Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 30:10 - ಪರಿಶುದ್ದ ಬೈಬಲ್‌

10 ಆತನು ಹೇಳಿದಂತೆ ನೀವು ನಡೆದುಕೊಳ್ಳಬೇಕು. ಈ ಧರ್ಮೋಪದೇಶ ಪುಸ್ತಕದಲ್ಲಿ ಬರೆದಿರುವ ಬೋಧನೆಗಳನ್ನು ನೀವು ಅನುಸರಿಸಬೇಕು. ನಿಮ್ಮ ಪೂರ್ಣಪ್ರಾಣದಿಂದಲೂ ಪೂರ್ಣಆತ್ಮದಿಂದಲೂ ನಿಮ್ಮ ದೇವರಾದ ಯೆಹೋವನನ್ನು ಆರಾಧಿಸಬೇಕು; ಆಗ ನಿಮಗೆ ಈ ಎಲ್ಲಾ ಒಳ್ಳೆಯ ಸಂಗತಿಗಳು ಸಂಭವಿಸುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನೀವು ನಿಮ್ಮ ದೇವರಾದ ಯೆಹೋವನ ಮಾತಿಗೆ ವಿಧೇಯರಾಗಿ ಈ ಧರ್ಮಶಾಸ್ತ್ರದ ಆಜ್ಞಾವಿಧಿಗಳನ್ನು ಅನುಸರಿಸಿ ಸಂಪೂರ್ಣವಾದ ಹೃದಯದಿಂದಲೂ ಮತ್ತು ಸಂಪೂರ್ಣವಾದ ಮನಸ್ಸಿನಿಂದಲೂ ಆತನ ಕಡೆಗೆ ತಿರುಗಿಕೊಳ್ಳಲು, ಆತನು ನಿಮ್ಮ ಪೂರ್ವಿಕರ ವಿಷಯದಲ್ಲಿ ಸಂತೋಷಪಟ್ಟ ಹಾಗೆಯೇ ನಿಮ್ಮ ವಿಷಯದಲ್ಲಿಯೂ ತಿರುಗಿ ಸಂತೋಷಪಟ್ಟು ನಿಮಗೆ ಮೇಲನ್ನು ಉಂಟುಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆದರೆ ನೀವು ನಿಮ್ಮ ದೇವರಾದ ಯೆಹೋವ ದೇವರ ಮಾತನ್ನು ಕೇಳಿ, ಈ ನಿಯಮದ ಗ್ರಂಥದಲ್ಲಿ ಬರೆದಿರುವ ಅವರ ಆಜ್ಞಾತೀರ್ಪುಗಳನ್ನು ಕಾಪಾಡಿ, ನಿಮ್ಮ ಪೂರ್ಣಹೃದಯದಿಂದಲೂ, ನಿಮ್ಮ ಪೂರ್ಣಪ್ರಾಣದಿಂದಲೂ ನಿಮ್ಮ ದೇವರಾದ ಯೆಹೋವ ದೇವರ ಕಡೆಗೆ ತಿರುಗಿಕೊಂಡರೆ, ನಿಮ್ಮಲ್ಲಿ ಸಂತೋಷಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 30:10
17 ತಿಳಿವುಗಳ ಹೋಲಿಕೆ  

ಆಗ ನೀವು ನಿಮ್ಮ ದೇವರಾದ ಯೆಹೋವನನ್ನು ಹುಡುಕುವಿರಿ. ನೀವು ನಿಮ್ಮ ಹೃದಯ ಆತ್ಮಗಳಿಂದ ಹುಡುಕಿದಾಗ ಆತನು ನಿಮಗೆ ಸಿಗುವನು.


ಸುನ್ನತಿಯನ್ನು ಮಾಡಿಸಿಕೊಳ್ಳುವುದಾಗಲಿ ಮಾಡಿಸಿಕೊಳ್ಳದಿರುವುದಾಗಲಿ ಮುಖ್ಯವಲ್ಲ. ದೇವರ ಆಜ್ಞೆಗಳಿಗೆ ವಿಧೇಯರಾಗುವುದೇ ಮುಖ್ಯವಾದದ್ದು.


ಆದರೆ ನೀವು ಹಿಂತಿರುಗಿ ನನ್ನ ಬಳಿಗೆ ಬಂದು, ನನ್ನ ಕಟ್ಟಳೆಗಳಿಗೆ ವಿಧೇಯರಾದರೆ, ನಿಮ್ಮ ಜನರನ್ನು ಬಲವಂತವಾಗಿ ಭೂಲೋಕದ ಕಟ್ಟಕಡೆಯವರೆಗೆ ಕೊಂಡೊಯ್ದಿದ್ದರೂ ಅಲ್ಲಿಂದ ನನ್ನ ಹೆಸರನ್ನು ನೆಲೆಗೊಳಿಸುವುದಕ್ಕಾಗಿ ನಾನು ಆರಿಸಿಕೊಂಡ ಸ್ಥಳಕ್ಕೆ ಕರೆದುಕೊಂಡು ಬರುವೆನು” ಎಂದು ಹೇಳಿರುವೆ.


ನೀವು ಮತ್ತೆ ಯೆಹೋವನಿಗೆ ವಿಧೇಯರಾಗುವಿರಿ. ಇಂದು ನಾನು ನಿಮಗೆ ಕೊಡುವ ಎಲ್ಲಾ ಆಜ್ಞೆಗಳಿಗೆ ನೀವು ವಿಧೇಯರಾಗುವಿರಿ.


ನೀವೂ ನಿಮ್ಮ ಸಂತತಿಯವರೂ ಯೆಹೋವನ ಬಳಿಗೆ ಬರುವಿರಿ. ನಿಮ್ಮ ಹೃದಯಪೂರ್ವಕವಾಗಿ ಆತನನ್ನು ಹಿಂಬಾಲಿಸುವಿರಿ ಮತ್ತು ಆಜ್ಞೆಗಳಿಗೆ ಸಂಪೂರ್ಣವಾಗಿ ವಿಧೇಯರಾಗುವಿರಿ.


ನಾನು ಜನರಿಗೆ, ‘ನಿಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳಿರಿ’ ಎಂತಲೂ ಅವರಿಗಾಗಿರುವ ಮಾನಸಾಂತರವನ್ನು ಯೋಗ್ಯವಾದ ಕಾರ್ಯಗಳ ಮೂಲಕ ತೋರ್ಪಡಿಸಬೇಕೆಂತಲೂ ಹೇಳಿದೆನು. ಮೊದಲನೆಯದಾಗಿ ದಮಸ್ಕಕ್ಕೂ ಬಳಿಕ ಜೆರುಸಲೇಮಿಗೂ ಜುದೇಯದ ಪ್ರತಿಯೊಂದು ಭಾಗಕ್ಕೂ ಹೋಗಿ ಅಲ್ಲಿರುವ ಜನರಿಗೆ ಈ ಸಂಗತಿಗಳನ್ನು ತಿಳಿಸಿದೆನು. ಅಲ್ಲದೆ ಯೆಹೂದ್ಯರಲ್ಲದ ಜನರ ಬಳಿಗೂ ಹೋದೆನು.


ಆದ್ದರಿಂದ ನೀವು ನಿಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳಿ. ಆಗ ಆತನು ನಿಮ್ಮ ಪಾಪಗಳನ್ನು ಕ್ಷಮಿಸುವನು.


ಆದರೆ ಒಬ್ಬ ಪಾಪಿ ತನ್ನ ದುಷ್ಟತನವನ್ನು ಬಿಟ್ಟು ನೀತಿವಂತನಾಗಿ ಬಾಳಿದರೆ ಅವನು ಜೀವಿಸುವನು.


“ಒಂದುವೇಳೆ ನಾನು ಒಬ್ಬ ದುಷ್ಟನಿಗೆ ನೀನು ಸಾಯುವಿ ಎಂದು ಹೇಳಿದರೆ ಅವನು ತನ್ನ ಜೀವಿತವನ್ನು ಬದಲಾಯಿಸಿ, ದುಷ್ಟತ್ವವನ್ನು ನಿಲ್ಲಿಸಿ, ಅವನು ನೀತಿವಂತನಾಗಿ ಬಾಳಿ


“ಆಗ ನೀನು ಅವರಿಗೆ ಹೀಗೆ ಹೇಳಬೇಕು, ‘ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ನನ್ನ ಜೀವದಾಣೆ, ನಾನು ಜನರು ಸಾಯುವುದನ್ನು ನೋಡಲು ಇಷ್ಟಪಡುವದಿಲ್ಲ; ದುಷ್ಟರು ಸಾಯುವದರಲ್ಲಿಯೂ ನನಗೆ ಇಷ್ಟವಿಲ್ಲ. ಆ ದುಷ್ಟರು ನನ್ನ ಕಡೆಗೆ ತಿರುಗಬೇಕೆಂದು ನಾನು ಇಷ್ಟಪಡುತ್ತೇನೆ. ಅವರು ತಮ್ಮ ದುರ್ನಡತೆಯನ್ನು ಬಿಟ್ಟು ನಿಜವಾದ ಜೀವನವನ್ನು ನಡೆಸಬೇಕು. ಆದ್ದರಿಂದ ನನ್ನ ಬಳಿಗೆ ಹಿಂದಿರುಗಿ ಬನ್ನಿರಿ. ದುಷ್ಟತನವನ್ನು ಬಿಟ್ಟುಬಿಡಿರಿ. ಇಸ್ರೇಲ್ ಜನರೇ, ನೀವು ಯಾಕೆ ಸಾಯುತ್ತೀರಿ?’


“ಒಂದುವೇಳೆ ದುಷ್ಟನೊಬ್ಬನು ತಾನು ಮಾಡಿದ ಎಲ್ಲಾ ಪಾಪಗಳಿಗೆ ವಿಮುಖನಾದರೆ, ನನ್ನ ಎಲ್ಲಾ ನಿಯಮಗಳಿಗೆ ವಿಧೇಯನಾದರೆ, ನ್ಯಾಯವಾದುದ್ದನ್ನೂ ಸರಿಯಾದುದ್ದನ್ನೂ ಮಾಡಿದರೆ, ಅವನು ಸಾಯದೆ ಬದುಕುವನು.


“ನಾನು ಈ ದಿನ ಕೊಡುವ ಆಜ್ಞೆಯು ಅಂಥ ಕಷ್ಟದ್ದೇನೂ ಅಲ್ಲ; ಅದು ದೂರವಾದದ್ದೂ ಅಲ್ಲ.


ನಿಮ್ಮ ದೇವರಾದ ಯೆಹೋವನನ್ನು ನಿಮ್ಮ ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಪೂರ್ಣಶಕ್ತಿಯಿಂದಲೂ ಪ್ರೀತಿಸಬೇಕು.


ದೂರದಲ್ಲಿ ವಾಸಿಸುವ ಜನರು ಬಂದು ಆಲಯವನ್ನು ಕಟ್ಟುವರು. ಆಗ ಯೆಹೋವನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆಂದು ನೀವು ತಿಳಿಯುವಿರಿ. ಯೆಹೋವನು ಹೇಳಿದಂತೆ ನೀವು ಮಾಡಿದರೆ ಇವೆಲ್ಲಾ ನೆರವೇರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು