Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 30:20 - ಪರಿಶುದ್ದ ಬೈಬಲ್‌

20 ನೀವು ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿ ಆತನಿಗೆ ವಿಧೇಯರಾಗಬೇಕು. ಯೆಹೋವನು ನಿಮ್ಮ ಜೀವವಾಗಿದ್ದಾನೆ. ನಿಮ್ಮ ಪೂರ್ವಿಕರಾದ ಅಬ್ರಹಾಮನಿಗೆ, ಇಸಾಕನಿಗೆ, ಯಾಕೋಬನಿಗೆ ಕೊಡುವುದಾಗಿ ವಾಗ್ದಾನ ಮಾಡಿದ್ದ ದೇಶದಲ್ಲಿ ನಿಮಗೆ ದೀರ್ಘವಾದ ಆಯುಷ್ಯನ್ನು ಅನುಗ್ರಹಿಸುತ್ತಾನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿ, ಆತನ ಮಾತಿಗೆ ವಿಧೇಯರಾಗಿರಿ, ಆತನನ್ನು ಹೊಂದಿಕೊಂಡೇ ಇರಿ. ಯೆಹೋವನು ನಿಮ್ಮ ಪೂರ್ವಿಕರಾದ ಅಬ್ರಹಾಮ್, ಇಸಾಕ್ ಮತ್ತು ಯಾಕೋಬರಿಗೆ ಪ್ರಮಾಣ ಮಾಡಿಕೊಟ್ಟ ದೇಶದಲ್ಲಿ ನೀವು ಬದುಕಿಕೊಳ್ಳುವುದಕ್ಕೂ ಬಹುಕಾಲ ಇರುವುದಕ್ಕೂ ಆತನೇ ಆಧಾರ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ನಿಮ್ಮ ದೇವರಾದ ಸರ್ವೇಶ್ವರನನ್ನು ಪ್ರೀತಿಸಿ ಅವರ ಮಾತಿಗೆ ವಿಧೇಯರಾಗಿರಿ; ಅವರನ್ನು ಹೊಂದಿಕೊಂಡೇ ಇರಿ. ಸರ್ವೇಶ್ವರ ನಿಮ್ಮ ಪಿತೃಗಳಾದ ಅಬ್ರಹಾಮ್, ಇಸಾಕ್, ಯಕೋಬರಿಗೆ ಪ್ರಮಾಣಮಾಡಿ ಕೊಟ್ಟ ನಾಡಿನಲ್ಲಿ ನೀವು ಬದುಕಿ ಬಾಳುವುದಕ್ಕೂ ಬಹುಕಾಲ ಇರುವುದಕ್ಕೂ ಅವರೇ ಆಧಾರ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿ ಆತನ ಮಾತಿಗೆ ವಿಧೇಯರಾಗಿರ್ರಿ, ಆತನನ್ನು ಹೊಂದಿಕೊಂಡೇ ಇರ್ರಿ. ಯೆಹೋವನು ನಿಮ್ಮ ಪಿತೃಗಳಾದ ಅಬ್ರಹಾಮ್ ಇಸಾಕ್ ಯಾಕೋಬರಿಗೆ ಪ್ರಮಾಣ ಮಾಡಿಕೊಟ್ಟ ದೇಶದಲ್ಲಿ ನೀವು ಬದುಕಿಕೊಳ್ಳುವದಕ್ಕೂ ಬಹುಕಾಲ ಇರುವದಕ್ಕೂ ಆತನೇ ಆಧಾರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ನಿಮ್ಮ ದೇವರಾದ ಯೆಹೋವ ದೇವರನ್ನು ಪ್ರೀತಿಸಿ, ಅವರ ಮಾತನ್ನು ಕೇಳಿ, ಅವರನ್ನೇ ಹೊಂದಿಕೊಂಡಿರಿ. ಯೆಹೋವ ದೇವರು ನಿಮ್ಮ ಪಿತೃಗಳಾದ ಅಬ್ರಹಾಮನಿಗೂ, ಇಸಾಕನಿಗೂ, ಯಾಕೋಬನಿಗೂ ಕೊಡುತ್ತೇನೆಂದು ಪ್ರಮಾಣ ಮಾಡಿದ ಭೂಮಿಯಲ್ಲಿ ನೀವು ಬಹುಕಾಲ ವಾಸಮಾಡುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 30:20
39 ತಿಳಿವುಗಳ ಹೋಲಿಕೆ  

“ನೀವು ನಿಮ್ಮ ದೇವರಾದ ಯೆಹೋವನನ್ನು ಗೌರವಿಸಿ ಆತನೊಬ್ಬನನ್ನೇ ಆರಾಧಿಸಬೇಕು. ಆತನನ್ನು ಬಿಟ್ಟು ತೊಲಗದಿರಿ. ವಾಗ್ದಾನ, ಒಡಂಬಡಿಕೆಗಳನ್ನು ಮಾಡುವಾಗ ಆತನ ಹೆಸರಿನಲ್ಲಿಯೇ ಮಾಡಿರಿ.


ಮನುಷ್ಯರಿಗೆ ಜೀವವನ್ನೂ ಉಸಿರನ್ನೂ ಸಮಸ್ತವನ್ನೂ ಕೊಡುವಾತನು ಆ ದೇವರೇ. ಆತನಿಗೆ ಜನರ ಸೇವೆಯ ಅಗತ್ಯವೇನೂ ಇಲ್ಲ. ಆತನಿಗೆ ಕೊರತೆಯೆಂಬುದೂ ಇಲ್ಲ.


ಒಬ್ಬನೇ ಸತ್ಯದೇವರಾಗಿರುವ ನಿನ್ನನ್ನು ಮತ್ತು ನೀನು ಕಳುಹಿಸಿದ ಯೇಸು ಕ್ರಿಸ್ತನನ್ನು ತಿಳಿದುಕೊಳ್ಳುವುದೇ ನಿತ್ಯಜೀವ.


ನಾವು ಆತನೊಂದಿಗೆ ವಾಸಿಸುತ್ತೇವೆ, ನಡೆಯುತ್ತೇವೆ, ಇರುತ್ತೇವೆ. ನಿಮ್ಮವರೇ ಆದ ಕೆಲವು ಲೇಖಕರು, ‘ನಾವು ಆತನ ಸಂತಾನದವರೇ’ ಎಂದು ಹೇಳಿದ್ದಾರೆ.


ಯೇಸು, “ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ. ತಂದೆಯ ಬಳಿಗೆ ಹೋಗಲು ನಾನೇ ಏಕೈಕ ಮಾರ್ಗ.


ನಮಗೆ ಜೀವಕೊಟ್ಟವನು ಆತನೇ. ನಮ್ಮನ್ನು ಕಾಪಾಡುವವನೂ ಆತನೇ.


ಜೀವಬುಗ್ಗೆಯು ನಿನ್ನ ಬಳಿಯಿಂದ ಹರಿಯುವುದು! ನಾವು ಬೆಳಕನ್ನು ನೋಡುವುದು ನಿನ್ನ ಬೆಳಕಿನಿಂದಲೇ.


ನಿಮ್ಮ ದೇವರಾದ ಯೆಹೋವನನ್ನೇ ಅನುಸರಿಸಿಕೊಂಡಿರಿ. ಈವರೆಗೆ ನೀವು ಹೇಗಿದ್ದಿರೋ ಅದೇ ರೀತಿಯಲ್ಲಿ ಮುಂದೆಯೂ ಇರಿ.


“ಇಸ್ರೇಲ್ ಜನರೇ, ಕೇಳಿರಿ! ನಿಮ್ಮ ದೇವರಾದ ಯೆಹೋವನು ನಿಮ್ಮಿಂದ ನಿಜವಾಗಿಯೂ ಅಪೇಕ್ಷಿಸುವುದೇನು? ನೀವು ಆತನನ್ನು ಗೌರವಿಸಬೇಕೆಂದೂ ಆತನ ಆಜ್ಞಾವಿಧಿಗಳಿಗೆ ವಿಧೇಯರಾಗಬೇಕೆಂದೂ ಅಪೇಕ್ಷಿಸುತ್ತಾನೆ. ನೀವು ಆತನನ್ನು ಪ್ರೀತಿಸಿ, ನಿಮ್ಮ ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಆತನ ಸೇವೆ ಮಾಡಬೇಕೆಂದು ಆತನು ಅಪೇಕ್ಷಿಸುತ್ತಾನೆ.


‘ನಿಮ್ಮ ತಂದೆತಾಯಿಗಳನ್ನು ನೀವು ಸನ್ಮಾನಿಸಬೇಕು. ಇದು ನಿಮ್ಮ ದೇವರ ಆಜ್ಞೆ. ನೀವು ಇದಕ್ಕೆ ವಿಧೇಯರಾದರೆ ದೇವರು ನಿಮಗೆ ಕೊಡುವ ದೇಶದಲ್ಲಿ ನೀವು ಬಹುಕಾಲ ಬಾಳುವಿರಿ ಮತ್ತು ನಿಮಗೆ ಯಾವಾಗಲೂ ಶುಭವಿರುವುದು.


ನಾನು ಈ ಹೊತ್ತು ಕೊಡಲಿರುವ ಆತನ ಕಟ್ಟಳೆಗಳನ್ನೂ ಆಜ್ಞೆಗಳನ್ನೂ ನೀವು ಪರಿಪಾಲಿಸಬೇಕು. ಆಗ ನಿಮಗೂ ನಿಮ್ಮ ನಂತರ ಜೀವಿಸುವ ನಿಮ್ಮ ಮಕ್ಕಳಿಗೂ ಶುಭವಾಗುವುದು. ದೇವರಾದ ಯೆಹೋವನು ನಿಮಗೆ ಕೊಡಲಿರುವ ದೇಶದಲ್ಲಿ ಶಾಶ್ವತವಾಗಿ ಬಾಳುವಿರಿ!”


ಯೆಹೋವನೇ, ನೀನೇ ನನಗೆ ಬೆಳಕೂ ರಕ್ಷಕನೂ ಆಗಿರುವೆ. ನಾನು ಯಾರಿಗೂ ಭಯಪಡಬೇಕಿಲ್ಲ! ಯೆಹೋವನೇ, ನನ್ನ ಪ್ರಾಣಕ್ಕೆ ಆಶ್ರಯಸ್ಥಾನವೂ ನೀನೇ. ಆದ್ದರಿಂದ ನಾನು ಯಾರಿಗೂ ಹೆದರುವುದಿಲ್ಲ!


ಆತ್ಮನೂ ಮದುಮಗಳೂ, “ಬಾ!” ಎನ್ನುತ್ತಾರೆ. ಇದನ್ನು ಕೇಳುವ ಪ್ರತಿಯೊಬ್ಬ ವ್ಯಕ್ತಿಯೂ, “ಬಾ!” ಎಂದು ಹೇಳಬೇಕು. ಬಾಯಾರಿದವನು ನನ್ನ ಬಳಿಗೆ ಬರಲಿ; ಅವನಿಗೆ ಇಷ್ಟವಿದ್ದರೆ ಜೀವಜಲವನ್ನು ಉಚಿತವಾಗಿ ಪಡೆದುಕೊಳ್ಳಲಿ.


ಆದ್ದರಿಂದ ಈಗ ನನ್ನೊಳಗೆ ಜೀವಿಸುತ್ತಿರುವವನು ನಿಜವಾಗಿಯೂ ನಾನಲ್ಲ, ಕ್ರಿಸ್ತನೇ ನನ್ನೊಳಗೆ ಜೀವಿಸುತ್ತಿದ್ದಾನೆ. ನಾನಿನ್ನೂ ದೇಹಾರೂಢನಾಗಿದ್ದೇನೆ. ಆದರೆ ನಾನು ಜೀವಿಸುತ್ತಿರುವುದು ದೇವರ ಮಗನ ಮೇಲೆ ನನಗಿರುವ ನಂಬಿಕೆಯಿಂದಲೇ. ನನ್ನನ್ನು ಪ್ರೀತಿಸಿದಾತನು ಯೇಸುವೇ ಮತ್ತು ನನ್ನನ್ನು ರಕ್ಷಿಸುವುದಕ್ಕಾಗಿ ಆತನು ತನ್ನನ್ನೇ ಕೊಟ್ಟುಬಿಟ್ಟನು.


ಬಾರ್ನಬನು ಒಳ್ಳೆಯ ಮನುಷ್ಯನಾಗಿದ್ದನು. ಅವನು ಪವಿತ್ರಾತ್ಮಭರಿತನಾಗಿದ್ದನು ಮತ್ತು ಪೂರ್ಣನಂಬಿಕೆಯುಳ್ಳವನಾಗಿದ್ದನು. ಬಾರ್ನಬನು ಅಂತಿಯೋಕ್ಯಕ್ಕೆ ಹೋದಾಗ, ದೇವರು ಆ ಜನರನ್ನು ಅಧಿಕವಾಗಿ ಆಶೀರ್ವದಿಸಿರುವುದನ್ನು ಕಂಡನು. ಇದರಿಂದ ಬಾರ್ನಬನಿಗೆ ತುಂಬಾ ಸಂತೋಷವಾಯಿತು. ಅಂತಿಯೋಕ್ಯದಲ್ಲಿದ್ದ ವಿಶ್ವಾಸಿಗಳನ್ನೆಲ್ಲ ಅವನು ಪ್ರೋತ್ಸಾಹಿಸಿದನು. ಅವನು ಅವರಿಗೆ, “ನಿಮ್ಮ ನಂಬಿಕೆಯನ್ನು ಎಂದಿಗೂ ಕಳೆದುಕೊಳ್ಳಬೇಡಿ. ಪ್ರಭುವಿಗೆ ನಿಮ್ಮ ಪೂರ್ಣಹೃದಯಗಳಿಂದ ಯಾವಾಗಲೂ ವಿಧೇಯರಾಗಿರಿ” ಎಂದು ಹೇಳಿದನು. ಅನೇಕ ಜನರು ಪ್ರಭುವಾದ ಯೇಸುವಿನ ಹಿಂಬಾಲಕರಾದರು.


ಆ ದೇಶದಲ್ಲಿ ನೀವು ಬಹುಕಾಲ ಬಾಳುವಿರಿ. ಆ ದೇಶವು ಎಲ್ಲಾ ಒಳ್ಳೆಯ ವಸ್ತುಗಳಿಂದ ತುಂಬಿದೆ. ಆ ದೇಶವನ್ನು ನಿಮ್ಮ ಪೂರ್ವಿಕರಿಗೆ ಕೊಡುವುದಾಗಿ ದೇವರು ವಾಗ್ದಾನ ಮಾಡಿದ್ದಾನೆ.


ನಿಮ್ಮ ದೇವರಾದ ಯೆಹೋವನನ್ನು ನಿಮ್ಮ ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಪೂರ್ಣಶಕ್ತಿಯಿಂದಲೂ ಪ್ರೀತಿಸಬೇಕು.


ಆದರೆ ಯಾರು ದೇವರಾದ ಯೆಹೋವನನ್ನು ಮಾತ್ರ ಸೇವಿಸಿದರೋ ಅವರು ಈಗಲೂ ಜೀವಂತರಾಗಿದ್ದಾರೆ.


ಸಿಂಹಾಸನದ ಮೇಲೆ ಕುಳಿತಿದ್ದಾತನು ನನಗೆ ಹೀಗೆ ಹೇಳಿದನು: “ಎಲ್ಲವೂ ನೆರವೇರಿತು! ನಾನೇ ಆದಿಯೂ ಅಂತ್ಯವೂ ಆಗಿದ್ದೇನೆ. ನಾನೇ ಪ್ರಾರಂಭವೂ ಸಮಾಪ್ತಿಯೂ ಆಗಿದ್ದೇನೆ. ಬಾಯಾರಿದವರಿಗೆ ನಾನು ಜೀವಜಲದ ಬುಗ್ಗೆಯಿಂದ ನೀರನ್ನು ಉಚಿತವಾಗಿ ಕೊಡುತ್ತೇನೆ.


ನಿಮ್ಮ ಪ್ರೀತಿಯು ಯಥಾರ್ಥವಾಗಿರಲಿ. ದುಷ್ಕೃತ್ಯಗಳನ್ನು ದ್ವೇಷಿಸಿರಿ. ಒಳ್ಳೆಯ ಕಾರ್ಯಗಳನ್ನು ಮಾತ್ರ ಮಾಡಿರಿ.


ನಿಮ್ಮ ದೇವರಾದ ಯೆಹೋವನನ್ನು ನೀವು ಸಂಪೂರ್ಣವಾಗಿ ಪ್ರೀತಿಸಬೇಕೆಂದು ಆಜ್ಞಾಪಿಸುತ್ತೇನೆ. ಆತನ ಆಜ್ಞೆಗಳಿಗೆ, ನಿಯಮಗಳಿಗೆ ಮತ್ತು ವಿಧಿಗಳಿಗೆ ವಿಧೇಯರಾಗಬೇಕೆಂದು ನಾನು ನಿಮಗೆ ಆಜ್ಞಾಪಿಸುತ್ತೇನೆ. ಆಗ ನೀವು ಬದುಕುವಿರಿ ಮತ್ತು ನಿಮ್ಮ ಜನಾಂಗ ದೊಡ್ಡದಾಗಿ ಬೆಳೆಯುವುದು. ನಿಮಗಾಗಿ ತೆಗೆದುಕೊಳ್ಳಲು ಪ್ರವೇಶಿಸಲಿರುವ ದೇಶದಲ್ಲಿ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಆಶೀರ್ವದಿಸುವನು.


ನೀವು ಮತ್ತು ನಿಮ್ಮ ಸಂತತಿಯವರು ತನಗೆ ವಿಧೇಯರಾಗುವಂತೆ ನಮ್ಮ ದೇವರಾದ ಯೆಹೋವನು ಮಾಡುತ್ತಾನೆ. ಆಗ ನೀವು ಯೆಹೋವನನ್ನು ನಿಮ್ಮ ಪೂರ್ಣಹೃದಯದಿಂದ ಪ್ರೀತಿಸುವಿರಿ ಮತ್ತು ಜೀವಿಸುವಿರಿ.


ಆಗ ದೇವದೂತನು ನನಗೆ ಜೀವಜಲದ ನದಿಯನ್ನು ತೋರಿಸಿದನು. ಆ ನದಿಯು ಸ್ಫಟಿಕದಂತೆ ಪ್ರಕಾಶಮಾನವಾಗಿತ್ತು. ಆ ನದಿಯು ದೇವರ ಮತ್ತು ಕುರಿಮರಿಯಾದಾತನ ಸಿಂಹಾಸನದಿಂದ ಆಗಮಿಸಿ,


ಆತನ ಕೋಪವು ಕ್ಷಣಮಾತ್ರವಿರುವುದು. ಆತನ ಪ್ರೀತಿಯಾದರೋ ಶಾಶ್ವತವಾದದ್ದು. ನಾನು ಸಂಜೆಯಲ್ಲಿ ದುಃಖದಿಂದ ಮಲಗಿಕೊಂಡರೂ ಮುಂಜಾನೆ ಹರ್ಷದಿಂದ ಎಚ್ಚರಗೊಳ್ಳುವೆನು.


ನೀವು ಜೋರ್ಡನ್ ನದಿಯನ್ನು ದಾಟಿ, ಯೆಹೋವನು ನಿಮಗೆ ಕೊಡುವ ದೇಶದಲ್ಲಿ ವಾಸಿಸುವಿರಿ. ನಿಮ್ಮ ಎಲ್ಲಾ ವೈರಿಗಳಿಂದ ತಪ್ಪಿಸಿ ದೇವರು ನಿಮಗೆ ಸಮಾಧಾನವನ್ನು ಅನುಗ್ರಹಿಸುವನು; ನೀವು ಅಲ್ಲಿ ಸುರಕ್ಷಿತವಾಗಿರುವಿರಿ.


“ಅನುಸರಿಸಬೇಕೆಂದು ಹೇಳುವ ಪ್ರತಿಯೊಂದು ಕಟ್ಟಳೆಗಳಿಗೆ ವಿಧೇಯರಾಗಿರಿ. ನಿಮ್ಮ ಯೆಹೋವನನ್ನು ಪ್ರೀತಿಸಿ ಆತನ ಮಾರ್ಗದಲ್ಲಿ ನಡೆದು ಆತನಿಗೆ ನಂಬಿಗಸ್ತರಾಗಿರಿ.


ಯೆಹೋವನು ಅಬ್ರಾಮನಿಗೆ ಕಾಣಿಸಿಕೊಂಡು, “ನಿನ್ನ ಸಂತತಿಯವರಿಗೆ ಈ ದೇಶವನ್ನು ಕೊಡುವೆನು” ಎಂದು ಹೇಳಿದನು. ಆ ಸ್ಥಳದಲ್ಲಿ ಯೆಹೋವನು ಅಬ್ರಾಮನಿಗೆ ಕಾಣಿಸಿಕೊಂಡನು. ಆದ್ದರಿಂದ ಅಬ್ರಾಮನು ಯೆಹೋವನನ್ನು ಆರಾಧಿಸುವುದಕ್ಕಾಗಿ ಅಲ್ಲಿ ಒಂದು ಯಜ್ಞವೇದಿಕೆಯನ್ನು ಕಟ್ಟಿದನು.


ಅಬ್ರಾಮನಿಗೆ ತೊಂಭತ್ತೊಂಬತ್ತು ವರ್ಷವಾಗಿದ್ದಾಗ ಯೆಹೋವನು ಅವನಿಗೆ ಪ್ರತ್ಯಕ್ಷನಾಗಿ, “ನಾನು ಸರ್ವಶಕ್ತನಾದ ದೇವರು. ನನಗೆ ವಿಧೇಯನಾಗಿದ್ದು ನಿರ್ದೋಷಿಯಾಗಿರು.


“ಇಸ್ರೇಲರೇ, ಈಗ ನಾನು ಉಪದೇಶಿಸಲಿರುವ ಕಟ್ಟಳೆಗಳಿಗೂ ಆಜ್ಞೆಗಳಿಗೂ ಕಿವಿಗೊಡಿರಿ. ನೀವು ಅವುಗಳಿಗೆ ವಿಧೇಯರಾದರೆ ಜೀವಿಸುವಿರಿ. ಆಗ ನೀವು ನಿಮ್ಮ ಪೂರ್ವಿಕರ ದೇವರಾದ ಯೆಹೋವನು ನಿಮಗೆ ಕೊಡಲಿರುವ ದೇಶವನ್ನು ಸ್ವಾಧೀನ ಮಾಡಿಕೊಳ್ಳುವಿರಿ.


ಆ ನಿಯಮಗಳನ್ನು ಪರಿಪೂರ್ಣವಾಗಿ ಅಭ್ಯಾಸಿಸಿರಿ, ‘ಆಗ ಅನ್ಯಜನರು ನಿಮ್ಮನ್ನು ನೋಡಿ ನೀವು ಜ್ಞಾನಿಗಳು’ ಎಂದು ತಿಳಿದುಕೊಳ್ಳುವರು. ಆ ದೇಶದ ಜನರು ನಿಮ್ಮ ವಿಧಿನಿಯಮಗಳನ್ನು ಕೇಳಿ, ‘ನಿಜವಾಗಿಯೂ ಈ ಮಹಾ ಜನಾಂಗದ ಜನರು ಬುದ್ಧಿಯುಳ್ಳವರು ಮತ್ತು ಜ್ಞಾನಿಗಳು’ ಎಂದು ಹೇಳುವರು


ಮೋಶೆಯು ಇಸ್ರೇಲರ ಸಮೂಹಕ್ಕೆ ಹೇಳಿದ್ದೇನೆಂದರೆ:


ಈ ಬೋಧನೆಗಳು ಮುಖ್ಯವಾದವುಗಳಲ್ಲವೆಂದು ತಿಳಿಯಬೇಡಿ. ಅವು ನಿಮ್ಮ ಜೀವವಾಗಿವೆ. ನೀವು ತೆಗೆದುಕೊಳ್ಳಲು ಸಿದ್ಧವಾಗಿರುವ ಜೋರ್ಡನ್ ನದಿಯ ಆಚೆಕಡೆಯಲ್ಲಿರುವ ದೇಶದಲ್ಲಿ ಈ ಉಪದೇಶಗಳ ಮೂಲಕ ಬಹುಕಾಲ ಬದುಕುವಿರಿ.”


ನೀನು ಯೆಹೋವನಲ್ಲಿ ಭರವಸವಿಟ್ಟು ಒಳ್ಳೆಯ ಕಾರ್ಯಗಳನ್ನು ಮಾಡಿದರೆ, ದೀರ್ಘಕಾಲ ಬದುಕುವೆ; ಭೂಮಿಯ ಅನೇಕ ಫಲಗಳನ್ನು ಅನುಭವಿಸುವೆ.


ಆದ್ದರಿಂದ ನೀವು ನನ್ನ ಕಟ್ಟಳೆಗಳಿಗೆ ಮತ್ತು ನಿಯಮಗಳಿಗೆ ವಿಧೇಯರಾಗಬೇಕು. ಒಬ್ಬನು ನನ್ನ ಕಟ್ಟಳೆಗಳಿಗೆ ಮತ್ತು ನಿಯಮಗಳಿಗೆ ವಿಧೇಯನಾದರೆ, ಅವನು ಜೀವಿಸುವನು! ನಾನೇ ಯೆಹೋವನು!


ನಾನು ನಿಮಗೆ ಆ ಪ್ರಾಂತ್ಯವನ್ನೆಲ್ಲಾ ಕೊಡುವೆನು. ಅಲ್ಲಿಗೆ ಹೋಗಿ ಅದನ್ನು ತೆಗೆದುಕೊಳ್ಳಿರಿ. ನಿಮ್ಮ ಪೂರ್ವಿಕರಾದ ಅಬ್ರಹಾಮನಿಗೆ, ಇಸಾಕನಿಗೆ, ಯಾಕೋಬನಿಗೆ ಮತ್ತು ಅವರ ಸಂತತಿಯವರಿಗೆ ಆ ಪ್ರದೇಶವನ್ನು ಕೊಡುವೆನು ಎಂದು ನಾನು ವಾಗ್ದಾನ ಮಾಡಿದ್ದೇನೆ.’”


ನೀವೂ ಮತ್ತು ನಿಮ್ಮ ಸಂತತಿಯವರೂ ಜೀವಿಸುವ ದಿನಗಳಲ್ಲೆಲ್ಲಾ ದೇವರಾದ ಯೆಹೋವನನ್ನು ಗೌರವಿಸಬೇಕು. ನಾನೀಗ ಕೊಡುವ ಎಲ್ಲಾ ಆಜ್ಞೆಗಳನ್ನೂ ಕಟ್ಟಳೆಗಳನ್ನೂ ಅನುಸರಿಸಬೇಕು. ಹಾಗೆ ಮಾಡಿದ್ದಲ್ಲಿ ನೀವು ನೆಲೆಸುವ ಜಾಗದಲ್ಲಿ ನೀವು ಬಹುಕಾಲ ಜೀವಿಸುವಿರಿ.


ಆದ್ದರಿಂದ ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸುವುದರಲ್ಲಿ ಬಹು ಎಚ್ಚರಿಕೆಯಿಂದಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು