Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 29:10 - ಪರಿಶುದ್ದ ಬೈಬಲ್‌

10 “ಈ ದಿನ ನೀವೆಲ್ಲರೂ ದೇವರ ಮುಂದೆ ನಿಂತಿದ್ದೀರಿ. ನಿಮ್ಮ ನಾಯಕರು, ಹಿರಿಯರು, ನಿಮ್ಮ ಜನರೆಲ್ಲಾ ಇಲ್ಲಿ ಇರುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಇಸ್ರಾಯೇಲ್ ಪುರುಷರೇ, ನೀವೆಲ್ಲರೂ ಈಹೊತ್ತು ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ನಿಂತಿರುವುದಕ್ಕೆ ಕಾರಣವೇನೆಂದರೆ, ನಿಮ್ಮ ದೇವರಾದ ಯೆಹೋವನು ನಿಮಗೆ ಹೇಳಿದಂತೆ ನಿಮ್ಮ ಪ್ರಧಾನರು, ಗೋತ್ರದವರು, ಹಿರಿಯರು, ಅಧಿಕಾರಿಗಳು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 “ಇಸ್ರಯೇಲ ಜನರೇ, ನಿಮ್ಮ ಮುಖ್ಯಸ್ಥರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಇಸ್ರಾಯೇಲ ಪುರುಷರೇ, ನಿಮ್ಮ ಪ್ರಧಾನರು, ಗೋತ್ರದವರು, ಹಿರಿಯರು, ಅಧಿಕಾರಿಗಳು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನೀವೆಲ್ಲರು ಈ ಹೊತ್ತು ನಿಮ್ಮ ದೇವರಾದ ಯೆಹೋವ ದೇವರ ಮುಂದೆ ನಿಂತಿದ್ದೀರಿ. ನಿಮ್ಮ ಗೋತ್ರಗಳ ಮುಖ್ಯಸ್ಥರೂ ಹಿರಿಯರೂ ಅಧಿಕಾರಿಗಳೂ ಇಸ್ರಾಯೇಲಿನ ಜನರೆಲ್ಲರೂ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 29:10
18 ತಿಳಿವುಗಳ ಹೋಲಿಕೆ  

ಸತ್ತುಹೋಗಿದ್ದ ಚಿಕ್ಕವರು ಮತ್ತು ದೊಡ್ಡವರು ಸಿಂಹಾಸನದ ಮುಂದೆ ನಿಂತಿದ್ದರು. ಆಗ ಜೀವಬಾಧ್ಯರ ಪುಸ್ತಕವನ್ನು ತೆರೆಯಲಾಯಿತು. ತೆರೆದಿದ್ದ ಇತರ ಪುಸ್ತಕಗಳೂ ಅಲ್ಲಿದ್ದವು. ಸತ್ತುಹೋಗಿದ್ದ ಈ ಜನರಿಗೆ ಅವರು ಮಾಡಿದ್ದ ಕಾರ್ಯಗಳ ಆಧಾರದ ಮೇಲೆ ತೀರ್ಪು ನೀಡಲಾಯಿತು. ಇವುಗಳು ಪುಸ್ತಕಗಳಲ್ಲಿ ಬರೆಯಲ್ಪಟ್ಟಿವೆ.


ಆಗ ಲೋಕದ ರಾಜರುಗಳೂ ಅಧಿಪತಿಗಳೂ ಸೇನಾಧಿಪತಿಗಳೂ ಶ್ರೀಮಂತರೂ ಬಲಿಷ್ಠರೂ ಪ್ರತಿಯೊಬ್ಬ ಗುಲಾಮನೂ ಸ್ವತಂತ್ರ ಪ್ರಜೆಯೂ ಗವಿಗಳಲ್ಲಿ ಮತ್ತು ಬೆಟ್ಟಗಳ ಮೇಲಿನ ಬಂಡೆಗಳ ಮರೆಯಲ್ಲಿ ಅಡಗಿಕೊಂಡರು.


ಹೀಗೆ ಇವರೆಲ್ಲಾ ಯೆಹೋವನಿಗೆ ಒಂದು ವಿಶೇಷವಾದ ವಾಗ್ದಾನವನ್ನು ಮಾಡಿದರು. ತಾವು ವಾಗ್ದಾನವನ್ನು ನೆರವೇರಿಸದೆ ಹೋದಲ್ಲಿ ಸಂಕಟಬಾಧೆಗಳು ಪ್ರಾಪ್ತವಾಗುವಂತೆ ಯೆಹೋವನನ್ನು ಕೇಳಿಕೊಂಡರು. ಇವರೆಲ್ಲಾ ದೇವರ ನೀತಿನಿಯಮಗಳನ್ನು ಅನುಸರಿಸುತ್ತೇವೆಂದು ಮಾತುಕೊಟ್ಟರು. ಆ ನೀತಿನಿಯಮಗಳನ್ನು ಯೆಹೋವನು ತನ್ನ ಸೇವಕನಾದ ಮೋಶೆಯ ಮೂಲಕ ನಮಗೆ ಕೊಟ್ಟನು. ಮೇಲೆ ಕಾಣಿಸಿದ ಹೆಸರುಗಳಲ್ಲದೆ ಉಳಿದ ಜನರು, ಯಾಜಕರು, ಲೇವಿಯರು, ದ್ವಾರಪಾಲಕರು, ಗಾಯಕರು, ದೇವಾಲಯದ ಸೇವಕರು ಮತ್ತು ಇಸ್ರೇಲಿನ ಜನರು ತಮ್ಮ ಸುತ್ತಲು ವಾಸಿಸುವ ಜನರಿಂದ ಪ್ರತ್ಯೇಕಿಸಲ್ಪಟ್ಟರು. ದೇವರ ವಿಧಿನಿಯಮಗಳನ್ನು ಅನುಸರಿಸುವುದಕ್ಕಾಗಿ ತಮ್ಮ ಹೆಂಡತಿ ಮಕ್ಕಳೊಂದಿಗೆ ಪ್ರತ್ಯೇಕಿಸಿಕೊಂಡರು. ದೇವರಿಗೆ ಮಾಡಿದ ಒಡಂಬಡಿಕೆಯನ್ನು ನಡೆಸಿಕೊಡಲು ಒಪ್ಪಿದರು ಮತ್ತು ಹಾಗೆ ಮಾಡದಿದ್ದಲ್ಲಿ ದೇವರಿಂದ ಸಂಕಟ ವ್ಯಾಧಿಗಳನ್ನು ಸ್ವೀಕರಿಸಲೂ ಒಪ್ಪಿದರು.


“ಈ ಕಾರಣಗಳಿಂದ ಶಾಶ್ವತವಾದ ಒಡಂಬಡಿಕೆಯನ್ನು ನಾವು ನಿನ್ನೊಂದಿಗೆ ಮಾಡುತ್ತೇವೆ. ಆ ಒಡಂಬಡಿಕೆಯನ್ನು ನಾವು ಬರವಣಿಗೆಯಲ್ಲಿ ಮಾಡುತ್ತೇವೆ. ನಮ್ಮ ನಾಯಕರೂ, ಯಾಜಕರೂ, ಲೇವಿಯರೂ ಅದಕ್ಕೆ ಸಹಿ ಮಾಡುವರು ಮತ್ತು ಅದಕ್ಕೆ ಮುದ್ರೆಯನ್ನು ಹಾಕುವರು.”


ಹೀಗೆ ಆ ವರ್ಷದ ಏಳನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಎಜ್ರನು ಧರ್ಮಶಾಸ್ತ್ರವನ್ನು ಆ ಜನರ ಮುಂದೆ ತಂದನು. ಆ ಜನಸಮೂಹದಲ್ಲಿ ಧರ್ಮಶಾಸ್ತ್ರಕ್ಕೆ ಕಿವಿಗೊಟ್ಟು ಗ್ರಹಿಸಿಕೊಳ್ಳಬಲ್ಲ ಸ್ತ್ರೀಪುರುಷರಿದ್ದರು.


ಅನಂತರ ಯೆಹೋಯಾದನು ಅರಸನೊಂದಿಗೂ ನೆರೆದು ಬಂದಿದ್ದ ಎಲ್ಲಾ ಜನರೊಂದಿಗೂ ಒಪ್ಪಂದವನ್ನು ಮಾಡಿಕೊಂಡನು. ಅವರೆಲ್ಲರೂ ಯೆಹೋವನ ಜನರಾಗಿ ಜೀವಿಸುವದಕ್ಕೆ ಒಪ್ಪಿಕೊಂಡರು.


ಸೀನಾಯಿ ಬೆಟ್ಟದ ಬಳಿಯಲ್ಲಿ ನೀನು ಯೆಹೋವನ ಸನ್ನಿಧಾನದಲ್ಲಿ ನಿಂತಿದ್ದನ್ನು ನೀವು ಜ್ಞಾಪಕ ಮಾಡಿಕೊಳ್ಳಿರಿ. ಆತನು ನನಗೆ ಹೇಳಿದ್ದೇನೆಂದರೆ: ‘ನಾನು ಹೇಳುವ ಮಾತುಗಳನ್ನು ಕೇಳುವಂತೆ ಜನರನ್ನೆಲ್ಲಾ ಒಟ್ಟುಗೂಡಿಸು. ನನ್ನ ಮಾತುಗಳನ್ನು ಕೇಳಿ ಅವರು ಜೀವಮಾನವೆಲ್ಲಾ ನನ್ನನ್ನು ಸನ್ಮಾನಿಸಲು ಮತ್ತು ಭಯಭಕ್ತಿಯಿಂದಿರಲು ಕಲಿತುಕೊಳ್ಳುವರು ಮತ್ತು ಅವರ ಮಕ್ಕಳಿಗೂ ಕಲಿಸುವರು.’


ನೀವು ದೇವರೊಡನೆ ಮಾಡಿದ ಒಪ್ಪಂದವನ್ನು ಪಾಲಿಸುತ್ತಾ ಬಂದರೆ ನೀವು ನಿಮ್ಮ ಕಾರ್ಯಗಳಲ್ಲಿ ಜಯವನ್ನು ಹೊಂದುವಿರಿ.


ನಿಮ್ಮ ಹೆಂಡತಿಮಕ್ಕಳೂ, ನಿಮ್ಮೊಂದಿಗಿರುವ ಪರದೇಶಸ್ಥರೂ ನಿಮ್ಮ ಸೇವೆ ಮಾಡುವವರೂ ಇದ್ದಾರೆ.


ಅಲ್ಲಿ ಇಸ್ರೇಲಿನ ಎಲ್ಲ ಜನರು ಸೇರಿ ಬಂದಿದ್ದರು. ಎಲ್ಲ ಹೆಂಗಸರು ಮತ್ತು ಮಕ್ಕಳು ಮತ್ತು ಇಸ್ರೇಲಿನ ಜನರೊಂದಿಗೆ ಇದ್ದ ಎಲ್ಲ ವಿದೇಶಿಯರು ಅಲ್ಲಿ ಇದ್ದರು. ಅವರೆಲ್ಲರಿಗೆ ಕೇಳಿಸುವಂತೆ ಮೋಶೆಯು ಕೊಟ್ಟಿದ್ದ ಪ್ರತಿಯೊಂದು ಆಜ್ಞೆಯನ್ನು ಯೆಹೋಶುವನು ಓದಿದನು.


ಆದ್ದರಿಂದ ಅವರು ಜೀವಂತವಾಗಿ ಉಳಿಯಲಿ. ಆದರೆ ಅವರು ನಮ್ಮ ಸೇವಕರಾಗಲಿ. ಅವರು ನಮಗಾಗಿ ಸೌಧೆಯನ್ನು ಕಡಿಯಲಿ ಮತ್ತು ನಮ್ಮೆಲ್ಲರಿಗಾಗಿ ನೀರು ತಂದುಹಾಕಲಿ” ಎಂದು ಉತ್ತರಿಸಿದರು. ಹೀಗೆ ಜನನಾಯಕರು ಆ ಜನರೊಂದಿಗೆ ಮಾಡಿಕೊಂಡ ಶಾಂತಿ ಒಪ್ಪಂದವನ್ನು ಮುರಿಯಲಿಲ್ಲ.


ಯೆಹೋವನು ಶೀಲೋವಿನಲ್ಲಿ ಸಮುವೇಲನಿಗೆ ದರ್ಶನ ಕೊಡುವುದನ್ನು ಮುಂದುವರಿಸಿದನು. ಯೆಹೋವನು ಸಮುವೇಲನಿಗೆ ತನ್ನ ವಾಕ್ಯದ ಮೂಲಕ ತನ್ನನ್ನು ಪ್ರಕಟಿಸಿಕೊಂಡನು.


ಸಮುವೇಲನ ಸುದ್ದಿಯು ಇಸ್ರೇಲಿನಲ್ಲೆಲ್ಲಾ ಹರಡಿತು. ಏಲಿಯು ಬಹು ವೃದ್ಧನಾದನು. ಅವನ ಮಕ್ಕಳು ಯೆಹೋವನ ಸನ್ನಿಧಿಯಲ್ಲಿ ಕೆಟ್ಟಕಾರ್ಯಗಳನ್ನು ನಡೆಸುತ್ತಲೇ ಇದ್ದರು. ಆ ಕಾಲದಲ್ಲಿ ಫಿಲಿಷ್ಟಿಯರು ಇಸ್ರೇಲರಿಗೆ ವಿರುದ್ಧವಾಗಿ ಯುದ್ಧಮಾಡಲು ಒಟ್ಟುಗೂಡಿದರು. ಇಸ್ರೇಲರು ಫಿಲಿಷ್ಟಿಯರಿಗೆ ವಿರುದ್ಧವಾಗಿ ಹೊರಟು ಎಬೆನೆಜೆರಿನಲ್ಲಿ ಪಾಳೆಯ ಮಾಡಿಕೊಂಡರು; ಫಿಲಿಷ್ಟಿಯರು ಅಫೇಕಿನಲ್ಲಿ ಪಾಳೆಯ ಮಾಡಿಕೊಂಡರು.


ಯೆಹೂದದ ಎಲ್ಲಾ ಜನರು ತಮ್ಮ ಹೆಂಡತಿಮಕ್ಕಳೊಂದಿಗೆ ಯೆಹೋವನೆದುರು ನಿಂತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು