Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 29:12 - ಪರಿಶುದ್ದ ಬೈಬಲ್‌

12 ನೀವೆಲ್ಲಾ ನಿಮ್ಮ ದೇವರಾದ ಯೆಹೋವನೊಂದಿಗೆ ಒಡಂಬಡಿಕೆಯನ್ನು ಮಾಡುವುದಕ್ಕೋಸ್ಕರ ನಿಂತಿದ್ದೀರಿ. ದೇವರು ನಿಮ್ಮೊಂದಿಗೆ ಒಡಂಬಡಿಕೆಯನ್ನು ಮಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಹೀಗೆ ನಿಮ್ಮೆಲ್ಲರ ಸಂಗಡ ಈ ಹೊತ್ತು ನಿಮ್ಮ ದೇವರಾದ ಯೆಹೋವನು ಪ್ರಮಾಣಪೂರ್ವಕವಾಗಿ ಒಂದು ಒಡಂಬಡಿಕೆಯನ್ನು ಮಾಡಿಕೊಳ್ಳುತ್ತಾನೆ. ನೀವು ಅದರಲ್ಲಿ ಸೇರುವುದಕ್ಕಾಗಿ ಕೂಡಿಬಂದಿದ್ದೀರಿ. ನಿಮ್ಮ ದೇವರಾದ ಯೆಹೋವನು ನಿಮಗೆ ಹೇಳಿದಂತೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12-13 ನೀವೆಲ್ಲರೂ ಈ ದಿನ ನಿಮ್ಮ ದೇವರಾದ ಸರ್ವೆಶ್ವರನ ಸನ್ನಿಧಿಯಲ್ಲಿ ನಿಂತಿರುವುದಕ್ಕೆ ಕಾರಣವೇನೆಂದರೆ - ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಹೇಳಿದಂತೆ ಹಾಗು ನಿಮ್ಮ ಪಿತೃಗಳಾದ ಅಬ್ರಹಾಮ್, ಇಸಾಕ್, ಯಕೋಬರಿಗೆ ವಾಗ್ದಾನಮಾಡಿದಂತೆ ನಿಮ್ಮನ್ನು ತಮಗೆ ಸ್ವಕೀಯ ಜನರನ್ನಾಗಿಯೂ ತಮ್ಮನ್ನು ನಿಮಗೆ ದೇವರನ್ನಾಗಿಯೂ ಸ್ಥಾಪಿಸಿಕೊಳ್ಳುವುದಕ್ಕಾಗಿ ಈಗ ನಿಮ್ಮೊಡನೆ ಪ್ರಮಾಣಪೂರ್ವಕವಾದ ಒಂದು ಒಡಂಬಡಿಕೆಯನ್ನು ಮಾಡಿಕೊಳ್ಳಬೇಕೆಂದಿದ್ದಾರೆ; ನೀವು ಅದಕ್ಕೆ ಸೇರಲು ಕೂಡಿಬಂದಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12-13 ನೀವೆಲ್ಲರೂ ಈ ಹೊತ್ತು ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ನಿಂತಿರುವದಕ್ಕೆ ಕಾರಣವೇನಂದರೆ - ನಿಮ್ಮ ದೇವರಾದ ಯೆಹೋವನು ನಿಮಗೆ ಹೇಳಿದಂತೆಯೂ ನಿಮ್ಮ ಪಿತೃಗಳಾದ ಅಬ್ರಹಾಮ್ ಇಸಾಕ್ ಯಾಕೋಬರಿಗೆ ವಾಗ್ದಾನಮಾಡಿದಂತೆಯೂ ನಿಮ್ಮನ್ನು ತನಗೆ ಸ್ವಕೀಯಜನರನ್ನಾಗಿಯೂ ತನ್ನನ್ನು ನಿಮಗೆ ದೇವರನ್ನಾಗಿಯೂ ಸ್ಥಾಪಿಸಿಕೊಳ್ಳುವದಕ್ಕೋಸ್ಕರ ಈಗ ನಿಮ್ಮೊಡನೆ ಪ್ರಮಾಣಪೂರ್ವಕವಾದ ಒಂದು ಒಡಂಬಡಿಕೆಯನ್ನು ಮಾಡಿಕೊಳ್ಳುವವನಾಗಿದ್ದಾನೆ; ನೀವು ಅದಕ್ಕೆ ಸೇರುವದಕ್ಕಾಗಿ ಕೂಡಿಬಂದಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ನಿಮ್ಮ ದೇವರಾದ ಯೆಹೋವ ದೇವರು ಈ ಹೊತ್ತು ನಿಮ್ಮ ಸಂಗಡ ಮಾಡಿಕೊಳ್ಳುವ ಒಡಂಬಡಿಕೆಯನ್ನು ಸೇರುವುದಕ್ಕೆ ಅವರು ಆಣೆಯಿಟ್ಟು ಮುದ್ರಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 29:12
14 ತಿಳಿವುಗಳ ಹೋಲಿಕೆ  

ಅನಂತರ ಯೆಹೋಯಾದಾವನ ಪ್ರೇರಣೆಯಿಂದ ಅರಸನೂ ಪ್ರಜೆಗಳೂ ತಾವು ಯೆಹೋವನ ಪ್ರಜೆಗಳಾಗಿರುವುದಾಗಿ ಆತನಿಗೆ ಪ್ರಮಾಣಮಾಡಿದರು.


ಆದ್ದರಿಂದ ಯೆಹೋಶುವನು ಶೆಕೆಮಿನಲ್ಲಿ ಜನರಿಗಾಗಿ ಒಂದು ಒಡಂಬಡಿಕೆಯನ್ನು ಮಾಡಿದನು. ಅದು ಅವರಿಗೆ ಪಾಲಿಸಬೇಕಾದ ಒಂದು ವಿಧಿಯಾಯಿತು.


ಯೆಹೋವನು ವಾಗ್ದಾನಗಳನ್ನು ಒಳಗೊಂಡ ಒಡಂಬಡಿಕೆಯನ್ನು ನಿಮ್ಮೊಂದಿಗೆ ಮಾತ್ರ ಮಾಡದೆ ಇಲ್ಲಿ ಕೂಡಿಬಂದಿರುವ ಎಲ್ಲರೊಂದಿಗೂ ಮಾಡುತ್ತಾನೆ.


ನಿಮ್ಮ ಹೆಂಡತಿಮಕ್ಕಳೂ, ನಿಮ್ಮೊಂದಿಗಿರುವ ಪರದೇಶಸ್ಥರೂ ನಿಮ್ಮ ಸೇವೆ ಮಾಡುವವರೂ ಇದ್ದಾರೆ.


ಈ ಒಡಂಬಡಿಕೆಯ ಮೂಲಕ ದೇವರು ನಿಮ್ಮನ್ನು ತನ್ನ ಸ್ವಕೀಯ ಜನರನ್ನಾಗಿ ಮಾಡುತ್ತಾನೆ. ಆತನು ನಿಮಗೆ ದೇವರಾಗಿದ್ದಾನೆ. ನಿಮ್ಮ ಪೂರ್ವಿಕರಾದ ಅಬ್ರಹಾಮನಿಗೆ, ಇಸಾಕನಿಗೆ, ಯಾಕೋಬನಿಗೆ ಹೇಳಿದಂತೆ ನಿಮಗೂ ಹೇಳುತ್ತಾನೆ.


ದೇವರು ಹೇಳಿದ್ದೇನೆಂದರೆ, “ನನ್ನ ಮಕ್ಕಳಾಗಿದ್ದ ನಿನ್ನ ಪುತ್ರಪುತ್ರಿಯರನ್ನು ನೀನು ತೆಗೆದುಕೊಂಡು ಅವರನ್ನು ಆಹಾರವನ್ನಾಗಿ ವಿಗ್ರಹಗಳಿಗೆ ಯಜ್ಞ ಅರ್ಪಿಸಿದೆ. ನಿನ್ನ ಸೂಳೆತನವು ಸಾಕಾಗಿರಲಿಲ್ಲವೇ?


ನೀವು ನನ್ನ ಜನರಾಗಿರುವಿರಿ; ನಾನು ನಿಮ್ಮ ದೇವರಾಗಿರುವೆನು. ನಿಮ್ಮ ದೇವರಾಗಿರುವ ಯೆಹೋವನಾದ ನಾನೇ ನಿಮ್ಮನ್ನು ಈಜಿಪ್ಟಿನವರ ಬಿಟ್ಟೀಕೆಲಸದಿಂದ ಬಿಡುಗಡೆಗೊಳಿಸಿದೆನೆಂದು ಆಗ ನೀವು ತಿಳಿದುಕೊಳ್ಳುವಿರಿ.


ನಾನು ನಿಮಗೆ ಆ ಪ್ರಾಂತ್ಯವನ್ನೆಲ್ಲಾ ಕೊಡುವೆನು. ಅಲ್ಲಿಗೆ ಹೋಗಿ ಅದನ್ನು ತೆಗೆದುಕೊಳ್ಳಿರಿ. ನಿಮ್ಮ ಪೂರ್ವಿಕರಾದ ಅಬ್ರಹಾಮನಿಗೆ, ಇಸಾಕನಿಗೆ, ಯಾಕೋಬನಿಗೆ ಮತ್ತು ಅವರ ಸಂತತಿಯವರಿಗೆ ಆ ಪ್ರದೇಶವನ್ನು ಕೊಡುವೆನು ಎಂದು ನಾನು ವಾಗ್ದಾನ ಮಾಡಿದ್ದೇನೆ.’”


ಯೆಹೋವನು ನಿಮ್ಮ ದೇವರೆಂದು ನೀವು ಈ ದಿನ ಪ್ರತಿಜ್ಞೆ ಮಾಡಿದ್ದೀರಿ. ಆತನು ಹೇಳಿದ ಎಲ್ಲಾ ಕಟ್ಟಳೆ, ವಿಧಿ, ನಿಯಮಗಳನ್ನು ಅನುಸರಿಸುವಿರೆಂದು ಪ್ರತಿಜ್ಞೆ ಮಾಡಿರುತ್ತೀರಿ. ಆತನು ಹೇಳಿದ್ದನ್ನೆಲ್ಲಾ ಮಾಡುವುದಾಗಿ ಹೇಳಿರುವಿರಿ.


ನೀವು ಯೆಹೋವನ ಆಜ್ಞೆಗಳಿಗೆ ವಿಧೇಯರಾದರೆ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ತನ್ನ ವಾಗ್ದಾನಕ್ಕನುಸಾರವಾಗಿ ವಿಶೇಷವಾದ ಸ್ವಕೀಯ ಪ್ರಜೆಗಳನ್ನಾಗಿ ಮಾಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು