Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 3:14 - ಪರಿಶುದ್ದ ಬೈಬಲ್‌

14 ಮನಸ್ಸೆ ಕುಲದ ಯಾಯೀರ ಎಂಬಾತನು ಅರ್ಗೋಬ್ ಪ್ರದೇಶಗಳನ್ನು ವಶಪಡಿಸಿಕೊಂಡನು. ಆ ಪ್ರದೇಶ ಗೆಷೂರ್ಯರ ಮತ್ತು ಮಾಕಾತ್ಯರ ದೇಶದ ಮೇರೆಯ ತನಕ ಹಬ್ಬಿತ್ತು. ಆದ್ದರಿಂದ ಆ ಪ್ರದೇಶಕ್ಕೆ ಯಾಯೀರ್ ಎಂಬ ಹೆಸರು ಬಂತು. ಇಂದಿಗೂ ಜನರು ಆ ಊರುಗಳಿಗೆ, “ಯಾಯೀರನ ಬಾಷಾನ್ ಊರುಗಳು” ಎಂದು ಕರೆಯುತ್ತಾರೆ.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 (ಬಾಷಾನ್ ದೇಶವು ರೆಫಾಯರ ದೇಶವೆನಿಸಿಕೊಳ್ಳುತ್ತದೆ. ಮನಸ್ಸೆಯ ವಂಶಸ್ಥನಾದ ಯಾಯೀರನು ಗೆಷೂರ್ಯರ ಮತ್ತು ಮಾಕಾತ್ಯರ ಮೇರೆಯವರೆಗೆ ಅರ್ಗೋಬ್ ಎಂಬ ಪ್ರದೇಶವನ್ನೆಲ್ಲಾ ಸ್ವಾಧೀನಮಾಡಿಕೊಂಡನು. ಅವನು ಬಾಷಾನಿಗೆ ಸೇರಿರುವ ಆ ಪ್ರಾಂತ್ಯಕ್ಕೆ ಯಾಯೀರನ ಗ್ರಾಮಗಳೆಂದು ತನ್ನ ಹೆಸರಿಟ್ಟನು. ಈ ಹೆಸರು ಇಂದಿನ ವರೆಗೂ ಉಂಟು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 (ಬಾಷಾನ್ ನಾಡು ರೆಫಾಯರ ನಾಡೆನಿಸಿಕೊಳ್ಳುತ್ತದೆ. ಮನಸ್ಸೆಯ ವಂಶಸ್ಥನಾದ ಯಾಯೀರನು ಗೆಷೂರ್ಯರ ಮತ್ತು ಮಾಕಾತ್ಯರ ಮೇರೆಯವರೆಗೆ ಅರ್ಗೋಬ್ ಎಂಬ ಪ್ರದೇಶವನ್ನೆಲ್ಲಾ ಸ್ವಾಧೀನಮಾಡಿಕೊಂಡು ಬಾಷಾನಿಗೆ ಸೇರಿರುವ ಆ ಪ್ರಾಂತ್ಯಕ್ಕೆ ಯಾಯೀರನ ಗ್ರಾಮಗಳೆಂದು ತನ್ನ ಹೆಸರಿಟ್ಟನು. ಈ ಹೆಸರು ಇಂದಿನವರೆಗೂ ಉಂಟು).

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 (ಬಾಷಾನ್ ದೇಶವು ರೆಫಾಯರ ದೇಶವೆನಿಸಿಕೊಳ್ಳುತ್ತದೆ. ಮನಸ್ಸೆಯ ವಂಶಸ್ಥನಾದ ಯಾಯೀರನು ಗೆಷೂರ್ಯರ ಮತ್ತು ಮಾಕಾತ್ಯರ ಮೇರೆಯವರೆಗೆ ಅರ್ಗೋಬ್ ಎಂಬ ಪ್ರದೇಶವನ್ನೆಲ್ಲಾ ಸ್ವಾಧೀನಮಾಡಿಕೊಂಡು ಬಾಷಾನಿಗೆ ಸೇರಿರುವ ಆ ಪ್ರಾಂತ್ಯಕ್ಕೆ ಯಾಯೀರನ ಗ್ರಾಮಗಳೆಂದು ತನ್ನ ಹೆಸರಿಟ್ಟನು. ಈ ಹೆಸರು ಇಂದಿನವರೆಗೂ ಉಂಟು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಮನಸ್ಸೆಯ ಮಗ ಯಾಯೀರನು ಅರ್ಗೋಬಿನ ದೇಶವನ್ನೆಲ್ಲಾ ಗೆಷೂರ್ಯರ, ಮಾಕಾತ್ಯರ ಮೇರೆಯವರೆಗೆ ಸ್ವಾಧೀನಮಾಡಿಕೊಂಡು, ಆ ಬಾಷಾನಿಗೆ ತನ್ನ ಹೆಸರಿನ ಪ್ರಕಾರ ಇಂದಿನವರೆಗೆ ಹವ್ವೋತ್ ಯಾಯೀರೆಂದು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 3:14
14 ತಿಳಿವುಗಳ ಹೋಲಿಕೆ  

ಮನಸ್ಸೆಯ ಕುಲದವನಾದ ಯಾಯೀರನು ಅಮೋರಿಯರ ಕೋಟೆಗಳುಳ್ಳ ಹಳ್ಳಿಗಳನ್ನು ವಶಪಡಿಸಿಕೊಂಡು ಅವುಗಳಿಗೆ, “ಯಾಯೀರನ ಹಳ್ಳಿಗಳು” ಎಂದು ಹೆಸರಿಟ್ಟನು.


ದಾವೀದನು ತನ್ನ ಮಗನಿಗಾಗಿ ಪ್ರತಿನಿತ್ಯವೂ ಗೋಳಾಡುತ್ತಿದ್ದನು. ಗೆಷೂರಿನ ರಾಜನೂ ಅಮ್ಮೀಹೂದನ ಮಗನೂ ಆದ ತಲ್ಮೈನ ಹತ್ತಿರಕ್ಕೆ ಅಬ್ಷಾಲೋಮನು ಓಡಿಹೋದನು.


ಅಮ್ಮೋನಿಯರು ತಾವು ದಾವೀದನಿಗೆ ಶತ್ರುಗಳಾಗಿರುವುದಾಗಿ ತಿಳಿದುಕೊಂಡರು. ಆದ್ದರಿಂದ ಅಮ್ಮೋನಿಯರು ಹಣಕೊಟ್ಟು ಬೇತ್‌ರೆಹೋಬ್ ಮತ್ತು ಚೋಬಾಗಳಿಂದ ಅರಾಮ್ಯರ ಇಪ್ಪತ್ತುಸಾವಿರ ಮಂದಿ ಭೂದಳವನ್ನು ಬರಮಾಡಿಕೊಂಡರು. ಅಮ್ಮೋನಿಯರು ಮಾಕಾದ ರಾಜನನ್ನು ಮತ್ತು ಅವನ ಒಂದು ಸಾವಿರ ಸೈನಿಕರನ್ನು ಹಾಗೂ ಟೋಬ್‌ನಿಂದ ಹನ್ನೆರಡು ಸಾವಿರ ಮಂದಿ ಸೈನಿಕರನ್ನು ಬರಮಾಡಿಕೊಂಡರು.


ಕಿಲಾಬನು ಎರಡನೆಯ ಮಗ. ಕರ್ಮೆಲ್ಯನಾದ ನಾಬಾಲನ ವಿಧವೆಯಾದ ಅಬೀಗೈಲಳು ಕಿಲಾಬನ ತಾಯಿ. ಅಬ್ಷಾಲೋಮನು ಮೂರನೆಯ ಮಗ. ಗೆಷೂರಿನ ರಾಜ ತಲ್ಮೈನ ಮಗಳಾದ ಮಾಕಳು ಅಬ್ಷಾಲೋಮನ ತಾಯಿ.


ಇಸ್ರೇಲರು ಗೆಷೂರ್ಯರನ್ನೂ ಮಾಕತೀಯರನ್ನೂ ಹೊರತಳ್ಳಲಿಲ್ಲ. ಅವರು ಇಂದಿಗೂ ಇಸ್ರೇಲರ ಜೊತೆಯಲ್ಲಿಯೇ ಇರುತ್ತಾರೆ.


ಆ ಸಮಯದಲ್ಲಿ ಓಗನಿಗೆ ಸೇರಿದ್ದ ಎಲ್ಲಾ ಪಟ್ಟಣಗಳನ್ನು ಸ್ವಾಧೀನಮಾಡಿಕೊಂಡೆವು. ಬಾಷಾನಿನಲ್ಲಿ ಓಗನ ರಾಜ್ಯದಲ್ಲಿರುವ ಅರ್ಗೋಬ್ ಪ್ರದೇಶದಲ್ಲಿ ಅರವತ್ತು ಪಟ್ಟಣಗಳು ನಮ್ಮ ವಶವಾದವು.


ಗಿಲ್ಯಾದಿನ ಇನ್ನೊಂದು ಅರ್ಧಪ್ರದೇಶ ಮತ್ತು ಇಡೀ ಬಾಷಾನ್ ದೇಶವನ್ನು ಮನಸ್ಸೆಯ ಅರ್ಧಕುಲದವರಿಗೆ ಹಂಚಿದೆನು.” (ಬಾಷಾನ್ ಓಗನ ಸಾಮ್ರಾಜ್ಯವಾಗಿತ್ತು. ಬಾಷಾನಿನ ಒಂದು ಭಾಗವನ್ನು ಅರ್ಗೋಬ್ ಎಂದು ಕರೆಯುತ್ತಾರೆ. ಅಲ್ಲದೆ ರೆಫಾಯರ ದೇಶವೆಂತಲೂ ಕರೆಯುತ್ತಾರೆ.


ಓಗನು ಹೆರ್ಮೋನ್ ಬೆಟ್ಟದ ಮೇಲಿನ ಸೀಮೆ, ಸಲ್ಕಾ ಮತ್ತು ಬಾಷಾನಿನ ಎಲ್ಲ ಪ್ರದೇಶ, ಇವುಗಳನ್ನು ಆಳುತ್ತಿದ್ದನು. ಗೆಷೂರ್ಯರು ಮತ್ತು ಮಾಕತೀ ಜನರು ವಾಸಮಾಡುವ ಪ್ರದೇಶವು ಇವನ ರಾಜ್ಯದ ಮೇರೆಯಾಗಿತ್ತು. ಹೆಷ್ಬೋನಿನ ಅರಸನಾದ ಸೀಹೋನನ ರಾಜ್ಯದ ಮೇರೆಯವರೆಗೆ ಹಬ್ಬಿದ ಗಿಲ್ಯಾದಿನ ಅರ್ಧಪ್ರಾಂತ್ಯವನ್ನು ಕೂಡ ಓಗನು ಆಳುತ್ತಿದ್ದನು.


ನಂತರ ಯೋವಾಬನು ಮೇಲೆದ್ದು ಗೆಷೂರಿಗೆ ಹೋಗಿ ಅಬ್ಷಾಲೋಮನನ್ನು ಜೆರುಸಲೇಮಿಗೆ ಕರೆದುತಂದನು.


ಸಮಾಧಿಯೇ ಅವರ ಶಾಶ್ವತವಾದ ಹೊಸ ಮನೆ. ಅವರೆಷ್ಟೇ ಭೂ ಆಸ್ತಿಯನ್ನು ಹೊಂದಿದ್ದರೂ ಅದರಿಂದೇನೂ ಪ್ರಯೋಜನವಿಲ್ಲ.


ಆ ಸೈನಿಕರು ಮಿಚ್ಫದಲ್ಲಿ ವಾಸವಾಗಿದ್ದ ಗೆದಲ್ಯನಲ್ಲಿಗೆ ಬಂದರು. ಆ ಸೈನಿಕರು ಯಾರೆಂದರೆ: ನೆತನ್ಯನ ಮಗನಾದ ಇಷ್ಮಾಯೇಲ, ಕಾರೇಹನ ಮಕ್ಕಳಾದ ಯೋಹಾನಾನ ಮತ್ತು ಅವನ ಸೋದರ ಯೋನಾಥಾನ, ತನ್ಹಮೆತನ ಮಗನಾದ ಸೆರಾಯ, ನೆಟೋಫದವನಾದ ಏಫಯನ ಮಕ್ಕಳು, ಮಾಕಾ ಊರಿನ ಯೆಜನ್ಯ ಮತ್ತು ಅವರ ಸಂಗಡ ಇದ್ದ ಜನರು.


ಯಾಯೀರಿನವನಾದ ಈರನು ದಾವೀದನ ಮುಖ್ಯ ಸೇವಕನಾಗಿದ್ದನು.


ಮಾಕಾದ ಅಹಸ್ಬೈನ ಮಗನಾದ ಎಲೀಫೆಲೆಟ್, ಗಿಲೋವಿನ ಅಹೀತೋಫೆಲನ ಮಗ ಎಲೀಯಾಮ್,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು