Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 3:10 - ಪರಿಶುದ್ದ ಬೈಬಲ್‌

10 ಗಿಲ್ಯಾದ್ ಪ್ರಾಂತ್ಯ ಮತ್ತು ಎತ್ತರವಾದ ಬಯಲಿನಲ್ಲಿದ್ದ ಪಟ್ಟಣಗಳನ್ನೆಲ್ಲಾ ನಾವು ಸ್ವಾಧೀನಮಾಡಿಕೊಂಡೆವು. ಸಲ್ಕಾ ಮತ್ತು ಎದ್ರೈ ಪಟ್ಟಣಗಳ ತನಕವಿರುವ ಬಾಷಾನ್ ದೇಶವನ್ನೆಲ್ಲಾ ನಾವು ಸ್ವಾಧೀನಮಾಡಿಕೊಂಡೆವು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಹೀಗೆ ಮೀಶೊರೆಂಬ ಎತ್ತರವಾದ ಬೈಲುಸೀಮೆಯ ಎಲ್ಲಾ ಪಟ್ಟಣಗಳನ್ನೂ, ಗಿಲ್ಯಾದ್ ಸೀಮೆಯನ್ನೂ, ಓಗನ ರಾಜ್ಯವಾದ ಸಲ್ಕಾ ಮತ್ತು ಎದ್ರೈ ಎಂಬ ಪಟ್ಟಣಗಳಿಂದ ಕೂಡಿರುವ ಬಾಷಾನ್ ಸೀಮೆಯನ್ನೂ ಸ್ವಾಧೀನಮಾಡಿಕೊಂಡೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಹೀಗೆ ಮೀಶೋರೆಂಬ ಎತ್ತರವಾದ ಬೈಲುಸೀಮೆಯ ಎಲ್ಲಾ ಪಟ್ಟಣಗಳನ್ನೂ ಗಿಲ್ಯಾದ್ ಸೀಮೆಯನ್ನೂ ಓಗನ ರಾಜ್ಯವಾದ ಸಲ್ಕಾ, ಎದ್ರೈ ಎಂಬ ಪಟ್ಟಣಗಳಿಂದ ಕೂಡಿರುವ ಬಾಷಾನ್ ಸೀಮೆಯನ್ನೂ ಸ್ವಾಧೀನಮಾಡಿಕೊಂಡೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಹೀಗೆ ಮೀಶೋರೆಂಬ ಎತ್ತರವಾದ ಬೈಲುಸೀಮೆಯ ಎಲ್ಲಾ ಪಟ್ಟಣಗಳನ್ನೂ ಗಿಲ್ಯಾದ್ ಸೀಮೆಯನ್ನೂ ಓಗನ ರಾಜ್ಯವಾದ ಸಲ್ಕಾ, ಎದ್ರೈ ಎಂಬ ಪಟ್ಟಣಗಳಿಂದ ಕೂಡಿರುವ ಬಾಷಾನ್ ಸೀಮೆಯನ್ನೂ ಸ್ವಾಧೀನಮಾಡಿಕೊಂಡೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಬಯಲುಸೀಮೆಯ ಎಲ್ಲಾ ಪಟ್ಟಣಗಳನ್ನೂ, ಎಲ್ಲಾ ಗಿಲ್ಯಾದನ್ನೂ ಬಾಷಾನಿನಲ್ಲಿ ಓಗನ ರಾಜ್ಯದಲ್ಲಿ ಪಟ್ಟಣಗಳಾದ ಸಲ್ಕಾ ಎದ್ರೈವರೆಗೆ ಎಲ್ಲಾ ಬಾಷಾನನ್ನೂ ಸ್ವಾಧೀನಮಾಡಿಕೊಂಡೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 3:10
10 ತಿಳಿವುಗಳ ಹೋಲಿಕೆ  

ಗಿಲ್ಯಾದಿನ ಅರ್ಧಭಾಗವು, ಅಷ್ಟರೋತ್, ಎದ್ರೈ ಎಂಬ ಪಟ್ಟಣಗಳೂ ಇದರಲ್ಲಿ ಸೇರಿವೆ. (ಗಿಲ್ಯಾದ್, ಅಷ್ಟರೋತ್ ಮತ್ತು ಎದ್ರೈ ಎಂಬ ಪಟ್ಟಣಗಳಲ್ಲಿ ರಾಜನಾದ ಓಗ್ ವಾಸವಾಗಿದ್ದನು.) ಈ ಎಲ್ಲ ಪ್ರದೇಶವನ್ನು ಮನಸ್ಸೆಯ ಮಗನಾದ ಮಾಕೀರನ ಅರ್ಧಗೋತ್ರದವರಿಗೆ ಕೊಡಲಾಯಿತು.


ಈ ಪ್ರದೇಶವು ಜೋರ್ಡನ್ ತಗ್ಗು ಪ್ರಾಂತ್ಯವನ್ನು ಆವರಿಸಿದೆ. ದಕ್ಷಿಣಕ್ಕೆ ಇದರ ಮೇರೆ ಮೃತ್ಯು ಸರೋವರದ ತನಕವೂ ಪೂರ್ವದಲ್ಲಿ ಪಿಸ್ಗಾ ಬೆಟ್ಟದ ತನಕವೂ ವಿಸ್ತರಿಸಿದೆ.


ಬಳಿಕ ಇಸ್ರೇಲರು ಬೇರೆ ದಿಕ್ಕಿಗೆ ತಿರುಗಿ ಬಾಷಾನಿನ ಮಾರ್ಗವಾಗಿ ಪ್ರಯಾಣಮಾಡಿದರು. ಆಗ ಬಾಷಾನಿನ ಅರಸನಾದ ಓಗನು ಎದ್ರೈ ಎಂಬಲ್ಲಿ ಇಸ್ರೇಲರೊಂದಿಗೆ ಯುದ್ಧಮಾಡಲು ತನ್ನ ಸೈನ್ಯ ಸಮೇತವಾಗಿ ಬಂದನು.


ಆ ಮೂರು ನಗರಗಳು ಯಾವುವೆಂದರೆ: ರೂಬೇನ್ ಕುಲದವರಿಗೆ ಎತ್ತರವಾದ ಬಯಲು ಪ್ರದೇಶದಲ್ಲಿರುವ ಬೆಚೆರ್; ಗಾದ್ ಕುಲದವರಿಗೆ ಗಿಲ್ಯಾದಿನಲ್ಲಿರುವ ರಾಮೋತ್; ಮತ್ತು ಮನಸ್ಸೆ ಕುಲದವರಿಗೆ ಬಾಷಾನಿನಲ್ಲಿರುವ ಗೋಲಾನ್.


ಅರ್ನೋನ್ ತಗ್ಗಿನ ಸಮೀಪದಲ್ಲಿದ್ದ ಅರೋಯೇರ್‌ನಿಂದ ಮೇದೆಬದವರೆಗಿರುವ ಪ್ರದೇಶ. ಇದು ಇಡೀ ತಪ್ಪಲ ಪ್ರದೇಶವನ್ನು ಮತ್ತು ಆ ತಗ್ಗು ಪ್ರದೇಶದ ಮಧ್ಯದಲ್ಲಿದ್ದ ಊರುಗಳನ್ನು ಒಳಗೊಂಡಿತ್ತು.


ರೂಬೇನ್ಯರು ವಾಸಿಸಿದ್ದ ಪ್ರಾಂತ್ಯದ ಪಕ್ಕದಲ್ಲಿಯೇ ಗಾದನ ಕುಲದವರು ವಾಸಿಸಿದರು. ಇವರು ಬಾಷಾನಿನ ಪ್ರದೇಶದಲ್ಲಿ ಸಾಲೆಖ ಪಟ್ಟಣದವರೆಗೂ ನೆಲೆಸಿದರು.


ಈ ಪ್ರದೇಶವು ಮಹನಯಿಮಿನಿಂದ ಪ್ರಾರಂಭವಾಗುತ್ತದೆ. ಇಡೀ ಬಾಷಾನ್, ಅರಸನಾದ ಓಗನ ಆಳ್ವಿಕೆಗೆ ಒಳಪಟ್ಟ ಪ್ರದೇಶ, ಬಾಷಾನಿನಲ್ಲಿರುವ ಯಾಯೀರನ ಎಲ್ಲ ಊರುಗಳು (ಒಟ್ಟು ಅರವತ್ತು ಊರುಗಳು) ಇದರಲ್ಲಿ ಸೇರಿವೆ.


ರಾಮೋತ್ ಗಿಲ್ಯಾದಿಗೆ ಬೆನ್‌ಗೆಬೆರನು ರಾಜ್ಯಪಾಲನಾಗಿದ್ದನು. ಗಿಲ್ಯಾದಿನ ಮನಸ್ಸೆಯ ಮಗನಾದ ಯಾಯೀರನ ಗ್ರಾಮಗಳಿಗೂ ಮತ್ತು ಪಟ್ಟಣಗಳೆಲ್ಲಕ್ಕೂ ಅವನು ರಾಜ್ಯಪಾಲನಾಗಿದ್ದನು. ಅವನು ಬಾಷಾನಿನ ಅರ್ಗೋಬ್ ಜಿಲ್ಲೆಗೂ ರಾಜ್ಯಪಾಲನಾಗಿದ್ದನು. ಈ ಪ್ರದೇಶದಲ್ಲಿ ಗೋಡೆಗಳಿಂದ ಸುತ್ತುವರಿದ ಅರವತ್ತು ನಗರಗಳಿದ್ದವು. ಈ ನಗರಗಳ ದ್ವಾರದಲ್ಲಿ ಹಿತ್ತಾಳೆಯ ಸಲಾಕೆಗಳುಳ್ಳ ಬಾಗಿಲುಗಳಿದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು