ಯಾವ ದೇಶಕ್ಕೆ ಕಳುಹಿಸಲ್ಪಡುವಿರೋ ಆ ದೇಶದವರು ನಿಮ್ಮ ದುರವಸ್ಥೆಯನ್ನು ನೋಡಿ ನಗುವರು; ಕೆಟ್ಟಮಾತುಗಳನ್ನಾಡುವರು.


ಆ ಜನರಿಗೆ ಸಂಭವಿಸಿದ ಸಂಗತಿಗಳು ನಮಗೆ ನಿದರ್ಶನಗಳಾಗಿವೆ. ನಮ್ಮನ್ನು ಎಚ್ಚರಿಸುವುದಕ್ಕಾಗಿ ಆ ಸಂಗತಿಗಳನ್ನು ಬರೆದಿಡಲಾಗಿದೆ. ಈಗ ನಾವು ಯುಗದ ಅಂತಿಮ ಕಾಲದಲ್ಲಿ ಜೀವಿಸುತ್ತಿದ್ದೇವೆ.


ಆ ದೇಶಗಳಲ್ಲಿರುವಾಗಲೂ ಅವರು ನನ್ನ ಹೆಸರಿಗೆ ಅಪಕೀರ್ತಿ ತಂದರು. ಹೇಗೆ? ‘ಇವರು ಯೆಹೋವನ ಜನರು. ಆತನು ಕೊಟ್ಟ ದೇಶವನ್ನು ಇವರು ತೊರೆದರು.’ ಎಂದು ಆ ದೇಶದ ಜನರು ಅನ್ನುವಂತೆ ಮಾಡಿದರು.


ನಾನು ಈ ದ್ರಾಕ್ಷಾರಸವನ್ನು ಜೆರುಸಲೇಮಿನ ಮತ್ತು ಯೆಹೂದದ ಜನರಿಗೆ ಸುರಿದೆನು. ನಾನು ರಾಜನನ್ನು ಮತ್ತು ಯೆಹೂದದ ನಾಯಕರನ್ನು ಈ ಪಾತ್ರೆಯಲ್ಲಿಯ ದ್ರಾಕ್ಷಾರಸವನ್ನು ಕುಡಿಯುವಂತೆ ಮಾಡಿದೆನು. ಅವರು ಬರಿದಾದ ಮರುಭೂಮಿಯಂತಾಗಲೆಂದು ಹೀಗೆ ಮಾಡಿದೆನು. ಆ ಸ್ಥಳವು ತುಂಬಾ ಹಾಳಾಗಲಿ, ಜನರು ಅದರ ಬಗ್ಗೆ ಸಿಳ್ಳುಹಾಕಲಿ, ಶಾಪಹಾಕಲಿ ಎಂಬ ಉದ್ದೇಶದಿಂದ ನಾನು ಹಾಗೆ ಮಾಡಿದೆನು. ಹಾಗೆಯೇ ಆಯಿತು. ಯೆಹೂದವು ಈಗ ಹಾಗೆಯೇ ಇದೆ.


ನಾನು ಈ ನಗರವನ್ನು ಸಂಪೂರ್ಣವಾಗಿ ನಾಶಮಾಡುತ್ತೇನೆ. ಜೆರುಸಲೇಮಿನಿಂದ ಹಾದುಹೋಗುವಾಗ ಜನರು ಸಿಳ್ಳುಹಾಕಿ ತಲೆಯಾಡಿಸಿ ಹೋಗುವರು. ನಗರವು ಹಾಳಾಗಿರುವುದನ್ನು ಕಂಡು ಅವರು ಬೆರಗಾಗುವರು.


ದೇವರು ಅವರ ಮೇಲೆ ಬಹಳವಾಗಿ ಸಿಟ್ಟುಗೊಂಡದ್ದರಿಂದ ಅವರ ದೇಶದಿಂದ ಅವರನ್ನು ಕಿತ್ತು ಅವರು ಈಗ ವಾಸಿಸುವ ಮತ್ತೊಂದು ದೇಶದಲ್ಲಿ ಅವರನ್ನಿರಿಸಿದನು.’


ಯೆಹೋವನು ಆ ಮನುಷ್ಯನನ್ನು ಕ್ಷಮಿಸುವುದಿಲ್ಲ. ಅವನ ಮೇಲೆ ಕೋಪಗೊಂಡು ಅವನನ್ನು ಶಿಕ್ಷಿಸುವನು. ಅವನನ್ನು ಇಸ್ರೇಲ್ ಕುಲಗಳಿಂದ ತೆಗೆದುಹಾಕುವನು. ಈ ಪುಸ್ತಕದಲ್ಲಿ ಬರೆದ ಎಲ್ಲಾ ಶಾಪಗಳಿಂದ ಬಾಧಿಸಿ ನಾಶಪಡಿಸುವನು. ಈ ಬೋಧನಾ ಪುಸ್ತಕದಲ್ಲಿ ಬರೆದಿರುವ ಒಡಂಬಡಿಕೆಗೆ ಅದು ಸೇರಿರುತ್ತದೆ.


ನಿಮಗೂ ನಿಮ್ಮ ಸಂತತಿಯವರಿಗೂ ಅನೇಕ ತೊಂದರೆಗಳನ್ನು ಕೊಡುವನು. ಆ ತೊಂದರೆಗಳು ಮತ್ತು ರೋಗಗಳು ಭಯಂಕರವಾಗಿವೆ.


ಭೂಮಿಯು ಬಾಯ್ದೆರೆದು ಅವರನ್ನೂ ಕೋರಹನನ್ನೂ ನುಂಗಿಬಿಟ್ಟಿತು ಮತ್ತು ಬೆಂಕಿಯು ಆ ಗುಂಪಿನವರಲ್ಲಿ ಇತರ ಇನ್ನೂರೈವತ್ತು ಮಂದಿಯನ್ನು ದಹಿಸಿ ಇಸ್ರೇಲರಿಗೆ ಎಚ್ಚರಿಕೆಯುಂಟಾಗುವ ಹಾಗೆ ಮಾಡಿತು.


ನಿನ್ನ ಸುತ್ತಲೂ ಇರುವ ಜನಾಂಗಗಳು ನಿನಗೆ ಅವಮಾನ ಮಾಡಿ ಗೇಲಿ ಮಾಡುತ್ತವೆ. ನೀನು ಅವರಿಗೆ ಎಚ್ಚರಿಕೆಯಾಗಿಯೂ ಭಯೋತ್ಪಾದಕಕಾರಿಯಾಗಿಯೂ ಇರುವಿ. ನಾನು ನನ್ನ ಮಹಾಕೋಪದಿಂದ ನಿನ್ನನ್ನು ದಂಡಿಸಿದಾಗ ಇದು ಸಂಭವಿಸುವುದು. ಯೆಹೋವನಾದ ನಾನೇ ಇದನ್ನು ಹೇಳಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು