Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 28:65 - ಪರಿಶುದ್ದ ಬೈಬಲ್‌

65 “ಆ ಜನಾಂಗದವರೊಂದಿಗೆ ಜೀವಿಸುವಾಗ ನಿಮಗೆ ಸಮಾಧಾನವಿರುವುದಿಲ್ಲ; ನಿಮಗೆ ವಿಶ್ರಾಂತಿ ಇರುವುದಿಲ್ಲ. ನಿಮ್ಮ ಯೆಹೋವನು ನಿಮಗೆ ಚಿಂತೆಬೇಸರಗಳನ್ನು ತಂದು ತುಂಬಿಸುವನು. ನಿಮ್ಮ ಕಣ್ಣುಗಳು ಆಯಾಸದಿಂದ ತುಂಬಿರುವವು; ನೀವು ಕಳವಳದಿಂದಿರುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

65 ಆ ದೇಶಗಳಲ್ಲಿ ನಿಮಗೆ ಯಾವ ವಿಶ್ರಾಂತಿಯೂ ದೊರೆಯುವುದಿಲ್ಲ; ಸ್ವಲ್ಪ ಹೊತ್ತು ಅಂಗಾಲಿಡುವುದಕ್ಕೂ ನಿಮಗೆ ಸ್ಥಳಸಿಕ್ಕುವುದಿಲ್ಲ. ನೀವು ನಡುಗುವ ಹೃದಯವುಳ್ಳವರಾಗಿಯೂ, ದಿಕ್ಕುತೋರದೆ ಕಂಗೆಟ್ಟವರಾಗಿಯೂ, ಮನಗುಂದಿದವರಾಗಿಯೂ ಇರುವಂತೆ ಯೆಹೋವನು ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

65 ಆ ದೇಶಗಳಲ್ಲಿ ನಿಮಗೆ ಯಾವ ವಿಶ್ರಾಂತಿಯೂ ದೊರೆಯುವುದಿಲ್ಲ. ಸ್ವಂತದ್ದು ಎಂದು ಹೇಳಿಕೊಳ್ಳಲು ಅಂಬೆಗಾಲಿಡುವಷ್ಟು ಸ್ಥಳಸಿಕ್ಕುವುದಿಲ್ಲ. ನೀವು ಗಡಗಡನೆ ನಡುಗುವ ಹೃದಯವುಳ್ಳವರಾಗಿ, ದಿಕ್ಕುತೋರದೆ ಕಂಗೆಟ್ಟವರಾಗಿ ಹಾಗು ಮನಗುಂದಿದವರಾಗಿ ಇರುವಂತೆ ಸರ್ವೇಶ್ವರ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

65 ಆ ದೇಶಗಳಲ್ಲಿ ನಿಮಗೆ ಯಾವ ವಿಶ್ರಾಂತಿಯೂ ದೊರೆಯುವದಿಲ್ಲ; ಸ್ವಲ್ಪ ಹೊತ್ತು ಅಂಗಾಲಿಡುವದಕ್ಕೂ ಸ್ಥಳ ಸಿಕ್ಕುವದಿಲ್ಲ. ನೀವು ನಡುಗುವ ಹೃದಯವುಳ್ಳವರಾಗಿಯೂ ದಿಕ್ಕು ತೋರದೆ ಕಂಗೆಟ್ಟವರಾಗಿಯೂ ಮನಗುಂದಿದವರಾಗಿಯೂ ಇರುವಂತೆ ಯೆಹೋವನು ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

65 ಆ ಜನಾಂಗಗಳಲ್ಲಿ ನಿಮಗೆ ವಿಶ್ರಾಂತಿ ದೊರೆಯುವುದಿಲ್ಲ. ಸ್ವಲ್ಪ ಹೊತ್ತು ಅಂಗಾಲಿಡುವುದಕ್ಕೂ ನಿಮಗೆ ಸ್ಥಳಸಿಕ್ಕುವುದಿಲ್ಲ. ಅಲ್ಲಿ ಯೆಹೋವ ದೇವರು ನಿಮಗೆ ನಡುಗುವ ಹೃದಯವನ್ನೂ ಕ್ಷೀಣಿಸುವ ಕಣ್ಣುಗಳನ್ನೂ ಕುಂದುವ ಪ್ರಾಣವನ್ನೂ ಕೊಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 28:65
21 ತಿಳಿವುಗಳ ಹೋಲಿಕೆ  

ಜೀವಂತವಾಗಿ ಉಳಿದವರು ತಮ್ಮ ವೈರಿಗಳ ದೇಶದಲ್ಲಿ ಅಧೈರ್ಯಗೊಳ್ಳುವರು. ಅವರು ಪ್ರತಿಯೊಂದಕ್ಕೂ ದಿಗಿಲುಪಡುವರು. ಗಾಳಿಯಿಂದ ತೂರಿಹೋಗುವ ಎಲೆಯ ಶಬ್ದಕ್ಕೆ ಅವರು ಓಡಿಹೋಗುವರು. ಕತ್ತಿಯನ್ನು ಹಿಡಿದುಕೊಂಡು ಬೆನ್ನಟ್ಟುತ್ತಿದ್ದಾರೋ ಎಂಬಂತೆ ಅವರು ಓಡಿಹೋಗುವರು. ಯಾರೂ ಬೆನ್ನಟ್ಟದಿದ್ದಾಗಲೂ ಅವರು ಎಡವಿ ಬೀಳುವರು.


ಅವರ ಕಣ್ಣು ಕುರುಡಾಗಲಿ; ನಿರಂತರ ಭಾರದಿಂದ ಬೆನ್ನು ಗೂನಾಗಲಿ.”


ಶತ್ರುಗಳು ಅವರನ್ನು ಸೆರೆಹಿಡಿದರೆ ನಾನು ಅವರನ್ನು ಕೊಂದುಹಾಕಲು ಕತ್ತಿಗೆ ಆಜ್ಞಾಪಿಸುವೆನು. ಹೌದು ನಾನು ಅವರನ್ನು ಗಮನಿಸುತ್ತಾ ಕಾಯುವೆನು. ಅವರಿಗೆ ಒಳ್ಳೆಯದು ಮಾಡುವುದಕ್ಕಾಗಿ ಅಲ್ಲ. ಅವರಿಗೆ ಸಂಕಟ ಕೊಡುವುದಕ್ಕಾಗಿ ಅವರನ್ನು ಕಾಯುತ್ತೇನೆ.”


ಆಗ ನಾನು ನಿಮ್ಮ ಮಧ್ಯೆ ಭಯಂಕರ ಸಂಗತಿಗಳು ನಡೆಯುವಂತೆ ಮಾಡುವೆ. ನೀವು ವ್ಯಾಧಿಯಿಂದಲೂ ಜ್ವರದಿಂದಲೂ ನರಳುವಂತೆ ಮಾಡುವೆ. ಅವು ನಿಮ್ಮ ಕಣ್ಣುಗಳನ್ನು ನಾಶಮಾಡಿ ನಿಮ್ಮ ಪ್ರಾಣವನ್ನು ತೆಗೆದುಬಿಡುತ್ತವೆ; ನೀವು ಬೀಜ ಬಿತ್ತಿದರೂ ಅದರ ಫಲವು ದೊರೆಯುವುದಿಲ್ಲ: ನಿಮ್ಮ ವೈರಿಗಳು ನಿಮ್ಮ ಬೆಳೆಗಳನ್ನು ತಿಂದುಬಿಡುವರು!


ನೀರು ಇನ್ನೂ ಇದ್ದಕಾರಣ, ಆ ಪಾರಿವಾಳ ಹಿಂತಿರುಗಿ ಬಂತು. ನೋಹನು ಕೈಚಾಚಿ ಅದನ್ನು ಹಿಡಿದುಕೊಂಡು ನಾವೆಯೊಳಗೆ ಸೇರಿಸಿಕೊಂಡನು.


ಗ್ರಹಶಕ್ತಿಗಳು ಕದಲುವುದರಿಂದ ಭೂಮಿಯಲ್ಲಿ ಏನೇನು ಸಂಭವಿಸುವುದೋ ಎಂಬ ಭಯದಿಂದ ಮನುಷ್ಯರು ದಿಗ್ಭ್ರಮೆಗೊಳ್ಳುವರು.


ಇವೆಲ್ಲಾ ಪ್ರಸವವೇದನೆಯ ಆರಂಭವಷ್ಟೇ.


ಆ ವಿಷಯವನ್ನು ಕೇಳಿದಾಗ ನನ್ನ ಶರೀರವೆಲ್ಲಾ ನಡುಗಿತು. ಆಶ್ಟರ್ಯದಿಂದ ನಾನು ಸಿಳ್ಳುಹಾಕಿದೆ. ನನ್ನ ಎಲುಬುಗಳ ಬಲಹೀನತೆಯಿಂದ ನಾನು ನಡುಗುವವನಾಗಿ ನಿಂತೆನು. ಅವರು ಜನರ ಮೇಲೆ ಬೀಳಲು ಬರುವಾಗ ನಾನು ಅವರ ನಾಶನದ ದಿವಸವನ್ನು ಎದುರುನೋಡುತ್ತಿದ್ದೇನೆ.


ಅವರ ಹೃದಯವನ್ನು ಕಠಿಣಗೊಳಿಸು! ಬಳಿಕ ಅವರನ್ನು ಶಪಿಸು!


ನನ್ನ ಸೇವಕರ ಹೃದಯಗಳಲ್ಲಿ ಒಳ್ಳೆಯತನವಿದೆ. ಆದ್ದರಿಂದ ಅವರು ಸಂತೋಷವಾಗಿದ್ದಾರೆ. ದುಷ್ಟಜನರಾದ ನೀವಾದರೋ ಹೃದಯದ ಬೇನೆಯಿಂದಾಗಿ ಅಳುವಿರಿ. ನಿಮ್ಮ ಆತ್ಮವು ಕುಂದಿಹೋಗುವದು; ನೀವು ದುಃಖಕ್ರಾಂತರಾಗುವಿರಿ.


ನನ್ನ ದೇವರು ಹೇಳುವುದೇನೆಂದರೆ: “ದುಷ್ಟ ಜನರಿಗೆ ಸಮಾಧಾನವಿಲ್ಲ.”


ಜೆರುಸಲೇಮೇ, ಎಚ್ಚರಗೊಳ್ಳು; ಎದ್ದೇಳು; ಯೆಹೋವನು ನಿನ್ನ ಮೇಲೆ ಬಹಳವಾಗಿ ಕೋಪಗೊಂಡು ನಿನ್ನನ್ನು ಶಿಕ್ಷಿಸಿದ್ದಾನೆ. ಆ ಶಿಕ್ಷೆಯು ವಿಷತುಂಬಿದ ಪಾತ್ರೆಯಂತಿದೆ. ನೀನು ಅದನ್ನು ಕುಡಿಯಲೇಬೇಕಿತ್ತು. ಈಗ ನೀನು ಅದನ್ನು ಕುಡಿದಿರುವೆ.


ನೀವು ಹಗಲಿರುಳು ಭಯದಿಂದಿರುವಿರಿ ಮತ್ತು ಅಪಾಯದಲ್ಲಿ ಜೀವಿಸುವಿರಿ. ನಿಮ್ಮ ಜೀವಿತದ ಬಗ್ಗೆ ನಿಮಗೆಂದಿಗೂ ನಿಶ್ಚಯತ್ವವಿರುವುದಿಲ್ಲ.


ಆದರೆ ದುಷ್ಟರು ಸಹಾಯಕ್ಕಾಗಿ ಎದುರುನೋಡಿದರೂ ತಮ್ಮ ಆಪತ್ತುಗಳಿಂದ ಪಾರಾಗಲು ಅವರಿಗೆ ಸಾಧ್ಯವಿಲ್ಲ. ಅವರ ನಿರೀಕ್ಷೆಯೇ ಅವರನ್ನು ಮರಣಕ್ಕೆ ನಡೆಸುತ್ತದೆ.”


ಅತಿ ಕಷ್ಟಗಳನ್ನು ಅನುಭವಿಸಿದ ಮೇಲೆ ಯೆಹೂದ ಬಂಧನಕ್ಕೊಳಗಾಗಿದ್ದಾಳೆ. ಅತಿ ಶ್ರಮಪಟ್ಟ ಮೇಲೆಯೂ ಅವಳು ಸೆರೆ ಒಯ್ಯಲ್ಪಟ್ಟಿದ್ದಾಳೆ. ಯೆಹೂದ ಬೇರೆ ಜನಾಂಗಗಳ ಜೊತೆಯಲ್ಲಿ ವಾಸಿಸುತ್ತಾಳೆ. ಆದರೆ ಅವಳಿಗೆ ವಿಶ್ರಾಂತಿ ಸಿಕ್ಕಿಲ್ಲ. ಅವಳನ್ನು ಬೆನ್ನಟ್ಟಿದ ಜನರು ಆಕೆಯು ಬಳಲಿ ಹೋಗಿದ್ದಾಗಲೇ ಅವಳನ್ನು ಹಿಡಿದುಕೊಂಡರು.


ಇವುಗಳ ದೆಸೆಯಿಂದಾಗಿ ನಮ್ಮ ಹೃದಯಗಳು ಎಡಬಿಡದೆ ನೋಯುತ್ತಿವೆ. ನಮ್ಮ ಕಣ್ಣುಗಳು ಸರಿಯಾಗಿ ಕಾಣದಂತಾಗಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು