Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 29:11 - ಪರಿಶುದ್ದ ಬೈಬಲ್‌

11 ನಿಮ್ಮ ಹೆಂಡತಿಮಕ್ಕಳೂ, ನಿಮ್ಮೊಂದಿಗಿರುವ ಪರದೇಶಸ್ಥರೂ ನಿಮ್ಮ ಸೇವೆ ಮಾಡುವವರೂ ಇದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಹೆಂಗಸರು, ಮಕ್ಕಳು, ನಿಮ್ಮ ಪಾಳೆಯದಲ್ಲಿರುವ ಅನ್ಯರಾದ ಕಟ್ಟಿಗೆ ಒಡೆಯುವವರು ಮತ್ತು ನೀರು ಸೇದುವವರು ಮುಂತಾದ ಆಳುಗಳು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಗೋತ್ರದವರು, ಹಿರಿಯರು, ಅಧಿಕಾರಿಗಳು, ಹೆಂಗಸರು, ಮಕ್ಕಳು ನಿಮ್ಮ ಪಾಳೆಯದಲ್ಲಿ ಇರುವ ಅನ್ಯರಾದ ಕಟ್ಟಿಗೆಯವರು, ನೀರಿನವರು ಮುಂತಾದ ಆಳುಗಳು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಹೆಂಗಸರು, ಮಕ್ಕಳು, ನಿಮ್ಮ ಪಾಳೆಯದಲ್ಲಿರುವ ಅನ್ಯರಾದ ಕಟ್ಟಿಗೆಯವರು, ನೀರಿನವರು ಮುಂತಾದ ಆಳುಗಳು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ನಿಮ್ಮ ಮಕ್ಕಳೂ ಹೆಂಡತಿಯರೂ ನಿಮ್ಮ ಪಾಳೆಯದಲ್ಲಿರುವ ಪರದೇಶಿಯರೂ ನಿಮಗಾಗಿ ಕಟ್ಟಿಗೆ ಕಡಿಯುವವರೂ ನೀರು ಸೇದುವವರೂ ಸಹ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 29:11
16 ತಿಳಿವುಗಳ ಹೋಲಿಕೆ  

ಲೆಕ್ಕವಿಲ್ಲದಷ್ಟು ಕುರಿಗಳೂ ದನಕರುಗಳೂ ಇವರೊಂದಿಗಿದ್ದವು. ಇಸ್ರೇಲರಲ್ಲದ ಬೇರೆ ಜನರು ಸಹ ಇಸ್ರೇಲರೊಂದಿಗೆ ಈಜಿಪ್ಟಿನಿಂದ ಹೊರಟರು.


ಈ ಹೊಸ ಜೀವನದಲ್ಲಿ ಗ್ರೀಕರ ಮತ್ತು ಯೆಹೂದ್ಯರ ಮಧ್ಯದಲ್ಲಾಗಲಿ, ಸುನ್ನತಿಯನ್ನು ಮಾಡಿಸಿಕೊಂಡಿರುವ ಮತ್ತು ಮಾಡಿಸಿಕೊಂಡಿಲ್ಲದ ಜನರ ಮಧ್ಯದಲ್ಲಾಗಲಿ ಪರದೇಶದವರ ಅಥವಾ ಅನಾಗರೀಕರ ಮಧ್ಯದಲ್ಲಾಗಲಿ, ಗುಲಾಮರ ಅಥವಾ ಸ್ವತಂತ್ರರಾದ ಜನರ ಮಧ್ಯದಲ್ಲಾಗಲಿ ಯಾವ ಭೇದವೂ ಇಲ್ಲ. ಎಲ್ಲಾ ವಿಶ್ವಾಸಿಗಳಲ್ಲಿಯೂ ಕ್ರಿಸ್ತನಿದ್ದಾನೆ. ಅವರಿಗೆ ಕ್ರಿಸ್ತನೊಬ್ಬನೇ ಅಗತ್ಯ.


ಈಗ ಕ್ರಿಸ್ತನಲ್ಲಿ ಯೆಹೂದ್ಯನು, ಗ್ರೀಕನು ಎಂಬ ವ್ಯತ್ಯಾಸವಿಲ್ಲ; ಸ್ವತಂತ್ರರು ಮತ್ತು ಗುಲಾಮರು ಎಂಬ ವ್ಯತ್ಯಾಸವಿಲ್ಲ; ಸ್ತ್ರೀಯರು ಮತ್ತು ಪುರುಷರು ಎಂಬ ವ್ಯತ್ಯಾಸವಿಲ್ಲ. ನೀವೆಲ್ಲರೂ ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿದ್ದೀರಿ.


ಆದರೆ ಏಳನೆಯ ದಿನವು ವಿಶ್ರಾಂತಿಯ ದಿನವಾಗಿದೆ. ಆ ದಿನ ಯಾರೂ ಕೆಲಸ ಮಾಡಬಾರದು. ನೀವು ಮಾತ್ರವೇ ಅಲ್ಲ, ನಿಮ್ಮ ಮಕ್ಕಳು, ಸೇವಕರು, ನಿಮ್ಮ ಪಶುಗಳು, ನಿಮ್ಮಲ್ಲಿರುವ ಪರದೇಶಿಯರು ಕೆಲಸಮಾಡದೆ ವಿಶ್ರಾಂತಿಯಲ್ಲಿರಬೇಕು. ನಿಮ್ಮ ದೇವರಾದ ಯೆಹೋವನ ಗೌರವಾರ್ಥವಾಗಿ ಸಬ್ಬತ್ ದಿನವು ವಿಶ್ರಾಂತಿಯ ದಿನವಾಗಿದೆ.


ಅವರ ಮಧ್ಯದಲ್ಲಿದ್ದ ಕಿರುಕುಳಕೊಡುವ ಪರದೇಶಸ್ಥರು ಬೇರೆ ರೀತಿಯ ಆಹಾರಕ್ಕಾಗಿ ಬಹಳವಾಗಿ ಆಶಿಸಿದರು. ಇಸ್ರೇಲರು ಸಹ ಮತ್ತೆ ಅಳಲು ಆರಂಭಿಸಿ, “ನಮಗೆ ಯಾರು ಮಾಂಸವನ್ನು ಕೊಡುತ್ತಾರೆ?


“ಈ ದಿನ ನೀವೆಲ್ಲರೂ ದೇವರ ಮುಂದೆ ನಿಂತಿದ್ದೀರಿ. ನಿಮ್ಮ ನಾಯಕರು, ಹಿರಿಯರು, ನಿಮ್ಮ ಜನರೆಲ್ಲಾ ಇಲ್ಲಿ ಇರುವಿರಿ.


ನೀವೆಲ್ಲಾ ನಿಮ್ಮ ದೇವರಾದ ಯೆಹೋವನೊಂದಿಗೆ ಒಡಂಬಡಿಕೆಯನ್ನು ಮಾಡುವುದಕ್ಕೋಸ್ಕರ ನಿಂತಿದ್ದೀರಿ. ದೇವರು ನಿಮ್ಮೊಂದಿಗೆ ಒಡಂಬಡಿಕೆಯನ್ನು ಮಾಡುತ್ತಾನೆ.


ದೇವರು ಹೇಳಿದ್ದೇನೆಂದರೆ, “ನನ್ನ ಮಕ್ಕಳಾಗಿದ್ದ ನಿನ್ನ ಪುತ್ರಪುತ್ರಿಯರನ್ನು ನೀನು ತೆಗೆದುಕೊಂಡು ಅವರನ್ನು ಆಹಾರವನ್ನಾಗಿ ವಿಗ್ರಹಗಳಿಗೆ ಯಜ್ಞ ಅರ್ಪಿಸಿದೆ. ನಿನ್ನ ಸೂಳೆತನವು ಸಾಕಾಗಿರಲಿಲ್ಲವೇ?


ಅಲ್ಲಿ ಇಸ್ರೇಲಿನ ಎಲ್ಲ ಜನರು ಸೇರಿ ಬಂದಿದ್ದರು. ಎಲ್ಲ ಹೆಂಗಸರು ಮತ್ತು ಮಕ್ಕಳು ಮತ್ತು ಇಸ್ರೇಲಿನ ಜನರೊಂದಿಗೆ ಇದ್ದ ಎಲ್ಲ ವಿದೇಶಿಯರು ಅಲ್ಲಿ ಇದ್ದರು. ಅವರೆಲ್ಲರಿಗೆ ಕೇಳಿಸುವಂತೆ ಮೋಶೆಯು ಕೊಟ್ಟಿದ್ದ ಪ್ರತಿಯೊಂದು ಆಜ್ಞೆಯನ್ನು ಯೆಹೋಶುವನು ಓದಿದನು.


ಆದ್ದರಿಂದ ಯೆಹೋಶುವನು ಶೆಕೆಮಿನಲ್ಲಿ ಜನರಿಗಾಗಿ ಒಂದು ಒಡಂಬಡಿಕೆಯನ್ನು ಮಾಡಿದನು. ಅದು ಅವರಿಗೆ ಪಾಲಿಸಬೇಕಾದ ಒಂದು ವಿಧಿಯಾಯಿತು.


ಎಲೀಷನು ಪ್ರವಾದಿಗಳ ಗುಂಪಿನೊಂದಿಗೆ ಹೋದನು. ಅವರು ಜೋರ್ಡನ್ ನದಿಯ ಬಳಿಗೆ ಬಂದು ಕೆಲವು ಮರಗಳನ್ನು ಕಡಿಯಲಾರಂಭಿಸಿದರು.


ತಮ್ಮ ಪೂರ್ವಿಕರು ಸೇವೆಮಾಡಿದ ದೇವರೊಂದಿಗೆ ಅಲ್ಲಿ ಅವರು ಒಡಂಬಡಿಕೆ ಮಾಡಿಕೊಂಡು ತಾವು ಪೂರ್ಣ ಹೃದಯದಿಂದಲೂ ಪೂರ್ಣ ಆತ್ಮದಿಂದಲೂ ಆತನ ಸೇವೆ ಮಾಡುವುದಾಗಿ ಪ್ರಮಾಣಮಾಡಿದರು.


ಅನಂತರ ಯೆಹೋಯಾದನು ಅರಸನೊಂದಿಗೂ ನೆರೆದು ಬಂದಿದ್ದ ಎಲ್ಲಾ ಜನರೊಂದಿಗೂ ಒಪ್ಪಂದವನ್ನು ಮಾಡಿಕೊಂಡನು. ಅವರೆಲ್ಲರೂ ಯೆಹೋವನ ಜನರಾಗಿ ಜೀವಿಸುವದಕ್ಕೆ ಒಪ್ಪಿಕೊಂಡರು.


“ನಮ್ಮ ಗಂಡು ಮತ್ತು ಹೆಣ್ಣುಮಕ್ಕಳು ನಮ್ಮ ಸುತ್ತಲಿರುವ ಅನ್ಯರನ್ನು ಮದುವೆಯಾಗಲು ಬಿಡುವುದಿಲ್ಲ” ಎಂದು ಪ್ರತಿಜ್ಞೆ ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು