Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 29:25 - ಪರಿಶುದ್ದ ಬೈಬಲ್‌

25 ಯಾಕೆಂದರೆ ‘ಇಸ್ರೇಲರು ತಮ್ಮ ಪೂರ್ವಿಕರ ದೇವರಾದ ಯೆಹೋವನೊಂದಿಗೆ ಮಾಡಿದ ಒಡಂಬಡಿಕೆಯನ್ನು ಬಿಟ್ಟು ತೊಲಗಿದರು. ಅವರನ್ನು ಈಜಿಪ್ಟಿನಿಂದ ಹೊರತರುವಾಗ ಯೆಹೋವನೊಂದಿಗೆ ಮಾಡಿದ ಒಡಂಬಡಿಕೆಯನ್ನು ಅನುಸರಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಅದಕ್ಕೆ ಜನರು, ‘ಈ ದೇಶದವರ ಪೂರ್ವಿಕರ ದೇವರಾದ ಯೆಹೋವನು ಅವರನ್ನು ಐಗುಪ್ತದೇಶದಿಂದ ಬಿಡಿಸಿದ ಮೇಲೆ ಅವರೊಡನೆ ಮಾಡಿದ ಒಡಂಬಡಿಕೆಯನ್ನು ಅವರು ಉಲ್ಲಂಘಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಅದಕ್ಕೆ ಜನರು, ‘ಈ ನಾಡಿನವರ ಪಿತೃಗಳ ದೇವರಾದ ಸರ್ವೇಶ್ವರ ಅವರನ್ನು ಈಜಿಪ್ಟ್ ದೇಶದಿಂದ ಬಿಡಿಸಿ ಅವರೊಡನೆ ಮಾಡಿದ ಒಡಂಬಡಿಕೆಯನ್ನು ಅವರು ಉಲ್ಲಂಘಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಅದಕ್ಕೆ ಜನರು - ಈ ದೇಶದವರ ಪಿತೃಗಳ ದೇವರಾದ ಯೆಹೋವನು ಅವರನ್ನು ಐಗುಪ್ತದೇಶದಿಂದ ಬಿಡಿಸಿ ಅವರೊಡನೆ ಮಾಡಿದ ನಿಬಂಧನೆಯನ್ನು ಅವರು ಉಲ್ಲಂಘಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಆಗ ಜನರು, “ಇಸ್ರಾಯೇಲರು ತಮ್ಮನ್ನು ಈಜಿಪ್ಟ್ ದೇಶದೊಳಗಿಂದ ಹೊರಗೆ ತಂದ ತಮ್ಮ ಪಿತೃಗಳ ದೇವರಾದ ಯೆಹೋವ ದೇವರು ತಮ್ಮ ಸಂಗಡ ಮಾಡಿದ ಒಡಂಬಡಿಕೆಯನ್ನು ಉಲ್ಲಂಘಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 29:25
20 ತಿಳಿವುಗಳ ಹೋಲಿಕೆ  

ಅದು, ಅವರ ಪಿತೃಗಳೊಡನೆ ನಾನು ಮಾಡಿಕೊಂಡ ಒಡಂಬಡಿಕೆಯಂತಿರುವುದಿಲ್ಲ. ಅವರನ್ನು ಈಜಿಪ್ಟಿನಿಂದ ಕೈಹಿಡಿದು ಹೊರಗೆ ಕರೆದುಕೊಂಡು ಬಂದ ಕಾಲದಲ್ಲಿ ಅವರೊಡನೆ ಆ ಒಡಂಬಡಿಕೆಯನ್ನೂ ಮಾಡಿಕೊಂಡೆನು. ಆದರೆ ಅವರು ಅದನ್ನು ಅನುಸರಿಸಲಿಲ್ಲವಾದ್ದರಿಂದ ಅವರಿಗೆ ವಿಮುಖನಾದೆನು ಎಂದು ಪ್ರಭು ಹೇಳುತ್ತಾನೆ.


ನನ್ನ ಜನರನ್ನು ಕಂಡವರೆಲ್ಲ ಅವರನ್ನು ನೋಯಿಸಿದ್ದಾರೆ. ಆ ಶತ್ರುಗಳು, ‘ನಾವು ಮಾಡಿದ್ದು ತಪ್ಪಲ್ಲ. ಅವರು ಯೆಹೋವನ ವಿರುದ್ಧ ಪಾಪ ಮಾಡಿದ್ದಾರೆ. ಯೆಹೋವನು ಅವರ ನಿಜವಾದ ನಿವಾಸವಾಗಿದ್ದನು. ಯೆಹೋವನು ಅವರ ಪೂರ್ವಿಕರು ನಂಬಿದ್ದ ದೇವರಾಗಿದ್ದನು’ ಎಂದರು.


ಈ ಒಡಂಬಡಿಕೆ ನಾನು ಅವರ ಪೂರ್ವಿಕರೊಂದಿಗೆ ಮಾಡಿಕೊಂಡ ಒಡಂಬಡಿಕೆಯಂತಲ್ಲ. ನಾನು ಅವರ ಕೈಹಿಡಿದು ಈಜಿಪ್ಟಿನಿಂದ ಹೊರತಂದಾಗ ಮಾಡಿಕೊಂಡ ಒಡಂಬಡಿಕೆಯದು. ನಾನು ಅವರ ಒಡೆಯನಾಗಿದ್ದೆ. ಆದರೆ ಅವರು ಒಡಂಬಡಿಕೆಯನ್ನು ಮುರಿದರು.” ಇದು ಯೆಹೋವನ ನುಡಿ.


ಆ ಪ್ರಶ್ನೆಗೆ ಈ ಉತ್ತರ: ‘ಯೆಹೂದದ ಜನರು ತಮ್ಮ ದೇವರಾದ ಯೆಹೋವನ ಒಡಂಬಡಿಕೆಯ ಅನುಸರಣೆಯನ್ನು ಬಿಟ್ಟುಬಿಟ್ಟರು. ಅವರು ಬೇರೆ ದೇವರುಗಳ ಸೇವೆಯನ್ನು ಮಾಡಿ ಪೂಜಿಸಿದರು.’”


“ನನ್ನ ಜನರ ಮೇಲೆ ನಾನು ಸಿಟ್ಟಿಗೆದ್ದಿದ್ದೆನು. ಅವರು ನನಗೆ ಸೇರಿದವರಾಗಿದ್ದಾರೆ. ಆದರೆ ನಾನು ಅವರ ಮೇಲೆ ಸಿಟ್ಟಾದೆನು. ಆದ್ದರಿಂದ ನಾನು ಅವರನ್ನು ತಳ್ಳಿಬಿಟ್ಟೆನು. ಅವರನ್ನು ನಿನಗೆ ಕೊಟ್ಟೆನು; ನೀನು ಅವರನ್ನು ಶಿಕ್ಷಿಸಿದೆ. ಅವರ ಮೇಲೆ ಕರುಣೆ ತೋರಿಸಲಿಲ್ಲ. ವೃದ್ಧರೂ ಕಷ್ಟದ ಕೆಲಸ ಮಾಡುವಂತೆ ಮಾಡಿದೆ.


ಇಸ್ರೇಲ್ ಜನರು ಅನ್ಯದೇವರುಗಳನ್ನು ಪೂಜಿಸಲು ಪ್ರಾರಂಭಿಸಿದರು. ಅಂಥಾ ದೇವರುಗಳನ್ನು ಅವರು ಹಿಂದೆಂದೂ ಪೂಜಿಸಿರಲಿಲ್ಲ. ಯೆಹೋವನು ಅನ್ಯದೇವತೆಗಳನ್ನು ಪೂಜಿಸಬಾರದು ಎಂದು ಆಜ್ಞಾಪಿಸಿದ್ದರೂ ಅವರು ಅದನ್ನು ಉಲ್ಲಂಘಿಸಿದರು.


‘ಇದು ಏಕೆ ಸಂಭವಿಸಿತೆಂದರೆ, ಅವರು ತಮ್ಮ ದೇವರಾದ ಯೆಹೋವನನ್ನು ತ್ಯಜಿಸಿದರು. ಆತನು ಅವರ ಪೂರ್ವಿಕರನ್ನು ಈಜಿಪ್ಟಿನಿಂದ ಬರಮಾಡಿದನು. ಆದರೆ ಅವರು ಅನ್ಯದೇವರುಗಳನ್ನು ಅನುಸರಿಸಲು ತೀರ್ಮಾನಿಸಿದರು. ಅವರು ಆ ದೇವರುಗಳ ಪೂಜೆಯನ್ನೂ ಸೇವೆಯನ್ನೂ ಮಾಡಲಾರಂಭಿಸಿದರು. ಆದಕಾರಣವೇ ಈ ಕೆಟ್ಟಕಾರ್ಯಗಳೆಲ್ಲಾ ಅವರಿಗೆ ಸಂಭವಿಸುವಂತೆ ಯೆಹೋವನು ಮಾಡಿದನು’ ಎಂದು ಅನ್ಯಜನರು ಉತ್ತರಿಸುವರು.”


ಇಸ್ರೇಲರು ತಮ್ಮ ದೇವರಾದ ಯೆಹೋವನ ವಿರುದ್ಧ ರಹಸ್ಯವಾದ ಕೆಟ್ಟಕಾರ್ಯಗಳನ್ನು ಮಾಡಿದರು. ಇಸ್ರೇಲರು ಚಿಕ್ಕ ಊರಿನಿಂದಿಡಿದು ದೊಡ್ಡ ನಗರದವರೆಗೂ ತಮ್ಮ ಎಲ್ಲಾ ನಗರಗಳಲ್ಲಿ ಉನ್ನತಸ್ಥಳಗಳನ್ನು ನಿರ್ಮಿಸಿದರು.


ಯೆಹೋವನು ಅವರ ಪೂರ್ವಿಕರೊಂದಿಗೆ ಮಾಡಿಕೊಂಡಿದ್ದ ಒಡಂಬಡಿಕೆಯನ್ನು ಮತ್ತು ಆತನ ನಿಯಮಗಳನ್ನು ಅವರು ಒಪ್ಪಲಿಲ್ಲ. ಅವರು ಯೆಹೋವನ ಎಚ್ಚರಿಕೆಗೆ ಗಮನವನ್ನೂ ನೀಡಲಿಲ್ಲ. ಅವರು ನಿರರ್ಥಕವಾದ ವಿಗ್ರಹಗಳನ್ನು ಅನುಸರಿಸಿ ನಿಷ್ಪ್ರಯೋಜಕರಾದರು, ಅವರು ತಮ್ಮ ಸುತ್ತಮುತ್ತಲಿನ ಜನಾಂಗಗಳನ್ನು ಅನುಸರಿಸಿದರು. ಯೆಹೋವನು ಇಸ್ರೇಲಿನ ಜನರಿಗೆ ಮಾಡಬಾರದೆಂದು ಎಚ್ಚರಿಸಿ ಹೇಳಿದ್ದನ್ನು ಈ ಜನಾಂಗಗಳು ಮಾಡಿದವು.


ಯೆಹೂದದ ರಾಜರು ನನ್ನನ್ನು ತ್ಯಜಿಸಿದರು ಮತ್ತು ಇತರ ದೇವರುಗಳಿಗೆ ಧೂಪವನ್ನು ಸುಟ್ಟರು. ಅವರು ನನ್ನಲ್ಲಿ ಹೆಚ್ಚು ಕೋಪವನ್ನು ಉಂಟುಮಾಡಿದರು. ಅವರು ಅನೇಕ ವಿಗ್ರಹಗಳನ್ನು ನಿರ್ಮಿಸಿದರು. ಆದಕಾರಣವೇ ನಾನು ನನ್ನ ಕೋಪವನ್ನು ಈ ಸ್ಥಳದ ವಿರುದ್ಧ ತೋರ್ಪಡಿಸುತ್ತೇನೆ. ನನ್ನ ಕೋಪವು ಆರಿಹೋಗದ ಬೆಂಕಿಯಂತಿರುತ್ತದೆ!’


ಚಿದ್ಕೀಯನು ನೆಬೂಕದ್ನೆಚ್ಚರನಿಗೆ ವಿರುದ್ಧವಾಗಿ ದಂಗೆ ಎದ್ದನು. ನೆಬೂಕದ್ನೆಚ್ಚರನು ತನಗೆ ವಿಧೇಯನಾಗಿರುವಂತೆ ಚಿದ್ಕೀಯನಿಂದ ಪ್ರಮಾಣ ಮಾಡಿಸಿಕೊಂಡಿದ್ದನು. ಚಿದ್ಕೀಯನು ದೇವರ ಹೆಸರಿನಲ್ಲಿ ಆಣೆಯಿಟ್ಟು ತಾನು ನೆಬೂಕದ್ನೆಚ್ಚರನಿಗೆ ನಂಬಿಗಸ್ತನಾಗಿರುವುದಾಗಿ ಪ್ರಮಾಣಮಾಡಿದ್ದನು. ಆದರೆ ಚಿದ್ಕೀಯನು ಮನಸ್ಸನ್ನು ಕಠಿಣಮಾಡಿಕೊಂಡು ಇಸ್ರೇಲಿನ ದೇವರಾದ ಯೆಹೋವನಿಗೆ ವಿಧೇಯನಾಗಲು ನಿರಾಕರಿಸಿದನು.


“ಆದರೆ ನೀವು ಯೆಹೋವನನ್ನು ತೊರೆದಿರುವದರಿಂದ ಶಿಕ್ಷಿಸಲ್ಪಡುವಿರಿ. ನೀವು ನನ್ನ ಪವಿತ್ರ ಪರ್ವತವನ್ನು ಮರೆತುಬಿಟ್ಟಿದ್ದೀರಿ. ನೀವು ‘ಅದೃಷ್ಟ’ ಎಂಬ ಸುಳ್ಳುದೇವರನ್ನು ಪೂಜಿಸಲಾರಂಭಿಸಿದ್ದೀರಿ. ನೀವು ‘ಗತಿ’ ಎಂಬ ಸುಳ್ಳುದೇವರನ್ನು ಅವಲಂಭಿಸಿಕೊಂಡಿದ್ದೀರಿ.


ನೀನು ಅವರಿಗೆ ಹೀಗೆ ಹೇಳಬೇಕು: ‘ನಿಮ್ಮ ಪೂರ್ವಿಕರು ನನ್ನ ಉಪದೇಶದಂತೆ ನಡೆಯುವದನ್ನು ಬಿಟ್ಟುಬಿಟ್ಟರು’ ಎಂದು ದೇವರು ಹೇಳುತ್ತಾನೆ. ‘ಅವರು ನನ್ನ ಅನುಸರಣೆಯನ್ನು ಬಿಟ್ಟು ಬೇರೆ ದೇವರುಗಳನ್ನು ಅನುಸರಿಸಲು ಮತ್ತು ಸೇವಿಸಲು ಪ್ರಾರಂಭಿಸಿದರು. ಅವರು ಅನ್ಯದೇವರುಗಳನ್ನು ಪೂಜಿಸಿದರು. ನಿಮ್ಮ ಪೂರ್ವಿಕರು ನನ್ನನ್ನು ತ್ಯಜಿಸಿ ನನ್ನ ಧರ್ಮವಿಧಿಗಳನ್ನು ಮೀರಿದರು.


ಈ ಆಲಯವನ್ನು ನಾಶಗೊಳಿಸುತ್ತೇನೆ. ಇದನ್ನು ನೋಡುವ ಪ್ರತಿಯೊಬ್ಬರೂ ವಿಸ್ಮಿತರಾಗುವರು. ‘ಈ ದೇಶಕ್ಕೂ ಈ ಆಲಯಕ್ಕೂ ಇಂತಹ ಭೀಕರ ಕಾರ್ಯವನ್ನು ಯೆಹೋವನು ಏಕೆ ಮಾಡಿದನು?’ ಎಂದು ಜನರು ಕೇಳುತ್ತಾರೆ.


ಅವರು ದೇವಜನರಿಗೆ ಉರುಲಿನಂತಾದರು. ಅವರ ದೇವರುಗಳನ್ನು ದೇವಜನರು ಪೂಜಿಸತೊಡಗಿದರು.


“ಅನೇಕ ಜನಾಂಗಗಳ ಜನರು ಈ ನಗರದಿಂದ ಹಾದುಹೋಗುವರು. ಅವರು, ‘ಜೆರುಸಲೇಮ್ ಒಂದು ಮಹಾನಗರವಾಗಿತ್ತು. ಯೆಹೋವನು ಜೆರುಸಲೇಮಿಗೆ ಇಂಥ ಭಯಂಕರ ಸ್ಥಿತಿಯನ್ನು ಏಕೆ ತಂದನು?’ ಎಂದು ಒಬ್ಬರನ್ನೊಬ್ಬರು ಕೇಳುವರು.


ಅಲ್ಲಿ ವಾಸಿಸುವ ಜನರು ದುಷ್ಕೃತ್ಯಗಳನ್ನು ಮಾಡಿದ್ದರಿಂದ ಸ್ಥಳಗಳನ್ನು ನಾಶಮಾಡಲಾಯಿತು. ಆ ಜನರು ಬೇರೆ ದೇವರುಗಳಿಗೆ ಬಲಿಯನ್ನು ಅರ್ಪಿಸಿದ್ದಾರೆ. ಆದ್ದರಿಂದ ನನಗೆ ಕೋಪ ಬಂದಿದೆ. ಹಿಂದೆ ನಿಮ್ಮ ಜನರು ಮತ್ತು ನಿಮ್ಮ ಪೂರ್ವಿಕರು ಆ ದೇವರುಗಳನ್ನು ಪೂಜಿಸಿರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು