Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 29:9 - ಪರಿಶುದ್ದ ಬೈಬಲ್‌

9 ನೀವು ದೇವರೊಡನೆ ಮಾಡಿದ ಒಪ್ಪಂದವನ್ನು ಪಾಲಿಸುತ್ತಾ ಬಂದರೆ ನೀವು ನಿಮ್ಮ ಕಾರ್ಯಗಳಲ್ಲಿ ಜಯವನ್ನು ಹೊಂದುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಈ ಸಂಗತಿಗಳನ್ನೆಲ್ಲಾ ನೀವು ಜ್ಞಾಪಕಮಾಡಿಕೊಂಡು ಈ ಒಡಂಬಡಿಕೆಯ ವಾಕ್ಯಗಳನ್ನು ಅನುಸರಿಸಿ ನಡೆಯಬೇಕು; ಆಗ ನೀವು ನಡಿಸುವ ಎಲ್ಲಾ ಕೆಲಸಗಳಲ್ಲಿಯೂ ಜಾಣರಾಗಿ ಅಭಿವೃದ್ಧಿಹೊಂದುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಈ ಸಂಗತಿಗಳನ್ನೆಲ್ಲಾ ನೀವು ಜ್ಞಾಪಕಮಾಡಿಕೊಂಡು ಈ ಒಡಂಬಡಿಕೆಯ ವಾಕ್ಯಗಳನ್ನು ಅನುಸರಿಸಿ ನಡೆಯಬೇಕು; ಆಗ ನೀವು ನಡೆಸುವ ಕೆಲಸಕಾರ್ಯಗಳಲ್ಲಿ ಜಾಣರಾಗಿ ಅಭಿವೃದ್ಧಿ ಹೊಂದುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಈ ಸಂಗತಿಗಳನ್ನೆಲ್ಲಾ ನೀವು ಜ್ಞಾಪಕಮಾಡಿಕೊಂಡು ಈ ನಿಬಂಧನವಾಕ್ಯಗಳನ್ನು ಅನುಸರಿಸಿ ನಡೆಯಬೇಕು; ಆಗ ನೀವು ನಡಿಸುವ ಎಲ್ಲಾ ಕೆಲಸಗಳಲ್ಲಿಯೂ ಜಾಣರಾಗಿ ಅಭಿವೃದ್ಧಿಹೊಂದುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಹೀಗಿರುವುದರಿಂದ ನೀವು ಮಾಡುವ ಎಲ್ಲದರಲ್ಲಿಯೂ ಸಫಲವಾಗುವಂತೆ ಈ ಒಡಂಬಡಿಕೆಯ ಮಾತುಗಳನ್ನು ಕೇಳಿ ನಡೆಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 29:9
19 ತಿಳಿವುಗಳ ಹೋಲಿಕೆ  

ನಿನ್ನ ದೇವರಾದ ಯೆಹೋವನ ಆಜ್ಞೆಗಳನ್ನೆಲ್ಲಾ ಎಚ್ಚರಿಕೆಯಿಂದ ಅನುಸರಿಸು. ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಆಜ್ಞೆಗಳಿಗೂ ಕಟ್ಟಳೆಗಳಿಗೂ ನಿರ್ಣಯಗಳಿಗೂ ಒಡಂಬಡಿಕೆಗಳಿಗೂ ವಿಧೇಯನಾಗಿರು. ಆಗ ನೀನು ನಿನ್ನ ಎಲ್ಲ ಕೆಲಸಕಾರ್ಯಗಳಲ್ಲೂ ನೀನು ಹೋಗುವ ಎಲ್ಲಾ ಕಡೆಗಳಲ್ಲೂ ಯಶಸ್ಸನ್ನು ಗಳಿಸುವೆ.


ಆ ನಿಯಮಗಳನ್ನು ಪರಿಪೂರ್ಣವಾಗಿ ಅಭ್ಯಾಸಿಸಿರಿ, ‘ಆಗ ಅನ್ಯಜನರು ನಿಮ್ಮನ್ನು ನೋಡಿ ನೀವು ಜ್ಞಾನಿಗಳು’ ಎಂದು ತಿಳಿದುಕೊಳ್ಳುವರು. ಆ ದೇಶದ ಜನರು ನಿಮ್ಮ ವಿಧಿನಿಯಮಗಳನ್ನು ಕೇಳಿ, ‘ನಿಜವಾಗಿಯೂ ಈ ಮಹಾ ಜನಾಂಗದ ಜನರು ಬುದ್ಧಿಯುಳ್ಳವರು ಮತ್ತು ಜ್ಞಾನಿಗಳು’ ಎಂದು ಹೇಳುವರು


ಆದರೆ ಯೇಸು, “ದೇವರ ವಾಕ್ಯವನ್ನು ಕೇಳಿ ಅದಕ್ಕೆ ವಿಧೇಯರಾಗುವ ಜನರೇ ಭಾಗ್ಯವಂತರು!” ಎಂದನು.


ಆದರೆ ನೀನು ಇನ್ನೊಂದು ವಿಷಯದಲ್ಲಿಯೂ ಸ್ಥಿರಚಿತ್ತನಾಗಿರಬೇಕು; ಧೈರ್ಯವಂತನಾಗಿರಬೇಕು. ನನ್ನ ಸೇವಕನಾಗಿದ್ದ ಮೋಶೆಯು ನಿನಗೆ ಕೊಟ್ಟ ಆಜ್ಞೆಗಳನ್ನು ನೀನು ನಿಶ್ಚಿತವಾಗಿ ಪಾಲಿಸಬೇಕು. ಅವನ ಧರ್ಮೋಪದೇಶವನ್ನೆಲ್ಲಾ ಚಾಚೂತಪ್ಪದೆ ಅನುಸರಿಸಿದ್ದೇ ಆದರೆ ನೀನು ಮಾಡುವ ಎಲ್ಲ ಕಾರ್ಯಗಳಲ್ಲಿ ನಿನಗೆ ಜಯಸಿಗುವುದು ಖಂಡಿತ.


ಇಸ್ರೇಲ್ ಜನಾಂಗದೊಂದಿಗೆ ಹೋರೇಬ್ ಬೆಟ್ಟದಲ್ಲಿ ಯೆಹೋವನು ಒಂದು ಒಡಂಬಡಿಕೆಯನ್ನು ಮಾಡಿಕೊಂಡನು. ಅಲ್ಲದೆ ಇಸ್ರೇಲರು ಮೋವಾಬ್ ಪ್ರಾಂತ್ಯದಲ್ಲಿದ್ದಾಗ ಯೆಹೋವನು ಮೋಶೆಗೆ ಅವರೊಡನೆ ಇನ್ನೊಂದು ಒಡಂಬಡಿಕೆಯನ್ನು ಮಾಡಿಕೊಳ್ಳಲು ಹೇಳಿದನು. ಅದು ಯಾವುದೆಂದರೆ:


ಅವರು ಚೀಯೋನಿಗೆ ಹೋಗುವ ಮಾರ್ಗವನ್ನು ವಿಚಾರಿಸುವರು. ಆ ದಿಕ್ಕಿನಲ್ಲಿ ಹೋಗಲು ಪ್ರಾರಂಭಿಸುವರು. ‘ಬನ್ನಿ, ನಾವೆಲ್ಲರೂ ಯೆಹೋವನ ಆಶ್ರಯಪಡೆಯೋಣ. ಆತನೊಂದಿಗೆ ಶಾಶ್ವತವಾದ ಮತ್ತು ನಾವೆಂದೂ ಮರೆಯಲಾಗದ ಒಡಂಬಡಿಕೆಯನ್ನು ಮಾಡಿಕೊಳ್ಳೋಣ’ ಎಂದು ಅವರು ಹೇಳುವರು.


ಯೆಹೋವನ ಒಡಂಬಡಿಕೆಯನ್ನೂ ವಾಗ್ದಾನಗಳನ್ನೂ ಅನುಸರಿಸುವ ಜನರಿಗೆ ಆತನ ಮಾರ್ಗಗಳೆಲ್ಲ ಕರುಣೆಯುಳ್ಳವೂ ಸತ್ಯವೂ ಆಗಿವೆ.


“ಈ ದಿನ ನೀವೆಲ್ಲರೂ ದೇವರ ಮುಂದೆ ನಿಂತಿದ್ದೀರಿ. ನಿಮ್ಮ ನಾಯಕರು, ಹಿರಿಯರು, ನಿಮ್ಮ ಜನರೆಲ್ಲಾ ಇಲ್ಲಿ ಇರುವಿರಿ.


ಆ ಧರ್ಮಶಾಸ್ತ್ರದಲ್ಲಿ ಬರೆದ ವಿಷಯಗಳನ್ನು ಸದಾ ನೆನಪಿಡು. ಹಗಲೂ ರಾತ್ರಿ ಆ ಧರ್ಮಶಾಸ್ತ್ರವನ್ನು ಧ್ಯಾನಿಸು. ಆಗ ಅದರಲ್ಲಿ ಬರೆದ ವಿಷಯಗಳಿಗೆ ನೀನು ನಿಶ್ಚಿತವಾಗಿ ವಿಧೇಯನಾಗಿರುವೆ. ನೀನು ಹೀಗೆ ಮಾಡಿದರೆ ನೀನು ಮಾಡುವ ಪ್ರತಿಯೊಂದು ಕಾರ್ಯದಲ್ಲಿ ನೀನು ವಿವೇಕಶಾಲಿಯಾಗುವೆ ಮತ್ತು ಜಯಶಾಲಿಯಾಗುವೆ.


ಹಿಜ್ಕೀಯನು ತಾನು ಪ್ರಾರಂಭಿಸಿದ ಪ್ರತಿಯೊಂದು ಕಾರ್ಯಗಳನ್ನೂ ದೇವಾಲಯದ ಕಾರ್ಯಗಳನ್ನೂ ದೇವರ ಕಟ್ಟಳೆಗಳನ್ನೂ ಅನುಸರಿಸುವದನ್ನು ಪೂರ್ಣಹೃದಯದಿಂದ ಮಾಡಿ ಯಶಸ್ವಿಯಾದನು.


ಯೆಹೋವನು ನಮ್ಮ ಪೂರ್ವಿಕರೊಂದಿಗೆ ಒಡಂಬಡಿಕೆ ಮಾಡದೆ ಈಗ ಇಲ್ಲಿ ಜೀವಂತರಾಗಿರುವ ನಮ್ಮೊಂದಿಗೆ ಮಾಡಿರುತ್ತಾನೆ.


ಎಲ್ಲರನ್ನು ಅಂದರೆ ಗಂಡಸರನ್ನೂ ಹೆಂಗಸರನ್ನೂ ಚಿಕ್ಕಮಕ್ಕಳನ್ನೂ ಮತ್ತು ನಿಮ್ಮನಿಮ್ಮ ಊರಿನಲ್ಲಿ ವಾಸಿಸುವ ಪರದೇಶಸ್ಥರನ್ನೂ ಒಟ್ಟಾಗಿ ಸೇರಿಸಬೇಕು. ಅವರು ಬೋಧನೆಯನ್ನು ಕೇಳಿ ತಮ್ಮ ದೇವರಾದ ಯೆಹೋವನನ್ನು ಸನ್ಮಾನಿಸಲು ಕಲಿಯುವರು ಮತ್ತು ಬೋಧನೆಯಲ್ಲಿ ತಿಳಿಸಿರುವ ಪ್ರಕಾರ ಮಾಡುವರು.


ಅಲ್ಲಿ ಇಸ್ರೇಲಿನ ಎಲ್ಲ ಜನರು ಸೇರಿ ಬಂದಿದ್ದರು. ಎಲ್ಲ ಹೆಂಗಸರು ಮತ್ತು ಮಕ್ಕಳು ಮತ್ತು ಇಸ್ರೇಲಿನ ಜನರೊಂದಿಗೆ ಇದ್ದ ಎಲ್ಲ ವಿದೇಶಿಯರು ಅಲ್ಲಿ ಇದ್ದರು. ಅವರೆಲ್ಲರಿಗೆ ಕೇಳಿಸುವಂತೆ ಮೋಶೆಯು ಕೊಟ್ಟಿದ್ದ ಪ್ರತಿಯೊಂದು ಆಜ್ಞೆಯನ್ನು ಯೆಹೋಶುವನು ಓದಿದನು.


ಯೆಹೋಶುವನು ಶೆಕೆಮಿನಲ್ಲಿ ಇಸ್ರೇಲಿನ ಎಲ್ಲ ಕುಲದವರನ್ನು, ಹಿರಿಯ ನಾಯಕರನ್ನು, ಕುಲದ ಪ್ರಧಾನರನ್ನು, ನ್ಯಾಯಾಧೀಶರನ್ನು, ಮುಖಂಡರನ್ನು ಮತ್ತು ಇಸ್ರೇಲಿನ ಅಧಿಕಾರಿಗಳನ್ನು ಒಟ್ಟಾಗಿ ಸೇರಿಸಿದನು. ಈ ಜನರು ದೇವರ ಸನ್ನಿಧಿಯಲ್ಲಿ ನಿಂತರು.


ಯೆಹೂದದ ಎಲ್ಲಾ ಜನರು ತಮ್ಮ ಹೆಂಡತಿಮಕ್ಕಳೊಂದಿಗೆ ಯೆಹೋವನೆದುರು ನಿಂತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು