Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 29:6 - ಪರಿಶುದ್ದ ಬೈಬಲ್‌

6 ನಿಮ್ಮಲ್ಲಿ ಆಹಾರವಿರಲಿಲ್ಲ; ಕುಡಿಯಲು ದ್ರಾಕ್ಷಾರಸವಾಗಲಿ ಪಾನೀಯವಾಗಲಿ ಇರಲಿಲ್ಲ. ಆದರೆ ಯೆಹೋವನು ಮನ್ನವನ್ನು ಮತ್ತು ನೀರನ್ನು ಕೊಟ್ಟನು. ಆತನೇ ನಿಮ್ಮ ದೇವರಾದ ಯೆಹೋವನೆಂದು ನೀವು ಅರಿತುಕೊಳ್ಳುವ ಹಾಗೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನೀವು ರೊಟ್ಟಿಯನ್ನು ತಿನ್ನಲಿಲ್ಲ, ದ್ರಾಕ್ಷಾರಸವನ್ನಾಗಲಿ ಯಾವ ಮದ್ಯವನ್ನಾಗಲಿ ಕುಡಿಯಲೇ ಇಲ್ಲ. ಯೆಹೋವನೇ ನಿಮ್ಮ ದೇವರು ಎಂಬುದು ನಿಮಗೆ ತಿಳಿಯಬೇಕೆಂಬ ಉದ್ದೇಶದಿಂದ ಹೀಗಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ನೀವು ರೊಟ್ಟಿ ತಿನ್ನಲಿಲ್ಲ; ದ್ರಾಕ್ಷಾರಸವನ್ನಾಗಲಿ ಯಾವ ಮದ್ಯವನ್ನಾಗಲಿ ಕುಡಿಯಲೇ ಇಲ್ಲ. ಸರ್ವೇಶ್ವರನೇ ನಿಮ್ಮ ದೇವರು ಎಂಬುದು ನಿಮಗೆ ತಿಳಿಯಬೇಕೆಂಬ ಉದ್ದೇಶದಿಂದ ಹೀಗಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನೀವು ರೊಟ್ಟಿಯನ್ನು ತಿನ್ನಲಿಲ್ಲ, ದ್ರಾಕ್ಷಾರಸವನ್ನಾಗಲಿ ಯಾವ ಮದ್ಯವನ್ನಾಗಲಿ ಕುಡಿಯಲೇ ಇಲ್ಲ. ಯೆಹೋವನೇ ನಿಮ್ಮ ದೇವರು ಎಂಬದು ನಿಮಗೆ ತಿಳಿಯಬೇಕೆಂಬ ಉದ್ದೇಶದಿಂದ ಹೀಗಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನೀವು ರೊಟ್ಟಿ ತಿನ್ನಲಿಲ್ಲ; ದ್ರಾಕ್ಷಾರಸವನ್ನಾಗಲಿ, ಯಾವ ಮದ್ಯವನ್ನಾಗಲಿ ಕುಡಿಯಲೇ ಇಲ್ಲ. ಯೆಹೋವ ದೇವರೇ ನಿಮ್ಮ ದೇವರು ಎಂಬುದು ನಿಮಗೆ ತಿಳಿಯಬೇಕೆಂಬ ಉದ್ದೇಶದಿಂದ ಹೀಗಾಯಿತು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 29:6
14 ತಿಳಿವುಗಳ ಹೋಲಿಕೆ  

ಯೆಹೋವನು ನಿಮ್ಮನ್ನು ದೀನರನ್ನಾಗಿ ಮಾಡಿ ನಿಮಗೆ ಹಸಿವೆಯಾಗುವಂತೆ ಮಾಡಿದನು. ಆ ಬಳಿಕ ಮನ್ನದ ಮೂಲಕ ನಿಮ್ಮ ಹಸಿವೆಯನ್ನು ನೀಗಿದನು. ಇದರ ವಿಷಯವಾಗಿ ನೀವು ಹಿಂದೆಂದೂ ಕೇಳಿರಲಿಲ್ಲ. ನಿಮ್ಮ ಪೂರ್ವಿಕರೂ ನೋಡಿರಲಿಲ್ಲ. ಆತನು ಹೀಗೇಕೆ ಮಾಡಿದನು? ಯಾಕೆಂದರೆ ಕೇವಲ ರೊಟ್ಟಿ ತಿಂದ ಮಾತ್ರದಿಂದ ಮನುಷ್ಯರು ಬದುಕದೆ ಯೆಹೋವನ ಬಾಯಿಂದ ಹೊರಡುವ ಪ್ರತಿಯೊಂದು ಮಾತಿನಿಂದಲೇ ಬದುಕುವರೆಂಬುದನ್ನು ನೀವು ತಿಳಿಯಬೇಕೆಂದು ಹೀಗೆ ಮಾಡಿದನು.


ಮದ್ಯಪಾನಮಾಡಿ ಮತ್ತರಾಗಬೇಡಿ, ಅದು ಪಾಪಕೃತ್ಯಗಳಿಗೆ ನಡೆಸುತ್ತದೆ, ಆದರೆ ಯಾವಾಗಲೂ ಪವಿತ್ರಾತ್ಮಭರಿತರಾಗಿರಿ.


ತಮ್ಮೊಂದಿಗಿದ್ದ ಆತ್ಮಿಕ ಬಂಡೆಯ ನೀರನ್ನು ಕುಡಿದರು. ಆ ಬಂಡೆಯೇ ಕ್ರಿಸ್ತನು.


ಪಂದ್ಯಗಳಲ್ಲಿ ಸ್ಪರ್ಧಿಸುವ ಕ್ರೀಡಾಪಟುಗಳು ಪದಕಗಳಿಸಲು ಕಟ್ಟುನಿಟ್ಟಾದ ತರಬೇತಿಯಲ್ಲಿರುತ್ತಾರೆ. ಆದರೆ ಈ ಲೋಕದ ಆ ಪದಕವು ಸ್ವಲ್ಪಕಾಲ ಮಾತ್ರ ಇರುತ್ತದೆ. ಆದರೆ ನಮ್ಮ ಪದಕವು ಶಾಶ್ವತವಾದದ್ದು.


ಅವರು ಹಸಿದಿದ್ದಾಗ ಪರಲೋಕದಿಂದ ಊಟವನ್ನು ಅವರಿಗೆ ದಯಪಾಲಿಸಿದೆ. ಅವರು ಬಾಯಾರಿದಾಗ ಬಂಡೆಯಿಂದ ಅವರಿಗೆ ನೀರನ್ನು ಕೊಟ್ಟೆ. ನೀನು ಅವರಿಗೆ, ‘ಬನ್ನಿ, ಈ ದೇಶವನ್ನು ತೆಗೆದುಕೊಳ್ಳಿರಿ’ ಎಂದು ಹೇಳಿದೆ. ನಿನ್ನ ಪರಾಕ್ರಮವನ್ನು ತೋರಿಸಿದೆ. ಅವರಿಗಾಗಿ ಭೂಮಿಯನ್ನು ತೆಗೆದುಕೊಂಡೆ.


“ಬಳಿಕ ನೀನು ಮತ್ತು ನಿನ್ನ ಸಹೋದರನಾದ ಆರೋನನು ಜನರನ್ನು ಬಂಡೆಯ ಮುಂದೆ ಸಭೆಸೇರಿಸಿ, ಜನರ ಮುಂದೆ ಆ ಬಂಡೆಗೆ ಮಾತಾಡು. ಆಗ ನೀರು ಬಂಡೆಯಿಂದ ಹರಿಯುವುದು ಮತ್ತು ನೀರನ್ನು ಜನರಿಗೂ ಅವರ ಪಶುಗಳಿಗೂ ಕೊಡು” ಎಂದು ಹೇಳಿದನು.


ನಾವು ನಿನ್ನನ್ನು ಯಾಕೆ ಹಿಂಬಾಲಿಸಬೇಕು? ನೀನು ನಮ್ಮನ್ನು ಹಾಲೂ ಜೇನೂ ಹರಿಯುವ ದೇಶಕ್ಕೆ ಕರೆದುಕೊಂಡು ಬರಲಿಲ್ಲ. ನೀನು ನಮ್ಮ ಸ್ವಂತಕ್ಕೆ ಹೊಲಗಳನ್ನಾಗಲಿ ದ್ರಾಕ್ಷೇತೋಟಗಳನ್ನಾಗಲಿ ಕೊಡಲಿಲ್ಲ! ನೀನು ಈ ಜನರಿಗೆ ಇದೇ ರೀತಿ ಮೋಸಮಾಡಬೇಕೆಂದಿರುವೆಯೋ? ನಾವು ಬರುವುದಿಲ್ಲ” ಎಂದು ಹೇಳಿದರು.


ನಲವತ್ತು ವರ್ಷಗಳವರೆಗೆ ಜನರು ಮನ್ನವನ್ನು ತಿಂದರು. ಅವರು ವಿಶ್ರಾಂತಿಯ ದೇಶಕ್ಕೆ ಬರುವ ತನಕ, ಅಂದರೆ ಕಾನಾನಿನ ಗಡಿಗೆ ಬರುವವರೆಗೆ ಮನ್ನವನ್ನು ತಿಂದರು.


“ನಾನು ಇಸ್ರೇಲರ ಗೊಣಗುಟ್ಟುವಿಕೆಯನ್ನು ಕೇಳಿದ್ದೇನೆ. ಆದ್ದರಿಂದ ಅವರಿಗೆ ಹೀಗೆ ಹೇಳು: ‘ಸೂರ್ಯಾಸ್ತಮಕ್ಕಿಂತ ಮೊದಲು ನೀವು ಮಾಂಸವನ್ನು ತಿನ್ನುವಿರಿ; ಪ್ರತಿ ಮುಂಜಾನೆ ಸೂರ್ಯೋದಯಕ್ಕಿಂತ ಮೊದಲು ನಿಮಗೆ ಬೇಕಾದಷ್ಟು ರೊಟ್ಟಿಯನ್ನು ತಿನ್ನುವಿರಿ. ಆಗ ನಾನೇ ದೇವರಾದ ಯೆಹೋವನೆಂಬುದನ್ನು ನೀವು ತಿಳಿದುಕೊಳ್ಳುವಿರಿ; ನನ್ನಲ್ಲಿ ಭರವಸೆ ಇಡುವಿರಿ’” ಎಂದು ಹೇಳಿದನು.


“ನಾವು ಈ ಸ್ಥಳಕ್ಕೆ ಬಂದಾಗ ಹೆಪ್ಬೋನಿನ ರಾಜ ಸೀಹೋನ ಮತ್ತು ಬಾಷಾನಿನ ರಾಜ ಓಗನು ನಮ್ಮೊಂದಿಗೆ ಯುದ್ಧ ಮಾಡಲು ಬಂದರು. ನಾವು ಅವರನ್ನು ಸೋಲಿಸಿದೆವು.


ಆದರೆ ನಮ್ಮ ದೇವರಾದ ಯೆಹೋವನು ಅವನನ್ನು ನಮ್ಮ ವಶಕ್ಕೆ ಕೊಟ್ಟನು. ನಾವು ಸೀಹೋನ್ ಅರಸನನ್ನೂ ಅವನ ಮಕ್ಕಳನ್ನೂ ಅವನ ಎಲ್ಲಾ ಜನರನ್ನೂ ಸದೆಬಡೆದು ಸೋಲಿಸಿದೆವು.


“ಅದೇ ಪ್ರಕಾರ ನಾವು ಓಗನನ್ನು ಸೋಲಿಸುವಂತೆ ದೇವರಾದ ಯೆಹೋವನು ಸಹಾಯ ಮಾಡಿದನು. ಅವನನ್ನೂ ಅವನ ಸೈನದಲ್ಲಿರುವವರನ್ನೆಲ್ಲಾ ನಾಶಮಾಡಿದೆವು.


ಹೆಷ್ಬೋನಿನ ಅರಸನಾದ ಸೀಹೋನನಿಗೆ ಸೇರಿದ ಪಟ್ಟಣಗಳನ್ನು ನಾವು ಹೇಗೆ ಧ್ವಂಸ ಮಾಡಿದೆವೋ ಹಾಗೆಯೇ ಈ ಪಟ್ಟಣಗಳನ್ನು ಧ್ವಂಸ ಮಾಡಿ ಸ್ತ್ರೀಯರೂ ಕೂಸುಗಳೂ ಸೇರಿದಂತೆ ಅದರ ನಿವಾಸಿಗಳಲ್ಲಿ ಒಬ್ಬರನ್ನೂ ಬಿಡದೆ ಹತಿಸಿಬಿಟ್ಟೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು